ಲೇಖಕ: admin

ವಿರಾಜಪೇಟೆ ಸೆ.20 : ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ, ಇವರ ಸಹಯೋಗದಲ್ಲಿ ವಿರಾಜಪೇಟೆಯ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡುವ ವಿನೂತನ ಕಾರ್ಯಕ್ರಮವಾದ ಸಸ್ಯ ಶ್ಯಾಮಲಾ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ.ಪ್ರಕಾಶ್ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಪ್ರಕಾಶ್ ಅವರು ಈ ಕಾರ್ಯಕ್ರಮದ ವಿಶೇಷತೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ವನಜಾಕ್ಷಿ, ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಸಿಆರ್‍ಪಿ ವಿ.ಟಿ.ವೆಂಕಟೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಹಾಗೂ ಜಿಲ್ಲಾ ಸಂಘದ ಅಧ್ಯಕ್ಷ ಪ್ರವೀಣ್, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ.ಅನ್ನಮ್ಮ, ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಮತ್ತು ಶಾಲಾ…

Read More

ಮಡಿಕೇರಿ ಸೆ.20 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 9 ಮತ್ತು 11 ತರಗತಿಗಳಿಗೆ (ಖಾಲಿ ಇರುವ ಸೀಟಿಗೆ ಅನ್ವಯಿಸಿ) ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯು 2024 ರ ಫೆಬ್ರವರಿ, 10 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‍ಲೋಡ್ ಮಾಡಬಹುದು. ಹೆಚ್ಚಿನ ವಿವರವನ್ನು https://navodaya.gov.in ನಲ್ಲಿ ಪಡೆಯಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.  

Read More

ಮಡಿಕೇರಿ ಸೆ.20 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ 50” “ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ. ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ 25 ಸಾವಿರ ಬಹುಮಾನವನ್ನು ನಿಗದಿಪಡಿಸಲಾಗಿದೆ. ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್, 20 ರಿಂದ 30 ರವರೆಗೆ ಅವಕಾಶವಿದೆ. ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ https://www.kannadasiri.karnataka.gov.in ದಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಸೆ.20 : ಆಧುನೀಕತೆಗೆ ಅನುಗುಣವಾಗಿ ಹಣಕಾಸಿನ ವ್ಯವಹಾರಗಳಲ್ಲಿನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. 2022-23ನೇ ಸಾಲಿನಲ್ಲಿ 11.04 ಕೋಟಿ ರೂ. ಲಾಭವನ್ನು ಹೊಂದಿಕೊಂಡಿರುವುದಾಗಿ ಬ್ಯಾಂಕ್ ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ 15 ಶಾಖೆಗಳ ವ್ಯಾಪ್ತಿಗಳಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಎಟಿಎಂ ಸೌಲಭ್ಯವನ್ನು ಕಲ್ಪಿಸಲಾಗಿದೆಯಲ್ಲದೆ, ಎಟಿಎಂ ಇಲ್ಲದೆ ಇರುವ 6 ಶಾಖಾ ವ್ಯಾಪ್ತಿಯಲ್ಲಿ ಮೈಕ್ರೋ ಎಟಿಎಂ ವ್ಯವಸ್ಥೆ ಕಲ್ಪಿಸಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಳ್ಳಿ ಹಳ್ಳಿಗಳಿಗೆ ಮತ್ತು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಇತರ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಸರಿ ಸಮಾನವಾಗಿ ಗ್ರಾಹಕರ ಉತ್ತಮ ಸೇವೆ ಒದಗಿಸಲು ಬ್ಯಾಂಕ್ ಶ್ರಮಿಸುತ್ತಿದೆಯೆಂದು ಸ್ಪಷ್ಟಪಡಿಸಿದರು. ಮನೆ ಸಾಲದ ಗರಿಷ್ಠ ಮಿತಿ 75 ಲಕ್ಷಕ್ಕೆ ಹೆಚ್ಚಳ- ಮನೆ ಸಾಲದ ಗರಿಷ್ಠ ಮಿತಿ ಈ ಹಿಂದೆ 20 ಲಕ್ಷ ರೂ.ಗಳಿತ್ತಾದರೆ, ಆರ್‍ಬಿಐ ನಿರ್ದೇಶನದಂತೆ ಗರಿಷ್ಠ 75…

Read More

ಕಡಂಗ ಸೆ.20 :  ಅರಪಟ್ಟು ಗ್ರಾಮದ ಶ್ರೀ ಬಲಮರಿ ಮಹಾಗಣಪತಿ ಸೇವಾ ಸಮಿತಿಯಿಂದ 32ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಗಣಪತಿ ಹೋಮದೊಂದಿಗೆ ಪೂಜೆ ಆರಂಭಗೊಂಡು  ಶ್ರೀ ಗಣಪತಿಯ ವಿಸರ್ಜನಾ ಮೂರ್ತಿಯ ಪ್ರತಿಷ್ಠಾಪನೆ ವಿಘ್ನೇಶ್ವರನ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು . ವಿಘ್ನೇಶ್ವರ ವಿಸರ್ಜನಾ ಮೂರ್ತಿಯನ್ನು ಕೂಡಿರ ಪ್ರಸನ್ನ ತಮ್ಮಯ್ಯ ಮತ್ತು  ಕುಟುಂಬಸ್ಥರು ನೀಡಿದರು. ಪೂಜಾ ಕಾರ್ಯಕ್ರಮಕ್ಕೆ ಅರ್ಚಕರಾದ ಕೀರ್ತಿಶ್ ನೇತೃತ್ವವಿವಹಿಸಿದರು. ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲಚಂಡ ಸಭಾ ಕರುಂಬಯ್ಯ, ಕಾರ್ಯದರ್ಶಿ ಅನ್ನಂಬೀರ ಗಿರಿ ಮತ್ತು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ :  ನೌಫಲ್ ಕಡಂಗ 

Read More

ಮಡಿಕೇರಿ, ಸೆ.20  :  “ಕರ್ನಾಟಕ “ವು ಸುವರ್ಣ ಸಂಭ್ರಮ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಸೆ.28ರಂದು  ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ “ಸಿರಿ ಸಂಭ್ರಮ” ಎಂಬ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಆಸಕ್ತ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಕವಿಗಳು ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್( 9980988123), ಕುಡೇಕಲ್ ಸಂತೋಷ್(9972538584) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

Read More

ವಿರಾಜಪೇಟೆ ಸೆ.19 : ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ಗಣಪತಿ ಗುಡಿಯಲ್ಲಿ 41 ನೇ ವರ್ಷದ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಗಣಹೋಮ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿವಿಧ ಪೂಜಾ ಕೈಂಕರ್ಯಗಳು ನಡೆದವು. ದೇವಸ್ಥಾನದ ಅರ್ಚಕರುಗಳಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ರವರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಸಮೀಪದಲ್ಲಿಯೇ ಇರುವ ಸಭಾ ಭವನದ ನೂತನ ವಧು ವರರ ಕೊಠಡಿಯನ್ನು ದೇವಸ್ಥಾನದ ಉಪಾಧ್ಯಕ್ಷರಾದ ನಂದ ಬಿ. ಜಿ. ರವರು ಉದ್ಘಾಟಿಸಿದರು. ಗಣೇಶೋತ್ಸವದ ಪ್ರಯುಕ್ತ ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ -ರಾಧಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮಕ್ಕಳು ರಾಧಕೃಷ್ಣರಾಗಿ ಮಿಂಚಿದರು. ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ದೇವಸ್ಥಾನವನ್ನು ಹೂವು ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಹೆಚ್ಚಿನ ಸಂಖ್ಯೆಯ ಭಕ್ತರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.19 : ಕೊಡಗು ಜಿಲ್ಲೆಯಾದ್ಯಂತ ವಿಘ್ನ ನಿವಾರಕ ಶ್ರೀ ಗಣಪತಿಯ ಮೂರ್ತಿಗಳ ಪ್ರತಿಷ್ಠಾಪನೆಯೊಂದಿಗೆ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಕೇಂದ್ರ ಮಡಿಕೇರಿಯ ಐತಿಹಾಸಿಕ ಹಿನ್ನೆಲೆಯ ಶ್ರೀ ಕೋಟೆ ಗಣಪತಿ ದೇಗುಲದಲ್ಲಿ ಮಂಗಳವಾರ ಬೆಳಗ್ಗಿನಿಂದಲೆ ವಿಶೇಷ ಪೂಜೆ, ಹೋಮ ಹವನಾದಿ ಧಾರ್ಮಿಕ ಕಾರ್ಯಗಳು ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ಸರದಿಯ ಸಾಲಿನಲ್ಲಿ ನಿಂತು ಭಕ್ತಾದಿಗಳು ದೇವರ ದರ್ಶನ ಪಡೆದರಲ್ಲದೆ, ಈಡುಗಾಯಿ ಸೇವೆ ಸಲ್ಲಿಸುತ್ತಿದ್ದ ದೃಶ್ಯಗಳು ಕಂಡು ಬಂದಿತು. ನಗರ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಸುಮಾರು 37 ಕಡೆಗಳಲ್ಲಿ ವಿವಿಧ ಉತ್ಸವ ಸಮಿತಿಗಳಿಂದ ಗಣಪತಿಯ ಪ್ರತಿಷ್ಟಾಪನೆ, ವಿಶೇಷ ಪೂಜೆ, ಮಧ್ಯಾಹ್ನ ಅನ್ನದಾನ ಕಾರ್ಯಕ್ರಮಗಳು ನಡೆದವು. ಕೆಲ ಸಮಿತಿಗಳು ಸಂಜೆಯ ವೇಳೆ ಗಣಪತಿಯ ಉತ್ಸವ ಮೂರ್ತಿಯನ್ನು ನಗರದಲ್ಲಿ ಮೆರವಣಿಗೆ ನಡೆಸುವ ಮೂಲಕ ಗೌರಿ ಕೆರೆಯಲ್ಲಿ ವಿಸರ್ಜಿಸಿದರು. ವಿರಾಜಪೇಟೆಯಲ್ಲಿ ಗೌರಮ್ಮನ ನಗರ ಪ್ರದಕ್ಷಿಣೆ ಸೇವೆ- ವಿರಾಜಪೇಟೆಯ ಜೈನರ ಬೀದಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಸೋಮವಾರ ಪ್ರದೇಶ ಗೌರಮ್ಮನ ಪಲ್ಲಕ್ಕಿಯ ನಗರ ಪ್ರದಕ್ಷಿಣೆ ಸೇವೆ…

Read More

ಮಡಿಕೇರಿ ಸೆ.19 : ನಾಡಿನಲ್ಲಿ ಗಣೇಶೋತ್ಸವದ ಸಡಗರ ಮನೆ ಮಾಡಿದೆ. ವಿಘ್ನ ನಿವಾರಕ ವಿನಾಯಕನ ಸ್ಮರಣೆ ಕೊಡಗಿನಲ್ಲೂ ಜೋರಾಗಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ. ಪುಟಾಣಿ ನಗರದ ಉದ್ಭವ ವಿನಾಯಕ ಸೇವಾ ಸಮಿತಿಯ ಸದಸ್ಯರು ಶಿವ ಪಾರ್ವತಿಯರ ಕೈಯಲ್ಲಿ ಮೂಡಿದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ನೇರವೇರಿಸಿದ್ದಾರೆ. ಐದು ದಿನಗಳ ಕಾಲ ಸ್ಥಳೀಯ ನಿವಾಸಿಗಳಿಂದ ಗಣಪತಿ ಮೂರ್ತಿಗೆ ಸಂಕಲ್ಪ ಪೂಜೆಗಳು ನಡೆಯಲಿದೆ. ಕೆಲವು ವರ್ಷಗಳ‌ ಹಿಂದೆ ಕೇವಲ ಬೆರಳೆಣಿಕೆಯಷ್ಟು ಸದಸ್ಯರನ್ನು ಹೊಂದಿದ್ದ ಸೇವಾ ಸಮಿತಿ ಗಣೇಶೋತ್ಸವವನ್ನು ಆಚರಿಸಲು ಶ್ರಮ ವಹಿಸುತ್ತಿತ್ತು. ಇಂದು ಸದಸ್ಯರ ಸಂಖ್ಯೆ ಹೆಚ್ಚಾಗಿದ್ದು, ಸ್ವಂತ ಕಟ್ಟಡವನ್ನು ಕೂಡ ಹೊಂದಿ ಇಲ್ಲೇ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನುವ ಬೇಧಭಾವವಿಲ್ಲದೆ ಇಲ್ಲಿರುವ ಎಲ್ಲರೂ ಗಣೇಶನ ಅರಾಧಾನೆಯಲ್ಲಿ ತೋಡಗಿಸಿಕೊಂಡಿದ್ದಾರೆ. ವಿವಿಧತೆಯಲ್ಲಿ ಏಕತೆ ಎನ್ನುವ ಸಂದೇಶವನ್ನು ಸಾರುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟಿನಲ್ಲಿ ಉದ್ಭವ ವಿನಾಯಕ ಸೇವಾ ಸಮಿತಿಯ ಸದಸ್ಯರು…

Read More

ಮಡಿಕೇರಿ ಸೆ.19 : ನಗರದ ವಿಜಯನಗರದಲ್ಲಿರುವ ಶ್ರೀ ವಿಜಯ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ ಪ್ರಯುಕ್ತ ವಿಶೇಷ ಪೂಜಾದಿ ಸೇವೆಗಳು ನೆರವೇರಿದವು. ಉತ್ಸವದ ಅಂಗವಾಗಿ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಸಾಮೂಹಿಕ ಗಣಹೋಮ ನಡೆದು ಮಧ್ಯಾಹ್ನ ಪೂರ್ಣಾಹುತಿಯೊಂದಿಗೆ ಮಹಾ ಮಂಗಳಾರತಿ ನೆರವೇರಿತು. ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿತರಣೆ ಮಾಡಲಾಯಿತು. ದೇವಾಲಾಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯ ನೇತೃತ್ವದಲ್ಲಿ ಹೋಮ, ಪೂಜಾದಿ ಸೇವೆಗಳು ನಡೆದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

Read More