ಮಡಿಕೇರಿ ಏ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡಲಾಗುವ ಪ್ರತಿಷ್ಠಿತ “ವಿಜಯಾ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಯನ್ನು ಈ ಬಾರಿ ಉಪನ್ಯಾಸಕರು ಹಾಗೂ ಲೇಖಕರಾದ ಪ್ರತಿಮಾ ಹರೀಶ್ ರೈರವರಿಗೆ ಶನಿವಾರ ಪ್ರದಾನ ಮಾಡಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಮತ್ತು ಜಲಜಾ ಶೇಖರ್ ಹಾಗೂ ಜೆ.ಸಿ.ಶೇಖರ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ, ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕøತೆ ಪ್ರೊ.ನಯನ ಕಶ್ಯಪ್ ಅವರು, “ಅಂತರಗಂಗೆ” ಅಂಕಣ ಬರಹಗಳ ಪುಸ್ತಕವನ್ನು ರಚಿಸಿರುವ ಪ್ರತಿಮಾ ಹರೀಶ್ ರೈ ಅವರಿಗೆ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಮನೆ ಮನಗಳಲ್ಲಿ ಕನ್ನಡಕ್ಕಿರಲಿ ಆದ್ಯತೆ- ಕಾರ್ಯಕ್ರಮವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿದ ಪೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮೇಜರ್ ಡಾ. ರಾಘವ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ…
ಲೇಖಕ: admin
ಮಡಿಕೇರಿ NEWS DESK ಏ.11 : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್ಷಿಸಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಶಿಶುಗಳ ತುರ್ತು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಶುವಿನ ಪೋಷಕರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಮಡಿಕೇರಿ ಏ.11 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ನಡೆಯುವ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಬೊಳಂದಂಡ ಮತ್ತು ಮುಂಡಂಡ, 10ಕ್ಕೆ ಪಡೆಯೆಟ್ಟಿರ ಮತ್ತು ಮಂದತಂಡ, 11ಕ್ಕೆ ಕಲ್ಲೇಂಗಡ (ಬೇಳೂರು) ಮತ್ತು ಮಾದೆಯಂಡ (ಎಂ.ಬಾಡಗ), ಮಧ್ಯಾಹ್ನ 1ಕ್ಕೆ ಕೊಚ್ಚೆರ ಮತ್ತು ಕೈಪಟ್ಟಿರ, 2ಕ್ಕೆ ಅಜ್ಜಿಕುಟ್ಟಿರ ಮತ್ತು ಚೆನ್ನಪಂಡ, 3ಕ್ಕೆ ಬೊಳ್ಳೇರ ಮತ್ತು ಪಟ್ಟಡ (ಬೇಟೋಳಿ) ಹಾಗೂ ಸಂಜೆ 4 ಗಂಟೆಗೆ ಪೆಬ್ಬಟ್ಟಿರ ಮತ್ತು ಕೀತಿಯಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಮೂಕೊಂಡ ಮತ್ತು ಮೇದುರ, 10ಕ್ಕೆ ಕರವಟ್ಟಿರ ಮತ್ತು ಮಾಚೆಟ್ಟಿರ (ಬಾಳುಗೋಡು), 11ಕ್ಕೆ ಬೊಳ್ಳಚೆಟ್ಟಿರ ಮತ್ತು ಕೊಕ್ಕೆಂಗಡ, ಮಧ್ಯಾಹ್ನ 12ಕ್ಕೆ ಪುಟ್ಟಿಚಂಡ (ಬೊಳ್ಳರಿಮಾಡ) ಮತ್ತು ಬಾಚಿರ, 1ಕ್ಕೆ ಕೊಳುವಂಡ ಮತ್ತು ಆಟ್ರಂಗಡ, 2ಕ್ಕೆ ಮೋಟನಾಳಿರ ಮತ್ತು ಗಾಂಡಂಗಡ ಹಾಗೂ 3 ಗಂಟೆಗೆ ಕೈಬಿಲಿರ ಮತ್ತು ಕುಟ್ಟಂಡ (ಅಮ್ಮತಿ)
ಮಡಿಕೇರಿ NEWS DESK ಏ.11 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.11ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕಟ್ಟೇರ (ಅರಮೇರಿ) ಮತ್ತು ಅಮ್ಮಾಟಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಮ್ಮಾಟಂಡ 7 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಟ್ಟೇರ 6 ಓವರ್ ಗಳಲ್ಲಿ 5 ವಕೆಟ್ 73 ರನ್ ಗಳನ್ನು ಸೇರಿಸಿತು. ಅಮ್ಮಾಟಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಪಾಲಂದಿರ ಮತ್ತು ಹೊಟ್ಟೆಂಗಡ ನಡುವಿನ ಪಂದ್ಯದಲ್ಲಿ ಪಾಲಂದಿರ 58 ರನ್ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಲಂದಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 140 ರನ್ ಗಳನ್ನು ಗಳಿಸಿತು. ಹೊಟ್ಟೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 82 ರನ್…
ಮಡಿಕೇರಿ ಏ.11 NEWS DESK : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರ್ಕಾರಿ ಪಿಯು ಕಾಲೇಜಿನ ಕಲಾ ವಿಭಾಗದ ವಿಧ್ಯಾರ್ಥಿನಿ ಎಸ್.ಪಿ.ತಸ್ಮಿಯಾ 548/600 (91.33%) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಸೋಮವಾರಪೇಟೆಯ ನಿವಾಸಿಗಳಾದ ಪೀರ್ ಷಾ ಮತ್ತು ಬಿಮುನೀರಾ ದಂಪತಿಯ ಪುತ್ರಿ.
ಕುಶಾಲನಗರ ಏ.11 NEWS DESK : 2026-27 ರ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆ ಸಂಗ್ರಹ ಮಾಡಲು ಪುರಸಭೆ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಕ್ಯಾಂಪ್ ಮಾಡಬೇಕೆಂದು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಪದಾಧಿಕಾರಿಗಳು ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬೇರೆ ಬೇರೆ ಸ್ಥಳಗಳಲ್ಲಿ ತೆರಿಗೆ ಸಂಗ್ರಹ ಕ್ಯಾಂಪ್ ಮಾಡುವುದರಿಂದ ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹವಾಗುವುದರ ಜೊತೆಗೆ ಸಾರ್ವಜನಿಕರಿಗೂ ತುಂಬ ಅನುಕೂಲವಾಗಲಿದೆ. ಅನವಶ್ಯಕವಾಗಿ ಕಚೇರಿ ಅಲೆಯುವುದು ತಪ್ಪುತ್ತದೆ. ಸಿಬ್ಬಂದಿಗಳು ಕಚೇರಿಯಲ್ಲಿ ಇದ್ದರೇ ಬಹಳ ಕೆಲಸದ ಒತ್ತಡವಿರುತ್ತದೆ. ಕ್ಯಾಂಪ್ ಮಾಡಿದರೆ ಸಿಬ್ಬಂದಿಗಳು ಕೇವಲ ತೆರಿಗೆ ಸಂಗ್ರಹದ ಕಡೆ ಗಮನ ಹರಿಸಲು ಸಹಕಾರಿಯಾಗುತ್ತದೆ. ತಕ್ಷಣವೇ ಕ್ಯಾಂಪ್ ಮಾಡುವುದರಿಂದ ಏ.31 ರವರೆಗೆ ವಿನಾಯಿತಿಯು ಜನರಿಗೆ ದೊರೆಯುತ್ತದೆ ಎಂದು ಅಧ್ಯಕ್ಷ ಕೆ.ಎಸ್.ನಾಗೇಶ್ ಹೇಳಿದರು. ಮುಖ್ಯಾಧಿಕಾರಿ ಗಿರೀಶ್ ಮಾತನಾಡಿ, ಪುರಸಭೆ ವತಿಯಿಂದ ಪ್ರತಿವರ್ಷವೂ ಕ್ಯಾಂಪ್ ಮಾಡುತ್ತಿದ್ದೇವೆ. ಈ ವರ್ಷವೂ ಖಂಡಿತ ಜನರ ಅನುಕೂಲಕ್ಕಾಗಿ ಮಾಡುತ್ತೇವೆ ಎಂದರು. ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆಯನ್ನು…
ಮಡಿಕೇರಿ ಏ.11 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲಾ ಮಟ್ಟದ ಕಲಾ ವಿಭಾಗದಲ್ಲಿ ಕೂಡಿಗೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಂದಿತಾ ದ್ವಿತೀಯ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ ಸನ್ಮಾನಿಸಲಾಯಿತು. ಬಣದ ಜಿಲ್ಲಾ ಅಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಮತ್ತು ತಂಡದವರು ಕೂಡಿಗೆ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿ ಮತ್ತು ಅವರ ಪೋಷಕರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಜಿಲ್ಲಾ ಸಂಚಾಲಕ ಎಂ.ಎಸ್.ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ, ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಸುರೇಶ್, ಕಾರ್ಯದರ್ಶಿ ಸರಳಾ ರಾಮಣ್ಣ, ಗೌರವಾಧ್ಯಕ್ಷರು ನಾಗರಾಜ ಹೆಚ್.ಕಾವಲ್ ಕೊಂಡ, ಕುಶಾಲನಗರ ತಾಲ್ಲೂಕಿನ ಅಧ್ಯಕ್ಷ ಪುಟ್ಟಸ್ವಾಮಿ, ಕಾರ್ಯದರ್ಶಿ ಅನಸೂಯಾ, ಮುಖಂಡರಾದ ಪುಟ್ಟಮ್ಮ, ಗಣೇಶ ಯೋಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಸೇರಿದಂತೆ ಉಪನ್ಯಾಸಕ ವೃಂದ ಇದ್ದರು.
ಮಡಿಕೇರಿ ಏ.11 NEWS DESK : ಬೆಟ್ಟಪುರದ ಅನಿಕೇತನ ಕಾಲೇಜು ಈ ಬಾರಿ ಅದ್ಭುತ ಸಾಧನೆ ಮಾಡಿದೆ. ಈ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಹನ್ನೆರಡು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು ತೇರ್ಗಡೆಯಾದರೆ, ಹದಿನೈದು ವಿದ್ಯಾರ್ಥಿಗಳು ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಸಂದೇಶ್ 575 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದರೆ, ಸುಮಂತ್ ನಾಯಕ್ 572 ಅಂಕಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ಅಂತೆಯೇ ಕೀರ್ತನ್ ಕೆ.ಎಂ. 570 ಅಂಕಗಳನ್ನು ಗಳಿಸಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಮಡಿಕೇರಿ ಏ.11 NEWS DESK : ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ, ಕಲಾ ಮತ್ತು ವಿಜ್ಞಾನ ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅವರಲ್ಲಿ 13 ಮಂದಿ ಡಿಸ್ಟಿಂಕ್ಷನ್ ಹಾಗೂ 17 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಸಾಧನೆಯಲ್ಲಿ ಆಯಿಷತುಲ್ ಅಫ್ರಾ ಟಿ.ಎಸ್. ಅವರು 600ರಲ್ಲಿ 588 ಅಂಕಗಳು (98%) ಗಳಿಸಿ ಜಿಲ್ಲಾ ಮಟ್ಟದಲ್ಲಿ 3ನೇ ರ್ಸ್ಥಾನ ಹಾಗೂ ತಾಲೂಕು ಮಟ್ಟದಲ್ಲಿ 1ನೇ ಸ್ಥಾನ ಪಡೆದು ಸಂಸ್ಥೆಗೆ ಹೆಮ್ಮೆಯ ಕೀರ್ತಿ ತಂದಿದ್ದಾರೆ. ಫಾತಿಮಾ ಫಿದಾ ಸಿ.ಎ. – 581/600 (96.8%), ರಂಶಿನಾ ಕೆ.ಎಂ. – 580/600 (96%) ಪಡೆದುಕೊಂಡಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾದ ವೈಯಕ್ತಿಕ ಮಾರ್ಗದರ್ಶನ ಮತ್ತು ಗುಣಮಟ್ಟದ ಬೋಧನೆ ಯಶಸ್ಸಿನ ಮೂಲ ಕಾರಣವೆಂದು ತಿಳಿಸಿದ್ದಾರೆ. ಸಂಸ್ಥೆಯಲ್ಲಿ ಪ್ರತಿಯೊಬ್ಬ…
ಮಡಿಕೇರಿ ಏ.11 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಕರ್ನಾಟಕ ಮಾಧ್ಯಮ ಅಕಾಡೆಮಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ಇಂದಿನ ಮಾಧ್ಯಮ ಸಂವೇದನಾಶೀಲತವಾಗಿದಿಯೇ” ಎಂಬ ವಿಷಯದ ಕುರಿತ ವಿಚಾರಸಂಕಿರಣವನ್ನು ಆಯೋಜಿಸಿತ್ತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಈ ವಿಚಾರಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. ಸಾಮಾಜಿಕ ಸಮಾನತೆಯ ಹರಿಕಾರ ಅಂಬೇಡ್ಕರ್ ಅವರ ಸಾರಥ್ಯದಲ್ಲಿ ರಚನೆಯಾದ ಭಾರತದ ಸಂವಿಧಾನ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಕೈದೀವಿಗೆಯಾಗಿದೆ ಎಂದು ಅವರು ಬಣ್ಣಿಸಿದರು. ಜಾತಿ, ಧರ್ಮ, ಲಿಂಗ ಮತ್ತು ಭಾಷೆಯ ಆಧಾರದ ತಾರತಮ್ಯ ಹಾಗೂ ಅಸ್ಪೃಶ್ಯತೆಯ ಆಚರಣೆ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಇಂದಿಗೂ ಜ್ವಲಂತ ಸಮಸ್ಯೆಗಳಾಗಿ ದೇಶವನ್ನು ಕಾಡುತ್ತಿರುವುದು ವಿಷಾದನೀಯ ಎಂದು ಅವರು ವಿಶ್ಲೇಷಿಸಿದರು. ಭಾರತದಲ್ಲಿ 19,658 ಭಾಷೆಗಳಿದ್ದು ಜನ ಸಂಸ್ಕೃತಿಯ ಪ್ರತೀಕವಾದ ಅನೇಕ ಸಣ್ಣ ಭಾಷೆಗಳು ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದು…






