ಮಡಿಕೇರಿ ಸೆ.22 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮೈಸೂರಿನ ಗುರುಮಲ್ಲೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲು ಬಯಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಮೈಸೂರು ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರುಗಳಿಗೆ ಈಗಾಗಲೇ ನನ್ನ ಅರ್ಜಿ ಮತ್ತು ವೈಯುಕ್ತಿಕ ವಿವರಗಳನ್ನು ಸಲ್ಲಿಸಿದ್ದೇನೆ. ಸ್ಪರ್ಧಿಸಲು ಅವಕಾಶ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಜನಾರ್ಧನ ಪೂಜಾರಿ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ಕೂಡ ಮೈಸೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಆ ಸಂದರ್ಭ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಟಿಕೆಟ್ ದೊರಕಿದ್ದರಿಂದ ನನಗೆ ಸ್ಪರ್ಧಿಸಲು ಅವಕಾಶ ದೊರೆಯಲಿಲ್ಲ. ಜೆಡಿಎಸ್ ಪಕ್ಷದಲ್ಲಿಯೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂದರ್ಭ ಮೈಸೂರು ಲೋಕಸಭಾ ಕ್ಷೇತ್ರದ…
ಲೇಖಕ: admin
ನಾಪೋಕ್ಲು ಸೆ.22 : ಮಕ್ಕಳ ಕ್ರೀಡಾ ಆಸಕ್ತಿಯನ್ನು ಅರಿತು ಅದಕ್ಕೆ ತಕ್ಕಂತೆ ಸೂಕ್ತ ಮಾರ್ಗದರ್ಶನ ನೀಡಿದಲ್ಲಿ ಉತ್ತಮ ಕ್ರೀಡಾಪಟು ಆಗಲು ಸಾಧ್ಯ ಎಂದು ಮಡಿಕೇರಿ ತಾಲೂಕು ತಹಶೀಲ್ದಾರ್ ಪಿ.ಸಿ. ಪ್ರವೀಣ್ ಕುಮಾರ್ ಅಭಿಪ್ರಾಯಪಟ್ಟರು. ನಾಪೋಕ್ಲುವಿನಲ್ಲಿ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪೆoಡಡಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ 2023 – 24ರ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮಕ್ಕಳು ಸದೃಢವಾಗಿ ಇರಬೇಕಾದರೆ ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವನೆ ಅಗತ್ಯ ವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟದ ಬಗ್ಗೆ ಪರಿಶೀಲಿಸಲಾಗುತ್ತಿದೆ. ಶಾಲೆಗಳಿಗೆ ಇಲಾಖೆಯಿಂದ ವಿತರಿಸಲಾಗುತ್ತಿರುವ ಆಹಾರ ಪದಾರ್ಥಗಳಲ್ಲಿ ಲೋಪಗಳಿದ್ದರೆ ನನಗೆ ಮಾಹಿತಿಯನ್ನು ನೀಡಿ ಎಂದ ಅವರು ಶಾಲಾ ಶಿಕ್ಷಕರ…
ಕಡಂಗ ಸೆ.22 : ಕಾಕೋಟುಪರಂಬು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಕಡಂಗ ವಿಜಯ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ವಿಜಯ ಪ್ರೌಢಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಲ್ಲಿಯಂಡ ಬಿದ್ದಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಪ್ರತಿಯೊಬ್ಬರಲ್ಲಿ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ ಆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಅದರಲ್ಲೂ ಮಕ್ಕಳಲ್ಲಿರುವಂತಹ ಪ್ರತಿಭೆಯನ್ನು ಅನಾವರಣಗೊಳಿಸಲು ಕಳೆದ 26 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದರು. ಸೋಲು ಗೆಲುವಿಗಿಂತಲು ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಿದ್ದು, ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಮೂಡಿರಬೇಕು ಎಂದು ನುಡಿದರು. ವಿದ್ಯಾರ್ಥಿಗಳಿಗೆ ಭಕ್ತಿಗೀತೆ, ಅಭಿನಯ ಗೀತೆ, ಧಾರ್ಮಿಕ ಭಾಷಣ , ಕವನ , ವಚನ ಆಶುಭಾಷಣ , ಮಾಡಲಿಂಗ್ ಇತ್ಯಾದಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಮೆರೆದರು. ಮುಂದಿನ ಹಂತ ತಾಲೂಕು ಮಟ್ಟಕ್ಕೆ ಹಲವಾರು ವಿದ್ಯಾರ್ಥಿಗಳು…
ಮಡಿಕೇರಿ ಸೆ.22 : ಕೊಡವ ಎಂಟ್ರೆಪ್ರೆನ್ಯೂರ್ಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸಹಕಾರಿಯು 2023 ಮಾರ್ಚ್ ಅಂತ್ಯಕ್ಕೆ ರೂ.9.7 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.4 ರಷ್ಟು ಡಿವಿಡೆಂಟ್ ನ್ನು ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. 2022-23 ನೇ ಸಾಲಿನಲ್ಲಿ 47 ಮಂದಿಗೆ 1,27,45000 ರೂ. ಜಾಮೀನು ಸಾಲ ನೀಡಿದ್ದು, ವಾಯಿದೆ ಮೀರಿದ ಸಾಲ ವಸೂಲಾತಿಗೆ ಬಾಕಿ ಇರುವುದಿಲ್ಲ. ಸದಸ್ಯರ ಸಹಕಾರದಿಂದ ಶೇ.100 ರಷ್ಟು ವಸೂಲಾತಿಯಾಗಿದೆ. ಸದಸ್ಯರ ಪಾಲು ಹಣ 2022ರ ಮಾರ್ಚ್ ಅಂತ್ಯಕ್ಕೆ 1 ಕೋಟಿ 70 ಸಾವಿರ ಇದ್ದು, 2023ರ ಮಾರ್ಚ್ ಅಂತ್ಯಕ್ಕೆ 1 ಕೋಟಿ 30 ಲಕ್ಷಗಳಷ್ಟು ಆಗಿರುತ್ತದೆ. 2024ರ ಅಂತ್ಯಕ್ಕೆ ರೂ.2 ಕೋಟಿ ಗುರಿ ನಿಗಧಿ ಪಡಿಸಲಾಗಿದೆ. ಸಂಘ 2019 ಮಾ.29 ರಲ್ಲಿ ಸೌಹಾರ್ದ ಕಾಯ್ದೆಯಡಿ ನೋಂದಣಿಗೊಂಡು 101 ಸಹಕಾರಿಗಳಿಂದ ರೂ.18.90 ಲಕ್ಷ ಪಾಲು ಬಂಡವಾಳದೊಂದಿಗೆ ವ್ಯವಹಾರ ಪ್ರಾರಂಭಿಸಿತು. 2023 ಮಾ.31ರ ಅಂತ್ಯಕ್ಕೆ 353 ಸಹಕಾರಿಗಳಿಂದ 1,31,80000 ರೂ.…
ಮಡಿಕೇರಿ ಸೆ.22 : ಕತ್ತಲೆಕಾಡುವಿನ ವಿನಾಯಕ ಭಕ್ತ ವೃಂದ ಗಣೇಶೋತ್ಸವ ಸಮಿತಿಗೆ ಗ್ರಾಮಸ್ಥರು ಹಾಗೂ ದಾನಿಗಳು ವಿವಿಧ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಬಾರಿ 17ನೇ ವರ್ಷದ ಗೌರಿ ಗಣೇಶೋತ್ಸವ ಆಚರಿಸುತ್ತಿದ್ದು, ಪೂಜಾ ಕಾರ್ಯ ಹಾಗೂ ಇನ್ನಿತರೆ ಚಟುವಟಿಕೆಗಳಿಗೆ ಅಂದಾಜು 1 ಲಕ್ಷ ರೂ. ಮೊತ್ತದ ಪರಿಕರಗಳು ಕೊಡುಗೆ ರೂಪದಲ್ಲಿ ಬಂದಿದೆ. ಪ್ರತಿ ವರ್ಷ ವಸ್ತುಗಳನ್ನು ಬಾಡಿಗೆಗೆ ಪಡೆದುಕೊಳ್ಳಲಾಗುತ್ತಿತ್ತು. ಇದೀಗ ಹಲವು ಅಗತ್ಯ ವಸ್ತುಗಳು ಸಮಿತಿಯ ಸಂಗ್ರಹದಲ್ಲಿರುವುದರಿಂದ ಗಣೇಶೋತ್ಸವ ಹಾಗೂ ಮುಂದಿನ ದಿನದಲ್ಲಿ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಇವುಗಳನ್ನು ಬಳಸಿಕೊಳ್ಳಲಾಗುವುದು ಎಂದು ಸಮಿತಿಯ ಅಧ್ಯಕ್ಷ ಎಂ.ಎಸ್. ಅಶೋಕ್, ಕಾರ್ಯದರ್ಶಿ ಬ್ರಿಜೇಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಮೈಸೂರಿನಿಂದ ಅಡುಗೆ ಪಾತ್ರೆ, ಗ್ಯಾಸ್ ಸ್ಟೌ, ಚೇರ್, ಟೇಬಲ್, ಪೂಜಾ ಸಾಮಾಗ್ರಿ ಸೇರಿದಂತೆ ವಿವಿಧ ವಸ್ತುಗಳ ಖರೀದಿಸಲಾಯಿತು. ಈ ಸಂದರ್ಭ ಬ್ರಿಜೇಶ್ ರೈ, ಹೊನ್ನಪ್ಪ ಆಚಾರ್ಯ, ಸತೀಶ್ ರೈ ಇದ್ದರು. ಕೊಡುಗೆ ನೀಡಿದ ದಾನಿಗಳಿಗೆ ಧನ್ಯವಾದ ಅರ್ಪಿಸಿರುವ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಮುಂದಿನ…
ಮಡಿಕೇರಿ ಸೆ.22 : ಕಗ್ಗೋಡ್ಲು ಗ್ರಾಮದ ಹೂಕಾಡುವಿನಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗಣೇಶೋತ್ಸವ ಸಂಭ್ರಮದಿಂದ ಜರುಗಿತು. ಪೂಜಾ ಕಾರ್ಯದ ಬಳಿಕ ಶೋಭಾಯಾತ್ರೆಗು ಮುನ್ನ ಗ್ರಾಮದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಿತಿ ಅಧ್ಯಕ್ಷ ಉಮೇಶ್ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈನಿಕರಾದ ಮಂದ್ರೀರ ಉಮೇಶ್, ಬಿ.ಜೆ. ಭರತ್ ಪೂಜಾರಿ, ಮಾಜಿ ಸೈನಿಕ ಹಗರಿಮನೆ ಮೇ. ವಾಸಪ್ಪ, ದಾನಿಗಳಾದ ದಿವಾಕರ ರೈ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗಾಗಿ ಎಂ.ವಿ.ಶ್ವೇತಾ , ಎಂ.ವಿ.ವಿವೇಕ್ , ತನಿಷ್ಕಾ ರೈ, ಎಂ.ಅಮೃತ ಅವರನ್ನು ಸಮಿತಿ ಹಾಗೂ ಗ್ರಾಮದ ಪ್ರಮುಖರು ಸನ್ಮಾನಿಸಿದರು. ಕಾರ್ಯದರ್ಶಿ ಕೆ.ಆರ್. ಸತೀಶ್ ನಿರೂಪಿಸಿದರು. ಉಪಾಧ್ಯಕ್ಷ ಸುರೇಶ್(ರಾಜು), ಖಜಾಂತಿ ಗಣಪತಿ, ಸುರೇಶ್ ಮುಂತಾದವರು ಈ ಸಂದರ್ಭ ಇದ್ದರು. ಬಳಿಕ ಶೋಭಾಯಾತ್ರೆ ಮೂಲಕ ಉತ್ಸವ ಮೂರ್ತಿಯನ್ನು ಕೊಂಡೊಯ್ದು, ಸ್ಥಳೀಯ ಹೊಳೆಯಲ್ಲಿ ವಿಸರ್ಜಿಸಲಾಯಿತು.
ಕುಶಾಲನಗರ ಸೆ.22 : ಕುಶಾಲನಗರ ಮಾಜಿ ಸೈನಿಕರ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭ ಸೆ.28 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕ್ಯಾಪ್ಟನ್ ಡಿ ಕೆ ಚಿಣ್ಣಪ್ಪ ತಿಳಿಸಿದ್ದಾರೆ. ಅವರು ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು 28ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಗೌಡ ಸಮಾಜದಲ್ಲಿ ಸಂಘದ ಕಟ್ಟಡ ಸ್ಥಳದಾನಿಗಳಾದ ನಾಯಕ್ ಕೆದಂಬಾಡಿ ಸಣ್ಣಪ್ಪ ಅವರು ಉದ್ಘಾಟನೆ ಮಾಡುವವರು. ಕ್ಯಾಪ್ಟನ್ ಡಿ ಕೆ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಮೇಜರ್ ಜನರಲ್ ಬಿ.ಎ ಕಾರ್ಯಪ್ಪ, ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರಾದ ಕರ್ನಲ್ ನಾರಾಯಣ ಮೂರ್ತಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಮೇಜರ್ ಚಿಂಗಪ್ಪ ಸುಂಟಿಕೊಪ್ಪ ಠಾಣಾಧಿಕಾರಿ ಎಂ ಸಿ ಶ್ರೀಧರ್, ಮಡಿಕೇರಿಯ ಗ್ರೂಪ್ ಕ್ಯಾಪ್ಟನ್ ಕೆ ಎ ಕಾರ್ಯಪ್ಪ ಅವರು ಪಾಲ್ಗೊಳ್ಳುವರು.. ಸಂಘದ ಕಟ್ಟಡದ ಸ್ಥಳದಾನಿಗಳಿಗೆ ಹಾಗೂ ಸಂಘದ ಸಂಸ್ಥಾಪಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು…
ಮಡಿಕೇರಿ ಸೆ.22 : ಹಾಕತ್ತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂದ್ರಿರ ತೇಜಸ್ ನಾಣಯ್ಯ ಹಾಗೂ ಉಪಾಧ್ಯಕ್ಷರಾಗಿ ಮಜ್ಞೀರ ಉಮೇಶ್ ಅಪ್ಪಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ 13 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಹಾಗೂ ಕಾಂಗ್ರೆಸ್ ಬೆಂಬಲಿತ ಮೂವರು ನಿರ್ದೇಶಕರಾಗಿ ಗೆಲುವು ಸಾಧಿಸಿದ್ದರು.
ನಾಪೋಕ್ಲು ಸೆ.22 : ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2022-23ರ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾ0ಕ್ ನಿರ್ದೇಶಕ ಕೊಡಂದೇರ ಗಣಪತಿ, ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಲೋಕೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ವರದಿ : ದುಗ್ಗಳ ಸದಾನಂದ
ವಿರಾಜಪೇಟೆ ಸೆ.22 : ಸ್ವ ಉದ್ಯೋಗ ತರಬೇತಿಗಳನ್ನು ನಿರಂತರವಾಗಿ ಹಮ್ಮಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಗ್ರಾಮೀಣ ಮಹಿಳೆಯರ ಪಾಲಿನ ಆಶಾಕಿರಣವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಲೀಲಾವತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ.ಸಿ ಟ್ರಸ್ಟ್, ವಿರಾಜಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ವಾಟೆಕಾಡು ಕಣ್ವ ಮುನಿಶ್ವರ ದೇವಾಲಯದ ಸಭಾಂಗಣದಲ್ಲಿ ಯೋಜನೆಯ ಸದಸ್ಯರುಗಳಿಗೆ ಸ್ವ ಉದ್ಯೋಗದೊಂದಿಗೆ ಸ್ವಾವಲಂಬನೆಯ ಮೂಲಕ ಮಹಿಳೆಯರ ಬದುಕು ಹಸನಾಗಿಸಲು ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಇಂದು ಸ್ವ ಉದ್ಯೋಗ ಅನ್ನುವುದು ಅತ್ಯಂತ ಪ್ರಚಲಿತ ಹಾಗೂ ಸರ್ವರಿಗೂ ಸಲ್ಲುವ ಉದ್ಯೋಗವಾಗಿದೆ. ಇಂದಿನ ದಿನಗಳಲ್ಲಿ ವಿಶೇಷವಾಗಿ ಮಹಿಳೆಯರು ಹಲವಾರು ವಿಧದ ಸ್ವ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ತಮ್ಮ ಸ್ವಾವಲಂಬನೆಯ ಬದುಕನ್ನು ತಾವೇ ಕಟ್ಟಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೂಡಾ ಈ ಹಾದಿಯಲ್ಲಿ…






