ಮಡಿಕೇರಿ NEWS DESK ಮಾ.20 : ಯುದ್ಧದ ಪರಿಸ್ಥಿತಿಯಿಂದ ವಿಶ್ವದ ಹಲವು ದೇಶಗಳು ನಾನಾ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಬಗ್ಗೆ ಕನಿಷ್ಠ ಅರಿವಿಲ್ಲದ ಕಾಂಗ್ರೆಸ್ ಪಕ್ಷ ಅಡುಗೆ ಅನಿಲದ ಬೆಲೆ ಏರಿಕೆಯ ನೆಪವೊಡ್ಡಿ ಕುಶಾಲನಗರದಲ್ಲಿ ನಡೆಸಿರುವ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯುದ್ಧ ಕಾಲದಲ್ಲಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸಿ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಸಹಕಾರ ನೀಡುವ ಬದಲು ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ವಿಶ್ವದ ಎರಡನೇ ಅತಿದೊಡ್ಡ ಎಲ್ಪಿಜಿ ಆಮದುದಾರ ರಾಷ್ಟ್ರವಾಗಿರುವ ಭಾರತ ಯುದ್ಧದಿಂದಾಗಿ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಬೆಲೆ ಹೆಚ್ಚಳವಾಗಲು ಕಾರಣವಾಗಿದೆ. ಅಡುಗೆ ಅನಿಲದ ಸಿಲಿಂಡರ್ ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯನ್ನು ಕೇಂದ್ರದ ಎನ್ಡಿಎ ನೇತೃತ್ವದ ಸರಕಾರ ಬೇಕಂತಲೇ ಸೃಷ್ಟಿ ಮಾಡಿಲ್ಲ ಅಥವಾ ಪ್ರಧಾನಮಂತ್ರಿಗಳು ಉದ್ದೇಶಪೂರ್ವಕವಾಗಿ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿಲ್ಲ. ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ,…
ಲೇಖಕ: admin
ಮಡಿಕೇರಿ NEWS DESK ಮಾ.19 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಮನವಿ ಮಾಡಿದ್ದಾರೆ. ಶಾಸಕರ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ 2.30 ಗಂಟೆಗೆ ಪ್ರಾರಂಭವಾಗುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸರಕಾರದ ವಿವಿಧ 39 ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಭಾಗಮಂಡಲ ಪಂಚಾಯತ್ ನ ತಾವೂರು, ತಣ್ಣೀಮಾನಿ, ಚೆರಂಗಾಲ, ಕೊರಂಗಾಲ, ಭಾಗಮಂಡಲ ಗ್ರಾಮಗಳ ಸಾರ್ವಜನಿಕರು ತಮ್ಮ ದೀರ್ಘ ಕಾಲದ ಮತ್ತು ಅಲ್ಪ ಕಾಲದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋಳಿಬೈಲು ವೆಂಕಟೇಶ್ ಕೋರಿದ್ದಾರೆ.
ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಈ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೊಸಪೇಟೆ ಹಾಗೂ ಗೋವಾ (ಮಡಗಾಂವ್) ಮಾರ್ಗಗಳಿಗೆ ವಿಶೇಷ ರೈಲುಗಳನ್ನು ಕಾರ್ಯಾಚರಿಸುತ್ತಿದೆ. ವಿಶೇಷ ರೈಲುಗಳ ವೇಳಾಪಟ್ಟಿ ಮತ್ತು ನಿಲುಗಡೆ ವಿವರ: 1. ಬೆಂಗಳೂರು – ಬೆಳಗಾವಿ ವಿಶೇಷ ರೈಲು (06503/06504): ಬೆಳಗಾವಿಗೆ: ರೈಲು ಸಂಖ್ಯೆ 06503 ಬೆಂಗಳೂರಿನ SMVT ನಿಲ್ದಾಣದಿಂದ ಹೊರಟು ಇಂದು ಬೆಳಿಗ್ಗೆ ಬೆಳಗಾವಿ ತಲುಪಿದೆ. ರಿಟರ್ನ್: ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮಾರ್ಚ್ 23ರ ಬೆಳಿಗ್ಗೆ 5ಕ್ಕೆ ಬೆಂಗಳೂರು ತಲುಪಲಿದೆ. ನಿಲುಗಡೆ: ತುಮಕೂರು, ಅರಸೀಕೆರೆ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಲೊಂಡಾ ಸೇರಿದಂತೆ ಪ್ರಮುಖ ನಿಲ್ದಾಣಗಳು. 2. ಬೆಂಗಳೂರು – ವಿಜಯಪುರ ವಿಶೇಷ ರೈಲು (06277/06278): ವಿಜಯಪುರಕ್ಕೆ: ರೈಲು ಸಂಖ್ಯೆ 06277 ಯಶವಂತಪುರದಿಂದ ಹೊರಟು ಇಂದು…
ಬೆಂಗಳೂರು, ಮಾರ್ಚ್ 19, 2026: ಕರ್ನಾಟಕದಲ್ಲಿ ವಾಣಿಜ್ಯ ಎಲ್ಪಿಜಿ (LPG) ಸಿಲಿಂಡರ್ಗಳ ಕೊರತೆ ತೀವ್ರಗೊಂಡಿದ್ದು, ಬೇಡಿಕೆಯ ಕೇವಲ ಶೇ. 20ರಷ್ಟು ಮಾತ್ರ ಪೂರೈಕೆಯಾಗುತ್ತಿದೆ. ವಿಧಾನ ಪರಿಷತ್ತಿನಲ್ಲಿ ಬುಧವಾರ ಈ ಆತಂಕಕಾರಿ ವಿಷಯವನ್ನು ಹಂಚಿಕೊಂಡ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಕೇಂದ್ರ ಸರ್ಕಾರದಿಂದ ಪೂರೈಕೆ ಕಡಿತಗೊಂಡಿರುವುದೇ ಈ ಬಿಕ್ಕಟ್ಟಿಗೆ ಕಾರಣ ಎಂದು ತಿಳಿಸಿದ್ದಾರೆ. ವಾಣಿಜ್ಯ ಸಿಲಿಂಡರ್ ಪೂರೈಕೆ ಅಂಕಿ-ಅಂಶ: ದೈನಂದಿನ ಅಗತ್ಯ: 44,000 ಸಿಲಿಂಡರ್ಗಳು. ಪ್ರಸ್ತುತ ಪೂರೈಕೆ: ಕೇವಲ 9,000 ಸಿಲಿಂಡರ್ಗಳು (ಶೇ. 20ರಷ್ಟು ಮಾತ್ರ). ಗೃಹ ಬಳಕೆ ಸಿಲಿಂಡರ್: ಮನೆಯಲ್ಲಿ ಬಳಸುವ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ದಿನಕ್ಕೆ ಬೇಕಾದ 3.52 ಲಕ್ಷ ಸಿಲಿಂಡರ್ಗಳನ್ನು ತೈಲ ಕಂಪನಿಗಳು ಪೂರೈಸುತ್ತಿವೆ. ಹೋಟೆಲ್ ಮಾಲೀಕರಿಗೆ ವಿಶೇಷ ಮನವಿ: ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮ ತತ್ತರಿಸಿದ್ದು, ಹೋಟೆಲ್ಗಳಿಗೆ ಕೇವಲ 1,000 ಸಿಲಿಂಡರ್ಗಳು ಮಾತ್ರ ಲಭ್ಯವಾಗುತ್ತಿವೆ. “ಯುದ್ಧದಂತಹ ಪರಿಸ್ಥಿತಿಯಿಂದಾಗಿ ಈ ಸಂಕಷ್ಟ ಎದುರಾಗಿದೆ. ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ವಿದ್ಯುತ್ ಸ್ಟೌವ್ (Electric…
*ಇಂದು ದಿನಾಂಕ 19-03-2026 ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ [ಈದುಲ್ ಫಿತ್ರ್] ಪ್ರಥಮ ಚಂದ್ರ ದರ್ಶನವಾಗಿರುತ್ತದೆ ಎಂದು ಕೊಡಗು ಜಿಲ್ಲಾ ಸುನ್ನಿ ಮುಸ್ಲಿಂ ಜಮಾಅತ್ ಖಾಝಿಗಳಾದ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ರವರು ತೀರ್ಮಾನಿಸಿರುತ್ತಾರೆ.* *ದಿನಾಂಕ 20-03-2026 ಶುಕ್ರವಾರ* *ಶವ್ವಾಲ್ – 01* ನಾಳೆ ಈದುಲ್ ಫಿತ್ರ್
ಚೆಟ್ಟಳ್ಳಿ NEWS DESK ಮಾ.19 : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ ಹಾಗೂ ಖಜಾಂಚಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಸಹ ಖಜಾಂಚಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ ಹಾಗೂ ಭೂಮಿಕಾ ಮಾಚಂಗಡ ನೇಮಕಗೊಂಡಿದ್ದಾರೆ. ಒತ್ತೋರ್ಮೆರ ಕೊಡವ ಕೂಟದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸದಸ್ಯರಾದ ಮೊಣ್ಣoಡ ವಿನು ಕಾರ್ಯಪ್ಪ, ಮೂಕೊಂಡ ಸಂಜನಾ ದಮಯತಿ ಮತ್ತಿತರರು ಉಪಸ್ಥಿತರಿದ್ದರು.
ಹಾಸನ NEWS DESK ಮಾ.19 : ಮಾಜಿ ಪ್ರಧಾನಿ ಹಾಗೂ ಜಾತ್ಯಾತೀತ ಜನತಾದಳದ ವರಿಷ್ಠ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ಅವರು ವಯೋಸಹಜ ಕಾಯಿಲೆಯಿಂದ ಇಂದು (ಮಾ.19) ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಹೋದರಿಯ ನಿಧನಕ್ಕೆ ಹೆಚ್.ಡಿ.ದೇವೇಗೌಡರು ಹಾಗೂ ಕುಟುಂಬದ ಸದಸ್ಯರು ಕಂಬನಿ ಮಿಡಿದಿದ್ದಾರೆ.
ಚೆಟ್ಟಳ್ಳಿ NEWS DESK ಮಾ.19 : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ ಹಾಗೂ ಖಜಾಂಚಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಸಹ ಖಜಾಂಚಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ ಹಾಗೂ ಭೂಮಿಕಾ ಮಾಚಂಗಡ ನೇಮಕಗೊಂಡಿದ್ದಾರೆ. ಒತ್ತೋರ್ಮೆರ ಕೊಡವ ಕೂಟದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸದಸ್ಯರಾದ ಮೊಣ್ಣoಡ ವಿನು ಕಾರ್ಯಪ್ಪ, ಮೂಕೊಂಡ ಸಂಜನಾ ದಮಯತಿ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಮಾ.19 : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿಯಲ್ಲಿ ನಡೆದಿದೆ. ಮಾದಾಪುರ ಜಂಬೂರು ನಿವಾಸಿ ಅನಿಲ್(36) ಮೃತ ದುರ್ದೈವಿಯಾಗಿದ್ದು, ಬೈಕ್ ನಲ್ಲಿದ್ದ ಹರೀಶ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸುಂಟಿಕೊಪ್ಪದಿಂದ ಮಾದಾಪುರದೆಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ NEWS DESK ಮಾ.19 : ರಾಷ್ಟ್ರೀಯ ಹೆದ್ದಾರಿ-275 ಕಿ.ಮೀ.71.600 ರಿಂದ ಕಿ.ಮೀ.130.21 ರವರೆಗೆ ಸಂಪಾಜೆಯಿಂದ ಕುಶಾಲನಗರ ಕಾವೇರಿ ನದಿ ಸೇತುವೆ ವರೆವಿಗೂ ಈಗಾಗಲೇ ತೆರವುಗೊಳಿಸಲಾಗಿದ್ದ ಅನಧಿಕೃತ ಜಾಹಿರಾತು ಫಲಕಗಳನ್ನು ಮತ್ತು ವ್ಯಾಪಾರಿಗಳು ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಒಳಗೆ ಪುನರ್ ಸ್ಥಾಪಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಗ್ರಾಹಕರ ವಾಹನಗಳು ಪುಟ್ಪಾತಿನಲ್ಲಿ ನಿಂತು ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಮತ್ತು ವಾಹನಗಳ ಸರಾಗ ಚಲನೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟುಗಳನ್ನು ಮತ್ತು ಅನಧಿಕೃತ ಜಾಹಿರಾತು ಫಲಕಗಳನ್ನು ರಾಷ್ಟ್ರೀಯ ಹೆದ್ದಾರಿಯ ಫರಿದಿಯಿಂದ ಮಾರ್ಚ್ 23 ರೊಳಗೆ ತಾವೇ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ಮಾರ್ಚ್ 24 ರಿಂದ ಅನಧಿಕೃತ ಬೋರ್ಡ್ ಮತ್ತು ಮಳಿಗೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು ಮತ್ತು ತೆರವು ಕಾರ್ಯಾಚರಣೆಯಲ್ಲಿ ವ್ಯಾಪಾರಿಗಳಿಗೆ ನಷ್ಟವಾದಲ್ಲಿ ಇಲಾಖೆಯು ಜವಾಬ್ದಾರವಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರು ತಿಳಿಸಿದ್ದಾರೆ.






