ಲೇಖಕ: admin

ಮಡಿಕೇರಿ ಸೆ.23 : ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಿಳುಗುಂದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 2023-24ನೇ ಸಾಲಿನ ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲೂಕು ಹಾಗೂ ಬಾಳೆಲೆ ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಅಲ್ಲದೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಫಾತಿಮತ್ ಶಹಲ ಇಂಗ್ಲೀಷ್ ಭಾಷಣದಲ್ಲಿ ಪ್ರಥಮ, ಫಾತಿಮತ್ ಜೋರ ಕವನ ವಾಚನದಲ್ಲಿ ಪ್ರಥಮ ಹಾಗೂ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಜೈನಭ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸಿ, ಜಿಲ್ಲಾ ಮಟ್ಟವನ್ನು ಶಾಲಾ ಮುಖ್ಯಶಿಕ್ಷಕಿ ಅರುಣ್ ಆನ್ಸಿ ಡಿಸೋಜ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.23 : ಮಣಿಪಾಲ್ ಆಸ್ಪತ್ರೆ ಮೈಸೂರು ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಂ.ಯಾಕುಬ್ ಅವರ ನೇತೃತ್ವದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ನಗರಾಧ್ಯಕ್ಷ ಬಿ.ವೈ.ರಾಜೇಶ್ ವಹಿಸಿದ್ದರು. ಮಣಿಪಾಲ್ ಆಸ್ಪತ್ರೆಯ ಡಾ.ಪ್ರದೀಪ್ ರಾಜಣ್ಣ ಮತ್ತು ಸಂಗಡಿಗರು ಹಿರಿಯ ಆರೋಗ್ಯ ತಪಾಸಣೆ ನಡೆಸಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ನಗರ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮಾಜಿ ಮೂಡಾಧ್ಯಕ್ಷ ಚುಮ್ಮಿದೇವಯ್ಯ, ಅಲ್ಪಸಂಖ್ಯಾತರ ಬ್ಲಾಕ್ ಅಧ್ಯಕ್ಷ ಕಲೀಲ್ ಭಾಷ, ಕಾರ್ಯದರ್ಶಿ ರೌಹುಫ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಪ್ರಮುಖರಾದ ಅಂಬೇಕಲ್ ನವೀನ್, ವಿ.ಪಿ.ಸುರೇಶ್, ಬಿ.ಸಿ.ಜಗದೀಶ್, ಕವನ್ ಕೊತ್ತೋಳಿ, ಆರ್.ಪಿ.ಚಂದ್ರಶೇಖರ್, ಜಾನ್ಸನ್ ಪಿಂಟೋ, ಕೆ.ಎ.ಮೊಣ್ಣಪ್ಪ, ಸ್ವರ್ಣಲತಾ, ದಿವ್ಯ, ಪ್ರೇಮ ಕೃಷ್ಣಪ್ಪ, ರಿಯಾಜ್, ಕವನ್ ಇಬ್ರಾಹಿಂ, ಇಮ್ರಾನ್ ಸೇರಿದಂತೆ…

Read More

ಮಡಿಕೇರಿ ಸೆ.23 : ಸರ್ಕಾರಿ ದಾಖಲೆಗಳಲ್ಲಿ ಕೊಡಗರು ಅಥವಾ ಕೊಡವರು ಪದ ಬಳಕೆಗೆ ಬದಲಾಗಿ “ಕೊಡವ” ಎಂದು ಬಳಕೆ ಮಾಡಲು ರಾಜ್ಯ ಸಚಿವ ಸಂಪುಟದ ಸಭೆ ಅನುಮೋದನೆ ನೀಡಿದೆ. ದಾಖಲೆಗಳಲ್ಲಿ ಕೊಡಗರು ಅಥವಾ ಕೊಡವರು ಎನ್ನುವ ಪದ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿ “ಕೊಡವ” ಶಾಸ್ತ್ರೀಯ ಪದ ಬಳಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರತರವಾಗಿ ಹೋರಾಟ ನಡೆಸುತ್ತಾ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದೊಂದಿಗೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು “ಕೊಡವ” ಪದ ಬಳಕೆಗೆ ಸಚಿವ ಸಂಪುಟದ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ನಾಚಪ್ಪ ಅವರು, ಇದು ಸಿಎನ್‍ಸಿ ಹೋರಾಟದ ಫಲವಾಗಿದ್ದು, ಯಶಸ್ಸಿನ ಚಾರಿತ್ರಿಕ ಮೈಲುಗಲ್ಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. “ಕೊಡವ” ಪದವನ್ನು ಕ್ಯಾಬಿನೆಟ್ ನಿರ್ಣಯದ ಮೂಲಕ ಅಧಿಕೃತಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ.…

Read More

ಕಡಂಗ ಸೆ.23 :  ಕುಂಜಲಗೇರಿ ಶ್ರೀ ಗಣಪತಿ ಸೇವಾ ಸಮಿತಿ  ಗಣೆಶೋತ್ಸವವಕ್ಕೆ 25ರ ಸಂಭ್ರಮ ಆ ಪ್ರಯುಕ್ತ ರಜತಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆ ಗಣಪತಿ ಹೋಮ ನಂತರ ವಿಘ್ನನಿವಾರಕನ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಯೋಂದಿಗೆ ಕಾರ್ಯಕ್ರಮ ಆರಂಭವಾಯಿತು. ಚರ್ಮಂಡ ಅಪ್ಪುಣು ಪೂವಯ್ಯ  ಉತ್ಸವ ಮೂರ್ತಿಯನ್ನು ನೀಡಿದರು. ಶ್ರೀ ಗಣಪತಿ ಸೇವಾ ಸಮಿತಿ  ಅಧ್ಯಕ್ಷ  ಮುಕ್ಕಾಟಿರ ಬಿನ್ನು ಮುದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯುತ್ ಇಲಾಖೆಯ ನಿವೃತ್ತ ಸುಪರಿಟೆಂಡೆಂಟ್ ಮುತ್ತಣ್ಣ, ವಿದ್ಯುತ್ ವಿಭಾಗದ ಆಪ್ತ ಸಹಾಯಕರು ಪಾಲ್ಗೊಂಡು ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಹಾಗೂ ಸಾಮನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕೆಂದು ಮಕ್ಕಳಿಗೆ ಕಿವಿ ಮಾತು ಹೇಳಿದರು. ಸುಭಾಷ್ ಚಂದ್ರ ಬೆಳ್ಳಾರೆ  ಮಾತನಾಡಿ, ನಮ್ಮ ದೇಶದ ಸಂಸ್ಕೃತಿ, ಆಚಾರ, ವಿಚಾರ,  ಜೀವನ ಪಾಠ ಮತ್ತು ನಮ್ಮ ದೇಶದ ಸಂಸ್ಕೃತಿಯನ್ನು ಬೆಳೆಸಿ ಮುಂದಿನ ಪೀಳಿಗೆಗೆ ಉಳಿಸುವ ವಿಚಾರವಾಗಿ ಮಾತನಾಡಿದರು. ಕುಳಿಯಕಂಡ ಪೊನ್ನಣ್ಣ  ಕುಂಜಲಗೇರಿಯ ಶ್ರೀ ಗಣಪತಿ ಸೇವಾ ಸಮಿತಿ  25 ವರ್ಷದ ಇತಿಹಾಸವನ್ನು ತಿಳಿಸಿದರು. ಪ್ರತಿ…

Read More

ಮಡಿಕೇರಿ ಸೆ.23 :  ವಿರಾಜಪೇಟೆಯ ಕಾವೇರಿ ಪದವಿ  ಕಾಲೇಜಿನ ಇತಿಹಾಸ ವಿಭಾಗದಿಂದ ಒಂದು ದಿನದ ಇತಿಹಾಸ ಕಾರ್ಯಗಾರ ನಡೆಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಳಕಂಡ ಸುಜಾತ ಮಾತನಾಡಿ, ಇತಿಹಾಸವು ಮಹಾನ್ ವ್ಯಕ್ತಿಯ ಜೀವನ, ಸಾಧನೆ, ಬಲಿದಾನ, ನಮ್ಮ ದೇಶದ ನಾಡು-ನುಡಿ, ಸಂಸ್ಕೃತಿಯನ್ನು ತಿಳಿಯಬೇಕಾದರೆ, ಇತಿಹಾಸದಿಂದ ಆಗುವ ಪ್ರಯೋಜನವನ್ನು ಅರಿಯಬೇಕಾದರೆ ಇತಿಹಾಸ ವನ್ನು ಓದಲೇಬೇಕೆಂಬುದನ್ನು ಮನವರಿಕೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ  ಡಾ.ಆನಂದ್ ಕಾರ್ಲಾ ಮಾತನಾಡಿ, ಹಿಂದೆ ನಾವು ಹೇಗಿದ್ದೆವು ಎಂಬುದನ್ನು ತಿಳಿಯಬೇಕಾದರೆ ನಾವು ಇತಿಹಾಸವನ್ನು ಓದಲೇಬೇಕು, ರಾಷ್ಟ್ರದ ಅಭಿವೃದ್ಧಿಗೆ ಸ್ವಾತಂತ್ರ ಹೋರಾಟಗಾರ ಆದರ್ಶಗಳನ್ನು ಮೈ ಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಆರಂಭದಲ್ಲಿ ಕಲಾ ವಿಭಾಗದ ರಾಧಿಕಾ ಮತ್ತು ತಂಡದವರು ಪ್ರಾರ್ಥಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರು ಸಿ. ಪಿ.ಅನುಪಮ ಸ್ವಾಗತಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸೋನಿ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕೌಶಲ್ಯ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮುತ್ತಣ್ಣ ವಂದಿಸಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಚಾಲಕಿ  ಡಾ. ಕೆ.ಜಿ.ವೀಣಾ,…

Read More

ಮಡಿಕೇರಿ ಸೆ.23 :  ಭಾಗಮಂಡಲ ಕೆವಿಜಿ ಕೈಗಾರಿಕೆ ತರಬೇತಿ ಸಂಸ್ಥೆಯ   2023 -25 ನೇ ಸಾಲಿಗೆ ಪ್ರವೇಶ ಪಡೆದ ನೂತನ ತರಬೇತುದಾರರಿಗೆ ಸ್ವಾಗತ ಕೋರುವ ಮತ್ತು ಪೋಷಕರ ಸಭೆ ನಡೆಯಿತು. ಭಾಗಮಂಡಲ ಆರಕ್ಷಕಠಾಣ ಅಧಿಕಾರಿ  ಶೋಭಾ ಲಮಾಣಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕೆ.ವಿ. ಶ್ರೀಕಾಂತ್  ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರ ಮತ್ತು ಸಂಸ್ಥೆಯ ನೀತಿ  ನಿಯಮಗಳ ಬಗ್ಗೆ ವಿವರಿಸಿದರು. ಕಿರಿಯ ತರಬೇತಿ ಅಧಿಕಾರಿ  ಕೆ.ಪುನೀತ್  ಸಂಸ್ಥೆ ಮತ್ತು ತರಬೇತಿಯ ಮಾಹಿತಿ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಕೆ.ಜಯಪ್ರಕಾಶ್ ಸ್ವಾಗತಿಸಿ, ಕಿರಿಯ ತರಬೇತಿ ಅಧಿಕಾರಿ ಎಂ.ಕೆ.ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ದರ್ಜೆ ಸಹಾಯಕ ಕೆ.ಟಿ.ಅರುಣ್ ವಂದಿಸಿದರು.

Read More

ಮಡಿಕೇರಿ ಸೆ.23 : 2023ನೇ ಸಾಲಿನ ಎನ್‌ಸಿಸಿ “ಎಐಟಿಎಸ್‌ಸಿ” ರಾಷ್ಟ್ರೀಯ ಮಟ್ಟದ ಶೂಟಿಂಗ್, ಮ್ಯಾಪ್ ರೀಡಿಂಗ್, ಹೆಲ್ತ್ ಮತ್ತು ಹೈಜಿನ್ ಹಾಗೂ ಅಪ್ಟಿಕಲ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ತಂಡ ಪಟ್ಟಮಾಡ ಪಿ.ಕಾರ್ತಿಕ್ ಕುಟ್ಟಪ್ಪ ಅವರ ನಾಯಕತ್ವದಲ್ಲಿ ಮುನ್ನಡೆಯಲಿದೆೆ. ಕೊಡಗು ಜಿಲ್ಲೆಯ ಬೇಂಗೂರು ಗ್ರಾಮದ ಪಟ್ಟಮಾಡ ಡಿ.ಪೊನ್ನಪ್ಪ ಹಾಗೂ ಹೇಮ ಪೊನ್ನಪ್ಪ ದಂಪತಿಯ ಪುತ್ರ ಕಾರ್ತಿಕ್ ಅವರು, ಪ್ರಸ್ತುತ ಎಂ.ಎಸ್.ರಾಮಯ್ಯ ಕಾಲೇಜ್ ಆಫ್ ಲಾ ದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಾರೆ.

Read More

ನಾಪೋಕ್ಲು ಸೆ.23 : ನಾಪೋಕ್ಲು ಪಟ್ಟಣದಲ್ಲಿ ಗಣೇಶೋತ್ಸವದ ಅಂಗವಾಗಿ ಗಣೇಶ್ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕರು ಹಾಗೂ ಸಮಿತಿ ಸದಸ್ಯರು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಪ್ರಕಟಣೆ ಹೊರಡಿಸಿದ್ದಾರೆ. ಇ0ದಿರಾ ನಗರದ ವಿವೇಕಾನಂದ ಗಣೇಶೋತ್ಸವ ಸೇವಾ ಸಮಿತಿ, ಹಳೆ ತಾಲೂಕಿನ ಪೊನ್ನು ಮುತ್ತಪ್ಪ ವಿನಾಯಕ ಸೇವಾ ಸಮಿತಿ, ಪಟ್ಟಣದ ರಾಮಮಂದಿರ ದೇವಸ್ಥಾನ ಸಮಿತಿ, ಹಳೆ ತಾಲೂಕು ಭಗವತಿ ದೇವಸ್ಥಾನದ ಗಣೇಶೋತ್ಸವ ಸಮಿತಿ ಹಾಗೂ ಕಕ್ಕುಂದ ಕಾಡು ವೆಂಕಟೇಶ್ವರ ದೇವಸ್ಥಾನದ ಗಣೇಶ ಮೂರ್ತಿಯ ಮೆರವಣಿಗೆಯೂ ಪಟ್ಟಣದ ಮಾರ್ಗವಾಗಿ ಕಾರೆಕಾಡು ಬಳಿಯ ಕಾವೇರಿ ಹೊಳೆಗೆ ತೆರಳುವುದರಿಂದ ಪಟ್ಟಣದ ಹಳೆ ತಾಲೂಕಿನಿಂದ ಮಾರುಕಟ್ಟೆ ವರೆಗೆ ಹಾಗೂ ನಾಪೋಕ್ಲು ಬಸ್ ನಿಲ್ದಾಣದಿಂದ ಬೇತು ರಸ್ತೆಯ ಮಕ್ಕಿ ದೇವಸ್ಥಾನದ ಕಮಾನುಗೇಟ್ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲುಗಡೆ ಮಾಡದಂತೆ ಪೊಲೀಸ್ ಇಲಾಖೆಯ ಪ್ರಕಟಣೆ ಕೋರಿದೆ. ವರದಿ : ದುಗ್ಗಳ ಸದಾನಂದ   

Read More

ಮಡಿಕೇರಿ ಸೆ.23 : ಜಿಲ್ಲಾ ಜಾತ್ಯತೀತ ಜನತಾ ದಳ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದ ಕೆ.ಎಂ.ಗಣೇಶ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಮಾಜಿ ಜಿಲ್ಲಾಧ್ಯಕ್ಷ ಇಸಾಖ್ ಖಾನ್ ಹಾಗೂ ಪ್ರಮುಖರಾದ ಡೆನ್ನಿಬರೋಸ್, ಮೋಹನ್ ಮೌರ್ಯ ಜೊತೆಗೆ ಗಣೇಶ್ ಪಕ್ಷ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಅನುಭವಿಸಿದ ಬಳಿಕ ಗಣೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದು ಅಂಗೀಕಾರವಾಗಿರಲಿಲ್ಲ. ಇದೀಗ ಮಾತೃಪಕ್ಷ ಕಾಂಗ್ರೆಸ್ ಗೆ ಗಣೇಶ್ ಮರಳಿದ್ದಾರೆ.

Read More

ನಾಪೋಕ್ಲು ಸೆ.23 : ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದಲ್ಲಿ ಉತ್ತಮ ಗುಣಮಟ್ಟದ ವಸ್ತುಗಳು ಕಡಿಮೆ ದರದಲ್ಲಿ ಲಭಿಸುತ್ತಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ವಹಿವಾಟು ನಡೆಸುವುದರ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಂಘದ ಅಧ್ಯಕ್ಷ ಪಟ್ರಪಂಡ.ಎ ಮುದ್ದಪ್ಪ ಮನವಿ ಮಾಡಿದರು. ನಾಪೋಕ್ಲುವಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಸಂಘದ 2022-23ರ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸಂಘದ ನೂತನ ಕಟ್ಟಡದಲ್ಲಿ ಎಂಟು ಕೊಠಡಿಗಳಿದ್ದು, ಮಾಸಿಕ 90 ಸಾವಿರ ರೂ. ಬಾಡಿಗೆ ಲಭಿಸುತ್ತಿದೆ. ಇದರೊಂದಿಗೆ ವ್ಯಾಪಾರ-ವಹಿವಾಟು ವೃದ್ಧಿಸಿದರೆ ಸಂಘದ ಅಭಿವೃದ್ದಿ ಸಾಧ್ಯ ಎಂದರು. ಮಹಾಸಭೆಯಲ್ಲಿ ಉಪಾಧ್ಯಕ್ಷೆ ನಾಟೋಳಂಡ ಕಸ್ತೂರಿ ಉತ್ತಪ್ಪ, ನಿರ್ದೇಶಕರಾದ ಕೊಂಬಂಡ ಕೆ. ಗಣೇಶ್, ಕುಲ್ಲೇಟಿರ ಅರುಣ್ ಬೇಬ, ನಾಯಕಂಡ ಟಿ. ಮುತ್ತಪ್ಪ,ಬೊಟ್ಟೋಳಂಡ ಕೆ.ಕುಟ್ಟಪ್ಪ ,ಪಾಡಿಯಮ್ಮಂಡ ಮಹೇಶ್,ಕೇಟೋಳಿರ ಜಿ.ಮುತ್ತಮ್ಮ,ಹೆಚ್.ಎ.ಬೊಳ್ಳು,ಜಿ.ಆರ್. ರಾಮಣ್ಣ ಉಪಸ್ಥಿತರಿದ್ದರು ಕಾರ್ಯದರ್ಶಿ ಕೆ.ಎಸ್ ತಿಮಯ್ಯ ಸ್ವಾಗತಿಸಿ ವಂದಿಸಿದರು. ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಲಾಯಿತು. ಈ ಸಂದರ್ಭ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಸಭೆಯಲ್ಲಿ ಚರ್ಚೆಗಳು…

Read More