ಸುಂಟಿಕೊಪ್ಪ ಸೆ.20 : ಐಗೂರು ಗ್ರಾ.ಪಂ ವ್ಯಾಪ್ತಿಯ ಕಾಜೂರು ಶ್ರೀ ಅಯ್ಯಪ್ಪ ದೇವಾಲಯ ಸಮಿತಿ ವತಿಯಿಂದ ಗಣೇಶ ಚತುರ್ಥಿ ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆ ಗೌರಿ-ಗಣೇಶನನ್ನು ಪ್ರತಿಷ್ಠಾಪಿಸಿ, ನಂತರ ಗಣಪತಿ ಹೋಮದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸಂಜೆ ಶ್ರೀಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಚೋರನ ಹೊಳೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಈ ಸಂದರ್ಭ ಶ್ರೀ ಅಯ್ಯಪ್ಪ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಎನ್.ಯೋಗೇಶ, ಗ್ರಾ.ಪಂ ಸದಸ್ಯ ಎಸ್.ಎನ್.ಯತೀಶ್ ರೈ, ಅಭಿಲಾಷ್, ಅಯ್ಯಪ್ಪ ಮೊದಲಾದವರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಸೆ.20 : ಗೋಳಿಕಟ್ಟೆ ಹೊಸ ಬಡಾವಣೆಯ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಗಣ ಹೋಮದೊಂದಿಗೆ ಆರಂಭಗೊಂಡು, ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಂತರ ವಿಶೇಷ ಪೂಜೆ ಜರುಗಿತು. ಬಳಿಕ ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ನಂತರ ಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕೊಂಡೊಯ್ದು ಗಬ್ಬಲಡ್ಕ ಬಾಣೆಯ ಹೊಳೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಹಾಜರಿದ್ದರು.
ಮಡಿಕೇರಿ ಸೆ.20 : ಕುಶಾಲನಗರದ ನಿವೃತ್ತ ನೌಕರರ ಸಂಘದ ವತಿಯಿಂದ ಪೆರಿಯಾರ್ ರಾಮಸ್ವಾಮಿ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಶಾಲನಗರದ ಮಹಾಲಕ್ಷ್ಮಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಪೆರಿಯಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಎಐಟಿಯುಸಿ ಕಾರ್ಮಿಕ ಸಂಘದ ಅಧ್ಯಕ್ಷ ಹೆಚ್.ಎಂ.ಸೋಮಪ್ಪ, ಪೆರಿಯಾರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ, ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಬಿ.ಸಿ.ರಾಜು, ಕಾರ್ಯದರ್ಶಿ ನಾಗರಾಜು, ಸಹಾ ಕಾರ್ಯದರ್ಶಿ ವಿ.ಟಿ.ರಾಮಯ್ಯ, ಪ್ರಮುಖರಾದ ಕದುಲಮ್ಮ, ಪಾರ್ವತಮ್ಮ, ಬೇಲಯ್ಯ, ಕೃಷ್ಣಪ್ಪ, ಮಲ್ಲಪ್ಪ, ಜಯಪ್ಪ, ಮುಂತಾದವರು ಹಾಜರಿದ್ದರು.
ಮಡಿಕೇರಿ ಸೆ.20 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 20ನೇ ವಾರ್ಷಿಕೋತ್ಸವವು ಸೆ.24 ರಿಂದ 26ರ ವರೆಗೆ ನಡೆಯಲಿದೆ. ಸೆ.24 ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸೆ.25 ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು, ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ. ಸೆ.26 ರಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಅನ್ನದಾನ ನೆರವೇರಲಿದ್ದು,…
ಮಡಿಕೇರಿ ಸೆ.20 : ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು. ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ.…
ನಾಪೋಕ್ಲು ಸೆ.20 : ಶೌರ್ಯ ತಂಡದ ಸದಸ್ಯರಿಂದ ನಾಪೋಕ್ಲುವಿನ ರಾಮಮಂದಿರದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ನಾಪೋಕ್ಲು ರಾಮ ಮಂದಿರದ ಸುತ್ತಮುತ್ತಲಿದ್ದ ಕಸ, ಕಡ್ಡಿಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು. ದೇವಾಲಯದ ಅರ್ಚಕ ರವಿ ಉಡುಪ ಅವರ ಮಾರ್ಗದರ್ಶನದಂತೆ ಸಂಯೋಜಕಿ ದಿವ್ಯ, ಗೀತಾ, ಉಮಾಲಕ್ಷ್ಮಿ, ಶ್ಯಾಮಲಾ, ದಿಲೀಶ್, ಶಂಕರ್, ರವಿ, ವಸಂತ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.20 : ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನಿರ ಸ್ನೇಕ್ ಗಗನ್ ರಕ್ಷಿಸಿದ್ದಾರೆ. ಬಿ.ಶೆಟ್ಟಿಗೇರಿಯ ಕರ್ತಮಾಡ ಕುಸುಮ ಎಂಬವರ ಮನೆ ಹತ್ತಿರ ಇದ್ದ 12 ಅಡಿ ಉದ್ದದ ಬಾರಿ ಗಾತ್ರದ ಕಾಳಿಂಗ ಸರ್ಪ ಕಂಡು ಉರಗತಜ್ಞ ಪೊನ್ನಿರ ಸ್ನೇಕ್ ಗಗನ್ ಅವರಿಗೆ ಮಾಹಿತಿ ನೀಡಿದ್ದು, ಪೊನ್ನಿರ ಸ್ನೇಕ್ ಗಗನ್ ಹಾವನ್ನು ರಕ್ಷಿಸಿ ಪೆರುಂಬಾಡಿ ಅರಣ್ಯಕ್ಕೆ ಬಿಟ್ಟರು. ಪೊನ್ನೀರ ಸ್ನೇಕ್ ಗಗನ್ ಈಗಾಗಲೇ 70 ಕಾಲಿಂಗ ಸರ್ಪ ಸೇರಿದಂತೆ ವಿವಿಧ ಜಾತಿಯ ಹಾವುಗಳನ್ನು ಸೆರೆಹಿಡಿದಿದ್ದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳು ಕಂಡರೆ ಕೊಲ್ಲದೆ ಉರಗ ತಜ್ಞರಿಗೆ ಮಾಹಿತಿಯನ್ನು ನೀಡಿ ಸುರಕ್ಷಿತವಾಗಿ ಅರಣ್ಯ ಬಿಡುವಂತೆ ಕರೆ ನೀಡಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.20 : ಜನರಿಗೆ ದೈನಂದಿನ ಜೀವನದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಮಡಿಕೇರಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರಯುಕ್ತ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಸಂಪತ್ತು ಅಥವಾ ಹಣ ಇದ್ದ ಮಾತ್ರಕ್ಕೆ ಅದು ಮುಂದುವರಿದ ದೇಶ ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ತಾಯಿಯ ಆರೋಗ್ಯ ಮತ್ತು ಮಕ್ಕಳ ಆರೋಗ್ಯ ಬಹಳ ಮುಖ್ಯವಾಗಿದೆ. ಅಭಿವೃದ್ಧಿಯನ್ನು ಆರೋಗ್ಯದ ದೃಷ್ಟಿಯಿಂದ ಅಳೆಯಲಾಗುವುದು ಎಂದರು. ಮುಂದಿನ ಡಿಸೆಂಬರ್ ವರೆಗೆ ಪ್ರತಿ ಮಂಗಳವಾರ ಆರೋಗ್ಯ ತಪಾಸಣೆ ನಡೆಯಲಿದ್ದು, ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಪೂವಯ್ಯ ಮಾತನಾಡಿ, ಸರ್ಕಾರ ನೀಡುವ ಸೌಲಭ್ಯಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗಬೇಕಿದೆ. ಬಿಪಿಎಲ್ ಕಾರ್ಡು ಆಯುಷ್ಮಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ರೋಗಿಗಳು ಸರಿಯಾಗಿ ನೀಡಿದರೆ ಮಾತ್ರ ಸರ್ಕಾರದ ಸೌಲಭ್ಯಗಳು…
ನಾಪೋಕ್ಲು ಸೆ.20 : ನಾಪೋಕ್ಲುವಿನ ವಿವಿಧೆಡೆ ವಿವಿಧ ಸೇವಾ ಸಮಿತಿ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. 5 ಸೇವಾ ಸಮಿತಿಗಳ ವತಿಯಿಂದ ಸಂತೆ ಮೈದಾನದಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಇರಿಸಿ ವಾದ್ಯ ಮೇಳಗಳೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿಸಿ ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪಿಸಲಾಯಿತು. ಈಡು ಕಾಯಿ ಹೊಡೆಯುವುದರ ಮೂಲಕ ಸಂತೆ ಮೈದಾನದಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಗಣೇಶೋತ್ಸವ ಸಮಿತಿಯ ಪ್ರಮುಖರಾದ ಕಲಿಯಂಡ ವಿಠಲ ಅವರು ದೇಶ ಹಾಗೂ ಧರ್ಮ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ನಿಸ್ವಾರ್ಥ ಸೇವೆಯಿಂದ ಶ್ರಮಿಸುವಂತಾಗಬೇಕೆಂದು ಕರೆ ನೀಡಿದರು. ನಾಪೋಕ್ಲು ನಲ್ಲಿ ಸುಮಾರು 50 ವರ್ಷಗಳಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಇದೀಗ ಎಲ್ಲರಿಗೂ ಅನುಕೂಲವಾಗುವಂತೆ ವಿವಿಧ 5 ಕಡೆಗಳಲ್ಲಿ ಗೌರಿ ಗಣೇಶ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆಗೊಲಾಗುತ್ತಿದೆ. ಶನಿವಾರದಂದು ಎಲ್ಲಾ ಗಣೇಶೋತ್ಸವ ಸಮಿತಿಗಳಿಂದ ಪ್ರತಿಷ್ಠಾಪನೆಗೊಂಡ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೆರವಣಿಗೆಯೊಂದಿಗೆ ಸಾಗಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು ಎಂದರು. ಈ ಸಂದರ್ಭ…
ವಿರಾಜಪೇಟೆ ಸೆ.20 : ವಿರಾಜಪೇಟೆ ಪಟ್ಟಣದ ಮೀನುಪೇಟೆಯ ಶ್ರೀ ವಿಶ್ವ ವಿನಾಯಕ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಗಣಪತಿ, ಗೌರಿ ಮೂರ್ತಿಗಳ ಪ್ರತಿಷ್ಠಾಪನೆ, ಗಣಪತಿ ಹೋಮ, ವಿಶೇಷ ಪೂಜೆಯನ್ನು ನಡೆಸಲಾಯಿತು. ಅರ್ಚಕರಾದ ವೇಣುಗೋಪಾಲ್ ಭಟ್ ಮಹಾಪೂಜೆಯನ್ನು ನೆರವೇರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಶ್ವ ವಿನಾಯಕ ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.






