ಮಡಿಕೇರಿ ಸೆ.25 : ನಾಪೋಕ್ಲುವಿನ ಚೆರಿಯಪರಂಬು ಶಾದಿ ಮಹಲ್ನಲ್ಲಿ “ಜನತಾ ದರ್ಶನ” ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಉದ್ಘಾಟಿಸಿದರು. ಈ ಸಂದರ್ಭ ಶಾಸಕರಾದ ಶ್ರೀ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ , ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ.
ಲೇಖಕ: admin
ನಾಪೋಕ್ಲು ಸೆ.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೆಪಿಎಸ್ ಶಾಲೆಯಲ್ಲಿ ನಡೆದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆಯ 8 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸೆ.30 ರಂದು ಬೆಂಗಳೂರಿನ ಮಲ್ಲೇಶ್ವರಂ ಮಹಾರಾಣಿ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೇಟೊಳಿರ ರತ್ನ ಚರ್ಮಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.25 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ – 2023ರ ಅಂಗವಾಗಿ ಏರ್ಪಡಿಸಲಾಗಿದ್ದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಂ.ಹರ್ಷಿತ ಕುಶಾಲಪ್ಪ ಮತ್ತು ಪಿ.ಎ.ನಸೀರ ತಂಡ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ 19 ಶಾಲೆಗಳ 38 ವಿದ್ಯಾರ್ಥಿಗಳು ತಂಡ ಪಾಲ್ಗೊಂಡಿತ್ತು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.25 : ಕಾನೂನು ಬಾಹಿರ ಚಟುವಟಿಕೆಗಳು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ಅಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು ಎಂದು ನಾಪೊಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕುರಿತು ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಂದೆ-ತಾಯಿಗಳು ತಮಗಾಗಿ ಏನು ಮಾಡುತ್ತಿದ್ದಾರೆ ಎಂಬುದನ್ನು ಅರಿತುಕೊಂಡು ಮುಂದುವರಿಯಬೇಕು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕವಾಗಿ, ಮಾನಸಿಕವಾಗಿ ಹಲವು ತೊಂದರೆಗಳು ಉಂಟಾಗುತ್ತವೆ. ಉತ್ತಮ ಗೆಳೆಯರೊಂದಿಗೆ ಮಾತ್ರ ಬಾಂಧವ್ಯವನ್ನು ಇಟ್ಟುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಹಾಗೂ ಅದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದ ಅವರು ತಾರುಣ್ಯಾವಸ್ಥೆಯಲ್ಲಿ ತಮ್ಮನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ತಿಳಿಸಿದರು. ಮೊಬೈಲ್ ಬಳಸುವುದರಿಂದ ಹಲವು ಸಂದರ್ಭಗಳಲ್ಲಿ ಅನಾಹುತಗಳಾಗುತ್ತಿದ್ದು, ಮಿತವಾಗಿ ಮೊಬೈಲ್ ಬಳಕೆ ಮಾಡಬೇಕು.18 ವರ್ಷದೊಳಗಿನ ಯಾರೂ ವಾಹನ ಚಲಾಯಿಸಬಾರದು ಹಾಗೂ…
ನಾಪೋಕ್ಲು ಸೆ.25 : ಸದಸ್ಯರು ದವಸ ಭಂಡಾರದ ವ್ಯವಹಾರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ದವಸ ಭಂಡಾರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಕಂಗಾಂಡ ಜಾಲಿ ಪೂವಪ್ಪ ಮನವಿ ಮಾಡಿದರು. ದವಸ ಭಂಡಾರದ ಕಟ್ಟಡದಲ್ಲಿ ಆಯೋಜಿಸಲಾದ ನಂ. 90ನೇ ನಾಪೋಕ್ಲು ಧವಸ ಭಂಡಾರದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಸಭೆಯಲ್ಲಿ ದವಸ ಭಂಡಾರದ ಅಭಿವೃದ್ಧಿಗೆ ಸುದೀರ್ಘವಾಗಿ ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರಲಾಯಿತು. ಚರ್ಚೆಯಲ್ಲಿ ಅರೆಯಡ ಅಶೋಕ್, ಕೊಂಬಂಡ ಗಣೇಶ್, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಸಿ.ಎಸ್.ಜೋಯಪ್ಪ, ಬಿ.ಸಿ.ಕಾವೇರಪ್ಪ, ಕುಲ್ಲೇಟಿರ ದೇವಯ್ಯ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶಿವಚಾಳಿಯಂಡ ಬೋಪಣ್ಣ, ನಿರ್ದೇಶಕರಾದ ಶಿವಚಾಳಿಯಂಡ ಸೋಮಯ್ಯ,ಕುಲ್ಲೇಟ್ಟೀರ ತಮ್ಮಯ್ಯ,ಅರೆಯಡ ವಿನೋದ್,ಬೊಪ್ಪಂಡ ಕಾಳಪ್ಪ,ಪಾಡಿಯಮ್ಮಂಡ ಮಹೇಶ್, ಅಮ್ಮಂಡ ಅಶೋಕ್, ಅಜ್ಜೇಟ್ಟೀರ ರಾಣಿ ಪಳಂಗಪ್ಪ, ಶಿವಚಾಳಿಯಂಡ ಸುಬ್ಬಮ್ಮ, ಹೆಚ್.ಎ.ಬೊಳ್ಳು ಸುಬ್ಬಮ್ಮ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.25 : ಗೌರಿ-ಗಣೇಶೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಗೌರಿ-ಗಣೇಶೋತ್ಸವವನ್ನು ಅದ್ದೂರಿಯಿಂದ ಆಚರಿಸಲು ಐದು ಸೇವಾ ಸಮಿತಿಗಳ ವತಿಯಿಂದ ತಯಾರಿ ನಡೆಸಿದ್ದು, ಸೆ.19 ರಂದು ಗಣೇಶ ಚತುರ್ಥಿಯಂದು ಸಂತೆ ಮೈದಾನದಿಂದ ಅಲಂಕೃತ ವಾಹನಗಳಲ್ಲಿ ಗೌರಿ ಗಣೇಶಮೂರ್ತಿಗಳನ್ನು ಮೆರವಣಿಗೆಯಲ್ಲಿ ತಂದು ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಇಂದಿರಾನಗರದ ವಿವೇಕಾನಂದ ಸೇವಾ ಸಮಿತಿ,ರಾಮಟ್ರಸ್ಟ್ ಗಣೇಶೋತ್ಸವ ಸಮಿತಿ, ಪೊನ್ನುಮುತ್ತಪ್ಪ ದೇವಾಲಯದ ವಿನಾಯಕ ಸೇವಾ ಸಮಿತಿ, ನಾಪೋಕ್ಲು ನಾಡು ಗೌರಿ-ಗಣೇಶ ಸಮಿತಿ ಹಾಗೂ ಕಕ್ಕುಂದಕಾಡಿನ ಗಣೇಶೋತ್ಸವ ಸೇವಾಸಮಿತಿ ವತಿಯಿಂದ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಕೊಂಡೊಯ್ದು ಸಂಜೆ ವಿಸರ್ಜಿಸಲಾಯಿತು. ಗೌರಿ-ಗಣೇಶಮೂರ್ತಿಗಳ ವಿಸರ್ಜನೆ ಸಂದರ್ಭ ವಿವಿಧ ಸೇವಾ ಸಮಿತಿಗಳು ಆಯೋಜಿಸಿದ ಮನೋರಂಜನಾ ಕಾರ್ಯಕ್ರಮದಲ್ಲಿ ಪುತ್ತೂರಿನ ಶಬರಿ ತಂಡದವರಿಂದ ನಾಸಿಕ್ ಬ್ಯಾಂಡ್, ಶ್ರೀ ಶಾರದಾ ಆರ್ಟ್ಸ್ ಜನಪದ ಗೊಂಬೆ ಬಳಗದಿಂದ ವಿವಿಧ ಆಕರ್ಷಕ ಕೀಲು ಬೊಂಬೆಯಾಟ ವಿಟ್ಲ ತಂಡದವರಿಂದ ಬೃಹತ್ ಗಾತ್ರದ ಆಂಜನೇಯ, ಚಲಿಸುವ ಮೂರ್ತಿಗಳೊಂದಿಗೆ…
ಮಡಿಕೇರಿ ಸೆ.25 : ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲೆಯ ಮಕ್ಕಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಶಾಲೆಯ ಸಮವಸ್ತ್ರ ಮತ್ತು ಶೂ ವಿತರಣೆ ಮಾಡಿದರು. ಇದೇ ಸಂದರ್ಭ ಶಾಲೆಯ ಮತ್ತು ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು. ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೊ , ಅನಿತಾ ಸ್ಥಳೀಯರಾದ ಪ್ರೆೇಮ್ ಕೂಮರ್, ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಾಲಿನಿ ಮತ್ತು ಅಂಗನಾವಡಿ ಸಹಾಯಕಿ ಜಂಯತಿ ಮತ್ತು ಗ್ರಾಮಸ್ಥರು ಹಾಜರಿದ್ದರು.
ಸಿದ್ದಾಪುರ ಸೆ.25 : ಕರಡಿಗೋಡು ಶ್ರೀ ಗಣೇಶ ಮಿತ್ರ ಮಂಡಳಿ ವತಿಯಿಂದ 11ನೇ ವರ್ಷದ ಗೌರಿ ಗಣೇಶ ವಿಸರ್ಜನ ಮಹೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ದಾ ಭಕ್ತಿಯಿಂದ ನಡೆಯಿತು. ಶ್ರೀ ಅಯ್ಯಪ್ಪ ಸೇವಾ ಸಮಿತಿ ಸಭಾಂಗಣದಲ್ಲಿ ಬೆಳ್ಳಿಗೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ವಿದ್ಯುತ್ ಅಲಂಕೃತ ಮಂಟಪದಲ್ಲಿ ಗ್ರಾಮದಲ್ಲಿ ಶೋಭಾಯಾತ್ರೆ ನಡೆಸಿ ಕೊಡಗಿನ ಪುಣ್ಯ ಕಾವೇರಿನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಶ್ರೀ ಗಣೇಶ ಮಿತ್ರ ಮಂಡಳಿ ಅಧ್ಯಕ್ಷ ಎಂ.ಆರ್. ಶಾಜನ್ ಮಾತನಾಡಿ, ಪ್ರಾಕೃತಿಕ ವಿಕೋಪ, ಕೋವಿಡ್ ಸಂಕಷ್ಟದಿಂದ ಕಳೆದ ಕೆಲವು ವರ್ಷ ಸಾಂಕೇತಿಕವಾಗಿ ಸರಳವಾಗಿ ಆಚರಿಸಲಾಯಿತು. ಈ ಬಾರಿ ಗ್ರಾಮಸ್ಥರ ಸಹಕಾರದಿಂದ ನಾಲ್ಕುದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮದೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು. ಶೋಭಾಯಾತ್ರೆಯ ಮೂಲಕ ಗ್ರಾಮದಲ್ಲಿ ಮೆರವಣಿ ನಡೆಸಲಾಯಿತು. ಯುವಕ ಯುವತಿಯರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ವರದಿ : ಎಂ.ಎ.ಕೃಷ್ಣ (ಸಿದ್ದಾಪುರ)
ಮಡಿಕೇರಿ ಸೆ.24 : 2023-24ನೇ ಸಾಲಿನ ಪದವಿ ಪೂರ್ವ ಕಾಲೇಜು, ಬಾಲಕರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಾಲಿಬೆಟ್ಟದ ವಿದ್ಯಾರ್ಥಿಗಳು ಪ್ರಥಮ ಸುತ್ತಿನಲ್ಲಿ ಸಿದ್ದಾಪುರದ ಇಕ್ರಾ ಕಾಲೇಜು, ದ್ವಿತೀಯ ಸುತ್ತಿನಲ್ಲಿ ಸಾಯಿ ಶಂಕರ್ ಕಾಲೇಜನ್ನು, ತೃತೀಯ ಸುತ್ತಿನಲ್ಲಿ ಕಾವೇರಿ ಕಾಲೇಜು ವಿರಾಜಪೇಟೆಯನ್ನು ಹಾಗೂ ಅಂತಿಮ ಸುತ್ತಿನಲ್ಲಿ ಬಲಿಷ್ಠ ತಂಡವಾದ ಕಾವೇರಿ ಕಾಲೇಜು ಗೋಣಿಕೊಪ್ಪಲನ್ನು ಮಣಿಸಿದರು. ತಾಲೂಕು ಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಕೆ.ಕೆ.ಶೈನಾ ಅವರು ತಿಳಿಸಿದ್ದಾರೆ. ಮಾದಾಪುರ ಚೆನ್ನಮ್ಮ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯಲಿದೆ.
ಮಡಿಕೇರಿ ಸೆ.24 : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ಪಟ್ರಪಂಡ ಗೀತಾ ಬೆಳ್ಳಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಸಬಿತಾ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಆಶಾ ಚಿಣ್ಣಪ್ಪ, ಉದಿಯಂಡ ಪೊನ್ನಮ್ಮ, ಕುಸುಮ ಸೋಮಣ್ಣ, ಜಯ ಲೀಲಾ ಸತೀಶ್, ಪಿ.ಕೆ.ನೀಲಮ್ಮ, ಪ್ರೇಮ ಮಂಜುನಾಥ್, ಬಿ.ಎನ್.ಭಾರತಿ, ಬಿ.ಬಿ.ಯಶೋಧ ಬಾಬು, ಹೆಚ್.ಆರ್.ಪುಷ್ಪ ವಾಸು ಹಾಗೂ ಪುಷ್ಪ ಐತ್ತಪ್ಪ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಅಧೀಕ್ಷಕರಾದ ಆಶಾ ಪಿ. ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.






