ಲೇಖಕ: admin

ಮಡಿಕೇರಿ ಸೆ.19 : ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ‘ಜನತಾ ದರ್ಶನ’ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು ಅವರು ಸೂಚನೆ ನೀಡಿರುತ್ತಾರೆ. ಅದರಂತೆ, ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್, 25 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾಡಳಿತವು ‘ಜನತಾ ದರ್ಶನ’ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಸೆಪ್ಟೆಂಬರ್ 21 ಮತ್ತು 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಸಾರ್ವಜನಿಕರು ಅವರ ಲಿಖಿತ ಅಹವಾಲುಗಳನ್ನು ಅಗತ್ಯ ದಾಖಲೆಗಳ ಸಹಿತ ಜಿಲ್ಲಾಡಳಿತ ಭವನದ ನೆಲಮಹಡಿಯಲ್ಲಿರುವ ‘ಸ್ಪಂದನ ಕೇಂದ್ರ’ದಲ್ಲಿ ತೆರೆದಿರುವ ‘ಜನತಾ ದರ್ಶನ’…

Read More

ಮಡಿಕೇರಿ ಸೆ.19 :  ಶ್ರೀ ಕಾವೇರಿ ತುಲಾ ಸಂಕ್ರಮಣದ ಪವಿತ್ರ ಕಾವೇರಿ ತೀರ್ಥೋದ್ಭವ ಪ್ರಸಕ್ತ ಸಾಲಿನ ಅ.18 ರ ಬೆಳಗ್ಗಿನ ಜಾವ 1.27 ಗಂಟೆಗೆ (ಅ.17ರ ಮಧ್ಯರಾತ್ರಿ ಕಳೆದು) ಸಲ್ಲುವ ಕರ್ಕಾಟಕ ಲಗ್ನದಲ್ಲಿ ಘಟಿಸಲಿದೆ. ಕಾವೇರಿಯ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಪೂರ್ವಭಾವಿಯಾಗಿ ಸೆ.27 ರಂದು ಬೆಳಿಗ್ಗೆ 9.29 ಗಂಟೆಗೆ ತುಲಾ ಲಗ್ನದಲ್ಲಿ ಭಾಗಮಂಡಲದಲ್ಲಿ “ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು” ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಲಿದೆ. ಅ.5 ರಂದು ಬೆಳಿಗ್ಗೆ 8.31 ನಿಮಿಷಕ್ಕೆ ತುಲಾ ಲಗ್ನದಲ್ಲಿ “ಆಜ್ಞಾ ಮೂಹೂರ್ತ”, ಅ.15 ರಂದು ಬೆಳಿಗ್ಗೆ 11.45 ನಿಮಿಷಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಸಂಜೆ 4.5ಕ್ಕೆ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು ಕಾರ್ಯಕ್ರಮಗಳು ನಡೆಯಲಿದೆ.

Read More

ಮಡಿಕೇರಿ ಸೆ.19 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಭಾಗವಾಗಿರುವ ‘ಬಹುಭಾಷಾ ಕವಿಗೋಷ್ಠಿ’ಯನ್ನು ಅಕ್ಟೋಬರ್ 18 ರ ಬುಧವಾರದಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಇದರಲ್ಲಿ ಕವನಗಳನ್ನು ವಾಚನ ಮಾಡಲು ಆಸಕ್ತರಾಗಿರುವ ಕವಿ/ ಕವಿಯಿತ್ರಿಯರಿಂದ ಸ್ವರಚಿತ ಕವನ ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಿಯಿತ್ರಿಯರು ಯಾವುದೇ ಒಂದು ಭಾಷೆಯ ಒಂದು ಕವನವನ್ನು ಅಕ್ಟೋಬರ್ 3 ರ ಒಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಈ ಬಾರಿಯ ಕವಿಗೋಷ್ಠಿಯಲ್ಲಿ ವರ್ಷಂಪ್ರತಿಯಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ಉರ್ದು, ತಮಿಳು, ಮಲೆಯಾಳಂ, ತೆಲುಗು, ಮರಾಠಿ, ಸಂಸ್ಕೃತ ಹೀಗೆ ಯಾವುದೇ ಭಾಷೆಯ ಕವನಗಳನ್ನು (ಹಿಂದಿ ಮತ್ತು ಇಂಗ್ಲೀಷ್ ಹೊರತುಪಡಿಸಿ) ‘ಕನ್ನಡ’ಲಿಪಿಯಲ್ಲೆ ಕಳುಹಿಸಿಕೊಡತಕ್ಕದ್ದು. ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು, ಮಕ್ಕಳ ಕವನ(6 ರಿಂದ 12 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕವನಗಳನ್ನು ಕಳುಹಿಸುವವರು ತಮ್ಮ…

Read More

ಮಡಿಕೇರಿ ಸೆ.19 : ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿಯ ಸಮಾಜ ಶಾಸ್ತ್ರ ವಿಭಾಗದ ಸಂಶೋಧಕರಾದ ಕೊಡಗು ಜಿಲ್ಲೆಯ ಬೇಂಗೂರು ಗ್ರಾಮದ ಕೆ.ಕೆ.ಮುತ್ತಮ್ಮ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಸಮಾಜ ಶಾಸ್ತ್ರದಲ್ಲಿ ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ.  ಕೊಡಗು ಜಿಲ್ಲೆಯ ಯರವ ಬುಡಕಟ್ಟು ಜನಾಂಗದ “ಬುಡಕಟ್ಟು ಮಹಿಳೆಯರ ಆರೋಗ್ಯ ಸ್ಥಿತಿ” ಕುರಿತು ಮುತ್ತಮ್ಮ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಗೋತ್ರಿಯ ಸಮಾಜ ಶಾಸ್ತ್ರ ವಿಭಾಗದ ಪ್ರೊ.ವಿನಯ್ ರಜತ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದರು.  ಮುತ್ತಮ್ಮ ಅವರು ಹೆಬ್ಬೆಟ್ಟಗೇರಿ ಗ್ರಾಮದ ದಿ.ಕೊಕ್ಕಲೇರ ಕಾಳಯ್ಯ ಹಾಗೂ ಕಾವೇರಿ ಕಾಳಯ್ಯ ಅವರ ಪುತ್ರಿ ಮತ್ತು ಬೇಂಗೂರು ಗ್ರಾಮದ ಪಟ್ಟಮಾಡ ಉದಯ್ ಮುತ್ತಣ್ಣ ಅವರ ಪತ್ನಿಯಾಗಿದ್ದಾರೆ.

Read More

ಮಡಿಕೇರಿ ಸೆ.19 : ಕೊಡವರು ತಮ್ಮ ತಾಯಿ ನೆಲದಲ್ಲೇ ಇಂದು ಅತಂತ್ರರು ಮತ್ತು ಅನಾಥರೂ ಆಗಿದ್ದು, ಕೊಡವರ ಹೆಗ್ಗುರುತು ಹಾಗೂ  ಅಸ್ತಿತ್ವದ ಬಗ್ಗೆ ಭಯ ಕಾಡುತ್ತಿದೆ. ಆದ್ದರಿಂದ ಕೊಡವರಂತಹ ಸೂಕ್ಷ್ಮ ಬುಡಕಟ್ಟು ಜನಾಂಗದ ಬಗ್ಗೆ ವಿಶೇಷ ಕಾಳಜಿ ತೋರಿ ರಕ್ಷಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ರಾಜ್ಯಾಂಗದತ್ತ ಋಣಭಾರವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ.  ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಜಿಲ್ಲೆಯಾದ್ಯಂತ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ದಿನದ ಕೊಡವ ಜಾಗೃತಿ ಸಭೆ ಸೂರ್ಲಬಿ ನಾಡ್ ಮಂದ್, ಗಡಿನಾಡು ನಾಡ್ ಮಂದ್-ಬಿಳಿಗೇರಿ-ಮಾದಾಪುರದಲ್ಲಿ ನಡೆಯಿತು. ಪಾದಯಾತ್ರೆಯ ನೇತೃತ್ವ ವಹಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು, ಸಂವಿಧಾನದ ವಿಧಿಗಳಡಿಯಲ್ಲಿ ಕೊಡವ ಸಮುದಾಯಕ್ಕೆ ರಕ್ಷಣೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಅತ್ಯಂತ ಶ್ರೇಷ್ಠ ಮತ್ತು ಸರ್ವ ಶಾಶ್ವತವೂ ಆಗಿರುವುದರಿಂದ…

Read More

ಮಡಿಕೇರಿ ಸೆ.18 : ಕೊಡಗು ಜಿಲ್ಲೆಯ ಗಡಿಗ್ರಾಮ ಕರಿಕೆಯ ಇಬ್ಬರು ಗ್ರಾಮೀಣ ಪ್ರತಿಭೆಗಳು ಚಿತ್ರರಂಗ ಪ್ರವೇಶಿಸಿದ್ದಾರೆ. ಕನ್ನಡ ಮಿಶ್ರಿತ ಮಲೆಯಾಳಂ ಚಲನಚಿತ್ರ “ನದಿಗಳಿಲ್ ಸುಂದರಿ ಯಮುನಾ” ದಲ್ಲಿ ಕರಿಕೆಯ ನಾಗರಾಜ್ ಹಾಗೂ ರಾಜೇಂದ್ರ ಅಭಿನಯಿಸಿದ್ದಾರೆ. ಅಲ್ಲದೆ ಈ ಚಿತ್ರದಲ್ಲಿ ಡಬ್ಬಿಂಗ್ ಕಾರ್ಯವನ್ನೂ ನಿಭಾಯಿಸಿದ್ದಾರೆ. ವಿಲಾಸ್ ಕುಮಾರ್ ಹಾಗೂ ಸಿಮಿ ಮುರಳಿ ನಿರ್ಮಾಪಕರಾಗಿರುವ, ವಿಜೇಶ್ ಪಾನತ್ತೂರು ಹಾಗೂ ಉಣ್ಣಿ ವೆಲ್ಲೂರ್ ನಿರ್ದೇಶನದ “ನದಿಗಳಿಲ್ ಸುಂದರಿ ಯಮುನಾ” ಸೆ.15 ರಂದು ಕೇರಳ ರಾಜ್ಯದೆಲ್ಲೆಡೆ ತೆರೆ ಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಟರುಗಳಾದ ಧ್ಯಾನ್ ಶ್ರೀನಿವಾಸನ್ ಹಾಗೂ ಅಜು ವರ್ಗಿಸ್ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರರಂಗದಲ್ಲಿ ಮತ್ತಷ್ಟು ಅವಕಾಶಗಳು ದೊರೆಯುವ ಕುರಿತು ಕರಿಕೆಯ ಕಲಾವಿದರುಗಳಾದ ನಾಗರಾಜ್ ಹಾಗೂ ರಾಜೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಸೆ.18 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಗೈಡ್ ಸಹ ಕಾರ್ಯದರ್ಶಿಯಾಗಿ ಸಾಹಿತಿ, ನಟಿ ಹಾಗೂ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಹರಿಣಿ ವಿಜಯ್ ಅವರಿಗೆ ಆದೇಶದ ಪ್ರತಿಯನ್ನು ನೀಡಿ ಅಭಿನಂದಿಸಿದರು. ಜಿಲ್ಲಾ ತರಬೇತಿ ಆಯುಕ್ತೆ ಮೈಥಲಿ ರಾವ್ ಬರ ಮಾಡಿಕೊಂಡರು. ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕರಾದ ದಮಯಂತಿ ಅವರ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ಸ್ಪರ್ಧೆ ನಡೆಯಿತು.

Read More

ನಾಪೋಕ್ಲು ಸೆ.18 : ಗೌರಿ ಗಣೇಶೋತ್ಸವಕ್ಕೆ ಜಿಲ್ಲೆ ಸಜ್ಜಾಗುತ್ತಿರುವಂತೆ ನಾಪೋಕ್ಲುವಿನಲ್ಲೂ ಉತ್ಸವದ ಸಂಭ್ರಮ ಗರಿಗೆದರಿದೆ. ನಾಪೋಕ್ಲು ಪಟ್ಟಣದ ಐದು ದೇವಾಲಯಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಸಿದ್ಧತೆಗಳಾಗುತ್ತಿವೆ. ಐದು ವಿವಿಧ ದೇವಾಲಯಗಳ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಒಂದು ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಳಿಕ ಕಾವೇರಿ ನದಿಯಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಗಳನ್ನು ವಿಸರ್ಜಿಸಲಾಗುತ್ತಿದೆ. ನಾಪೋಕ್ಲುವಿನ ಕಕ್ಕುಂದ ಕಾಡಿನ ವೆಂಕಟರಮಣ ದೇವಾಲಯದ ಗಣಪತಿ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗೌರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು. ಗೌರಿ ಗಣೇಶೋತ್ಸವದ ಅಂಗವಾಗಿ ಸೆ.19 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಬಳಿಕ ಗೌರಿ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ. ಸೆ.20 ರಿಂದ 23ರ ವರೆಗೆ ಐದು ದಿನಗಳ ಕಾಲ ದೇವಾಲಯದಲ್ಲಿ ನಿತ್ಯ ಪೂಜೆ ಮಹಾಪೂಜೆ, ಮಂಗಳಾರತಿ ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಲಿದೆ. ಸೆ.20ರಂದು ರವಿ ಓಂಕಾರ ತಂಡದಿಂದ ಸಂಗೀತ ಕಾರ್ಯಕ್ರಮ, ಸೆ.21ರಂದು ಸಮುದಾಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸೆ.22ರಂದು ಬೆಳಿಗ್ಗೆ ಹತ್ತು ಗಂಟೆಯಿಂದ ಕೆಸರು…

Read More

ಸುಂಟಿಕೊಪ್ಪ ಸೆ.18 : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸುಂಟಿಕೊಪ್ಪ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಧಾನಿಯವರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು. ನಂತರ ‘ಸ್ವಸ್ಥ’ ವಸತಿ ವಿಶೇಷ ಚೇತನರ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಪ್ರಧಾನಿ ಮಂತ್ರಿ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದ ನಂತರ ಅಭಿವೃದ್ಧಿ ಪರಪಂಚದಲ್ಲೇ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ದೇಶವಾಗಿದೆ ಎಂದು ಹೇಳಿದರು. ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಶಕ್ತಿ ಕೇಂದ್ರದ ಪ್ರಮುಖ್ ವಾಸುದೇವ್, ಜಿಲ್ಲಾ ಒಬಿಸಿ ಉಪಾಧ್ಯಕ್ಷ ಬಿ.ಕೆ.ಮೋಹನ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೌತಮ್, ಯುವಮೋರ್ಚಾ ಮಾಜಿ ಅಧ್ಯಕ್ಷ ಧನುಕಾವೇರಪ್ಪ, ಓಬಿಸಿ ಅಧ್ಯಕ್ಷ ಸಿ.ಸಿ.ಸುನಿಲ್, ಶಿವು ಹಾಗೂ ಶಾಲೆಯ ಅಧ್ಯಾಪಕ ವೃಂದದವರು ಹಾಜರಿದ್ದರು.

Read More

ಸುಂಟಿಕೊಪ್ಪ ಸೆ.18 : ಮೊಗೇರ ಸೇವಾ ಸಮಾಜದ ಸದಸ್ಯರುಗಳು ಎಷ್ಟೇ ಕಷ್ಟ ಬಂದರೂ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕಲ್ಪಿಸಿ ಕೊಡುವುದರ ಮೂಲಕ ಸಮಾಜ ಬಲಿಷ್ಠವಾಗಲು ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಮೊಗೇರ ಸಮಾಜದ ಸ್ಥಾಪಕ ಅಧ್ಯಕ್ಷ, ನಿವೃತ್ತ ಶಿಕ್ಷಕ ಟಿ.ಸದಾನಂದ ಕರೆ ನೀಡಿದರು. ಸುಂಟಿಕೊಪ್ಪದ ಗುಂಡುಗುಟ್ಟಿ ಶ್ರೀ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಮೊಗೇರ ಗ್ರಾಮ ವಿಕಾಸ ಯೋಜನೆಯ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. 20 ವರ್ಷಗಳ ಹಿಂದೆ ಕೊಡಗಿನಲ್ಲಿ ಮೊಗೇರ ಸಮಾಜ ಸ್ಥಾಪಿಸುವಾಗ ಅನೇಕ ಸವಾಲುಗಳು ಇದ್ದವು, ಆಗ ಗ್ರಾಮ ಪಂಚಾಯಿತಿ, ತಾ.ಪಂ, ಜಿ.ಪಂ ನಲ್ಲೂ ಒಬ್ಬರೇ ಒಬ್ಬರು ಸಮಾಜದ ಸದಸ್ಯರುಗಳು ಇರಲಿಲ್ಲ. ನಂತರ ಸಂಘಟನೆ ಬಲವಾದಂತೆ ಹಲವಾರು ಮಂದಿ ಗ್ರಾ.ಪಂ, ತಾ.ಪಂ., ಜಿ.ಪಂ. ಸದಸ್ಯರು ಅಧ್ಯಕ್ಷರುಗಳಾಗಿ ಗುರುತಿಸಿಕೊಳ್ಳುತ್ತಿದ್ದು, ಶಿಕ್ಷಣ ಸಹಬಾಳ್ವೆ, ಸಹಕಾರ ನೆಮ್ಮದಿ ನಮ್ಮ ಸಿದ್ದಾಂತವಾದರೂ ಸೇವಾ ಯೋಜನೆಯಿಂದ ಸಂಘದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ನಮ್ಮ ಸಮಾಜದ ಮಕ್ಕಳು ಐಎಎಸ್, ಐಪಿಎಸ್, ಇಂಜಿನೀಯರ್ ಆಗಿ…

Read More