ಲೇಖಕ: admin

ಮಡಿಕೇರಿ ಏ.11 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಗೃಹಲಕ್ಷ್ಮಿ ಯೋಜನೆಯಡಿ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಜನವರಿ ತಿಂಗಳವರೆಗೆ ಫಲಾನುಭವಿಗಳಿಗೆ ಹಣ ಜಮೆಯಾಗಿದ್ದು ಶೇ.95 ರಷ್ಟು ಸಾಧನೆಯಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗೃಹಜ್ಯೊತಿ ಯೋಜನೆಯಡಿ ಪೊನ್ನಂಪೇಟೆ ತಾಲ್ಲೂಕಿಗೆ 4 ಕೋಟಿ ಅನುದಾನದ ನಿರೀಕ್ಷೆಯಿದ್ದು ಕ್ರೀಯಾ ಯೋಜನೆಯಲ್ಲಿ ಸೇರ್ಪಡಿಸಿದ ಕಾಮಗಾರಿಗಳನ್ನು ಅನುದಾನ ಬಿಡುಗಡೆಯಾದ ನಂತರ ಕಾಮಗಾರಿ ಪ್ರಾರಂಭಿಸಲು ಸಭೆಯಲ್ಲಿ ತಿಳಿಸಲಾಯಿತು. ತಾಲ್ಲೂಕಿನಲ್ಲಿ ಲೈನ್‍ಮ್ಯಾನ್‍ಗಳ ಕೊರತೆಯಿದ್ದು, ಕೂಡಲೇ ಲೈನ್‍ಮ್ಯಾನ್ ನೇಮಕಾತಿ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ಕೋರಲಾಯಿತು. ಯುವನಿಧಿ ಯೋಜನೆಯಲ್ಲಿ ತಾಲ್ಲೂಕಿನಲ್ಲಿ 1728 ವಿದ್ಯಾರ್ಥಿಗಳು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿರುವ ಕುರಿತು ಸಭೆಗೆ ಮಾಹಿತಿ ನೀಡಿದರು. ಈಗಾಗಲೇ ಉದ್ಯೋಗ ಪಡೆದುಕೊಂಡಿರುವ ಫಲಾನುವಿಗಳಿಗೂ ಹಣ ಜಮೆಯಾಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ತಾಲ್ಲೂಕು ಗ್ಯಾರಂಟಿ ಯೊಜನಾ ಸಮಿತಿ…

Read More

ಮಡಿಕೇರಿ ಏ.11 NEWS DESK : ಕೊಡಗು ಜಿಲ್ಲೆಯಲ್ಲಿ ಅಂತರ್ಜಲವನ್ನು ಸಂರಕ್ಷಿಸುವಲ್ಲಿ ಕೆರೆ ಹಾಗೂ ಜಲಮೂಲವನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತರ್ಜಲ ಅಭಿವೃದ್ಧಿ, ಸಂರಕ್ಷಣೆ ಮತ್ತಿತರ ಕುರಿತು ಸುದೀರ್ಘ ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಅಂತರ್ಜಲ ನಿರ್ದೇಶನಾಲಯ ಅಥವಾ ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿವೆಯೇ ಎಂಬ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದರು. ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ಎಸ್.ಸುಧಾ ಅವರು ಮಾತನಾಡಿ, ಗಾಳಿಬೀಡು, ಮಕ್ಕಂದೂರು, ಯವಕಪಾಡಿ, ಎಮ್ಮೆಮಾಡು, ಮೊಣ್ಣಂಗೇರಿ, ಕೂಡಿಗೆ, ಕುಮಾರಳ್ಳಿ, ಪೊನ್ನಂಪೇಟೆ ನಿರಾಕ್ಷೇಪಣಾ ಅರ್ಜಿಗಳನ್ನು ಪಡೆದುಕೊಂಡಿದ್ದು, ಹೊಸದಾಗಿ ಆನ್‍ಲೈನ್ ಮೂಲಕ ಮೂರು ಅರ್ಜಿಗಳು ಸ್ವೀಕೃತಿಗೊಂಡಿದೆ ಎಂದು ಮಾಹಿತಿ ನೀಡಿದರು. ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸದೆ ಹಾಗೆಯೇ ಜಿಲ್ಲೆಯಲ್ಲಿ ಕೊಳವೆಬಾವಿ ಕೊರೆಯುತ್ತಿರುವ ರಿಗ್ ಯಂತ್ರಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು…

Read More

ಮಡಿಕೇರಿ NEWS DESK ಏ.11 : ಮಹಿಳಾ ಸಬಲೀಕರಣದ ಉದ್ದೇಶ ನೈಜವಾಗಿದ್ದರೆ ಲೋಕಸಭೆ ಕ್ಷೇತ್ರ ಹೆಚ್ಚಳ ಮಾಡದೇ ಈಗ ಇರುವ ಚೌಕಟ್ಟಿನೊಳಗೆ ಮಹಿಳಾ ಮೀಸಲಾತಿ ನೀಡಬೇಕು ಮತ್ತು ಕೊಡಗಿನ ವಿಧಾನಸಭಾ ಕ್ಷೇತ್ರಗಳನ್ನು 5ಕ್ಕೆ ಏರಿಕೆ ಮಾಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಷು ಮೀಸಲು ಕಲ್ಪಿಸುವ ಉದ್ದೇಶ ಒಳ್ಳೆಯದು. ಆದರೆ ಮಹಿಳಾ ಮೀಸಲು ವಿಧೇಯಕ ಕೇವಲ ಸುಧಾರಣೆಯಲ್ಲ, ಆಡಳಿತ ವ್ಯವಸ್ಥೆಯ ಪುನರ್ ರಚನೆಯ ದಾರಿಯಾಗಬೇಕು. 2023ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಸಂಸತ್ ನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಪಡೆಯಿತು. ಈಗ ಇರುವ 543 ಕ್ಷೇತ್ರವನ್ನು ಶೇಕಡಾ 50ರಷ್ಟು ಹೆಚ್ಚು ಮಾಡಿ 816ಕ್ಕೆ ಏರಿಸಿ ಅದರಲ್ಲಿ ಶೇ.33 ಮಹಿಳಾ ಮೀಸಲಾತಿ ನೀಡಲು ಕಾನೂನು ತಿದ್ದುಪಡಿ ತರುತ್ತಿರುವ ಕೇಂದ್ರ ಸರಕಾರದ ನಡೆ ಗೊಂದಲಕ್ಕೆ ಕಾರಣವಾಗಿದೆ ಎಂದು ಟೀಕಿಸಿದ್ದಾರೆ. 1971ರ ಅಥವಾ 2027ರ…

Read More

ಮಡಿಕೇರಿ NEWS DESK ಏ.11 : ಕಾಂತೂರು-ಮೂರ್ನಾಡು ಶ್ರೀ ಪನ್ನಂಗಾಲ ತಾಯಿಯ ವಾರ್ಷಿಕೋತ್ಸವವು ಏ.16 ಮತ್ತು 17 ರಂದು ನಡೆಯಲಿದೆ. ಏ.16 ರಂದು ಬೆಳಿಗ್ಗೆ ದೇವರ ಶುದ್ಧ ಕಳಸ ಪೂಜೆ, ಕೆರೆಮನೆಯಿಂದ ಭಂಡಾರ ತರುವುದು, ಎತ್ತೇರಾಟ, ದೇವರ ದರ್ಶನ ಹಾಗೂ ಸಂಜೆ 7 ಗಂಟೆಗೆ ಕುರುಂದ ಭಾರಣಿ ಜರುಗಲಿದೆ. ಏ.17 ರಂದು ಬೆಳಿಗ್ಗೆ ದೇವರ ದರ್ಶನ, ಮಧ್ಯಾಹ್ನ ಅನ್ನಸಂತರ್ಪಣೆ, ಚಾಮುಂಡಿ ಉತ್ಸವ, ದೇವರಿಗೆ ಹರಕೆ ಒಪ್ಪಿಸುವುದು ಹಾಗೂ ಕುರುಂದಾಟ ದೇವರ ಜಳಕ ನಡೆಯಲಿದೆ. ಎರಡು ದಿನ ಶ್ರದ್ಧಾಭಕ್ತಿಯಿಂದ ಜರುಗುವ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮಡಿಕೇರಿ ಏ.10 NEWS DESK : ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಿದೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ನ ಪುತ್ತೂರು. ಹಾಸನ ಮತ್ತು ಸುಳ್ಯ ಶಾಖೆಗಳಲ್ಲಿ ಮಾತ್ರ “ವರುಷದ ಹರುಷ” ಶಾಪಿಂಗ್ ಹಬ್ಬವಿರುತ್ತದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು. ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ. ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ…

Read More

ಮಡಿಕೇರಿ ಏ.10 NEWS DESK : ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು. ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ.ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000 ಕ್ಕೆ ಏರಿದ್ದು,…

Read More

ಮಡಿಕೇರಿ ಏ.10 NEWS DESK : ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಿಖರ ಹಾಗೂ ನಿರ್ದಿಷ್ಟವಾಗಿ ಭೂ ಮಾಪನ (ಸರ್ವೆ) ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ಜಿಲ್ಲಾಡಳಿತ ಸಹಕಾರದಲ್ಲಿ ರಾಷ್ಟ್ರೀಯ ಭೂ ಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 37ನೇ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಿಂದೆ ಸರಪಳಿ ಮೂಲಕ ಭೂ ಸಮೀಕ್ಷೆ ಅಥವಾ ಸರ್ವೆ ಮಾಡಲಾಗುತ್ತಿದ್ದು, ಈಗ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಅವುಗಳನ್ನು ಬಳಸಿಕೊಂಡು ತ್ವರಿತವಾಗಿ ಭೂಮಾಪನ ಸರ್ವೆ ಕಾರ್ಯ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಪೋಡಿ ಸರ್ವೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಆದ್ದರಿಂದ ಆದ್ಯತೆ ಮೇಲೆ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಇಂದಿನ ತಂತ್ರಜ್ಞಾನ ಹಾಗೂ ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಕಾಲ…

Read More

ಮಡಿಕೇರಿ ಏ.10 NEWS DESK : ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಮೀಕ್ಷೆಯು ಈಗಾಗಲೇ ಆರಂಭವಾಗಿದ್ದು, ಮೇ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯ ಯೋಜನೆ ಅನುಷ್ಠಾನ ಕುರಿತು ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಸ್ತಪ್ರತಿಗಳು ಇತಿಹಾಸ, ಸಾಹಿತ್ಯ, ಸಂಸ್ಕøತಿ, ಮತ್ತು ಜ್ಞಾನದ ಮೂಲ ಆಕಾರವಾಗಿದ್ದು, ಹಸ್ತಪ್ರತಿಗಳು ಪೂರ್ವಜರ ಬೌದ್ಧಿಕ ಸಂಪತ್ತನ್ನು ದಾಖಲಿಸುತ್ತವೆ. ಆದ್ದರಿಂದ ತಾಳೆಗರಿ, ಕಾಗದ ಅಥವಾ ಇತರೆ ವಸ್ತುಗಳ ಮೇಲೆ ಕೈಯಲ್ಲಿ ಬರೆದ ದಾಖಲೆಗಳನ್ನು ಜತನ ಮಾಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರಾಚ್ಯವಸ್ತು ಮತ್ತು ಪ್ರವಾಸೋದ್ಯಮ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಗೆ ಐತಿಹಾಸಿಕ ಇತಿಹಾಸವಿದ್ದು, ಇಲ್ಲಿನ ಪುರಾತನ ಹಾಗೂ ಪ್ರಾಚೀನ ಕಾಲದ ಹಸ್ತಪ್ರತಿಗಳನ್ನು ಸಂಗ್ರಹಿಸಿ ಡಿಜಿಟಲೀಕರಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು. ಹಸ್ತಪ್ರತಿಗಳು…

Read More

ಮಡಿಕೇರಿ ಏ.10 NEWS DESK : ಕೊಡಗು ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 20 ರಂದು ನಡೆಯಲಿರುವ ಬಸವ ಜಯಂತಿಯ ಆರ್ಥಪೂರ್ಣ  ಆಚರಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಐಶ್ವರ್ಯ ಕರೆ ನೀಡಿದ್ದಾರೆ. ತಮ್ಮ ಕಛೇರಿಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ  ಕಾಯಕ ಯೋಗಿ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಬಸವ ಅನುಯಾಯಿಗಳೊಂದಿಗೆ ಚರ್ಚಿಸಿ ಅರ್ಥಪೂರ್ಣ ಆಚರಣೆಗೆ ಮುಂದಾಗಬೇಕು.  ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ  ಸಹಭಾಗಿತ್ವದೊಂದಿಗೆ  ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಡಾ‌.ಐಶ್ವರ್ಯ ಕರೆ ಕೊಟ್ಟರು. ಈ ಸಂದರ್ಭ ಮಾತನಾಡಿದ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್  ಕೊಡಗು  ವೀರಶೈವ ಮಹಾಸಭಾ ಪದಾಧಿಕಾರಿಗಳ ಸಹಕಾರದೊಂದಿಗೆ ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ. ಮಡಿಕೇರಿ ಅರಮನೆ  ಆವರಣದಿಂದ ಅಂದು ಬೆಳಗ್ಗೆ  10 ಗಂಟೆಗೆ ಬಸವೇಶ್ವರರ ಭಾವಚಿತ್ರವನ್ನು ಅಲಂಕೃತ ಬೆಳ್ಳಿ ರಥದಲ್ಲಿ ವಿವಿಧ ಕಲಾತಂಡಗಳೊಂದಿಗೆ ಗಾಂಧಿ ಭವನದವರೆಗೂ ಮೆರವಣಿಗೆ ನಡೆಸುವ ಬಗ್ಗೆ ವಿವರಣೆ…

Read More

ಮಡಿಕೇರಿ ಏ.10 NEWS DESK : ಜಿಲ್ಲಾ ಕವಾಯತು ಮೈದಾನದಲ್ಲಿ ಜಿಲ್ಲಾ ಕವಾಯತು ನಡೆಸಲಾಯಿತು. ಕವಾಯತಿನ ನಂತರ ಜಿಲ್ಲಾ ಪೊಲೀಸ್ ಘಟಕದ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಿಬ್ಬಂದಿಗಳನ್ನು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ನಂತರ ಸಿಬ್ಬಂದಿಗಳ ಕುಂದುಕೊರತೆಗಳ ಬಗ್ಗೆ ವಿಚಾರಿಸಲಾಯಿತು.

Read More