ಸುಂಟಿಕೊಪ್ಪ ಜ.27 NEWS DESK : ಆಟೋಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಕಂಬಿಬಾಣೆಯ ಕಾಫಿ ಬೆಳೆಗಾರ ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು ನಿರ್ಮಿಸಿಕೊಟ್ಟ ಆಟೋ ನಿಲ್ಧಾಣದ ಸ್ವಾಗತ ಕಮಾನ್ ಅನ್ನು ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಉದ್ಘಾಟಿಸಿ ಮಾತನಾಡಿ, ಗಣರಾಜ್ಯೋತ್ಸವ ಅಂಗವಾಗಿ ಆಟೋಚಾಲಕ ಮತ್ತು ಮಾಲೀಕರ ಸಂಘದವರು ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು, ಒಂದು ಮಾದರಿ ಕಾರ್ಯಕ್ರಮ ಆಟೋ ನಿಲ್ಧಾಣದ ಜಾಗವನ್ನು ಎದ್ದು ಕಾಣುವ ರೀತಿಯಲ್ಲಿ ನಾಮಫಲಕ ಅಳವಡಿಸಿದ್ದು, ಶ್ಲಾಘನೀಯ. ಹಗಲು ರಾತ್ರಿ ಎನ್ನದೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿರುವ ಆಟೋಚಾಲಕರು ಸಮಾಜಮುಖಿಯಾದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸುನಿಲ್ಕುಮಾರ್ ಅಭಿಮಾನದಿಂದ ನುಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸಹಸ್ರಹಾರು ಜನರ ತ್ಯಾಗ ಬಲಿದಾನದಿಂದ ನಾವು ಸ್ವಾತಂತ್ರ್ಯವನ್ನು ಗಳಿಸಿದ್ದೇವೆ. ನಮ್ಮದೆಯಾದ ಸಂವಿಧಾನವನ್ನು ಹೊಂದಿ ಬಲಿಷ್ಠ ಮತ್ತು ಸಧೃಡ ಭಾರತವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲಾರೂ ಕೈಜೋಡಿಸಿಬೇಕು, ಸಂವಿಧಾನವನ್ನು ಸಮಾನತೆ ಸಾಮರಸ್ಯ ಮತ್ತು ಬಾತೃತ್ವ ನೆಲೆಗಟ್ಟಿನಲ್ಲಿ ರಚಿಸಲಾಗಿದೆ.…
ಲೇಖಕ: admin
ನಾಪೋಕ್ಲು ಜ.27 NEWS DESK : ನಾಪೋಕ್ಲು ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಂದ ಧ್ವಜವಂದನೆಯನ್ನು ಸ್ವೀಕರಿಸಿದರು. ನಂತರ ಎನ್ಸಿಸಿ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಸಂವಿಧಾನದ ಆಶಯ ಭದ್ರತೆಯ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಬಿ.ಎಂ.ಶಾರದಾ, ಶಿಕ್ಷಕಿ ಎಂ.ಎ.ಲೀಲಾವತಿ ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಅಪ್ಪ ಚೆಟ್ಟೋಳಂಡ ನವೀನ್ ಅಪ್ಪಯ್ಯ, ಚೌರಿರ ಮಂದಣ್ಣ, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ವಿದ್ಯಾರ್ಥಿ ಎಂ.ಹೆಚ್.ಜೀವನ್ ಸ್ವಾಗತಿಸಿದರು. ಕೆ.ಪಿ.ಸೋನಾಲ್ ವಂದಿಸಿದರು. ವರದಿ : ದುಗ್ಗಳ ಸದಾನಂದ.
ಸುಂಟಿಕೊಪ್ಪ ಜ.27 NEWS DESK : ದೇಶದ ಪ್ರತಿಯೊಬ್ಬ ನಾಗರೀಕರಿಗೆ ಸಂವಿಧಾನದ ಅರಿವು ಮತ್ತು ತಿಳುವಳಿಕೆ ಇರಬೇಕು. ಸಂವಿಧಾನ ಓದದವರು ದೇಶದ ಅಭಿವೃದ್ಧಿಯ ಹಿನ್ನಡೆಗೆ ಕಾರಣರಾಗುತ್ತಾರೆ ಎಂದು ಶಿಕ್ಷಕ ಸತೀಶ್ ಕಾಜೂರು ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು ನಾಗರೀಕರಿಗೆ ತಮ್ಮ ಹಕ್ಕುಗಳು ಮತ್ತು ಜವಾಬ್ಧಾರಿಗಳ ಬಗ್ಗೆ ಅರಿವಿದ್ದು, ಸಂವಿಧಾನ ಬದ್ಧವಾಗಿ ನಡೆದುಕೊಂಡಾಗ ದೇಶದ ಏಳಿಗೆಗೆ ನಾವು ಕೊಡುಗೆ ನೀಡಿದಂತಾಗುತ್ತದೆ. ಭಾರತದ ಸಂವಿಧಾನವು ವಿಶ್ವದಲ್ಲೇ ಏಕೈಕ ಲಿಖಿತ ಸಂವಿಧಾನವಾಗಿದ್ದು, ಆಯಾ ಆಯಾ ಕಾಲಕ್ಕೆ ಜನರು ಒಪ್ಪುವ ರೀತಿಯಲ್ಲಿ ಅವರ ಹಕ್ಕುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ತಿದ್ದುಪಡಿ ಮತ್ತು ಬದಲಾವಣೆಗಳನ್ನು ಮಾಡಲಾಗಿದೆ. 1950 ರಲ್ಲಿ ಜಾರಿಗೆ ಬಂದ ಸಂವಿಧಾನವು ಇನ್ನು ಜೀವಂತವಾಗಿದೆ. ಆದರೆ ಪಕ್ಕದ ಪಾಕಿಸ್ಥಾನದಲ್ಲಿ ಎಷ್ಟೋ ಬಾರಿ ಮತ್ತು ನೇಪಾಳ ಮತ್ತು ಬಾಂಗ್ಲಗಳಲ್ಲಿ ಹಲವು ಬಾರೀ ಅವರ ಸಂವಿಧಾನವು ಬುಡಮೇಲಾಗಿದೆ…
ನಾಪೋಕ್ಲು ಜ.27 NEWS DESK : ಬೇತು ಗ್ರಾಮದ ಸೆಕ್ರೆಟ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಶಾಲಾ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದ ಧ್ವಜಾರೋಹಣವನ್ನು ಶಿಕ್ಷಕಿ ಮೈನಾ ಕುಮಾರಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿಕ್ಷಕ ಕಿರಣ್ ಗಣರಾಜ್ಯೋತ್ಸ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಂದ ಹಾಡು, ಭಾಷಣ ಹಾಗೂ ನೃತ್ಯಗಳ ಮೂಲಕ ವಿದ್ಯಾರ್ಥಿಗಳ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅತ್ಯುತ್ತಮವಾಗಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಶುಭ ಹಾರೈಸಲಾಯಿತು. ಸಮಾರಂಭವನ್ನು ವಿದ್ಯಾರ್ಥಿ ಬಿ.ಎಂ.ಆಜ್ಮಿಯ ನಿರೂಪಿಸಿದರು. ಕೆ.ಐ.ಮುಪ್ಪಿದ ವಂದಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.27 NEWS DESK : ಅರೆಸೇನಾಪಡೆಯ ಮಾಜಿ ಯೋಧ ಕುಶಾಲನಗರದ ಹರೀಶ್ ಕುಮಾರ್ ಗೌಡ ಅವರು ಗಣರಾಜ್ಯೋತ್ಸವ ಅಂಗವಾಗಿ ಮಡಿಕೇರಿಯ ತನಲ್ ವೃದ್ಧಾಶ್ರಮಕ್ಕೆ ಇನ್ವರ್ಟರ್ ಅನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಅರೆ ಸೇನಾಪಡೆ ಒಕ್ಕೂಟದ ಸಂಚಾಲಕ ಭೀಮಯ್ಯ, ಕಾರ್ಯದರ್ಶಿ ರವೀಂದ್ರ, ನಿರ್ದೇಶಕ ಜಿ.ಕೆ.ದಿನೇಶ್ ಕುಮಾರ್ ನಿರ್ದೇಶಕ ಜಿ.ಕೆ.ದಿನೇಶ್ ಕುಮಾರ್ ವೃದ್ಧಾಶ್ರಮದ ವ್ಯವಸ್ಥಾಪಕರು ಇದ್ದರು.
ಮಡಿಕೇರಿ ಜ.27 NEWS DESK : ರಾಜಸೀಟು ಉದ್ಯಾನವನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು.
ಮಡಿಕೇರಿ NEWS DESK ಜ.26 : ಅತಿ ಸೂಕ್ಷ್ಮ ಏಕ-ಜನಾಂಗೀಯ ಆನಿಮಿಸ್ಟಿಕ್ ನಂಬಿಕೆಯ ಆದಿಮಸಂಜಾತ ಸಮುದಾಯವಾದ ಕೊಡವರನ್ನೊಳಗೊಂಡ ಪರಿಪೂರ್ಣ ಗಣರಾಜ್ಯವನ್ನು ನಿರ್ಮಿಸಬೇಕು ಮತ್ತು ಕೊಡವರ 10 ಕಾನೂನುಬದ್ಧ ಆಕಾಂಕ್ಷೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ಕೇಂದ್ರದ ಗೃಹಮಂತ್ರಿಗಳಿಗೆ ಸಲ್ಲಿಸಿದರು. ಸಂವಿಧಾನದ 5, 6 ಮತ್ತು 8ನೇ ಪರಿಚ್ಛೇದಗಳೊಂದಿಗೆ 244ನೇ ಮತ್ತು 371ನೇ ವಿಧಿಯ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ರಚಿಸಬೇಕು. ಸ್ವ-ಆಡಳಿತ, ಸ್ವ-ನಿರ್ಣಯ ಹಕ್ಕುಗಳು, ಆದಿಸಮಸಂಜಾತ ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು. ಸೂಕ್ಷ್ಮ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಜನಾಂಗಕ್ಕೆ ಈಶಾನ್ಯ ಭಾರತದ ಎಥ್ನಿಕ್ ಕೂಟಕ್ಕೆ ಕೊಡಮಾಡಲಾದ ಎಸ್ಟಿ ನಮೂನೆಯ ರಾಜ್ಯಾಂಗ ಖಾತ್ರಿ ಅಡಿಯಲ್ಲಿ ವರ್ಗೀಕರಣ ನೀಡಬೇಕು. ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ…
ಮಡಿಕೇರಿ NEWS DESK ಜ.26 : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಂವಿಧಾನದ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಕ್ಕೆ…
ಮಡಿಕೇರಿ ಜ.26 NEWS DESK : ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಕೆದಮುಳ್ಳೂರು ಪಂಚಾಯತ್ ವ್ಯಾಪ್ತಿಯಲ್ಲಿ ಕ್ಲಬ್ ಮಹೇಂದ್ರ ಕಡೆಗೆ ತೆರಳುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿಗಾಗಿ ರೂ.10 ಲಕ್ಷಗಳನ್ನು ಒದಗಿಸಿದ್ದು, ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ದಿನಕ್ಕೆ ನೂರಾರು ಜನರು ಓಡಾಡುವ ಈ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳುವ ಉದ್ದೇಶದಿಂದ ಸಾರ್ವಜನಿಕರ ಕೋರಿಕೆ ಮೇರೆಗೆ ರಸ್ತೆ ಅಭಿವೃದ್ಧಿಗೊಳ್ಳಲು ಅನುದಾನ ಒದಗಿಸಿದ್ದೇನೆ. ಸಾರ್ವಜನಿಕರ ಯಾವುದೇ ಪೂರಕವಾದ ಬೇಡಿಕೆಗೆ ಸ್ಪಂದಿಸುತ್ತಾ, ಅಗತ್ಯ ಎನಿಸಿದರೆ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ತಾನು ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ಅನುದಾನವನ್ನು ಸದುಪಯೋಗಪಡಿಸಿಕೊಂಡು ಉತ್ತಮ ರಸ್ತೆ ಇಲ್ಲಿ ನಿರ್ಮಾಣವಾಗುವಂತಾಲಿ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕೆಡಿಪಿ ಸದಸ್ಯರು ಮಾಳೇಟೀರ ಪ್ರಶಾಂತ್, ವಲಯ ಅಧ್ಯಕ್ಷರು ನಡಿಕೇರಿಯಂಡ ಮಹೇಶ್ ಪಂಚಾಯಿತಿ…
ವಿರಾಜಪೇಟೆ ಜ.26 NEWS DESK : ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯ ಟಿ.ಆರ್.ವಿನೋದ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂವಿಧಾನದ ಪ್ರಸ್ತಾವನೆಯ ಪೂರ್ವ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ಬೋರ್ಕರ್ ದಿನದ ಮಹತ್ವದ ಕುರಿತು ಮಾತನಾಡಿ, ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸಂವಿಧಾನವು ಅತ್ಯಂತ ಶ್ರೇಷ್ಠವಾಗಿದೆ. ಸಂವಿಧಾನವು ಪ್ರಜೆಗಳಿಗೆ ಹಕ್ಕುಗಳನ್ನು ನೀಡಿದ್ದು, ಕಾನೂನಿನ ಪರಿಪಾಲನೆ ಅತೀ ಮುಖ್ಯವಾಗಿದೆ ಎಂದರು. ಸ್ವಾತಂತ್ರ್ಯ, ಸಮಾನತೆ, ನ್ಯಾಯ, ಬ್ರಾತೃತ್ವ ಗಳು ಸಂವಿಧಾನದ ಪ್ರಮುಖ ಮೂಲಾಂಶಗಳಾಗಿದ್ದು, ಸಂವಿಧಾನದ ಮೌಲ್ಯಗಳಿಗೆ ಗೌರವವನ್ನು ಸೂಚಿಸಿ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಸರ್ವರೂ ಪಣ ತೊಡಬೇಕು ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ ಮಾತನಾಡಿ, ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಸಾರ್ವಭೌಮದ ಪ್ರತೀಕವಾಗಿದೆ. ಸಮಾನತೆಯ ನೆಲೆಗಟ್ಟನ್ನು ಕಲ್ಪಿಸಿ ಐಕ್ಯತೆಯನ್ನು ಮೂಡಿಸುತ್ತದೆ. ಸಂವಿಧಾನದ…






