ಲೇಖಕ: admin

ಮೈಸೂರು ನ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ವಾಣಿಜ್ಯ ಖಾತೆ ಸಚಿವರಾದ ಪಿಯೂಷ್‌ ಗೋಯಲ್‌ ಅವರಿಗೆ ಪತ್ರ ಬರೆದಿರುವ ಸಂಸದರು, ತಂಬಾಕು ಖರೀದಿಗೆ ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಈಗಿರುವ ಮಾಹಿತಿ ಪ್ರಕಾರ ಸುಮಾರು 10 ಸಾವಿರ ಕಾರ್ಡ್‌ದಾರ ಬೆಳೆಗಾರರು ಸುಮಾರು 10 ಮಿಲಿಯನ್‌ ಕೆಜಿ ತಂಬಾಕು ಬೆಳೆ ಬೆಳೆದಿದ್ದಾರೆ. ಆದರೆ ಇದನ್ನು ಅನಧಿಕೃತ ಎಂದು ಘೋಷಣೆ ಮಾಡಿರುವುದರಿದ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಆರ್ಥಿಕವಾಗಿ ತೀರಾ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರನ್ನು ಪಾರು ಮಾಡಲು ಈ ಕೂಡಲೇ ತಂಬಾಕು ಬೆಳೆಯ ಖರೀದಿಗೆ ಅವಕಾಶ ಮಾಡಿಕೊಡಬೇಕೆಂದು ವಾಣಿಜ್ಯ ಸಚಿವರಿಗೆ ಯದುವೀರ್‌ ಒಡೆಯರ್‌ ಮನವಿ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಲೆಕ್ಕಾಚಾರ ಗಮನಿಸಿದಾಗ, ನೋಂದಾಯಿತ ಹಾಗೂ…

Read More

ಮಡಿಕೇರಿ ನ.26 NEWS DESK : ಗ್ರಾಮಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲು ಕುಂದಚೇರಿ (ಚೆಟ್ಟಿಮಾನಿ) ಗ್ರಾ.ಪಂ ನಿರ್ಧಾರ ಕೈಗೊಂಡಿದೆ. ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ 2025-26ನೇ ಸಾಲಿನ ಗ್ರಾಮಸಭೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಮೀನುಗಾರಿಕೆ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಶು ವೈದ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದರು. ಗ್ರಾಮ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಗೈರು ಹಾಜರಾದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು. ಈ ಹಿನ್ನಲೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿ.ಪಂ ಮುಖ್ಯಕಾರ್ಯನಿರ್ವಣಾಧಿಕಾರಿಗಳಿಗೆ ಪತ್ರ…

Read More

ಮಡಿಕೇರಿ ನ.26 NEWS DESK : ಕೊಡಗಿನ ಪವಿತ್ರ ಕಾವೇರಿ ನದಿಯ ಸ್ವಚ್ಛತೆ, ಪಾವಿತ್ರ್ಯತೆ ಕಾಪಾಡಿ ಸಂರಕ್ಷಿಸುವ ಮತ್ತು ನದಿಯ ಪ್ರವಾಹ ನಿರ್ವಹಣೆ ಹಾಗೂ ನದಿ ತೀರದ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಸಮಿತಿಯ ಪ್ರಮುಖರು ಮಾತನಾಡಿ, ಕಾವೇರಿ ನದಿಯ ಸಂರಕ್ಷಣೆ ಮತ್ತು ಅದರ ಪ್ರವಾಹ ನಿರ್ವಹಣೆ ನಮ್ಮೆಲ್ಲರ ಹೊಣೆಯಾಗಿದೆ. ಕಾವೇರಿಯು ಕರ್ನಾಟಕ ರಾಜ್ಯದ ಜೀವನದಿಯಾಗಿದ್ದು, ಅನ್ನದಾತ ರೈತರ ಪಾಲಿಗೆ ವರದಾನವಾಗಲಿದೆ. ಇದು ನಮ್ಮ ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ಮಹತ್ವದ ಕೊಡಗುಗೆ ನೀಡುತ್ತದೆ ಎಂದರು. ಕಾವೇರಿ ನದಿಯ ಮೂಲ ಪ್ರದೇಶಗಳು, ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ಅರಣ್ಯವನ್ನು ಮತ್ತು ಜಲಮೂಲಗಳನ್ನು ರಕ್ಷಿಸಲು ಬಹುಮುಖ್ಯವಾಗಿದೆ. ಕಾವೇರಿ ನದಿಯ ಹಾನಿಯು ನದಿ ದಡದ ಸಮೃದಧ ಪರಿಸರ, ಜನರ ಜೀವನ ಹಾಗೂ ಕೃಷಿಗೆ ಮಾರಕವಾಗಲು ಅಪಾಯ ಎದುರಾಗುತ್ತಿದೆ. ಈ…

Read More

ಮೈಸೂರು, ನ.26 NEWS DESK : ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಫಿಟ್‌ ಯುವ ಫಾರ್‌ ವಿಕಸಿತ್‌ ಭಾರತದ ಯೋಜನೆಯಡಿ ಮೈಸೂರಿನಲ್ಲಿ ಈ ಬಾರಿ ವಿಶೇಷ ಕ್ರೀಡೆಯನ್ನು ಆಯೋಜಿಸಲಾಗಿದೆ. ಅತ್ಯಂತ ಪ್ರಾಚೀನ ಹಾಗೂ ಹಳ್ಳಿ ಸೊಗಡಿನ ಮತ್ತು ದೈಹಿಕ ಸಾಮರ್ಥ್ಯದ ಜೊತೆಗೆ ಚಾಣಾಕ್ಷತನವನ್ನೂ ಕೋರುವ “ಹಗ್ಗ-ಜಗ್ಗಾಟ” ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ನವೆಂಬರ್‌ 30ರ ಭಾನುವಾರದಂದು ಬೆಳಗ್ಗೆ 8 ಗಂಟೆಗೆ ಮೈಸೂರಿನ ವಿಶ್ವವಿದ್ಯಾಲಯದ ಓವಲ್‌ ಗ್ರೌಂಡ್‌ನಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌” ನೇತೃತ್ವದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಮೈಸೂರಿನಲ್ಲಿ ನಡೆಯಲಿರುವ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಪುರುಷ-ಮಹಿಳೆಯರ ತಂಡಗಳು ಭಾಗವಹಿಸಬಹುದಾಗಿದೆ. ಪ್ರತಿ ತಂಡದಲ್ಲಿ ಕನಿಷ್ಠ 8 ಮಂದಿ ಇರಬೇಕಾಗಿದೆ. ಪುರುಷರಿಗೆ 560 ಕೆಜಿಗಿಂತ ಕಡಿಮೆ, 640 ಕೆಜಿಗಿಂತ ಕಡಿಮೆ ಹಾಗೂ 720 ಕೆಜಿಗಿಂತ ಕಡಿಮೆ ತೂಕದ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ 500 ಕೆಜಿಗಿಂತ ಕಡಿಮೆ ಹಾಗೂ 540 ಕೆಜಿ ಕಡಿಮೆ ತೂಕದ ವಿಭಾಗದಲ್ಲಿ…

Read More

ಕಣಿವೆ ನ.26 NEWS DESK : ಕೊಡಗು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿಯಲ್ಲಿ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳೆಯರ ವಿಭಾಗದ ವಿದ್ಯಾರ್ಥಿನಿಯರ ತಂಡ ಪ್ರಥಮ ಬಹುಮಾನ ಪಡೆದುಕೊಂಡು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪಂದ್ಯದ ಉತ್ತಮ ದಾಳಿಗಾರ್ತಿಯಾಗಿ ದಿವ್ಯಾ ಧರ್ಮೇಗೌಡ ಗಮನ ಸೆಳೆದರು. ಪಂದ್ಯದ ಪುರುಷರ ವಿಭಾಗಲ್ಲೂ ದ್ವಿತೀಯ ಬಹುಮಾನ ಗಳಿಸಿದ್ದು, ವಿದ್ಯಾರ್ಥಿ ಹರ್ಷ ಉತ್ತಮ ದಾಳಿಕಾರನಾಗಿ ಗಮನ ಸೆಳೆದಿದ್ದಾನೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಪುಟ್ಟರಾಜು ಪ್ರಶಂಶಿಸಿದ್ದಾರೆ. ತಂಡದ ತರಬೇತುದಾರರಾಗಿ ಡಾ.ಪಿ.ಪಿ. ಜಯಂತಿ ಕಾರ್ಯನಿರ್ವಹಿಸಿದ್ದರು.

Read More

ಮಡಿಕೇರಿ ನ.26 NEWS DESK : ನಗರದ  ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ  “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ನ.26 NEWS DESK  : ಅಪಘಾತದಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು  ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂತಾಪ ಸೂಚಿಸಿದ್ದಾರೆ.  ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಸುದ್ದಿ ತಿಳಿದು ಅತ್ಯಂತ ದುಃಖವನ್ನುಂಟುಮಾಡಿದೆ. ರಾಜ್ಯದ ಆಡಳಿತ ವ್ಯವಸ್ಥೆಯ ಹಲವು ಜಿಲ್ಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ, ಜನಮಾನಸದಲ್ಲಿ ಉತ್ತಮ ವ್ಯಕ್ತಿಯಾಗಿದ್ದ ಇವರ ಅಗಲಿಕೆಯು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬದವರಿಗೆ ಹಾಗೂ ಅವರ ಬಂಧು-ಬಳಗಕ್ಕೆ ಕರುಣಿಸಲಿ ಎಂದು  ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

Read More

ವಿರಾಜಪೇಟೆ ನ.26 NEWS DESK : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ  ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ಮೂರ್ನಾಡು ವಲಯದ  ವತಿಯಿಂದ ವಿಶೇಷ ಪೂಜೆ ಸಲ್ಲಿಸಿಲಾಯಿತು. ಶ್ರೀ ಕೊಡಂಬೂರು ಭದ್ರಕಾಳಿ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಹಾಗೂ ಅಲಂಕಾರ ಪೂಜೆಯನ್ನು ನಡೆಸಲಾಯಿತು. ಅಲ್ಲದೆ ಪಾಲೆಮಾಡು ಗ್ರಾಮದ ಐದು ಜನ ವೃದ್ಧರಿಗೆ ಒಂದು ತಿಂಗಳಿಗೆ ಆಗುವ ದಿನ ಉಪಯೋಗಿ ವಸ್ತುಗಳನ್ನು ವಿತರಿಸಲಾಯಿತು. ನಂತರ ಬಲಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಪೆನ್ನು ಗಳನ್ನು ವಿತರಿಸಲಾಯಿತು. ಈ ಸಂದರ್ಭ ಜನಜಾಗೃತಿ ವೇದಿಕೆ ಸದಸ್ಯರಾದ ವಿ. ಎಂ. ಸುಬ್ರಮಣ್ಯ ಮಾತನಾಡಿ,  ತಾವು ಕೂಡ ಈ ಶಾಲೆಯ ಹಿಂದಿನ ವಿದ್ಯಾರ್ಥಿಯಾಗಿದ್ದು, ಸರಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಉತ್ತಮವಾಗಿ ತಮ್ಮ ಶೈಕ್ಷಣಿಕ ಜೀವನ ನಡೆಸಲಿ. ಪೂಜ್ಯರ ಕನಸಿನಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಸ್ಥಾನವನ್ನು ಏರಲಿ ಎಂದು ಶುಭ ಹಾರೈಸಿದರು. ವಲಯದ ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ, ಸಮಾಜ ಸೇವಕಿಯಾದ ಸರೋಜಾ,…

Read More

ಮಡಿಕೇರಿ ನ.26 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಕಬ್ಸ್, ಬುಲ್ ಬುಲ್ಸ್,, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗೆ ಮಡಿಕೇರಿ ನಗರದ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೆ ವಿಜೇತಗೊಂಡವರ ವಿವರ  :: ಸೈಟ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಮೂಡಬಿದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕ್ರೆಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಡಶಾಲೆ ಕಾರ್ಕಳ ದ್ವಿತೀಯ ಹಾಗೂ ಹಾಗೂ ಮಾದರಿ ಆಂಗ್ಲ ಪ್ರೌಡ ಶಾಲೆ ಚಿಕ್ಕಮಂಗಳೂರು ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. ಕಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮೂಡಬಿದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಮಾದವ ಕೃಪ ಶಾಲೆ ಮಣಿಪಾಲ್ ಉಡುಪಿ ಜಿಲ್ಲೆ ದ್ವಿತೀಯ, ರೋಟರಿ ಶಾಲೆ ಹಾರ್‍ಬಲ್ಲಿ ಹಾಸನ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.…

Read More

ನಾಪೋಕ್ಲು ನ.26 NEWS DESK : ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ವಾಲಿಬಾಲ್ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಟೌನ್ ಟೈಗರ್ ತಂಡ ಪ್ರಶಸ್ತಿಯನ್ನು ಮಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಗೇಮ್ 07 ತಂಡ ಪಡೆದುಕೊಂಡಿತು. ವಿಜೇತ ಟೌನ್ ಟೈಗರ್ ತಂಡಕ್ಕೆ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು, ದ್ವಿತೀಯ ಸ್ಥಾನ ಪಡೆದ ಗೇಮ್ 07 ತಂಡಕ್ಕೆ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ಕ್ರೀಡಾಕೂಟದ ವೀಕ್ಷಕ ವಿವರಣೆಯನ್ನು ಸರ್ಫೂದ್ದೀನ್ ಹಾಗೂ ತೀರ್ಪುಗಾರರಾಗಿ ಮಹಮ್ಮದ್ ಅಲಿ ಚಿಕ್ಕಮಂಗಳೂರು ನೆರವೇರಿಸಿದರು. ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಜೈನುಲ್ ಆಬಿದ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಲಕಾರ್ಯಕ್ರಮದಲ್ಲಿ ಗಣ್ಯರು ನಗದು ಹಾಗೂ ಟ್ರೋಫಿಯನ್ನು ವಿತರಿಸಿ ಶುಭ ಹಾರೈಸಿದರು. ಇದಕ್ಕೂ ಮೊದಲು ಗಣ್ಯರು ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡು ಬಳಿಕ ಚೆಂಡನ್ನು ಸರ್ವಿಸ್ ಮಾಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು. ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹಂಸ ಕೊಟ್ಟಮುಡಿ, ವಿಎಸ್‍ಎಸ್‍ಎನ್ ನಿರ್ದೇಶಕ ಅರೆಯಡ ರತ್ನ…

Read More