ಮಡಿಕೇರಿ ಸೆ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕಂಡು ವಿಶೇಷ ಚೇತನ ಯುವತಿಯೊಬ್ಬಳು ಭಾವುಕರಾಗಿರುವ ಪ್ರಸಂಗ ತಿತಿಮತಿಯಲ್ಲಿ ನಡೆದಿದೆ. ತಿತಿಮತಿ ನಿವಾಸಿ ಸ್ವಾತಿ ಶಾಸಕ ಪೊನ್ನಣ್ಣ ಅವರನ್ನು ಖುದ್ದು ಭೇಟಿ ಮಾಡಬೇಕೆಂಬುದು ಬಹುದಿನದ ಬೇಡಿಕೆಯಾಗಿತ್ತು. ಅದರಂತೆ ಇಂದು ಶಾಸಕ ಪೊನ್ನಣ್ಣ ಅವರನ್ನು ಕಂಡು ಭಾವುಕರಾದರು. ಶಾಸಕರು ಅವರೊಂದಿಗೆ ಮಾತನಾಡಿ, ಸಮಸ್ಯೆಯನ್ನ ಆಲಿಸಿ, ಧೈರ್ಯ ತುಂಬಿ, ಶುಭಹಾರೈಸಿದರು.
ಲೇಖಕ: admin
ಮಡಿಕೇರಿ ಸೆ.18 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಕಡಂಗ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು. ಕಡಂಗ ಮೊಹಿಯದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿಯ ಅಹಾವಲು ಸ್ವೀಕರಿಸಿದರು. ಈ ಸಂದರ್ಭ ಮಸೀದಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಮಸೀದಿ ಅಧ್ಯಕ್ಷ ಅಬ್ದುಲ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು. ನಂತರ ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಾಲಯದ ಅಧ್ಯಕ್ಷ ನೆರಪಂಡ ಚಿತ್ರ ಬೆಳ್ಯಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು. ಕಡಂಗ ಪಟ್ಟಣದಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು. ಇದೇ ಸಂದರ್ಭ ಶಾಸಕರುಗಳನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಸೀದಿಯ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫಾ, ಉಪಾಧ್ಯಕ್ಷ ಉಸ್ಮಾನ್ ಮತ್ತು ಸದಸ್ಯರು ಹಾಜರಿದ್ದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನು ಮಸೀದಿ ವತಿಯಿಂದ ಸನ್ಮಾನಿಸಲಾಯಿತು. ಈ…
ಮಡಿಕೇರಿ ಸೆ.18 : ವಿದ್ಯಾರ್ಥಿ ಕಲಾಉತ್ಸವ 2023ರ ಪ್ರಬಂಧ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕ್ಷಮಾ ಕಾವೇರಮ್ಮ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ . ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್. ವಿನೋದ್, ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾಪೋಕ್ಲು ಸೆ.18 : ಮಡಿಕೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ವತಿಯಿಂದ ನಗರದ ಸೆಂಟ್ ಮೈಕಲ್ ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಕ್ಲಸ್ಟರ್ ಗೆ ಒಳಪಡುವ 24 ಶಾಲೆಗಳ ಸುಮಾರು 550 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಸಿದ್ದರು. 47 ವಿಧದ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ವ್ಯವಸ್ಥಾಪಕ ನವೀನ್ ವಹಿಸಿದರು. ಈ ಸಂದರ್ಭ ನಗರಸಭೆ ಸದಸ್ಯರಾದ ಬಾಳೆಯಡ ಸಬೀತಾ, ಸಂಪನ್ಮೂಲ ವ್ಯಕ್ತಿ ವೀಣಾ ರೈ, ಶಾಲಾ ಮುಖ್ಯಾಪಾಧ್ಯಾಯರು ಸೇರಿದಂತೆ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಪೋಷಕರು ಹಾಜರಿದ್ದರು. 6 ವರ್ಷಗಳಿಂದ ಪ್ರತಿಭಾಕಾರಂಜಿ ಮಾಡಲು ಸಹಕರಿಸಿದ ಮುಖ್ಯಶಿಕ್ಷಕರಾದ ಸಿಸ್ಟೆರ್ ಪ್ರತಿಮಾ ಅವರನ್ನು ಸನ್ಮಾನ ಮಾಡಲಾಯಿತು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.17 : ಸಮುದಾಯದ ಜನರ ಜೊತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉತ್ತಮ ಬಾಂಧವ್ಯದೊಂದಿಗೆ ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ನುಡಿದರು. ಸಮೀಪದ ಹಳೆ ತಾಲೂಕು ಭಗವತಿ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ರಾ.ಪಂ ಸಹಯೋಗದಲ್ಲಿ ಆಯೋಗಿಸಿದ ಪೋಷಣ್ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳು ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ಸಲಹೆ ನೀಡಿದರು. ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ ಮಾತನಾಡಿ, ನಾವು ನಮ್ಮ ಸುತ್ತಮುತ್ತಲಿನಲ್ಲಿ ತರಕಾರಿ ಗಳನ್ನು ಬೆಳೆಸಿ ಅದನ್ನು ಆಹಾರದ ಜೊತೆ ಬಳಸಿದಾಗ ಅದರ ರುಚಿ ಹಾಗೂ ಪೌಷ್ಠಿಕತೆ ವಿಶೇಷ ವಾಗಿರುತ್ತದೆ ಎಂದರು. ಆರೋಗ್ಯ ಕಾರ್ಯಕರ್ತೆ ಉಮಾ ಮಹೇಶ್ವರಿ ಪೌಷ್ಟಿಕತೆ ಜೊತೆಗೆ ಚುಚ್ಚು ಮದ್ದು ಸಹ ಸರಿಯಾದ ಸಮಯಕ್ಕೆ ತೆಗೆದುಕೊಳ್ಳಬೇಕೆಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲಾ ಅಶೋಕ್ ಮಾತೃ ವಂದನಾ ಹಾಗೂ ಪೌಷ್ಠಿಕ ಆಹಾರದ ಬಗ್ಗೆ…
ಮಡಿಕೇರಿ ಸೆ.18 : ಕೊಡಗಿನ ಗಡಿಭಾಗ ಪೆರುಂಬಾಡಿ ಚೆಕ್ ಪೋಸ್ಟ್ ವ್ಯಾಪ್ತಿಯ ಕಾಡು ಪ್ರದೇಶದಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಿರಾಜಪೇಟೆ ಸೆ.18 : ವಿರಾಜಪೇಟೆಯ ಐತಿಹಾಸಿಕ ಜೈನರ ಬೀದಿಯ ಶ್ರೀ ಬಸವೇಶ್ವರ ದೇವಾಲಯ ದ ಪ್ರದೇಶ ಗೌರಮ್ಮನ ಪಲ್ಲಕ್ಕಿ ನಗರ ಪ್ರದಕ್ಷಿಣೆ ಸೇವೆಯು ಶ್ರದ್ಧಾಭಕ್ತಿಯಿಂದ ನಡೆಯಿತು. ವಿರಾಜಪೇಟೆ ನಗರದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರ ಕೆರೆಯಲ್ಲಿ ಶ್ರೀ ಬಸವೇಶ್ವರ ದೇವಾಲಯ ಪ್ರಧಾನ ಅರ್ಚಕ ಮೋಹನ್ ಭಟ್ ಅವರು ಅರ್ಚಕ ವೃಂದದವರಿಂದ ಕೆರೆಗೆ ಬಾಗಿನ ಅರ್ಪಿಸಿದರು. ಈ ಬಾರಿ ಅಲಂಕಾರ ವಸ್ತುವಾದ ಕನ್ನಡಿ ದೊರಕಿರುವುದು ವಿಶೇಷ. ಕನ್ನಡಿಯು ಹೆಂಗಳೆಯರಿಗೆ ತನ್ನ ಸೌಂದರ್ಯ ಪ್ರಜ್ಞೆ ತೊರುವ ದರ್ಪಣವಾದರು. ಹೊಸತು ಎಂಬುದನ್ನು ಬಿಂಬಿಸಲಾಗುತ್ತದೆ ಎಂದು ಪ್ರಧಾನ ಅರ್ಚಕರು ಹೇಳಿದರು. ಪ್ರದೇಶ ಗೌರಮ್ಮನ ಪಲ್ಲಕ್ಕಿ ಸೇವೆಗೆ ಪಂಚವಾದ್ಯವು ಸಾತ್ ನೀಡಿತು. ನಗರದ ತೆಲುಗರ ಬೀದಿ ಯಿಂದ ಆರಂಭವಾದ ಪಲ್ಲಕ್ಕಿ ಉತ್ಸವವು ಸಂಜೆಯ ವೇಳೆಗೆ ನಗರದ ಎಲ್ಲಾ ಬೀದಿಗಳಲ್ಲಿ ಸಂಚರಿಸಿ ಸುಮಂಗಲಿಯರಿಂದ ವಿಶೇಷ ಪೂಜೆಗಳನ್ನು ಪಡೆದು ಶ್ರೀ ಬಸವೇಶ್ವರ ದೇವಾಲಯಕ್ಕೆ ಆಗಮಿಸಲಿದೆ. ಬಳಿಕ ಪ್ರದೇಶ ಗೌರಮ್ಮನಿಗೆ ಮಾಹಾ ಪೂಜೆ ಸಲ್ಲಿಕೆಯಾಗಲಿದೆ. ಈ ಸಂದರ್ಭ ದೇವಾಲಯದ ಪ್ರಧಾನ ಅರ್ಚಕರು, ದೇವಾಲಯದ…
ಮಡಿಕೇರಿ ಸೆ.18 : ಪಠ್ಯ ಚಟುವಟಿಕೆಗಳ ಜೊತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಮತ್ತು ಪ್ರತಿಭೆಗಳ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟರು ಅಮ್ಮತ್ತಿ ಒಂಟಿಯಂಗಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಲೋತ್ಸವ ಕಾರ್ಯಕ್ರಮವನ್ನು ದೀಪಾಕಾರದ ಪುಷ್ಪ ರಂಗೋಲಿಗೆ ಸ್ಪರ್ಶ ನೀಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮಕ್ಕಳಲ್ಲಿ ಎಲೆಮರೆ ಕಾಯಿಯಂತೆ ಅಡಗಿರುವ ಪ್ರತಿಭೆಯನ್ನು ಗುರುತಿಸಿ ತಾಲೂಕು, ಜಿಲ್ಲೆ, ರಾಜ್ಯ ಹಂತಕ್ಕೆ ಕಳುಹಿಸುವ ಇಲಾಖೆಯ ಪ್ರಯತ್ನಕ್ಕೆ ಕ್ಲಸ್ಟರ್ ಗಳು ಕೂಡ ಸಾಥ್ ನೀಡ್ತಾ ಇದ್ದಾರೆ. ತಾಲೂಕು ಮಟ್ಟದಲ್ಲಿ ತಮ್ಮ ಪ್ರತಿಭೆಗಳ ಮೂಲಕ ಗಮನ ಸೆಳೆದಿರುವ ಮಕ್ಕಳು ವಿಜೇತರಾಗಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲೂ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಛದ್ಮವೇಷ, ಆಸುಭಾಷಣ, ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಕ್ಲೆ ಮಾಡ್ಲಿಂಗ್, ಮಿಮಿಕ್ರಿ, ಭಾವಗೀತೆ, ರಂಗೋಲಿ ಸೇರಿದಂತೆ ವಿವಿಧ ಬಗೆಯ ಸ್ಪರ್ಧೆಗಳಲ್ಲಿ…
ನಾಪೋಕ್ಲು ಸೆ.18 : ಮುಸ್ಲಿಂ ವಿವಿಧ ಸಂಘಟನೆಗಳ ವತಿಯಿಂದ ಮಿಲಾದ್ ಸಂದೇಶ ರ್ಯಾಲಿ ನಾಪೋಕ್ಲು ಪಟ್ಟಣದಲ್ಲಿ ನಡೆಯಿತು. ಹಳೆ ತಾಲೂಕಿನಿಂದ ಸಂತೆ ಮೈದಾನದವರೆಗೆ ಮೆರವಣಿಗೆಯಲ್ಲಿ ಸಾಗಿದ ಮುಸ್ಲಿಂ ಬಾಂಧವರು ಶಾಂತಿಯ ಸಂದೇಶ ಸಾರಿದರು. ಈ ಸಂದರ್ಭ ಸಂತೆ ಮೈದಾನದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಎಸ್.ಎಸ್.ಎಫ್ ರಾಜ್ಯಾಧ್ಯಕ್ಷ ಹಫೀಜ್ ಸುಫ್ಯಾನ್ ಸಖಾಫಿ ಪಾಲ್ಗೊಂಡು ಮಾತನಾಡಿ, ಸಮಾಜದಲ್ಲಿ ಪರಸ್ಪರ ಗುರುತಿಸಿಕೊಂಡು ಗೌರವಯುತವಾದ ಬದುಕು ಸಾಗಿಸಬೇಕು ಎಂದರು. ಮುಸಲ್ಮಾನರು ಪವಿತ್ರ ಖುರಾನ್ ಉಓದುವುದರ ಮೂಲಕ ಜೀವನವನ್ನು ಸಾರ್ಥಕ ಪಡಿಸಬೇಕಾಗಿದೆ. ಮಸೀದಿಯಲ್ಲಿ ಜನರ ನಡುವೆ ತಾರತಮ್ಯ ಇರಬಾರದು ಪ್ರವಾದಿ ಮಹಮ್ಮದ್ ಪೈಗಂಬರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮೌಲ್ಯಯುತ ಜೀವನ ಸಾಗಿಸಬೇಕು ಎಂದರು. ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾಜಿ ಕುಂಜಿಲ ಮಾತನಾಡಿ, ಕರ್ನಾಟಕ ಮುಸ್ಲಿಂ ಜಮಾಯತ್, ಎಸ್.ಎಸ್.ಎಫ್ ಮರ್ಕಾಝ್ ಹಿದಾಯ ಕೊಟ್ಟಮುಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಿಲಾದ್ ಸಂದೇಶ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾದಿಯ ಶಾಂತಿ ಸಂದೇಶವನ್ನು ಎಲ್ಲೆಡೆ ಹರಡುವುದು ರ್ಯಾಲಿಯ…
ಮಡಿಕೇರಿ ಸೆ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭವ ಕಾರ್ಯಕ್ರಮದ ಪ್ರಯುಕ್ತ ಸೆ.19 ರಂದು ಬೆಳಗ್ಗೆ 10 ಗಂಟೆಗೆ ಸಮುದಾಯ ಆರೋಗ್ಯ ಕೇಂದ್ರ ಮಟ್ಟದಲ್ಲಿ ತಜ್ಞ ವೈದ್ಯರಿಂದ ಮಡಿಕೇರಿ ತಾಲ್ಲೂಕಿನ ನಾಪೋಕ್ಲು, ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಹಾಗೂ ಕುಶಾಲನಗರ ತಾಲ್ಲೂಕಿನ ಕುಶಾಲನಗರದಲ್ಲಿ ಆರೋಗ್ಯ ಮೇಳ ನಡೆಯಲಿದೆ. ಈ ಆರೋಗ್ಯ ಮೇಳದಲ್ಲಿ ತಜ್ಞ ವೈದ್ಯರಿಂದ ಸ್ತ್ರೀರೋಗ ಮತ್ತು ಪ್ರಸೂತಿ ಸೇವೆಗಳು, ಮಕ್ಕಳ ಸೇವೆಗಳು, ಕಣ್ಣು, ಕಿವಿ, ಮೂಗು, ಗಂಟಲು ತಪಾಸಣೆ, ಮಾನಸಿಕ ತಜ್ಞರ ಸೇವೆಗಳು ಹಾಗೂ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ನೋಂದಣಿ, ಕಫಸಂಗ್ರಹಣೆ, ಅಸಾಂಕ್ರಾಮಿಕ ರೋಗಗಳ ತಪಾಸಣೆ, ಐಸಿಟಿಸಿ ಸಮಾಲೋಚನೆ ಹಾಗೂ ಇತರೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅಲ್ಲದೇ ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು-ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಉಪ ಕೇಂದ್ರಗಳು-ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ…






