ಸೋಮವಾರಪೇಟೆ, ಸೆ.21 : ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಗೌರಿ – ಗಣೇಶ ಹಬ್ಬದ ಅಂಗವಾಗಿ ಪರಿಸರ ಸ್ನೇಹಿ ಗಣೇಶೋತ್ಸವ: 2023 ವನ್ನು ಆಚರಿಸಲಾಯಿತು. ಇಕೋ ಕ್ಲಬ್ ಸಂಘಟನೆ ಮೂಲಕ ಶಾಲಾ ಶಿಕ್ಷಕರ ಮಾರ್ಗದರ್ಶನಲ್ಲಿ ನಡೆದ ಜಾಗೃತಿ ಅಭಿಯಾನದಲ್ಲಿ ಮಕ್ಕಳು ಜೇಡಿಮಣ್ಣಿನಿಂದ ವಿವಿಧ ನಮೂನೆಯ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರದರ್ಶಿಸಿ ಗಮನ ಸೆಳೆದರು. ಪಿಓಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ಬಳಕೆ ಮಾಡದಂತೆ ಹಾಗೂ ಮಣ್ಣಿನ ಗಣೇಶ ಮೂರ್ತಿಯ ತಯಾರಿಕೆ ಮತ್ತು ಬಳಕೆಯ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಮಕ್ಕಳು ತಯಾರಿಸಿದ್ದ ಮಣ್ಣಿನ ಗಣೇಶ ಮೂರ್ತಿಗಳನ್ನು ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಬಳಕೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಶಾಲಾ ಅಂಗಳದಲ್ಲಿನ ಹೊಂಡದಲ್ಲಿ ವಿಸರ್ಜನೆ ಮಾಡಲಾಯಿತು. ಶಾಲಾ ಅಂಗಳದ ಹೊಂಡದಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ…
ಲೇಖಕ: admin
ಮಡಿಕೇರಿ ಸೆ.20 : ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮಡಿಕೇರಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಮಡಿಕೇರಿ ಸಮೀಪ ಕಾಟಕೇರಿ ಬಳಿ ನಡೆದಿದೆ. ಉಡುಪಿ ಮೂಲದ ವಿಜೇಶ್ ಎಂಬುವವರೇ ಮೃತ ದುರ್ದೈವಿ. ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಹಾಗೂ ಶಿವಾನಂದ್ ಬೈಕ್ನಲ್ಲಿ ಮಡಿಕೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಲಾರಿಯನ್ನು ವಶಪಡಿಸಿಕೊಂಡು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಂಟಿಕೊಪ್ಪ ಸೆ.20 : ಕೊಡಗರಹಳ್ಳಿ ಶಾಂತನಿಕೇತನ ಶಾಲೆಯ ವಿದ್ಯಾರ್ಥಿಗಳಾದ ನೇಹ ಅನೀಶ್ ಹಾಗೂ ಡೆಲೀಶಾ ಮುತ್ತಮ್ಮ ಜೋಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೇಹ ಅನೀಶ್ ಕೊಡಗರಹಳ್ಳಿ ಶಾಂತನಿಕೇತನ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಡೆಲೀಶಾ ಸಿಂಗಲ್ಸ್ ನಲ್ಲೂ ಉತ್ತಮ ಸಾಧನೆ ತೋರಿದ್ದು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಮಡಿಕೇರಿ ಸೆ.20 : ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಲೇರಿಯಾ, ಡೆಂಗ್ಯೂ, ಚಿಕೂನ್ಗುನ್ಯಾ, ಮೆದುಳುಜ್ವರ ಹಾಗೂ ಆನೆಕಾಲು ರೋಗಗಳ ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ. ಈಡಿಸ್ ಸೊಳ್ಳೆಗಳು ಹರಡುವ ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ರೋಗವು ವೈರಾಣು ಸೋಂಕಾಗಿದ್ದು, ಇದಕ್ಕೆ ಯಾವುದೇ ನಿರ್ಧಿಷ್ಠ ಚಿಕಿತ್ಸೆ ಹಾಗೂ ಲಸಿಕೆ ಇರುವುದಿಲ್ಲ. ಆದರೆ ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಪಕ್ಷದಲ್ಲಿ ಡೆಂಗ್ಯೂ ಜ್ವರವು ಡೆಂಗ್ಯೂ ರಕ್ತಸ್ರಾವ ಜ್ವರ ಹಾಗೂ ಡೆಂಗ್ಯೂ ಆಘಾತ ಜ್ವರಕ್ಕೆ ತಿರುಗಿ ಮಾರಣಾಂತಿಕವಾಗಿ ಸಾವು ಸಂಭವಿಸಬಹುದು. ಆದ್ದರಿಂದ ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ನಿಯಂತ್ರಣದಲ್ಲಿ ರೋಗ ಹರಡುವ ಈಡಿಸ್ ಸೊಳ್ಳೆಗಳ ನಿಯಂತ್ರಣವೇ ಅತೀ ಮುಖ್ಯ ವಿಧಾನವಾಗಿದ್ದು, ಈ ಸೊಳ್ಳೆಗಳು ಮನೆಗಳಲ್ಲಿನ ನೀರಿನ ಶೇಖರಣೆಗಳಲ್ಲಿ ಹಾಗೂ ಮನೆಗಳ ಸುತ್ತಮುತ್ತಲಿನ ಪರಿಸರದಲ್ಲಿ ಮಳೆನೀರು ಸಂಗ್ರಹವಾಗುವ ತ್ಯಾಜ್ಯ ವಸ್ತುಗಳಲ್ಲಿ ಉತ್ಪತ್ತಿಯಾಗುವುದರಿಂದ ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಪ್ರಸ್ತುತ ಮುಂಗಾರು ಸಮಯವಾಗಿದ್ದರೂ ಸಹ…
ಮಡಿಕೇರಿ ಸೆ.20 : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ನಾಗಪುರಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ನ ಮೂಲಕ ಅಕ್ಟೋಬರ್, 10 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಸೆ.20 : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ತಿಳಿಸಿದ್ದಾರೆ. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ನ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಓದು ಬರಹ ಕಲಿಯುವುದರ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು, ಶ್ರದ್ಧೆ, ಸಮಯಪ್ರಜ್ಞೆ, ಸಂಯಮ, ಪರಿಸರ ಕಾಳಜಿ ಬೆಳೆಸಿಕೊಂಡು ಜೀವನದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಅನುಕೂಲವಾಗಲಿದೆ ಎಂದು ಪಿ.ಜಿ.ಆರ್.ಸಿಂಧ್ಯ ಅವರು ಹೇಳಿದರು.’ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಾಮಾಜಿಕ ಕಾಳಜಿ ಅರಿವನ್ನು ಮೂಡಿಸುವ ಕೆಲಸ ಹೆಚ್ಚಾಗಬೇಕು. ಪರಿಸರ ಜಾಗೃತಿ, ಸ್ವಚ್ಛತೆ ಅತ್ಯಂತ ಮಹತ್ವದ್ದಾಗಿದ್ದು, ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನು…
ಮಡಿಕೇರಿ ಸೆ.20 : ಪ್ರಸಕ್ತ(2023-24) ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಭಾಗವಹಿಸಿದ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳು ಇಲಾಖಾ ವತಿಯಿಂದ ಸೆಪ್ಟೆಂಬರ್, 27 ರಂದು ನಡೆಯಲಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್, 27 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. (ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್(ಪುರುಷರಿಗೆ ಮಾತ್ರ), ಖೋಖೋ, ಕಬಡ್ಡಿ, ಬಾಸ್ಕೇಟ್ ಬಾಲ್, ಕುಸ್ತಿ, ಷಟಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ) (ಮುಕ್ತ ಪಂದ್ಯಾವಳಿ ಪುರುಷ ಹಾಗೂ ಮಹಿಳೆಯರಿಗೆ). ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವ ಕ್ರೀಡೆ: ಸೆಪ್ಟೆಂಬರ್, 27 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಟೆನ್ನಿಸ್, ನೆಟ್ಬಾಲ್, ಈಜು ಸ್ಪರ್ಧೆ ನಡೆಯಲಿದೆ. ಈಜು ಸ್ಪರ್ಧೆಯಲ್ಲಿ ಆಯ್ಕೆ ಮಾಡಲಾಗುವ ಕ್ರೀಡೆಗಳು ಸೆಪ್ಟೆಂಬರ್, 27 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಜು-100, 200, 400 ಮೀ. ಫ್ರೀ ಸ್ಟೈಲ್, 100,…
ಮಡಿಕೇರಿ ಸೆ.30 : ಬೆಂಗಳೂರು ಕೊಡವ ಸಮಾಜದ ಕೈಲ್ಪೊವ್ದ್ ಒತ್ತೊರ್ಮೆ ಕೂಟದಲ್ಲಿ ಕೊಡವ ಪತ್ರಿಕೋದ್ಯಮದ ಮೂಲಕ ಭಾಷೆ-ಸಾಹಿತ್ಯ, ಸಂಸ್ಕೃತಿಯ ಬೆಳವಣಿಗೆಯಲ್ಲಿ ಸೇವೆ ಸಲ್ಲಿಸುತ್ತ ಬರುತ್ತಿರುವ ಪೂಮಾಲೆ ಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೈಲ್ ಪೊವ್ದ್ ಒತ್ತೊರ್ಮೆ ಕೂಟಕ್ಕೆ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಚೆಪ್ಪುಡಿರ ಎಂ. ಪೂಣಚ್ಚ, ರಾಜ್ಯ ಸಾರ್ವಜನಿಕ ಅಭಿಯೋಜಕ ಬಲ್ಲಚಂಡ ಎ.ಬೆಳ್ಯಪ್ಪ ಹಾಗೂ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಕರವಟ್ಟಿರ ಟಿ.ಪೆಮ್ಮಯ್ಯ ಅವರುಗಳು ನಾಚಯ್ಯ ರಿಗೆ ಶಾಲುಹೊದಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭ ಸಮಾಜದ ಉಪಾದ್ಯಕ್ಷೆ ಪಾಂಡಂಡ ಕಮಲ, ಗೌ.ಕಾರ್ಯದರ್ಶಿ ಲೆ.ಕ. ಚಿರಿಯಪಂಡ ವಿವೇಕ್ ಮುತ್ತಣ್ಣ (ರಿ), ಖಜಾಂಚಿ ಬಲ್ಯಮೀದೇರಿರ ಗಣೇಶ್, ಜಂಟಿ ಕಾರ್ಯದರ್ಶಿ ಬೊಪ್ಪಂಡ ಮಹೇಶ್ ತಮ್ಮಯ್ಯ, ಜಂಟಿ ಖಜಾಂಚಿ ಪೊನ್ನಚೆಟ್ಟಿರ ರಮೇಶ್ ಗಣಪತಿ ಹಾಗೂ ಮೂರು ಸಾವಿರಕ್ಕೂ ಅಧಿಕ ಕೊಡವ ಬಾಂಧವರು ಹಾಜರಿದ್ದರು.
ಮಡಿಕೇರಿ ಸೆ.20 : ಹಿರಿಯ ಕಾಂಗ್ರೆಸ್ಸಿಗ, ತಾ.ಪಂ ಮಾಜಿ ಸದಸ್ಯ ಹಾಗೂ ಹಿರಿಯ ಸಹಕಾರಿ ಮುತ್ತಾರ್ಮುಡಿಯ ಉಳುವಾರನ ಪಳಂಗಪ್ಪ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ. ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ ಮತ್ತು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಳಂಗಪ್ಪ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.
ಮಡಿಕೇರಿ ಸೆ.20 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಆರಂಭಿಸಿರುವ ಪಾದಯಾತ್ರೆಯ ಮೊದಲ ಹಂತ ಕೆದಕಲ್ ಮೂಡಗೇರಿ ನಾಡ್ ಮಂದ್ ನಲ್ಲಿ ಪೂರ್ಣಗೊಂಡಿದೆ. 2ನೇ ಹಂತದ ಪಾದಯಾತ್ರೆ ಸೆ.27 ರಿಂದ “ಕುರುಳಿ ಅಂಬಲ” ಮಂದ್ ನಿಂದ ಆರಂಭಗೊಳ್ಳಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮೊದಲ ಹಂತದ ಕೊನೆಯ ದಿನದ ಪಾದಯಾತ್ರೆ ಮತ್ತು ಕೊಡವ ಜಾಗೃತಿ ಸಭೆ ಪಾಲೇರಿನಾಡ್ ಮಂದ್ ಹಾಗೂ ಮೂಡಗೇರಿ ನಾಡ್ ಮಂದ್ ನಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ನಾಚಪ್ಪ ಅವರು ಮೊದಲ ಹಂತದ ಪಾದಯಾತ್ರೆ ಯಶಸ್ವಿಯಾಗಿದ್ದು, ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದೆ ಎಂದರು. ಕೊಡವರ ರಕ್ಷಣೆಗಾಗಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆ ಈಡೇರುವವರೆಗೆ ಸಿಎನ್ಸಿ ಸಂಘಟನೆ ಶಾಂತಿಯುತ ಹೋರಾಟವನ್ನು ಮುಂದುವರೆಸಲಿದೆ. ಕೊಡವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಐದು ಹಂತಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೊದಲ ಹಂತ ಈಗಾಗಲೇ ಪೂರ್ಣಗೊಂಡಿದೆ.…






