ಲೇಖಕ: admin

ಮಡಿಕೇರಿ ಸೆ.24 : ಶಿಕ್ಷಣ ಕ್ಷೇತ್ರದ ಸೇವೆಗಾಗಿ ಮೈಸೂರಿನ ಲಯನ್ಸ್ ಕ್ಲಬ್ ಆಫ್ ಮೈಸೂರು ಹೆರಿಟೇಜ್ ವತಿಯಿಂದ ಉಪನ್ಯಾಸಕರಾದ ಪಟ್ಟಡ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

ಮಡಿಕೇರಿ ಸೆ.24 : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ನೂತನ ಅಧ್ಯಕ್ಷರಾಗಿ ಗೀತಾ ಗಿರೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಎ.ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಮಹಾಸಭೆಯಲ್ಲಿ ಆಡಳಿತ ಮಂಡಳಿಯನ್ನು ರಚಿಸಲಾಯಿತು.  ಪ್ರಧಾನ ಕಾರ್ಯದರ್ಶಿಯಾಗಿ ಬಿ.ಕೆ.ಜಗದೀಶ್ ಸೋಮಯಾಜಿ, ಉಪಾಧ್ಯಕ್ಷರಾಗಿ ರಾಮಚಂದ್ರ ಮೂಗೂರು, ಜಂಟಿ ಕಾರ್ಯದರ್ಶಿಯಾಗಿ ಸವಿತಾ ಕೆ ಭಟ್, ಖಜಾಂಚಿಯಾಗಿ ಜಿ.ಆರ್.ರವಿಶಂಕರ್ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ಜಯಶೀಲ ಪ್ರಕಾಶ್ ಹಾಗೂ ವೀಣಾ ಹೊಳ್ಳ, ಧಾರ್ಮಿಕ ಸಮಿತಿ ಸಂಚಾಲಕರಾಗಿ ನಿಧಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಶ್ರೀಶ ಭಟ್, ಕ್ರೀಡಾ ಸಮಿತಿ ಸಂಚಾಲಕರುಗಳಾಗಿ ಬಿ.ಕೆ.ಅರುಣ್ ಕುಮಾರ್, ಜೆ.ಡಿ.ಶಿವಶಂಕರ್ ಹಾಗೂ ಲಲಿತಾ ರಾಘವನ್, ಕಟ್ಟಡ ಸಮಿತಿಗೆ  ಭಾರತೀಶ್ ಖಂಡಿಗೆ ಹಾಗೂ ಜೆ.ಡಿ.ಶಿವಶಂಕರ್, ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರದ ನಿರ್ವಹಣೆಗೆ ಸವಿತಾ.ಕೆ ಬಟ್, ಮಂಜುನಾಥ ಎ.ವಿ ಹಾಗೂ ಪ್ರಭಾಕರ್ ನೆಲ್ಲಿತ್ತಾಯ, ಸದಸ್ಯತ್ವ ಅಭಿಯಾನಕ್ಕೆ ರಾಮಚಂದ್ರ ಮೂಗೂರು, ಬೈಲಾ ತಿದ್ದುಪಡಿ ಸಮಿತಿಗೆ ಜಿ.ಆರ್.ರವಿಶಂಕರ್ ಹಾಗೂ ನಿಕಟಪೂರ್ವ ಅಧ್ಯಕ್ಷ ಎ.ಗೋಪಾಲಕೃಷ್ಣ, ನಿಧಿ ಸಂಗ್ರಹಣೆಗೆ…

Read More

ಸುಂಟಿಕೊಪ್ಪ ಸೆ.24 : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಸುಂಟಿಕೊಪ್ಪದ ರಾಮಮಂದಿರದಲ್ಲಿ ನಡೆಯುತ್ತಿರುವ ಗೌರಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಕುಂದನ ನೃತ್ಯಾಲಯದ ವಿನುತ ಹೇಮಂತ್ ಅವರ ನೇತೃತ್ವದ ಭರತನಾಟ್ಯ ಪ್ರದರ್ಶನ ಗಮನ ಸೆಳೆಯಿತು. ಮಂಜುನಾಥಯ್ಯ ಮೀನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಸಮಿತಿಯ ಅಧ್ಯಕ್ಷ ವಿಘ್ನೇಶ್ ಉದ್ಘಾಟಿಸಿದರು.

Read More

ಸುಂಟಿಕೊಪ್ಪ ಸೆ.24 : ಕೆದಕಲ್ ಗ್ರಾ.ಪಂ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಸಾರ್ವಜನಿಕ ಶ್ರೀಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹೊರೂರು ಮಠದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಯಿತು. ವಿಶೇಷ ಪೂಜೆ, ಮಹಾಪೂಜೆ, ಮಂಗಳಾರತಿ, ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ವಿದ್ಯುತ್ ದೀಪಾಲಂಕೃತ ಮಂಟಪದಲ್ಲಿ ಗೌರಿಗಣೇಶೋತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಿ ತೋಟದ ಕೆರೆಯಲ್ಲಿ ವಿಸರ್ಜಿಸಲಾಯಿತು. ಸಮಿತಿಯ ಅಧ್ಯಕ್ಷರು, ಕಾರ್ಯಕಾರಿ ಮಂಡಳಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಸೆ.23 : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿದೆ. ವಿದ್ಯಾ ಸಂಸ್ಥೆಗೆ 25 ವರ್ಷಗಳು ತುಂಬಿದ ಹಿನ್ನೆಲೆ ಬೆಳ್ಳಿ ಹಬ್ಬದ ಲೋಗೋವನ್ನು ಇಂದು ಅನಾವರಣಗೊಳಿಸಲಾಯಿತು. ಶಾಲೆಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಮಾಜ ಹಾಗೂ ಶಾಲೆಯ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ಲೋಗೋದ ವಿಡಿಯೋವನ್ನು ಬಿಡುಗಡೆಗೊಳಿಸಿದರು. ಕೊಡವ ಸಮಾಜದ ಉಪಾಧ್ಯಕ್ಷ ಹಾಗೂ ಶಾಲೆಯ ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ ಅವರು ಲೋಗೋವನ್ನು ಅನಾವರಣಗೊಳಿಸಿದರು. ನಂತರ ಮಾತನಾಡಿದ ಮುತ್ತಪ್ಪ ಅವರು, ಉತ್ತಮ ಶಿಕ್ಷಣ ನೀಡುವ ಮೂಲಕ ಜನರಲ್ ತಿಮ್ಮಯ್ಯ ಶಾಲೆಯು ಮಾದರಿ ಶಿಕ್ಷಣ ಸಂಸ್ಥೆಯಾಗಿ 25 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು. ಶಿಕ್ಷಕರ ಪರಿಶ್ರಮದೊಂದಿಗೆ ವಿದ್ಯಾರ್ಥಿಗಳು ಕೂಡ ಉತ್ತಮ ಫಲಿತಾಂಶ ಗಳಿಸುವ ಮೂಲಕ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕರೆ ನೀಡಿದರು. ಶಾಲೆಯ ಪ್ರಾಂಶುಪಾಲರಾದ ಕಲ್ಲುಮಾಡಂಡ ಸರಸ್ವತಿ ಸುಬ್ಬಯ್ಯ, ಪ್ರಮುಖರಾದ ಕನ್ನಂಡ ಕವಿತಾ ಕಾವೇರಮ್ಮ, ಶಾಲಾ ಆಡಳಿತ ಮಂಡಳಿಯ ನಿರ್ದೇಶಕರುಗಳಾದ…

Read More

ಮಡಿಕೇರಿ ಸೆ.23 : ಕಳೆದ ಕೆಲವು ವರ್ಷಗಳಿಂದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾದಕವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದೇವೆ. ಮಾನವ ಕಳ್ಳಸಾಗಣಿಕೆ, ಮಕ್ಕಳ ಮೇಲಿನ ಅತ್ಯಾಚಾರ ಇತ್ಯಾದಿ ಅಂಶಗಳ ಕುರಿತು ನಿರಂತರ ಕಾರ್ಯಕ್ರಮ ರೂಪಿಸಿಕೊಂಡು ಬಂದಿದ್ದೇವೆ. ಅಂಕಿ ಅಂಶಗಳನ್ನು ಗಮನಿಸುವಾಗ ಮಕ್ಕಳು, ವಿದ್ಯಾರ್ಥಿಗಳು ಈ ಜಾಲದಲ್ಲಿ ಸೇರಿದ್ದಾರೆ. ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಜಾಗೃತಿಯ ನೆಲೆಯನ್ನು ರೂಪಿಸುವ ಪ್ರಯತ್ನ ಮಾಡಬೇಕಾಗಿದೆ. ಆ ಮೂಲಕ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ರಾಯಭಾರಿಗಳಂತೆ ಕಾರ್ಯನಿರ್ವಹಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ವಿ.ಪ್ರಸಾದ್ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಮಾಜಶಾಸ್ತ್ರ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾದಕ ವಸ್ತುಗಳು ನೈಸರ್ಗಿಕ ಮತ್ತು ರಸಾಯನಿಕ ಮಾದರಿಯಲ್ಲಿ ಕಾಣಬಹುದು. ಒತ್ತಡ ಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಸೋತ ಕಾರಣದಿಂದ, ಯುವಜನತೆಯ ಮಾದಕ ವ್ಯಸನಿಗಳಾಗಿದ್ದಾರೆ. ಎಂತಹ…

Read More

ಮಡಿಕೇರಿ ಸೆ.23 :  ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರ‍್ಯಾಗಿಂಗ್ ತಡೆಗಟ್ಟುವ ಬಗ್ಗೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ  ಕೆ.ರಾಮರಾಜನ್ ರ‍್ಯಾಗಿಂಗ್  ಕೃತ್ಯೆಯ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೈದ್ಯಕೀಯ ಕಾಲೇಜಿಗೆ ಇತರೆ ಜಿಲ್ಲೆ ಅಲ್ಲದೆ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ದಾಖಲಾಗಿರುತ್ತಾರೆ. ಈ ಸಂದರ್ಭದಲ್ಲಿ ಕಾಲೇಜು ಕ್ಯಾಂಪಸ್ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ರ‍್ಯಾಗಿಂಗ್ ಮಾಡದಂತೆ ಹಾಗೂ ರ‍್ಯಾಗಿಂಗ್ ಆಗುವಂತಹ ಸನ್ನಿವೇಶಗಳನ್ನು ಸೃಷ್ಟಿ ಮಾಡದಂತೆ ಸಲಹೆ ನೀಡಿದ ಅವರು, ರ‍್ಯಾಗಿಂಗ್  ಒಂದು ಅಪರಾಧವಾಗಿದ್ದು, ಅದಕ್ಕೆ ನೀಡಲಾಗುವ ಶಿಕ್ಷೆಯ ಪ್ರಮಾಣ, ದಂಡದ ಮಾಹಿತಿಯನ್ನು ವಿವರಿಸಿದರು. ರ‍್ಯಾಗಿಂಗ್ ನಿಂದಾಗಿ ವಿದ್ಯಾರ್ಥಿಯ ಮೇಲಾಗುವ ಮಾನಸಿಕ ಮತ್ತು ದೈಹಿಕ ಪರಿಣಾಮಗಳು, ಆತಂಕ , ಖಿನ್ನತೆ ಮತ್ತು ಕೆಲವು ಸಂಧರ್ಭಗಳಲ್ಲಿ ಆತ್ಮಹತ್ಯೆಗೆ ಕಾರಣವಾಗಬಹುದು, ಕೆಲವು ಒತ್ತಡ ಮತ್ತು ಆಘಾತವು ಸುಮಾರು ವರ್ಷಗಳವರೆಗೂ ಕಾಡಬಹುದು. ರ‍್ಯಾಗಿಂಗ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತದೆ ವಿದ್ಯಾರ್ಥಿಯ ಅಧ್ಯಯನದ…

Read More

ಕುಶಾಲನಗರ/ಕೂಡಿಗೆ, ಸೆ.23 : ಓಝೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ, ಮಾನವರಿಗೆ ಪರಿಸರ ಬಹಳ ಮುಖ್ಯ ಆದರೆ ಪರಿಸರಕ್ಕೆ ಮಾನವರು ಮುಖ್ಯವಲ್ಲ, ಇದನ್ನು ಅರಿತು ಪ್ರತಿಯೊಬ್ಬರೂ ಓಝೋನ್ ಪದರದ ರಕ್ಷಣೆಗೆ ಮುಂದಾಗಬೇಕೆಂದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ಆದ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‌ ನ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಛೇರಿ ಮತ್ತು ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‌ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ವಿಜ್ಞಾನ ಸಮಿತಿ ಹಾಗೂ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ “ವಿಶ್ವ ಓಝೋನ್ ಪದರ ಸಂರಕ್ಷಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಓಝೋನ್ ರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿ ಜೀವಸಂಕುಲದ ಉಳಿವಿಗೆ ಓಝೋನ್‌ ಪದರವನ್ನು ರಕ್ಷಿಸಲು ಪಣ ತೊಡಬೇಕಾಗಿದೆ ಎಂದರು. ಓಝೋನ್‌…

Read More

ವಿರಾಜಪೇಟೆ  ಸೆ.23 :  ಆರ್ಜಿ ಗ್ರಾಮದ ಪೆರಂಬಾಂಡಿಯಲ್ಲಿ ಶ್ರೀ ವಿದ್ಯಾ ವಿನಾಯಕ ಸೇವಾ ಸಮಿತಿ ವತಿಯಿಂದ ಗಣೇಶ ಪ್ರತಿಷ್ಟಾಪನೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಪೆರಂಬಾಡಿ ಗ್ರಾಮದ ಸುತ್ತ ಮುತ್ತ ಇರುವ ಎಲ್ಲಾ ಸದಸ್ಯರನ್ನು ಒಟ್ಟು ಗೂಡಿಸಿ ಗಣಪತಿ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಂಗಳೂರಿನಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಪೆರುಂಬಾಡಿ ನಿವಾಸಿ ಸುಬ್ರಹ್ಮಣಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ಬಿ.ಎಂ.ಗಿರಿ, ಸದಸ್ಯರಾದ ವಿನೋದ್ ಥರ್ಮಲ್, ಬಿ.ಜಿ ನಾರಾಯಣ, ಸುಭಾಷ್, ಸನ್ನಿ, ಆರ್ಜಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬಿ.ಮಣಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಬಿ.ಎಂ ಗಣೇಶ್, ಉದ್ಯಮಿ ಉಲ್ಲಾಸ್ ಶೇಟ್, ನಿವೃತ್ತ ಶಿಕ್ಷಕಿ ವಾರೀಜ, ಬೋಜಪ್ಪ, ವಿಶ್ವನಾಥ್, ಚುಪ್ಪ ನಾಗರಾಜ್, ಸೇರಿದಂತೆ ಎಲ್ಲಾ ಸಮಿತಿಯ ಸದಸ್ಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಉತ್ತಮ ರೀತಿಯಲ್ಲಿ ಸರ್ಕಾರದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗ್ರಾಮದ ಸದಸ್ಯರಾದ ಟಿ.ಕೆ ಕಾವೇರಪ್ಪ, ಬಿ.ಬಿ.ಈರಪ್ಪ, ಟಿ.ಕೆ ದೇವಯ್ಯ, ಸುರೇಶ್ ಬಾಲಕೃಷ್ಣ, ಜಿ.ಜಿ.ಬಾಬು, ಆಲಿ, ಉತ್ತಮ ಸೇವೆ ಸಲ್ಲಿಸಿದ…

Read More

ವಿರಾಜಪೇಟೆ ಸೆ.23 : ವಿರಾಜಪೇಟೆಯ ಮೀನುಪೇಟೆಯಲ್ಲಿರುವ ಕೊಡಗು ಬಾಲಾವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ಉಪಾಧ್ಯಕ್ಷರಾದ ಬಿ.ಆರ್.ವಾಸುದೇವ, ಸಂಘದ ಅಭಿವೃದ್ಧಿಗೆ ಪ್ರತೀ ಸದಸ್ಯರು ಶ್ರಮಿಸಬೇಕೆಂದರು. ಮಾತ್ರವಲ್ಲದೆ ಸಮಾಜಮುಖಿ ದೃಷ್ಟಿಕೋನ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಸದಸ್ಯರುಗಳು ನೀಡಿದ ಸಹಕಾರವನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧನಾ ವರದಿಯನ್ನು ಓದಿ ಅಂಗೀಕರಿಸಲಾಯಿತು. ಬೈಲಾ ತಿದ್ದುಪಡಿಯು ನಡೆಯಿತು. ಸಭೆಯಲ್ಲಿ ಸಂಘದ ಕಾರ್ಯದರ್ಶಿಗಳಾದ ಬಿ. ಆರ್. ಉದಯ ಶಂಕರ್, ಸೇರುದಂತೆ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Read More