ಮಡಿಕೇರಿ ಸೆ.21 : ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ನಿನಾದ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ಬಾಲಕರ ತಂಡದ ರಾಹಿಲ್, ಪ್ರಶಾಂತ್, ರಮೀಜ್ ದ್ವಿತೀಯ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾದರು. ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡದ ತಶ್ಫಿಯಾ, ಗಾಯನ ದ್ವಿತೀಯ ಸ್ಥಾನ ಪಡೆದುಕೊಂಡು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾದರು. ವಿದ್ಯಾರ್ಥಿಗಳಿಗೆ ತರಬೇತುದಾರ ಹೆಚ್.ಹೆಚ್.ಆದರ್ಶ್ ತರಬೇತಿ ನೀಡಿದ್ದಾರೆ. ಶಾಲೆಯ ಆಡಳಿತಾಧಿಕಾರಿ ಕೆ.ಸಿ.ನಾಗೇಶ್ ಹಾಗೂ ಮುಖ್ಯೋಪಾಧ್ಯಯರಾದ ಸಿ.ಆರ್.ಶಿಲ್ಪಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಲೇಖಕ: admin
ಮಡಿಕೇರಿ ಸೆ.21 : ಚೇರಂಬಾಣೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ 2023-28ರ ಅವಧಿಗೆ ಆಡಳಿತ ಮಂಡಳಿಗೆ ಸಾಲಗಾರರ ಕ್ಷೇತ್ರದಿಂದ 12 ಮಂದಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಕಿ ಇರುವ ಸಾಲಗಾರರಲ್ಲದ ಒಂದು ಸ್ಥಾನಕ್ಕೆ ಸೆ.24 ರಂದು ಚುನಾವಣೆ ನಡೆಯಲಿದೆ. ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಬಾಚರಣಿಯಂಡ ಸುಮನ್, ಅಯ್ಯಂಡ ಸತೀಶ್ ಬೆಳ್ಯಪ್ಪ, ಮುಕ್ಕಾಟಿ ನಾಣಯ್ಯ, ಪೋಡೊನೋಳನ ಶ್ರೀನಿವಾಸ್, ಕೂರನ ಕಿಶೋರ್ ಕುಮಾರ್, ಕುಂಞ್ಞಳಿ ಸಂತೋಷ್ ಕುಮಾರ್, ಸಾಲಗಾರರ ಮಹಿಳಾ ಮೀಸಲು ಕ್ಷೇತ್ರದಿಂದ ಕೂರನ ಸುಶೀಲ ಅಪ್ಪಾಜಿ, ಚೀಯಬೆರ ವೀಣಾ ಸೋಮಯ್ಯ, ಬಿಸಿಎಂ (ಎ) ಕ್ಷೇತ್ರದಿಂದ ನಾಳಿಯಮ್ಮಂಡ ಜೀವನ್, ಬಿಸಿಎಂ (ಬಿ) ಕ್ಷೇತ್ರದಿಂದ ಕೇಕಡ ಸುಗುಣ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸರಸಮ್ಮ ಹಾಗೂ ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಎಂ.ಕೆ.ವಸಂತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ 12 ನಿರ್ದೇಶಕರಲ್ಲಿ 11 ಮಂದಿ ಬಿಜೆಪಿ ಬೆಂಬಲಿತರಾಗಿದ್ದಾರೆ.
ಮಡಿಕೇರಿ ಸೆ.21 : ತಾಳತ್ತಮನೆಯಲ್ಲಿ ಸೆ.22 ರಂದು ಉಚಿತ ರೇಬಿಸ್ (ಹುಚ್ಚು ನಾಯಿ) ಲಸಿಕಾ ಶಿಬಿರ ನಡೆಯಲಿದೆ. ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ಬೆಳಿಗ್ಗೆ 9.30 ರಿಂದ 11.30 ಗಂಟೆಯವರೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಶಿಬಿರ ನಡೆಯಲಿದ್ದು, ತಾಳತ್ತಮನೆಯ ಹಾಗೂ ಸುತ್ತಮುತ್ತಲಿನ ಜನರು ತಮ್ಮ ಸಾಕು ಪ್ರಾಣಿಗಳನ್ನು ತರುವಂತೆ ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.
ಹೊದ್ದೂರು ಸೆ.8 : ಜಾಣೆ ಗೃಹಿಣಿಯಿಂದ ಕುಟುಂಬದ ಅಪೌಷ್ಠಿಕಾಂಶವು ಮುಕ್ತವಾಗಲಿದೆ. ಈ ನಿಟ್ಟಿನಲ್ಲಿ ಪ್ರತಿ ಮಹಿಳೆಯೂ ತಮ್ಮ ಮಹತ್ತರ ಜವಾಬ್ಧಾರಿಯನ್ನು ಅರಿತು ಕಾರ್ಯತತ್ಪರರಾಗಬೇಕು ಎಂದು ಸಾಹಿತಿ, ಪತ್ರಕರ್ತ ಕೂಡಂಡ ರವಿ ಅಭಿಪ್ರಾಯಿಸಿದರು. ಹೊದ್ದೂರಿನ ಪಂಚಾಯಿತಿ ಮತ್ತು ಸ್ಥಳೀಯ ಅಂಗನವಾಡಿಗಳ ಸಂಯುಕ್ತಾಶ್ರಯದಲ್ಲಿ ನಡೆದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು “ಸಮತೋಲನ ಆಹಾರದ ಸದ್ಭಳಕೆ” ಕುರಿತಾಗಿ ಮಾತನಾಡಿದರು. ಕಾರ್ಯಕ್ರಮವು ಪಂಚಾಯಿತಿಯ ದಿ. ಕೋರನ ದೇವಯ್ಯ ಸೀತಮ್ಮ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿತವಾಗಿತ್ತು. ಮಹಿಳೆಯರ ಜಾಣ್ಮೆಯು ಕುಟುಂಬಕ್ಕೆ ವರದಾನವಾಗಲಿದೆ. ಸಮತೋಲನ ಆಹಾರದ ಪಿರಮಿಡ್ ಕುರಿತಂತೆ ಬಹುತೇಕ ಮಹಿಳೆಯರು ಅರಿತಿದ್ದಾರೆ. 2023ರ ವರ್ಷವು ಅಂತರಾಷ್ಟೀಯ ಸಿರಿಧಾನ್ಯಗಳ ವರ್ಷವಾಗಿದೆ. ಇದರ ಮಹತ್ವವನ್ನು ಅರಿತು ಮಾನಿನಿಯರು ಸಿರಿಧಾನ್ಯಗಳನ್ನು ತಮ್ಮ ದೈನಿಕ ಆಹಾರದಲ್ಲಿ ಬಳಸುವಂತಾಗಬೇಕು. ದ್ವಿದಳ ಧಾನ್ಯಗಳನ್ನು ಮೊಳಕೆ ಬರಿಸಿ, ಅಡುಗೆಯಲ್ಲಿ ಬಳಸಿ ಕುಟುಂಬದ ಸರ್ವ ಸದಸ್ಯರ ಆರೋಗ್ಯವನ್ನು ಕಾಪಾಡುವ ಮಹತ್ತರ ಹೊಣೆ ಜಾಣೆ ಗೃಹಿಣಿಯ ಮೇಲಿದೆ ಎಂದು ಅವರು ವಿವರವಿತ್ತರು. ಆಯಾ ಋತುಮಾನದಲ್ಲಿ ಸುಲಭವಾಗಿ ಸ್ಥಳೀಯವಾಗಿ…
ನಾಪೋಕ್ಲು ಸೆ.21 : ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆಯು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ ಸುಳ್ಯದ ಕೊಡಿಯಾಲ ಬೈಲ್ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಮಾತನಾಡಿ, ಮಾ.31, 2023ರ ಅಂತ್ಯಕ್ಕೆ 16,960 ಜನ ವಿವಿಧ ವರ್ಗದ ಸದಸ್ಯರಿದ್ದು, ಇವರಿಂದ ರೂ.4.26 ಕೋಟಿ ಪಾಲು ಬಂಡವಾಳ, ರೂ. 156,53 ಕೋಟಿ ಠೇವಣಿ ಸಂಗ್ರಹಿಸಿದೆ. ಸದಸ್ಯರುಗಳಿಗೆ ರೂ.145.43 ಕೋಟಿ ವಿವಿಧ ಸಾಲಗಳನ್ನು ಈ ಸಹಕಾರಿ ವರ್ಷದಲ್ಲಿ ವಿತರಿಸಲಾಗಿದೆ. ರೂ. 13.69 ಕೋಟಿ ವಿವಿಧ ಬ್ಯಾಂಕ್ಗಳಲ್ಲಿ ಧನ ವಿನಿಯೋಗ ಮಾಡಿದ್ದು, ಸಂಘವು ಆರಂಭದಿಂದಲೂ ಲಾಭದಲ್ಲಿ ನಡೆಯುತ್ತಿದ್ದು, ವರದಿ ವರ್ಷದಲ್ಲಿ ರೂ. 879.65 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.1,51,88,550.61 ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗುತ್ತಿದೆ. ಸಂಘದ 16 ಶಾಖೆಗಳಲ್ಲಿ ಇ- ಸ್ಟಾಂಪಿಂಗ್, ಸುಳ್ಯ ಶಾಖೆಯಲ್ಲಿ ಕಡಿಮೆ ಬಾಡಿಗೆಗೆ ಸೇಫ್ ಲಾಕರ್, ಗ್ರಾಹಕರ ಅನುಕೂಲಕ್ಕಾಗಿ ಆರ್.ಟಿ.ಜಿ.ಎಸ್, ನೇಫ್ಟ್ ಸೌಲಭ್ಯವನ್ನು ಕೂಡ ನೀಡುತ್ತಿದ್ದೇವೆ…
ಮಡಿಕೇರಿ ಸೆ.21 : ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರನ್ನು ಪುನರ್ ನೇಮಕ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ತೋಂಟದಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಧೋಶ್ ಪೂವಯ್ಯ ಅವರು ಕಾರ್ಯವೈಖರಿಯನ್ನು ಗಮನಿಸಿ ಇದೀಗ ಮತ್ತೊಮ್ಮೆ ಅವರನ್ನು ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುವ ಹೊಣೆಗಾರಿಕೆಯನ್ನು ಮಧೋಶ್ ಪೂವಯ್ಯ ಹೆಗಲಮೇಲೆ ಹಾಕಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ತೂಕ್ ಬೊಳಕ್ ಕಲೆ, ಕ್ರೀಡೆ ಮತ್ತು ಸಾಹಿತ್ಯ ಅಕಾಡೆಮಿಯ ಫೇಸ್ ಸಂಚಾಲಕರಾಗಿರುವ ಮಧೋಶ್ ಪೂವಯ್ಯ ಪ್ರಸ್ತುತ ಕೊಡಗು ಪತ್ರಕರ್ತ ಸಂಘದ ವಿರಾಜಪೇಟೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ನಾನಾ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಜಡಿಮಳೆ ಎಂಬ ಕೊಡವ ಸಿನೆಮಾವನ್ನು…
ಮಡಿಕೇರಿ ಸೆ.21 : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ. ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕುಂಬಾರಗಡಿಗೆ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳೆ ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಮರಕ್ಕೆ ಡಿಕ್ಕಿಯಾಗದೆ ಮುಂದೆ ಚಲಿಸಿದಲ್ಲಿ 50 ಅಡಿ ಪ್ರಪಾತಕ್ಕೆ ಉರುಳಿ ಬೀಳುವ ಆತಂಕ ಎದುರಾಗಿತ್ತು. ಸೂರ್ಲಬ್ಬಿ ರಸ್ತೆ ಕಿರಿದಾಗಿದ್ದು, ಹೆಚ್ಚು ತಿರುವುಗಳೆ ಹೊಂದಿಕೊಂಡಿದೆ. ಇಲ್ಲಿ ಯಾವುದೇ ನಾಮಫಲಕ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಾಪೋಕ್ಲು ಸೆ.21 : ಶೌರ್ಯ ತಂಡದ ವತಿಯಿಂದ ಬಾವಲಿ ಗ್ರಾಮದ ಮುಖಂಡಬಾಣೆ ಸಮುದಾಯ ಭವನ ಸೇರಿಂದತೆ ವಿವಿಧೆಡೆ ಸ್ವಚ್ಛತಾ ಶ್ರಮದಾನ ನಡೆಯಿತು. ಶೌರ್ಯ ತಂಡದ ಸ್ವಯಂ ಸೇವಕರು ಸಮುದಾಯ ಭವನದ ಸುತ್ತು ಮುತ್ತು ಹಾಗೂ ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ ಗಂಟಿಗಳು ಕಡಿದು ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ತಂಡದ ಸದಸ್ಯರಾದ ಚೇತನ್, ದೇವಪ್ಪ, ಸುದೀಪ್, ಚರಣ್, ನವೀನ್, ನಿತಿಶ್ ಮತ್ತು ರಾಜೇಶ್ ಪಾಲ್ಗೊಂಡಿದ್ದರು. ನಿರಂತರ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿರುವ ಶೌರ್ಯ ತಂಡದ ಬಗ್ಗೆ ಗ್ರಾಮಸ್ಥರು ಪ್ರಶಾಂಸೆ ವ್ಯಕ್ತಪಡಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.21 : ಹೊದವಾಡ ಗ್ರಾಮದ ಶ್ರೀ ಭಗವತಿ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹೊದವಾಡ ಅಂಬಲದಲ್ಲಿ ಬೆಳಿಗ್ಗೆ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಿ, ಅನ್ನ ಸಂತರ್ಪಣೆ ಜರುಗಿತು. ನಂತರ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಇರಿಸಿ ವಾದ್ಯ ಮೇಳಗದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಪುಣ್ಯ ಕಾವೇರಿ ನದಿಯಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಈ ಸಂದರ್ಭ ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.21 : ಮೇಕೇರಿಯ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಗೌರಿ ಶಂಕರ ದೇವಾಲಯದಲ್ಲಿ 31ನೇ ವರ್ಷದ ಗೌರಿ ಗಣೇಶೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಗೌರಿ ಶಂಕರ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ವಿಧಿಗಳು ನೇರವೇರಿದವು. ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ಶ್ರೀ ಗೌರಿ ಗಣೇಶ ಮೂರ್ತಿಯ ಪ್ರತಿಷ್ಟಾಪನೆ ನೆರವೇರಿತು. ಬಳಿಕ ನಡೆದ ಧಾರ್ಮಿಕ ಪ್ರವಚನದಲ್ಲಿ ಮಾತನಾಡಿದ ಸೇವಾ ಭಾರತಿಯ ಕೊಡಗು ಜಿಲ್ಲಾಧ್ಯಕ್ಷ ಟಿ.ಸಿ .ಚಂದ್ರನ್ , ಇಂದಿನ ಆಧುನಿಕ ಯುಗದಲ್ಲಿ ಸಂಸ್ಕಾರಯುತ ಜೀವನ ಮರೆಯಾಗುತ್ತಿದ್ದು, ಮಕ್ಕಳು ದುಷ್ಚಟಗಳಿಗೆ ಒಳಗಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮನೆಯಿಂದಲೇ ಮಕ್ಕಳಿಗೆ ಮೌಲ್ಯಯುತ ಜೀವನ ಸಿಗುವಲ್ಲಿ ಪೋಷಕರು ಶ್ರಮ ವಹಿಸಬೇಕೆಂದು ಕರೆ ನೀಡಿದರು. ಮನಸ್ಸಿನ ಏಕಾಗ್ರತೆ ಪ್ರಮುಖವಾಗಿದ್ದು ದೇವರು, ಭಕ್ತಿ, ಸಂಸ್ಕೃತಿ, ಸನ್ನಢತೆಯ ಸಲುವಾಗಿ ಸದಾ ಜಾಗೃತವಾಗಿರಬೇಕು, ಒಳ್ಳೆಯ ವಿಚಾರಗಳಿಗಾಗಿ ನಮ್ಮ ಮನಸ್ಸನ್ನು ಅರ್ಪಣೆ ಮಾಡಬೇಕು ಎಂದ ಅವರು, ಮಾತೃ ಭಾಷೆ, ಉಡುಗೆ ತೊಡುಗೆ, ಭಜನೆ, ಮನೆಯಲ್ಲಿ ಸಹ ಭೋಜನ ಹಾಗೂ ಧಾರ್ಮಿಕ…






