ಮಡಿಕೇರಿ ಸೆ.23 : ಪ್ರಸಕ್ತ(2023-24) ಸಾಲಿಗೆ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ಎಸ್ಪಿ ತಂತ್ರಾಂಶದಲ್ಲಿ https://ssp.karnataka.gov.in/ssp2324/homenew.aspx ಹಾಗೂ ನವೀಕರಣಕ್ಕೆ https://ssp.karnataka.gov.in/ssp2324/signin.aspx ಚಾಲನೆ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08272-295829 ನ್ನು ಹಾಗೂ 3 ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್. ಮೊ.ಸಂ.8073192914, ಸೋಮವಾರಪೇಟೆ ತಾಲ್ಲೂಕು ಟಿ.ಆರ್.ಹರೀಶ್ 9008685129, ವಿರಾಜಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಸೆ.23 : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿರುತ್ತಾರೆ. ಅದರಂತೆ, ಕೊಡಗು ಜಿಲ್ಲೆಯಲ್ಲಿ ಸೆ.25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಾಪೋಕ್ಲುವಿನ ಚೆರಿಯಪರಂಬು ಶಾದಿ ಮಹಲ್ನಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ‘ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಸೆ.23 : ಮಾಸ್ಟರ್ ಮೈಂಡ್ ಚೆಸ್ ಸ್ಕೂಲ್ ವತಿಯಿಂದ ಅ.8 ರಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಕೊಡಗು ಜಿಲ್ಲಾ ಮಟ್ಟದ ಚದುರಂಗದ ಆಟ ಪಂದ್ಯಾವಳಿ ನಡೆಯಲಿದೆ. ಅಕ್ಟೋಬರ್, 08 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಚೆಸ್ ಆಟಗಾರರು ತಮ್ಮ ಸ್ವಂತ ಚೆಸ್ ಸೆಟ್ಗಳನ್ನು ತರಬೇಕು. ಪ್ರವೇಶ ಶುಲ್ಕ ರೂ.300, ಆಟಗಾರರು ಅಕ್ಟೋಬರ್, 08 ರಂದು ಬೆಳಗ್ಗೆ 9.30 ರೊಳಗೆ ಹಾಜರಿರಬೇಕು. 1 ನೇ ಸುತ್ತು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ. ನೋಂದಣಿಗೆ ಅಗತ್ಯವಿರುವ ದಾಖಲೆಗಳಾದ ಹೆಸರು, ಜನ್ಮ ದಿನಾಂಕದ ಪ್ರಮಾಣಪತ್ರ, ಆಧಾರ್ ಕಾರ್ಡ್, ಶಾಲೆಯ ಹೆಸರು ಮತ್ತು ಶುಲ್ಕ ಪಾವತಿಯ ಸ್ಕ್ರೀನ್ಶಾಟ್, ವಿವರಗಳನ್ನು 6361643024 ಗೆ ವಾಟ್ಸಾಪ್ ಮಾಡಬೇಕು. ಹೆಚ್ಚಿನ ಮಾಹಿತಿಗೆ 6361643024 ನ್ನು ಸಂಪರ್ಕಿಸಬಹುದು.
ಮಡಿಕೇರಿ ಸೆ.23 : ಸರ್ಕಾರದ 5 ಗ್ಯಾರಂಟಿ ಯೋಜನೆಯನ್ನು ಫಲಾನುಭವಿಗಳಿಗೆ ಸರಿಯಾದ ಕ್ರಮದಲ್ಲಿ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್, 25 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದ್ದು, ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಹಾಗೂ ಸಾರ್ವಜನಿಕರ ಹಾಗೂ ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಆದಷ್ಟು ಬೇಗ ಸ್ಥಳೀಯ ಮಟ್ಟದಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸಿ ಕೊಡಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಅಧಿಕಾರಿಗಳಿಗೆ ಸಲಹೆ ಮಾಡಿದರು. ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕುರಿತಂತೆ ಫಲಾನುಭವಿಗಳಿಗೆ ಹಣ ವರ್ಗಾವಣೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೂ ನಾರಿ ಶಕ್ತಿ ಯೋಜನೆ ಕುರಿತಂತೆ ಬಸ್ನಲ್ಲಿ ಪ್ರಯಾಣಿಸಿದ ಫಲಾನುಭವಿಗಳ ಮಾಹಿತಿ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಅನ್ನಭಾಗ್ಯ ಯೋಜನೆ ಕುರಿತಂತೆ ಫಲಾನುಭವಿಗಳಿಂದ ಬಂದಂತಹ…
ಮಡಿಕೇರಿ ಸೆ.22 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಕಥೆ ಮತ್ತು ನಿರ್ದೇಶನದ, ಸ್ವಸ್ತಿಕ್ ಎಂಟರ್ ಟೈನ್ಮೆಂಟ್ ನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣದ “ಪೊಮ್ಮಾಲೆ ಕೊಡಗ್” ಕೊಡವ ಸಿನಿಮಾ ಡೆಹ್ರಡೂನ್ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾಗಿದ್ದು, ಸೆ.23 ರಂದು ಮಧ್ಯಾಹ್ನ 1 ಗಂಟೆಗೆ ಪ್ರದರ್ಶನಗೊಳ್ಳುತ್ತಿದೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ಚಿತ್ರ ಇದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಕನ್ನಡ, ತುಳು, ಕೊಂಕಣಿ ಹಾಗೂ ಕೊಡವ ಭಾಷೆಯ ಸುಮಾರು 73 ಚಿತ್ರಗಳು ಆಯ್ಕೆಗಾಗಿ ಅರ್ಜಿ ಸಲ್ಲಿಸಿದ್ದವು. ಆದರೆ ಅಂತಿಮವಾಗಿ ಕೊಡವ ಸಂಸ್ಕೃತಿ, ಆಚಾರ, ವಿಚಾರ, ಪ್ರಕೃತಿಯ ಮೇಲೆ ಬೆಳಕು ಚೆಲ್ಲಿದ “ಪೊಮ್ಮಾಲೆ ಕೊಡಗ್” ಚಿತ್ರ ಮಾತ್ರ ಆಯ್ಕೆಯಾಗುವಲ್ಲಿ ಯಶಸ್ವಿಯಾಯಿತು. ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು, ವಿಶಿಷ್ಟವಾದ ಕೊಡಗಿನ ಸಂಸ್ಕೃತಿಗೆ ಸಿಕ್ಕಿದ ಗೌರವ ಇದಾಗಿದೆ. ಕೊಡಗಿನ ಸಂಸ್ಕೃತಿ ಮತ್ತು ಪ್ರಕೃತಿಯನ್ನು ನೈಜವಾಗಿ ಚಿತ್ರಿಸಿದ ತೃಪ್ತಿ ನನಗಿದೆ. ನನ್ನ ಚಿತ್ರಗಳ ಮೂಲಕ…
ಮಡಿಕೇರಿ ಸೆ.22 : ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭಗೊoಡಿದ್ದರೂ ಮಡಿಕೇರಿ ನಗರದ ರಸ್ತೆಗಳ ದುರಸ್ತಿ ಕಾರ್ಯಕ್ಕೆ ನಗರಸಭೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿರುವ ಕೊಡಗು ರಕ್ಷಣಾ ವೇದಿಕೆ, ಸೆ.29 ರಂದು ನಗರಸಭಾ ಕಚೇರಿಗೆ ಮುತ್ತಿಗೆ ಹಾಕಿ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ನಗರದ ಜನತೆಗೆ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನೀಡುವಲ್ಲಿ ನಗರಸಭೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಎಲ್ಲಾ ರಸ್ತೆಗಳು ಹದಗೆಟ್ಟು ಹೊಂಡ ಗುಂಡಿಗಳಾಗಿವೆ, ಪಾದಾಚಾರಿಗಳು ಹಾಗೂ ದ್ವಿಚಕ್ರ ವಾಹನ ಚಾಲಕರು ಬಿದ್ದು ಗಾಯಗೊಂಡ ಘಟನೆಗಳೂ ನಡೆದಿದೆ. ಕೆಲವು ಬಡಾವಣೆಗಳಲ್ಲಿ ವಾಹನ ಸಂಚಾರವೇ ದುಸ್ತರವಾಗಿದೆ. ದಸರಾ ಜನೋತ್ಸವದ ಸಂದರ್ಭ ನಾಲ್ಕು ಶಕ್ತಿ ದೇವತೆಗಳ ಕರಗಗಳು ನಗರ ಸಂಚಾರ ಮಾಡುತ್ತವೆ. ಆದರೆ ಯಾವುದೇ ರಸ್ತೆಗಳು ದುರಸ್ತಿ ಕಾಣದೆ ಇರುವುದರಿಂದ ಕರಗಗಳು ಹೊಂಡ ಗುಂಡಿಗಳಾದ ಅಶುಚಿತ್ವದ ರಸ್ತೆಗಳಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಈ ಬಾರಿ ಕೂಡ ಎದುರಾಗಿದೆ. ದಸರಾ…
ಮಡಿಕೇರಿ ಸೆ.22 : ಮಡಿಕೇರಿ ದಸರಾ ಸಮಿತಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಸರಾ ಆಚರಣೆಗೆ 2 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ದಸರಾ ಜನೋತ್ಸವದ ಕುರಿತು ಚರ್ಚಿಸಿತು. 2 ಕೋಟಿ ರೂ. ಅನುದಾನ ನೀಡಿ ಸಹಕರಿಸುವಂತೆ ಕೋರಿಕೊಂಡಿತು. ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಹಾಗೂ ನಗರಸಭಾ ಅಧ್ಯಕ್ಷರೂ ಆದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ಪ್ರಮುಖರಾದ ಟಿ.ಪಿ.ರಮೇಶ್, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಈ ಸಂದರ್ಭ ಹಾಜರಿದ್ದರು. ::: ಅನುದಾನದ ವಿಶ್ವಾಸ ::: ಮುಖ್ಯಮಂತ್ರಿಗಳನ್ನು ಭೇಟಿಯಾದ ಕುರಿತು ಮಾತನಾಡಿದ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕಾವೇರಿ ವಿವಾದ ಮತ್ತು ಬರದ ಪರಿಸ್ಥಿತಿಯ ಒತ್ತಡದ ನಡುವೆಯೂ ಮುಖ್ಯಮಂತ್ರಿಗಳು ನಮ್ಮ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಸಂಭ್ರಮದ ದಸರಾ ಆಚರಣೆಗೆ ಹೆಚ್ಚಿನ ಅನುದಾನ…
ಮಡಿಕೇರಿ ಸೆ.22 : ರೈತರ ಸೇವೆಗಾಗಿಯೇ ಮೀಸಲಾಗಿರುವ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ನುಸುಳಬಾರದು ಎಂದು ಹಿರಿಯ ಸಹಕಾರಿ ಹಾಗೂ ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಹೇಳಿದ್ದಾರೆ. ನಗರದ ಬಾಲಭವನದ ಸಭಾಂಗಣದಲ್ಲಿ ನಡೆದ ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ಮಹಾಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ಅವರು ರೈತರ ಅಭ್ಯುದಯಕ್ಕೆ ಸಹಕಾರಿ ಕ್ಷೇತ್ರ ಸಹಕಾರಿಯಾಗಿದೆ ಎಂದರು. ನನಗೆ ಸಹಕಾರಿ ಕ್ಷೇತ್ರ ಹೆಚ್ಚು ಪ್ರೀತಿಯ ಕ್ಷೇತ್ರವಾಗಿದೆ, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ಮೂಲಕವೇ ನಾನು ಸಹಕಾರ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡೆ. ಕೊಡಗು ಜಿಲ್ಲೆಯ ಬೆಳೆಗಾರರು ಹಾಗೂ ರೈತರು ಸಹಕಾರಿ ಕ್ಷೇತ್ರವನ್ನು ಅತಿಯಾಗಿ ನಂಬಿರುವುದರಿoದ ಉತ್ತಮ ಸೇವೆ ನೀಡುವುದು ಈ ಕ್ಷೇತ್ರದಲ್ಲಿರುವವರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ನಾನು ಏಲಕ್ಕಿ ಸಹಕಾರ ಸಂಘದ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ನಮ್ಮ ಸಂಘದ ಗೋದಾಮು ವರ್ಷದಲ್ಲಿ 3-4 ಲಕ್ಷ ಕೆ.ಜಿ ಯಷ್ಟು ಏಲಕ್ಕಿ ದಾಸ್ತಾನು ಹೊಂದಿತ್ತು. ಆದರೆ ಈಗ ಕೊಡಗಿನಲ್ಲಿ ಏಲಕ್ಕಿ ಹೆಸರಿಲ್ಲದಂತೆ ನಾಶವಾಗುತ್ತಿದೆ ಎಂದು…
ಮಡಿಕೇರಿ ಸೆ.22 : ಬರಹಗಾರ ಉಡುವೆರ ವಿಠಲ್ ತಿಮ್ಮಯ್ಯ ಅವರು ಬರೆದಿರುವ ಕೊಡವ ಮಕ್ಕಡ ಕೂಟದ 73ನೇ ಪುಸ್ತಕ ಕೊಡವ ಭಾಷೆಯ “ಬೊಳ್ಳಿ ಬಿಲ್ಲ್” ಬಿಡುಗಡೆಗೊಂಡಿದೆ. ನಗರದ ಪತ್ರಿಕಾ ಭವನದಲ್ಲಿ ಡಿಎಫ್ಓ ಅಜ್ಜಿಕುಟ್ಟಿರ ಪೂವಯ್ಯ ಅವರು ಪುಸ್ತಕ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರ ಬೇರೆ ಕ್ಷೇತ್ರಗಳಂತಲ್ಲ, ಇದೊಂದು ವಿಭಿನ್ನ ಕ್ಷೇತ್ರವಾಗಿದ್ದು, ಕಬ್ಬಿಣದ ಕಡಲೆ ಇದ್ದಂತೆ, ಇದಕ್ಕೆ ಸ್ವಯಂ ಪ್ರತಿಭೆ ಅಗತ್ಯ ಎಂದರು. ಒಂದು ಒಳ್ಳೆಯ ಪುಸ್ತಕ ಮನುಷ್ಯನ ಒಳ್ಳೆಯ ಸ್ನೇಹಿತ ಇದ್ದ ಹಾಗೆ, ಪುಸ್ತಕ ಓದುವುದರಿಂದ ಹೆಚ್ಚಿನ ಜ್ಞಾನ, ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಪುಸ್ತಕವು ಸಮಾಜದ ಅಂಕು-ಡೊಂಕು, ಪಿಡುಗುಗಳನ್ನು ಎತ್ತಿ ತೋರುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಹೆಚ್ಚು ಸಹಕಾರಿಯಾಗಿದೆ ಎಂದು ತಿಳಿಸಿದರು. ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡಗಿನ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು. “ಬೊಳ್ಳಿ ಬಿಲ್ಲ್” ಪುಸ್ತಕದ…
ಮಡಿಕೇರಿ ಸೆ.22 : ಕೊಡಗು ಜಿಲ್ಲಾ ಮಟ್ಟದ ಶಾಲಾ ಮಕ್ಕಳ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿಯು ಸೆ.24 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗು ಕರಾಟೆ ಅಸೋಸಿಯೇಷನ್ ಸಂಯೋಜಕ ಮಾದೇಟಿರ ಪಿ.ತಿಮ್ಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿಲ್ಲಾ ಶಿಕ್ಷಣಾಧಿಕಾರಿ ಅಜ್ಜಿಕುಟ್ಟಿರ ಸೌಮ್ಯ ಪೊನ್ನಪ್ಪ ಹಾಗೂ ಶಿಕ್ಷಣ ಇಲಾಖೆ ಕ್ರೀಡಾ ಮುಖ್ಯಸ್ಥ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಕರಾಟೆ ಪಂದ್ಯಾವಳಿಗೆ ಮೈಸೂರು ಕರಾಟೆ ಅಸೋಸಿಯೇಷನ್ನ ತೀರ್ಪುಗಾರರು ಆಗಮಿಸಲಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿಗಳ ಸಹಿ ಹೊಂದಿರುವ ಅರ್ಹತಾ ಪತ್ರ ಮತ್ತು ಆಧಾರ್ ಕಾರ್ಡ್ ಗುರುತಿನ…






