ಮಡಿಕೇರಿ ಅ.17 : ಡಿವೈನ್ ಪಾರ್ಕ್ ಸಂಸ್ಥೆಯ ಅಂಗ ಸಂಸ್ಥೆಯಾದ ಮೂರ್ನಾಡು ವಿವೇಕ ಜಾಗ್ರತ ಬಳಗದ ವತಿಯಿಂದ ಅತ್ಯಪರೂಪದ ಆತ್ಮೋನ್ನತಿ ಶಿಬಿರ ನಡೆಯಿತು. ಮರಗೋಡಿನ ಗೌಡ ಸಮಾಜದಲ್ಲಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದ ಡಿವೈನ್ ಪಾರ್ಕ್ನ ಅಧಿಕಾರಿಗಳಾದ ಪ್ರೇಮಾ ಪ್ರಭಾಕರ್ ಹಾಗೂ ರಾಜೇಶ್ ನಾಯರ್ ಆತ್ಮೋನ್ನತಿ ಕುರಿತು ವಿವರಿಸಿದರು. ಪ್ರತಿಯೊಬ್ಬ ವ್ಯಕ್ತಿ ವ್ಯಕ್ತಿತ್ವ ನಿರ್ಮಾಣದೆಡೆಗೆ ಸಾಗುವ ಪರಿ ಮತ್ತು ಮನುಷ್ಯ ಜನ್ಮದ ಪಾವಿತ್ರ್ಯತೆ ಬಗ್ಗೆ ಅರಿತುಕೊಳ್ಳಬೇಕು. ಭಗವಂತನಿಗೆ ಮೊದಲ ಆದ್ಯತೆ ನೀಡಿ ತನ್ನ ಪಾಲಿಗೆ ಒದಗಿದ ಕರ್ತವ್ಯಗಳನ್ನು ಅತ್ಯಂತ ಪ್ರೀತಿಯಿಂದ ನಿರ್ವಹಿಸುವ ಕಲೆಯನ್ನು ಕರಗತ ಮಾಡಿಕೊಂಡರೆ ಜೀವನ ಜೇನಾಗುತ್ತದೆ. ಸಂತೃಪ್ತಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮೂರ್ನಾಡು ವಿವೇಕ ಜಾಗ್ರತ ಬಳಗದ ಅಧ್ಯಕ್ಷೆ ದಿವ್ಯ ತೇಜ ಕುಮಾರ್, ಉಪಾಧ್ಯಕ್ಷ ಯಶವಂತ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶೃತಿ ಸ್ವಾಗತಿಸಿ, ಬಿ.ಜಿ.ಸೌಮ್ಯ ವಂದಿಸಿದರು. ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಅ.17: ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕವು ಅದ್ಧೂರಿಯ ಜಾನಪದ ದಸರಾ ಮೆರವಣಿಗೆ ಮತ್ತು ಕಾರ್ಯಕ್ರಮವನ್ನು ರೂಪಿಸಿದ್ದು, ಮಡಿಕೇರಿ ನಗರ ದಸರಾ ಸಮಿತಿಯ ಸಹಕಾರದೊಂದಿಗೆ ಅ.19 ರಂದು ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ತಿಳಿಸಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ರಸ್ತೆಯ ವಿಶ್ರಾಂತಿ ಗೃಹ ಆವರಣದಿಂದ ವರ್ಣರಂಜಿತ ಮೆರವಣಿಗೆ ಆರಂಭಗೊಳ್ಳಲಿದೆ. ರಾಮನಗರದ ಪ್ರತಿಷ್ಠಿತ ಡೊಳ್ಳುಕುಣಿತ, ಪೂಜಾ ಕುಣಿತ, ವೀರಗಾಸೆ, ತಮಟೆ, ಕೊಡಗಿನ ಮುತ್ತಪ್ಪ ಚಂಡೆ ವಾದ್ಯ ಇತ್ಯಾದಿ ಕಲಾ ತಂಡಗಳು ಭಾಗವಹಿಸಲಿವೆ. ಶಾಸಕ ಡಾ. ಮಂತರ್ಗೌಡ, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ದಸರಾ ಸಮಿತಿ ಅಧ್ಯಕ್ಷೆ ಅನಿತಾಪೂವಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್ಆಚಾರ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ಜಿಲ್ಲಾಧಿಕಾರಿ ವೆಂಕಟ್ರಾಜ ಹಾಗೂ ಇತರರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಜಾನಪದ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಈ ಸಂದರ್ಭ ಜಾನಪದ…
ನಾಪೋಕ್ಲು ಅ.17 : ಮೂರ್ನಾಡು ಪದವಿ ಕಾಲೇಜಿನ 2023- 24ನೇ ಸಾಲಿನ ಎನ್ ಎಸ್ ಎಸ್ ಘಟಕವನ್ನು ಉದ್ಘಾಟಿಸಲಾಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಶಿಕ್ಷಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಡಿ.ಪ್ರಶಾಂತ್ ಮಾತನಾಡಿ, ಎನ್ಎಸ್ಎಸ್ ಘಟಕ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ ಬೆಳೆಸಲು ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ.ಜಿ ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ರೇಖಾ ಚಿಣ್ಣಪ್ಪ ಎನ್ ಎಸ್ ಎಸ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಅಧಿಕಾರಿ ಕಲ್ಪನಾ ಪ್ರಸ್ತಾವಿಕ ನುಡಿಯನ್ನಾಡಿದರು. 2023-24ನೇ ಸಾಲಿನ ಮೊದಲ ಸೆಮಿಸ್ಟರ್ ನ ಕಾಲೇಜಿನ ನ್ಯೂಸ್ ಲೆಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು, ವಿವಿಧ ವಿಭಾಗದ ಮುಖ್ಯಸ್ಥರು, ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ವರದಿ : ದುಗ್ಗಳ…
ನಾಪೋಕ್ಲು ಅ.17 : ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಚೀಯಕಪೂವಂಡ ಡಿ.ನಾಚಪ್ಪ, ಮಾಳೆಯಂಡ ಎಂ.ಅಪ್ಪಚ, ಮಣವಟ್ಟಿರ ಬಿ ದೀಪಕ್ ಪೊನ್ನಪ್ಪ ,ಮಚ್ಚುರ ಎಂ.ರವೀಂದ್ರ, ಬದಂಜೆಟ್ಟಿರ ಎಂ.ತಿಮ್ಮಯ್ಯ, ಕರವಂಡ ಜಿ.ಅಪ್ಪಣ್ಣ ಆಯ್ಕೆಯಾದರು. ಮಹಿಳಾ ಮೀಸಲು ಕ್ಷೇತ್ರದಿಂದ ಚೀಯಕಪೂವಂಡ ರೀನಾ, ಅಪ್ಪು ಮಣಿಯಂಡ ಕಾವೇರಮ್ಮ ಆಯ್ಕೆಯಾದರು. ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಐರಿರ ಜಿ.ಟಿಂಸ ಹಾಗೂ ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಮಣವಟ್ಟಿರ ದಯಾ ಚಿಣ್ಣಪ್ಪ ಹಾಗೂ ಪರಿಶಿಷ್ಠ ಜಾತಿ ಕ್ಷೇತ್ರದಿಂದ ಪಾಲೆರ ವಿಜು ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರತ್ ಪೂಣಚ್ಚ ಕಾರ್ಯನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಅ.17 : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 27ನೇ ವರ್ಷದ ಕಾವೇರಿ ರಥಯಾತ್ರೆ ಅ.17ರಿಂದ 18ರ ವರೆಗೆ ನಡೆಯಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿಣ್ಣಪ್ಪ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ಮೆರವಣಿಗೆಯು ನಾಪೋಕ್ಲುವಿನ ರಾಮಮಂದಿರದಿಂದ ಹೊರಡಲಿದ್ದು, ಪಾಲೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚೇರಂಬಾಣೆ –ಚೆಟ್ಟಿಮಾನಿ ಮಾರ್ಗವಾಗಿ ಭಾಗಮಂಡಲ-ತಲಕಾವೆರಿಗೆ ತೆರಳಲಿದೆ. ತೀರ್ಥೋದ್ಭವದ ಬಳಿಕ ವಿವಿಧ ಸ್ಥಳಗಳಲ್ಲಿ ತೀರ್ಥ ವಿತರಿಸಿ ಪಾಲೂರಿನ ಸತ್ಯ ಹರಿಶ್ಚಂದ್ರ ದೇವಾಲಯದ ಕಾವೇರಿ ನದಿಯಲ್ಲಿ ತಾಯಿ ಕಾವೇರಿ ಮಾತೆಯ ಕಳಶ ವಿಸರ್ಜನೆಯೊಂದಿಗೆ ಅಂತ್ಯಗೊಳ್ಳಲಿದೆ ಎಂದರು. ಅ.18 ರಂದು ಬೆಳಿಗ್ಗೆ 6 ಗಂಟೆಗೆ ಭಾಗಮಂಡಲದಿಂದ ರಥಯಾತ್ರೆ ಆರಂಭಗೊಳ್ಳಲಿದ್ದು, ಚೇರಂಗಾಲ, 7 ಗಂಟೆಗೆ ಅಯ್ಯಂಗೇರಿ, ಪುಲಿಕೋಟು, 9 ಗಂಟೆಗೆ ಪೇರೂರು ಬಲ್ಲಮಾವಟಿ,11 ಗಂಟೆಗೆ ಚೋನಕೆರೆ ಮೂಲಕ ಮಧ್ಯಾಹ್ನ 12.30 ಗಂಟೆಗೆ ನಾಪೋಕ್ಲು ತಲುಪಲಿದೆ…
ನಾಪೋಕ್ಲು ಅ.17 : ನಾಪೋಕ್ಲುವಿನ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ಟಿ.ಸಿ.ರಾಜೀವನ್ ಆಯ್ಕೆಯಾಗಿದ್ದಾರೆ. ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿ ಹಾಗೂ ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ.ಬಿ.ರಶೀದ್, ಕಾರ್ಯದರ್ಶಿಯಾಗಿ ಟಿ.ಪಿ.ಸುಕುಮಾರ್ ಆಯ್ಕೆಯಾದರು. ಸಹ ಕಾರ್ಯದರ್ಶಿಯಾಗಿ ದೀಪು ದೇವಯ್ಯ, ಖಜಾಂಚಿಯಾಗಿ ಎ.ಎಂ.ಚೇತನ್, ಗೌರವಾಧ್ಯಕ್ಷರಾಗಿ ಎಂ.ಇ.ರಜಾಕ್ ನೇಮಕಗೊಂಡರು. ನಿರ್ದೇಶಕರಗಳಾಗಿ ಸಮ್ಮದ್, ಜಾಫರ್, ಸಲೀಂ, ವಿಜಯ್ ಕುಮಾರ್, ಸೋಮಣ್ಣ ಬಾಳೆಯಡ, ಮಂಜುನಾಥ್ ,ಶರತ್, ಐ.ಎನ್.ಪ್ರಕಾಶ್, ಪಿ.ಎಲ್.ಜಗದೀಶ್, ಹೆಚ್.ಕೆ.ಸತೀಶ್ ಆಯ್ಕೆಯಾದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಅ.17 : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯುತ್ತಿರುವ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರದ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಯಿತು. ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಗಿಡಗಂಟಿಗಳನ್ನು ಕಡಿದು ಪ್ಲಾಸ್ಟಿಕ್ ಕಸಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ಲಯನ್ಸ್ ಕ್ಲಬ್ ನ ಅಧ್ಯಕ್ಷ ಕನ್ನಂಬೀರ ಸುಧಿ ತಿಮ್ಮಯ್ಯ, ಕಾರ್ಯದರ್ಶಿ ಮಾದೇಯಂಡ ಕುಟ್ಟಪ್ಪ ಸದಸ್ಯರಾದ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಬೊಪ್ಪೇರ ಜಯ ಉತ್ತಪ್ಪ ಹಾಗೂ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಸ್.ಡಿ.ದಮಯಂತಿ ಉಪನ್ಯಾಸಕಿ ಯಾಮಿನಿ ಸಿಬ್ಬಂದಿ ಮಹೇಶ್, ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಅ.17 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ‘ಯುವ ದಸರಾ-2023’, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅ.21 ರಂದು ನಡೆಯಲಿದೆ ಎಂದು ಯುವ ದಸರಾ ಸಮಿತಿ ಸಂಚಾಲಕ ಆರ್.ಬಿ.ರವಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಕದ ಹಿಂದೆ ಮಡಿಕೇರಿ ದಸರಾ ಕಾರ್ಯಕ್ರಮಗಳ ಭಾಗವಾಗಿ ಯುವ ದಸರಾ ಸೇರ್ಪಡೆಗೊಂಡಿತು. ನಂತರದ ವರ್ಷಗಳಲ್ಲಿ ಯುವ ದಸರಾ ಯುವ ಸಮೂಹವನ್ನು ಬಹುವಾಗಿ ಆಕರ್ಷಿಸುತ್ತಿದ್ದು, ಅತ್ಯುತ್ತಮ ರೀತಿಯಲ್ಲಿ ಇದನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು. ಯುವ ದಸರಾ ಉತ್ಸವದ ದಿನವಾದ ಅ.21 ರಂದು ಬೆಳಗ್ಗೆ 7.30 ಕ್ಕೆ ಸೈಕಲ್ ಜಾಥವನ್ನು ಆಯೋಜಿಸಲಾಗಿದೆ. ಬಳಿಕ ಸೂಪರ್ ಬೈಕ್ ಮತ್ತು ಬೈಕ್ ಸ್ಟಂಟ್ನ್ನು ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ, ಯುವ ಸಮೂಹ ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೈಕ್ ಸ್ಟಂಟ್ಗಳನ್ನು ಮಾಡಕೂಡದು. ಇದರಿಂದ ಉಂಟಾಗುವ ಅನಾಹುತ ಮತ್ತು ಅಪಾಯಗಳ ಬಗ್ಗೆ ಜನರಲ್ಲಿ ಈ ಸಂದರ್ಭ ಪ್ರಾತ್ಯಕ್ಷಿಕೆಯ ಮೂಲಕ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು. ::: ಚಂದನ್ ಶೆಟ್ಟಿ…
ವಿರಾಜಪೇಟೆ ಅ.17 : ಕುಕ್ಲೂರಿನಲ್ಲಿರುವ ತಾತಂಡ ಕುಟುಂಬದ ಪೊಮ್ಮಕ್ಕಡ ಒಕ್ಕೂಟದ 6ನೇ ಮಹಾಸಭೆ ತಾತಂಡ ಕುಟುಂಬದ ಐನ್ ಮನೆಯಲ್ಲಿ ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ತಾತಂಡ ಬೇಬಿ ಮಾದಯ್ಯ ವಹಿಸಿಕೊಂಡು ಕುಟುಂಭಸ್ಥರನ್ನು ಉದ್ದೇಶಿಸಿ ಮಾತನಾಡಿದರು. ತಾತಂಡ ಪ್ರಕಾಶ್ ಹಾಗೂ ನಾಮೇರ ದಿ.ಡಾ. ಕುಟ್ಟಪ್ಪ ಅವರ ಜ್ಞಾಪಕಾರ್ಥವಾಗಿ ನೀಡಲಾದ ದತ್ತಿನಿಧಿ ಬಹುಮಾನವನ್ನು ಎಸ್.ಎಸ್.ಎಲ್.ಸಿ.ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ್ದ ತಾತಂಡ ಪೊನ್ನಣ್ಣ ಪಡೆದುಕೊಂಡರು. ನಂತರ ಕುಟುಂಬದ ಸದಸ್ಯರುಗಳಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯದರ್ಶಿ ತಾತಂಡ ಯಶು ಕಬೀರ್ ಹಾಗೂ ಖಜಾಂಚಿ ತಾತಂಡ ಕವಿ ಕಾವೇರಪ್ಪ ಹಾಜರಿದ್ದರು. ತಾತಂಡ ಜ್ಯೋತಿ ಪ್ರಕಾಶ್ ನಿರೂಪಿಸಿದರು. ದಕ್ಷ ಪ್ರಾರ್ಥಿಸಿದರು. ಮೈನಾ ನವೀನ್ ಸ್ವಾಗತಿಸಿ, ತಾತಂಡ ಶೆರ್ಲಿ ಪ್ರತಾಪ್ ವಂದಿಸಿದರು.
ಮಡಿಕೇರಿ ಅ.17 : ನಗರದ ಗಾಂಧಿ ಮೈದಾನದ ಸಮೀಪ ಸುಮಾರು 1.60 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ಗಾಂಧೀಜಿ ಸ್ಮಾರಕ ಉದ್ಯಾನವನ’ಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು. ಸರ್ವೋದಯ ಸಮಿತಿಯ ಸಹಯೋಗದಲ್ಲಿ ಜಿಲ್ಲಾಡಳಿತ, ಜಿ.ಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ಮಾರಕ ಉದ್ಯಾನವನಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಚಿವರು, ಇಡೀ ವಿಶ್ವಕ್ಕೆ ಮಾದರಿಯಾದ ಮಹಾತ್ಮಾ ಗಾಂಧೀಜಿಯವರ ಸ್ಮಾರಕ ಉದ್ಯಾನವನವನ್ನು ಒಳಗೊಂಡ ಭವನ ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕು. ಆ ಮೂಲಕ ಗಾಂಧೀಜಿಯವರ ತತ್ತ್ವ ಸಿದ್ಧಾಂತಗಳು ಜನರಿಗೆ ನಿರಂತರವಾಗಿ ಪ್ರೇರಣೆಯನ್ನು ನಿಡುವಂತಾಗಬೇಕು. ಉದ್ದೇಶಿತ ಕಾರ್ಯಯೋಜನೆ ಜಿಲ್ಲಾಧಿಕಾರಿಗಳ ಜವಾಬ್ದಾರಿಯಲ್ಲಿ ನಡೆಯಲಿದೆ. ಜನಪ್ರತಿನಿಧಿಗಳೆಲ್ಲ ಒಟ್ಟಾಗಿ ಒಮ್ಮತದಿಂದ ಯೋಜನೆಯನ್ನು ಕಾರ್ಯಗತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಿಳಿಸಿದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಮಾತನಾಡಿ, ದೆಹಲಿಯ ‘ರಾಜ್ ಘಾಟ್’ ಮಾದರಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ಮಾರಕ ಉದ್ಯಾನವನ ನಿರ್ಮಾಣವಾಗಬೇಕಾಗಿದೆ. ಈ ಹಿಂದೆ ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸುಮಾರು 1.60…






