ವಿರಾಜಪೇಟೆ ಸೆ.22 : ವಿರಾಜಪೇಟೆ ಕಾವೇರಿ ಪದವಿ ಕಾಲೇಜು ವಿದ್ಯಾರ್ಥಿ ಕ್ಷೇಮ ಪಾಲನ ಸಂಘ 2023-24 ನೇ ಸಾಲಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಉಪಾಧ್ಯಕ್ಷರಾಗಿ ಅಂತಿಮ ಬಿ.ಎ ತರಗತಿಯ ದೀಕ್ಷಿತ್ ಪೊನ್ನಮ್ಮ ಸಿ.ಎಂ. ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಅಂತಿಮ ಬಿ.ಎ.ದೀಕ್ಷಾ, ಕ್ರೀಡಾ ಕಾರ್ಯದರ್ಶಿಯಾಗಿ ದಾನಿಶ್ ಪೊನ್ನಣ್ಣ, ಜಂಟಿ ಕಾರ್ಯದರ್ಶಿಗಳಾಗಿ ದ್ವಿತೀಯ ಬಿಕಾಂನ ಮುತ್ತಣ್ಣ ಹಾಗೂ ಸೋನಿ ಎಮ್.ಪಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕಿ ಅಂಬಿಕಾ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ವೀಣಾ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು. ಈ ಚುನಾವಣಾ ಪ್ರಕ್ರಿಯೆಯನ್ನು ಉಪನ್ಯಾಸಕರಾದ ಬೆನೆಡಿಕ್ ಸಲ್ದಾನ, ರಾಘವೇಂದ್ರ, ನಿರ್ಮಿತ ಇವರು ನಡೆಸಿಕೊಟ್ಟರು.
ಲೇಖಕ: admin
ಮಡಿಕೇರಿ ಸೆ.21 : ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರನ್ನು ಭೇಟಿಯಾಗಿ ದಸರಾ ಉತ್ಸವ ಆಚರಣೆಗೆ ರೂ.2 ಕೋಟಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿ ಕೊಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳನ್ನು ಭೇಟಿಯಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಸಂದರ್ಭ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಮುಖರಾದ ಟಿ.ಪಿ.ರಮೇಶ್, ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗ ಮನವಿ ಪತ್ರ ಸಲ್ಲಿಸಿತು.
ಮಡಿಕೇರಿ ಸೆ.21 : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರುಗಳಿಗೆ ಪದಗ್ರಹಣ ಹಾಗೂ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ವರ್ಷದ ಕಾರ್ಯ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಮತ್ತು ಮೌಲ್ಯಗಳನ್ನು ಬೆಳೆಸಿಕೊಂಡು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಗುರಿ ಸಾಧಿಸುವ ಛಲ ಇರಬೇಕೆಂದರು. ತಂದೆ, ತಾಯಿ, ಗುರುಗಳನ್ನು ಗೌರವದಿಂದ ಕಾಣಬೇಕು ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಭಾಗವಹಿಸಬೇಕೇಂದು ಕರೆ ನೀಡಿದರು. ಕಾವೇರಿ ಪದವಿ ಕಾಲೇಜಿನ ನಿವೃತ್ತ ಪ್ರಾಶುಂಪಾಲರಾದ ಪ್ರೊ.ಇಟ್ಟೀರ ಕಮಲಾಕ್ಷಿ ಬಿದ್ದಪ್ಪ, ವಿದ್ಯಾರ್ಥಿ ನಾಯಕರು ಮತ್ತು ತರಗತಿ ಪ್ರತಿನಿಧಿಗಳಿಗೆ ಪ್ರಮಾಣ ವಾಚನವನ್ನು ಬೋಧಿಸಿದರು. ನಂತರ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು, ನಮ್ಮ ನಡೆ ಸಾಧನೆಯೆಡೆಗೆ ಎನ್ನುವಂತೆ ಸಾಧನೆಯನ್ನು ಮಾಡುವ ಮಾರ್ಗದಲ್ಲಿ ಎಡರು ತೊಡರು ಬರುತ್ತವೆ ಅದನ್ನು ಧೈರ್ಯದಿಂದ ಎದುರಿಸಿ ಕಠಿಣ ಪರಿಶ್ರಮ, ದೃಢನಂಬಿಕೆ, ಬದ್ದತೆ ಇದ್ದಾಗ ಮಾತ್ರ…
ಮಡಿಕೇರಿ ಸೆ.21 : ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಇದೇ ಸೆ.26 ರಿಂದ ಅಕ್ಟೋಬರ್, 25 ರವರೆಗೆ ನಾಲ್ಕನೇ ಸುತ್ತಿನಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ 2030 ರೊಳಗೆ ಜಾನುವಾರುಗಳ ಕಾಲುಬಾಯಿ ಜ್ವರವನ್ನು ನಿಯಂತ್ರಿಸುವಲ್ಲಿ ಹಲವು ಸುತ್ತಿನ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಕೋರಿದರು. ಕೃಷಿಗೆ ಪೂರಕವಾಗಿ ಜಾನುವಾರು ಸಾಕಾಣಿಕೆ ರೈತರ ಅವಿಭಾಜ್ಯ ಅಂಗವಾಗಿದೆ. ಆರ್ಥಿಕ ಚಟುವಟಿಕೆಗೆ ಪಶುಪಾಲನೆ ಸಹಕಾರಿಯಾಗಿದೆ. ಆ ದಿಸೆಯಲ್ಲಿ ಜಾನುವಾರು/ ರಾಸುಗಳಿಗೆ ಯಾವುದೇ ರೀತಿಯ ರೋಗ ಬರದಂತೆ ನಿಯಂತ್ರಿಸುವುದು ಅತ್ಯಗತ್ಯವಾಗಿದ್ದು, ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಜಾನುವಾರುಗಳು ಲಸಿಕಾ ಕಾರ್ಯಕ್ರಮದಿಂದ ಬಿಟ್ಟು ಹೋಗದಂತೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಸ್ಪಷ್ಟ…
ಮಡಿಕೇರಿ ಸೆ.21 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಕೊಡಗು ಜಿಲ್ಲೆಯಲ್ಲಿ ಆಚರಿಸುವ ಸಂಬಂಧ ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ನಗರದ ಗಾಂಧಿ ಮೈದಾನದಲ್ಲಿ ಸೆ.27 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಹಿರಿಯ ನಾಗರಿಕರಿಗೆ ಕ್ರೀಡೆ (ನಡಿಗೆ, ರಿಂಗ್ನ್ನು ಬಕೆಟ್ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್) ಮತ್ತು ಸಾಂಸ್ಕೃತಿಕ ಕಾರ್ಯಕ್ರಮ (ಏಕಪಾತ್ರಾಭಿನಯ, ಗಾಯನ ಸ್ಪರ್ಧೆ (ಭಾವಗೀತೆ) ಮತ್ತು ಚಿತ್ರಕಲೆ) ಸ್ಪರ್ಧೆಗಳನ್ನು ವಯೋಮಿತಿವಾರು (60-69, 70-79 ಹಾಗೂ 80 ವರ್ಷ ಮೇಲ್ಪಟ್ಟು) ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಹಿರಿಯ ನಾಗರಿಕರು ಸ್ಪರ್ಧೆಯ ದಿನದಂದು ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್/ ಡಿಎಲ್/ ಪಡಿತರ ಚೀಟಿ / ಓಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದರ ನಕಲು ಪ್ರತಿ ತರುವುದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…
ಮಡಿಕೇರಿ ಸೆ.21 : ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕಾವೇರಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸೀನಪ್ಪ ಉದ್ಘಾಟಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಶಿಕ್ಷಣ ಕೇವಲ ಸರ್ಕಾರಿ ನೌಕರಿ ಪಡೆಯುವುದಷ್ಟೇ ಅಲ್ಲದೆ ವಿದ್ಯಾರ್ಥಿಗಳು ಉತ್ತಮ ಪ್ರಜೆಯಾಗಿ ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕುವುದಕ್ಕೆ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ. 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿಯ ನಂತರ ವಿದ್ಯಾರ್ಥಿಗಳಿಗೆ ಹಲವು ವೃತ್ತಿಪರ ಶಿಕ್ಷಣ ತರಬೇತಿಗಳಿದ್ದು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂದರು. ವಿಶೇಷವಾಗಿ ಹೆಣ್ಣು ಮಕ್ಕಳು ಉತ್ತಮ ಸಾಧಕರಾಗಿ ಸಮಾಜಕ್ಕೆ ಹಾಗೂ ಶಾಲೆಗೆ ಕೀರ್ತಿಯನ್ನು ತಂದು ಕೊಡಿ ಎಂದು ಹೇಳಿದರು. ಶ್ರೀ ಬನಶಂಕರಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಎಚ್.ವಿ.ಶಿವಪ್ಪ ಅವರು ಮಾತನಾಡಿ ಈ ಸಂಸ್ಥೆಯು ನಮಗೆ ಬದುಕು ಕಟ್ಟಿಕೊಳ್ಳಲು ಬುನಾದಿ ಹಾಕಿಕೊಟ್ಟಿದೆ. ಈ ಶಾಲೆಯಲ್ಲಿ ಓದಿದ ಹಲವಾರು ಹಿರಿಯ ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ…
ಮಡಿಕೇರಿ ಸೆ.21 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಇಂದು ಮಂಗಳೂರಿನಲ್ಲಿ ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಖ್ಯಾತ ಅರ್ಥ ಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರನ್ನು ಮಂಗಳೂರಿನ ವಿಎಚ್ಎಸ್ ಪ್ರಮುಖ ರಾಜೀವ್ ಶೆಟ್ಟಿ ಅವರ ನಿವಾಸದಲ್ಲಿ ಭೇಟಿ ಮಾಡಿತು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು 5 ಹಂತಗಳ ಪಾದಯಾತ್ರೆಯ ಕುರಿತು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಚರ್ಚಿಸಿದರು. ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆ ಮತ್ತಿತರ ಸಾಂವಿಧಾನಿಕ ಬೇಡಿಕೆಗಳ ಪ್ರಬಲ ಪ್ರತಿಪಾದಕರಾಗಿದ್ದಾರೆ. ಸಿಎನ್ಸಿಗೆ ಬೆಂಬಲವಾಗಿ ಕೊಡವರ ಪರ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯನ್ನು ಹೈಕೋರ್ಟ್ನಲ್ಲಿ ಮಂಡಿಸುವ ಮೂಲಕ ಕಾನೂನು ಹೋರಾಟವನ್ನು ಕೂಡ ನಡೆಸುತ್ತಿರುವುದು ಹೆಮ್ಮೆಯ ವಿಚಾರವೆಂದು ನಾಚಪ್ಪ ತಿಳಿಸಿದರು. ಅತಿ ಸೂಕ್ಷ್ಮ ಜನಾಂಗವಾಗಿರುವ ಕೊಡವರ ಅಸ್ತಿತ್ವವನ್ನು ಉಳಿಸಲು ಸಿಎನ್ಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ಆಯೋಗವೊಂದನ್ನು ರಚಿಸಬೇಕೆನ್ನುವ ನಿಟ್ಟಿನಲ್ಲಿ ಸಾಂವಿಧಾನಿಕ ಪರಿಹಾರವನ್ನು ಸೂಚಿಸಲು ಸ್ವಾಮಿ ಅವರು ನಿರಂತರ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದರು. ವಿರಾಟ್…
ಮಡಿಕೇರಿ ಸೆ.21 : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ರೋಟರಿ ವುಡ್ಸ್ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಮ್ಯಾರಾಥಾನ್ ಸ್ಪರ್ಧೆಯು(5 ಕಿ.ಮೀ) ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು. ಮ್ಯಾರಾಥಾನ್ ಸ್ಪರ್ಧೆಯನ್ನು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಉದ್ಘಾಟಿಸಿದರು. ಪ್ರಸಕ್ತ(2023-24) ಸಾಲಿನ ಯುವಜನೋತ್ಸವ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಹೆಚ್ಐವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಕರು) ಎಚ್ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ ಹಮ್ಮಿಕೊಳ್ಳುವಂತೆ, ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ ಎಂದರು. ಎಚ್ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್ಐವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಮತ್ತಿತರ ಕುರಿತು ಅರಿವು…
ಮಡಿಕೇರಿ ಸೆ.21 : ಯುವ ಜನತೆ ದೇಶಕ್ಕೆ ಬೆನ್ನೆಲುಬು ಆಗಿದ್ದು, ಕ್ರೀಡೆ, ನೃತ್ಯ, ಸಂಗೀತ, ಸಾಹಿತ್ಯ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ ತಿಳಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಗುರುವಾರ ನಡೆದ ಸಾಂಸ್ಕೃತಿಕ ಕ್ರೀಡೆ, ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಹಿತ್ಯ, ಸಂಗೀತ, ಕ್ರೀಡೆ, ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಸದಾ ಚಟುವಟಿಕೆಯಿಂದ ಇರಬಹುದು. ಇದರಿಂದ ಬೇರೆಡೆ ಗಮನ ಹೋಗುವುದಕ್ಕೆ ಸಾಧ್ಯವಾಗುವುದಿಲ್ಲ. ಆ ನಿಟ್ಟಿನಲ್ಲಿ ಲಭ್ಯವಿರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆಯಬೇಕು ಎಂದು ಡಿ.ಜೆ.ಜವರಪ್ಪ ಸಲಹೆ ಮಾಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಲೇಖಕರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಅವರು ಮಾತನಾಡಿ ಮೊಬೈಲ್ ಗೀಳನ್ನು ಬಿಟ್ಟು ಒಳ್ಳೆಯ ಪುಸ್ತಕ…
ಮಡಿಕೇರಿ, ಸೆ.21: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ದಿಟ್ಟ ಹೆಜ್ಜೆಯೊಂದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇವುಗಳನ್ನು ಅನುಷ್ಠಾನಗೊಳಿಸುವ ಮೂಲಕ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಗೆ ವಿಶೇಷ ಒತ್ತು ನೀಡಬೇಕು ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ( ಡಯಟ್ ) ಯ ಪ್ರಾಂಶುಪಾಲ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ಚಂದ್ರಕಾಂತ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ( ಡಯಟ್ ) ಯ ವತಿಯಿಂದ ಕೂಡಿಗೆ ಡಯಟ್ ನ ಸಭಾಂಗಣದಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕುರಿತಂತೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಫಲಿತಾಂಶವನ್ನು ಉತ್ತಮ ಪಡಿಸಲು ವಿಶೇಷ ಕಾರ್ಯಯೋಜನೆ ಮೂಲಕ ದಶ ಸೂತ್ರಗಳನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಮಾನಸಿಕ…






