ಲೇಖಕ: admin

ಮಡಿಕೇರಿ ಡಿ.25 NEWS DESK :  ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸುಶಾಸನ ದಿನ (ಉತ್ತಮ ಆಡಳಿತ ದಿನ)ದ ಅಂಗವಾಗಿ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಡಿ.26 ರಂದು 14ನೇ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.  ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರೋಟರಿ ಮಿಸ್ಟಿಹಿಲ್ಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಮಡಿಕೇರಿ, ಮೇಕೇರಿ ಗ್ರಾಮ ಪಂಚಾಯಿತಿ ಮತ್ತು ಮಡಿಕೇರಿ ಎಸ್‍ಡಿಎಂಸಿ ಸಹಯೋಗದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಾರ್ಮಿಕ ಶಾಲೆಯಲ್ಲಿ ಶಿಬಿರ ನಡೆಯಲಿದ್ದು,…

Read More

ಮಡಿಕೇರಿ ಡಿ.25 NEWS DESK : ಕುಶಾಲನಗರ ಸಮೀಪದ ಬೊಳ್ಳೂರು ಗ್ರಾಮದಲ್ಲಿರುವ ಐಶ್ವರ್ಯ ಪಬ್ಲಿಕ್ ಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜಿನ ‘ನೃತ್ಯ ಕಲಾಂಜಲಿ’ ವಾರ್ಷಿಕೋತ್ಸವ ಡಿ.26 ರಂದು ನಡೆಯಲಿದೆ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪುಲಿಯಂಡ ರಾಮ್ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಎಲ್ ಚಿದಾನಂದ ಕುಮಾರ್ ಮುಖ್ಯ ಅತಿಥಿಗಳಾಗಿ ಮತ್ತು ವೀರಾಜಪೇಟೆ ಸರಕಾರಿ‌ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಕೊಡಗು ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಪೋಕ್ಲು  ಡಿ.25 NEWS DESK : ಸ್ಪಷ್ಟವಾದ ಗುರಿ ಮತ್ತು ದೃಷ್ಟಿ ಇದ್ದಲ್ಲಿ ನಾವು ಯಶಸ್ಸನ್ನು ಕಾಣಲು ಸಾಧ್ಯ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಸಂಯುಕ್ತ ಆಶ್ರಯದಲ್ಲಿ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೆರಾಜೆ ಊರು ಅರೆಭಾಷೆಯ ತವರೂರು ಎಂದ ಅವರು ಅರೆಭಾಷೆ ಜನಾಂಗದಲ್ಲಿರುವ ವಿಶಿಷ್ಟ ಆಚಾರ-ವಿಚಾರ ಪದ್ಧತಿ ಪರಂಪರೆಯ ಬಗ್ಗೆ ಬೆಳಕು ಚೆಲ್ಲಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾಷೆ ಅವನತಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ…

Read More

ನಾಪೋಕ್ಲು ಡಿ.25 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನಲ್ಲಿ 20 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಕೊಡವ ಸಮಾಜ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ ಹಾಗೂ ಗ್ರಾಮಸ್ಥರು ಹದಗೆಟ್ಟ ರಸ್ತೆ ದುರಸ್ತಿಗೆ ಮನವಿ ಮಾಡಿ ಕೋರಿಕೆ ಮೇರೆಗೆ ಪಂಚಾಯತ್ ರಾಜ್ ಇಲಾಖೆಯ ಮೂಲಕ ಕೊಡವ ಸಮಾಜ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಬಾಕಿ ಉಳಿದಿರುವ ಅಜ್ಜಿಮುಟ್ಟ ಮೂಲಕ ಎಮ್ಮೆಮಾಡು ಸಂಪರ್ಕಿಸುವ ಮೂರುವರೆ ಕಿಲೋಮೀಟರ್ ಈ ರಸ್ತೆಯನ್ನು ಪಂಚಾಯತ್ ರಾಜ್ ಇಲಾಖೆಯ ಪ್ರಗತಿಪತ ಯೋಜನೆ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು. ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ, ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹಾಗೂ ಸದಸ್ಯರು, ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವನಾಣಯ್ಯ ಪದಾಧಿಕಾರಿಗಳು, ಸದಸ್ಯರು,…

Read More

ನಾಪೋಕ್ಲು ಡಿ.25 NEWS DESK : ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಚಿತ್ರಕಲಾಸ್ಪರ್ಧೆಯಲ್ಲಿ ಏಳು ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ತಲಾ ಏಳು ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಭಕ್ತಿ ಗೀತೆ ಗಾಯನ, ಆಶುಭಾಷಣ, ಪ್ರಬಂಧ ಸ್ಪರ್ಧೆ ಸ್ಥಳದಲ್ಲಿ ಆಟೋಪಕರಣ ತಯಾರಿ, ಸ್ಥಳದಲ್ಲಿ ಚಿತ್ರ ಬಿಡಿಸುವಿಕೆ, ಸಾಮಾನ್ಯ ಜ್ಞಾನ- ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಈ ಏಳು ವಿಭಾಗಗಳಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯಿತು. ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾದ ಶಿಕ್ಷಕರು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಪ್ರಾಥಮಿಕ ಶಾಲಾ ವಿಭಾಗದ ಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಗೋಣಿಕೊಪ್ಪಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಜಶ್ರೀ ಕೆ.ಎಸ್.ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಹಾತೂರು ಸರ್ಕಾರಿ ಮಾದರಿ ಪ್ರಾಥಮಿಕ…

Read More

ಚೆಟ್ಟಳ್ಳಿ ಡಿ.25 NEWS DESK : ಚೆಟ್ಟಳ್ಳಿಯ ಸೆಂಟ್ ಸಬಾಸ್ಟಿನ್ ಚರ್ಚ್ ನಲ್ಲಿ ಕ್ರೈಸ್ತ ಭಾಂದವರು ಕ್ರಿಸ್ಮಸ್  ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಫಾದರ್ ಜರಾಲ್ಡ್ ಸಿಕ್ವೇರಾ ಅವರು ಬಾಲ ಏಸುವಿನ ಪ್ರತಿಕೃತಿಯನ್ನು ಅಲಂಕೃತ ಗೋದಲಿಯಲ್ಲಿ ಇರಿಸಿ ಪೂಜಿಸಿದರು. ನಂತರ ಎಲ್ಲರಿಗೂ ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಶುಭಕೋರಿದರು. ಕ್ರೈಸ್ತ ಭಾಂದವರು ಸಾಮೂಹಿ ಪ್ರಾರ್ಥನೆ ಸಲ್ಲಿಸಿ, ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

Read More

ಚೆಟ್ಟಳ್ಳಿ ಡಿ.25 NEWS DESK : ಚೆಟ್ಟಳ್ಳಿ ಅಯ್ಯಪ್ಪ ದೇವಾಲಯದ ವಾರ್ಷಿಕ ಮಹೋತ್ಸವ ಹಾಗೂ ಮಂಡಲ ಪೂಜೋತ್ಸವ ಡಿ.27 ರಂದು ನಡೆಯಲಿದೆ ಎಂದು ದೇವಾಲಯ ಸಮಿತಿ‌ ಕಾರ್ಯದರ್ಶಿ ಕೆ.ಕೆ‌.ಸುರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಪೂರ್ವಾಹ್ನ 7 ರಿಂದ 8 ಗಂಟೆಯವರೆಗೆ ಗಣಪತಿ ಹವನ, 10 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, 12.30ಕ್ಕೆ ಮಧ್ಯಾಹ್ನದ ಪೂಜೆ, ಮಂಗಳಾರತಿ ಮತ್ತು ಪ್ರಸಾದ ವಿತರಣೆ  ನಂತರ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ವಿನಾಯಕ ದೇವಸ್ಥಾನದಿಂದ ದೇವರ ಅಲಂಕೃತ ಮಂಟಪದೊಂದಿಗೆ ಶ್ರೀ ಅಯ್ಯಪ್ಪ ದೇವಸ್ಥಾನದ ವರೆಗೆ ಪಾಲಕೊಂಬು ಮೆರವಣಿಗೆ ನಡೆಯಲಿದೆ. ರಾತ್ರಿ 8 ಗಂಟೆಗೆ ದೀಪಾರಾಧನೆ, ರಂಗಪೂಜೆ, ಮಹಾ ಪೂಜೆಯ ನಂತರ ಅನ್ನಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಜನೆ ಹಾಗೂ ಇತರ ನೃತ್ಯ ಕಾರ್ಯಕ್ರಮಗಳು ನೆರವೇರಲಿದೆ.

Read More

ಶಹಜಹಾನ್‌ಪುರ NEWS DESK ಡಿ.25 : ಹಳಿ ದಾಟುತ್ತಿದ್ದ ಬೈಕ್ ಗೆ ರೈಲೊಂದು ಡಿಕ್ಕಿಯಾದ ಪರಿಣಾಮ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಐವರು ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೌಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಜಾ ರೈಲ್ವೆ ನಿಲ್ದಾಣದ ಬಳಿ ಪಾದಚಾರಿ ಮಾರ್ಗದ ಮೂಲಕ ಬೈಕ್ ರೈಲು ಮಾರ್ಗವನ್ನು ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

Read More

ಚಿತ್ರದುರ್ಗ NEWS DESK ಡಿ.25 : ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್​ಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಧ್ಯರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಹೊರಟಿದ್ದ ಈ ಬಸ್ಸಿನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. 9 ಮಂದಿ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘಟನೆ ಕುರಿತು ಬೇಸರ ವ್ಯಕ್ತಪಡಿಸಿ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಕುರಿತು ದು:ಖ ವ್ಯಕ್ತಪಡಿಸಿದ್ದಾರೆ.

Read More

ಮೂರ್ನಾಡು ಡಿ.25 NEWS DESK : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ನ್ಯಾಯಯುತವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೇ ಆ ಗುರಿಯನ್ನು ತಲುಪಲು ಅದಮ್ಯ ಪ್ರಯತ್ನ ಇದ್ದಾಗ ಮಾತ್ರ ಸಾಧನೆಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ಚರ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮಿಸುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಪ್ರಮುಖವಾದದ್ದು, ಈಗಿನ ಮಕ್ಕಳು ಸಣ್ಣ ಸಣ್ಣ ವಿಚಾರಗಳಿಗೆ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಇವರಲ್ಲಿ ಧೈರ್ಯವನ್ನು ತುಂಬುವ ಕಾರ್ಯವಾಗಬೇಕು ಎಂದು ತಿಳಿಸಿದರು. ಇಂತಹ ಶಾಲೆಗಳಿಂದಲೆ ದೇಶವನ್ನು ಮುನ್ನೆಡುಸುವಂತಹ ಪ್ರತಿಭಾವಂತ ವ್ಯಕ್ತಿಗಳು ರೂಪುಗೊಳ್ಳುತ್ತಾರೆ ಎಂದು ಹೇಳಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಜೀವನದ ಮೌಲ್ಯಗಳು, ಸಂಸ್ಕಾರಗಳನ್ನು ರೂಢಿಸಿಕೊಳ್ಳಬೇಕು. ಈಗಿನ ಮಕ್ಕಳು ಆರೋಗ್ಯಕರವಲ್ಲದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು…

Read More