ಮಡಿಕೇರಿ ಸೆ.18 : ಕೊಡವ ರೈಡರ್ಸ್ ಕ್ಲಬ್, ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ಹಾಗೂ ಬೆಂಗಳೂರಿನ ಇಂಚರ ಇನ್ಫೋಟೆಕ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹುದಿಕೇರಿ ಭದ್ರಕಾಳಿ ದೇವಸ್ಥಾನದ ಕಾಪುಕಾಡಿನಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ವಿವಿಧ ಬಗೆಯ ಕಾಡು ಹಣ್ಣುಗಳು ಸೇರಿದಂತೆ ಹತ್ತಾರು ಜಾತಿಯ ಕಾಡು ಮರದ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ ಹಾಗೂ ತಂಡ ಸೇರಿದಂತೆ, ಬೆಂಗಳೂರಿನ ಇಂಚರ ಇನ್ಫೋಟೆಕ್ ಸಂಸ್ಥೆಯ ಕೇಟೊಳೀರ ವಿನ್ಸಿ ದೇವಯ್ಯ ತಂಡ ಹಾಗೂ ಅರಣ್ಯ ಮಹಾವಿದ್ಯಾಲಯದ ಕೊಣೇರೀರ ನಾಣಯ್ಯ ಸೇರಿದಂತೆ ಪ್ರಮುಖರಾದ ಕೇಟೊಳೀರ ಶಮ್ಮಿ, ತೀತಿರ ಅಭಿಷೇಕ್ ಮುತ್ತಣ್ಣ, ಚಕ್ಕೇರ ಅನುಪಮಾ ತಮ್ಮಯ್ಯ, ಕುಪ್ಪಣಮಾಡ ದಿಲೀಪ್, ಅಜ್ಜಿಕುಟ್ಟಿರ ದೇವಯ್ಯ ಮತ್ತಿತರರು ಪಾಲ್ಗೊಂಡಿದ್ದರು.
ಲೇಖಕ: admin
ಕುಶಾಲನಗರ, ಸೆ.18 : ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಗ್ರೋ ಗ್ರೀನ್ ಅಭಿಯಾನದಡಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಪರಿಸರ ಸ್ನೇಹಿ ಗಣೇಶೋತ್ಸವದಲ್ಲಿ ಪಿ.ಓ.ಪಿ. ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಳನ್ನು ಬಳಕೆ ಮಾಡಬೇಕು ಎಂದು ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಿ.ಆರ್.ಸತ್ಯನಾರಾಯಣ ಮಾತನಾಡಿ, ನಾವು ಮಾಲಿನ್ಯ ರಹಿತ ಹಬ್ಬದ ಆಚರಣೆಗಳಿಗೆ ಒತ್ತು ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರೂಪಾ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಜನರಲ್ಲಿ ಮಣ್ಣಿನ ಮೂರ್ತಿ ಬಳಕೆ ಕುರಿತು ಜಾಗೃತಿ ಮಾಡಿಸಬೇಕು ಎಂದರು. ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಪಿ.ಸವಿತಾ , ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ತಿಳಿಸಿದರು. ಶಿಕ್ಷಕರಾದ ಟಿ.ಬಿ.ಮಂಜುನಾಥ್, ದಿವ್ಯ, ಜಿ.ಶ್ರೀಹರ್ಷ, ಎಸ್.ಕೆ.ಶೈಲಾ, ಎಸ್ ಡಿ ಎಂ.ಸಿ.ಸದಸ್ಯರಾದ ಜಗದೀಶ್,…
ಕುಶಾಲನಗರ, ಸೆ.18: ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ “ಗ್ರೋ ಗ್ರೀನ್” ಅಭಿಯಾನದಡಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ನಡೆಯಿತು. “ನಮ್ಮ ನಡಿಗೆ ಹಸಿರೆಡೆಗೆ “ಮಣ್ಣಿನ ಗಣೇಶ ಬಳಸಿ- ಜಲಮಾಲಿನ್ಯ ತಡೆಯಿರಿ” ಕುರಿತು ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ತಾವು ಸ್ವತಃ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಪ್ರದರ್ಶಿಸಿ ಗಮನ ಸೆಳೆದರು. ಮಣ್ಣಿನ ಗಣೇಶ ಮೂರ್ತಿ ಬಳಕೆಯ ಮಹತ್ವ ಕುರಿತು ಮಾಹಿತಿ ನೀಡಿದ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಸಿ.ಎಂ.ಬಬಿತ ಮಾತನಾಡಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಳನ್ನು ಬಳಕೆ ಮಾಡಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಎಚ್.ಎಂ.ವೆಂಕಟೇಶ್ ಮಾತನಾಡಿ, ನಾವು ಮಾಲಿನ್ಯ ರಹಿತ ಹಬ್ಬದ ಆಚರಣೆ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಶಿಕ್ಷಕರಾದ ಸಿಎಸ್ ಜಾನಕಿ, ಎಚ್. ಈ.ರಮೇಶ್,…
ಮಡಿಕೇರಿ ಸೆ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟ ಸಹಕಾರದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಜರುಗಿತು. ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವರ್ಣಿತ್ ನೇಗಿ, ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಸೋಮವಾರಪೇಟೆ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಯಶವಂತ್ ಆಚಾರ್ಯ, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಸುಬ್ರಮಣ್ಯ, ಮಡಿಕೇರಿ ದಸರಾ ಸಮಿತಿ ನೂತನ ಕಾರ್ಯಧ್ಯಕ್ಷ ಪ್ರಕಾಶ್ ಆಚಾರ್ಯ, ಶಿಲ್ಪಿ, ಕಲಾಶ್ರೀ ಪ್ರಶಸ್ತಿ ವಿಜೇತರಾದ ಮಂಜುನಾಥ ಆಚಾರ್ಯ ಇತರರು ಇದ್ದರು.
ಮಡಿಕೇರಿ ಸೆ.17 : ತಿಂಗಕೊರ್ ಮೊಟ್ಟ್ ತಲಕಾವೇರಿ ಆದನೆಲ್ 33 ನೇ ತಿಂಗತ್’ರ ನಡ್’ಪು ಪಿಂಞ 3ನೇ ಕಾಲತ್’ರ ತಲಕಾವೇರಿ ಕ್ಷೇತ್ರ ಸ್ವಚ್ಛತಾ ಕಾರ್ಬಾರ್ ಇಂದ್ ನಡ್ ದತ್.
ಮಡಿಕೇರಿ ಸೆ.17 : ರಾಷ್ಟ್ರೀಯ ನಾಯಕರಾದ ಲಾಲ್ ಬಹುದೂರ್ ಶಾಸ್ತ್ರಿ ಅವರ ಅಮೃತಕಾಲದಲ್ಲಿ ಅವರ ಜೀವನ ಶೈಲಿ ಮತ್ತು ಪರಂಪರೆ ಎಂಬ ವಿಷಯದ ಕುರಿತು ನೆಹರು ಯುವ ಕೇಂದ್ರದ ಕಚೇರಿಯಲ್ಲಿ ವರ್ಚುವಲ್ ಮಾಧ್ಯಮದ ಮೂಲಕ ನಡೆದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶಾಬೀಭ ಪ್ರಥಮ, ಅಕ್ಷತಾಶೆಟ್ಟಿ ದ್ವಿತೀಯ ಮತ್ತು ಕಾವ್ಯ ಶ್ರೀ ತೃತೀಯ ಸ್ಥಾನ ಗಳಿಸಿದ್ದಾರೆ. ಪ್ರಥಮ ಸ್ಥಾನ ಪಡೆದ ಶಾಬೀಭ ಅವರು ರಾಜ್ಯ ಮಟ್ಟದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಮಹಾತ್ಮ ಗಾಂಧಿ ಹಾಗೂ ಲಾಲ್ ಬಹುದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಮಟ್ಟದಲ್ಲಿ ಒಟ್ಟು 25 ಸ್ಪರ್ಧಿಗಳು ಸಂಸತ್ತು ಭವನದಲ್ಲಿ ಭಾಷಣ ಮಾಡಲು ಅವಕಾಶವನ್ನು ಪಡೆಯಲಿದ್ದಾರೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ ಅವರ ನೇತೃತ್ವದಲ್ಲಿ ಸ್ಪರ್ಧೆ ನಡೆಯಿತು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ, ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ದೀಪ್ತಿ ಹಾಗೂ ರಂಜಿತಾ ಉಪಸ್ಥಿತರಿದ್ದರು.
ಮಡಿಕೇರಿ ಅ.17 : ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಅಕ್ಟೋಬರ್ 16 ರಿಂದ 24 ರವರೆಗೆ ನಗರದ ಗಾಂಧಿ ಮೈದಾವದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿತ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅಜಿ೯ ಆಹ್ವಾನಿಸಲಾಗಿದೆ. ಕಲಾವಿದರು, ಕಲಾತಂಡಗಳು ಅಜಿ೯ ನಮೂನೆಯನ್ನು madikeridasara.com ವೆಬ್ ಸೈಟ್ ನಿಂದ ಪಡೆದುಕೊಂಡು ಸೆಪ್ಟಂಬರ್ 26 ರೊಳಗಾಗಿ madikeridasara@gmail.com ಇಮೇಲ್ ಗೆ ಮೇಲ್ ಮಾಡಬೇಕು. ಅಥವಾ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಕೇರಾಫ್ ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ನಗರಸಭಾ ಸಂಕೀಣ೯. ಮಡಿಕೇರಿ – 571201 ಈ ಕಛೇರಿಗೆ ಸಲ್ಲಿಸಬೇಕಾಗಿದೆ. ನಿಗಧಿತ ದಿನಾಂಕದ ನಂತರ ಬಂದ ಅಜಿ೯ಗಳನ್ನು ಪರಿಗಣಿಸಲಾಗುವುದಿಲ್ಲ. ಅಜಿ೯ ಸಲ್ಲಿಸುವವರು ನಿಗಧಿತ ಅಜಿ೯ ನಮೂನೆಯಲ್ಲಿಯೇ ತಮ್ಮ ಮಾಹಿತಿ ನೀಡುವಂತೆ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪಕ೯ ತೆನ್ನಿರಾ ಮೈನಾ. ಸಂಚಾಲಕರು, ಸಾಂಸ್ಕೖತಿಕ ಸಮಿತಿ 9449156215, ಕುಡೆಕಲ್ ಸಂತೋಷ್ 8762110948
ಮಡಿಕೇರಿ ಸೆ.17 : ಪಶ್ಚಿಮ ಬಂಗಾಳದ ಅಸನ್ ಸೋಲ್ ನಲ್ಲಿ ನಡೆದ 32ನೇ ಆಲ್ ಇಂಡಿಯಾ ಜಿ.ವಿ ಮೌಲಾಂಕರ್ ಶೂಟಿಂಗ್ ಚಾಂಪಿಯನ್ ಶಿಪ್ ನ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ನಗರದ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿನಿ ಕಾನಡ್ಕ ಧನ್ವಿ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಈ ಹಿಂದೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಎನ್.ಆರ್ ವಿಭಾಗದಲ್ಲಿ ಭಾಗವಹಿಸಿ 16 ವರ್ಷದೊಳಗಿನ ಸಬ್ ಯೂತ್ ವಿಭಾಗದಲ್ಲಿ 4ನೇ ಸ್ಥಾನ ಮತ್ತು 19 ವರ್ಷದೊಳಗಿನ ಯೂತ್ ವಿಭಾಗದಲ್ಲಿ 5ನೇ ಸ್ಥಾನ ಗಳಿಸಿದ್ದರು. ಧನ್ವಿ ಮರಗೋಡಿನ ಕೃಷಿಕ ಕಾನಡ್ಕ ಹನೀಶ್ ಹಾಗೂ ಆಶಾ ದಂಪತಿಯ ಪುತ್ರಿ.
ಮಡಿಕೇರಿ ಸೆ.17 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮೂರನೇ ದಿನದ ಪಾದಯಾತ್ರೆ ಮುತ್ತ್ನಾಡ್ ಮಂದ್ (ಕಾಲೂರು) ಮತ್ತು ಬದಿಗೇರಿ ನಾಡ್ ಮಂದ್ (ಮುಕ್ಕೋಡ್ಲು) ನಲ್ಲಿ ನಡೆಯಿತು. ಕೊಡವ ಜಾಗೃತಿ ಭಾಷಣ ಮಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಧಾನ ಬೇಡಿಕೆಗಳ ಕುರಿತು ಕೊಡವರು ಜಾಗೃತರಾಗಬೇಕು ಮತ್ತು ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಹಕ್ಕೊತ್ತಾಯಗಳ ಕುರಿತು ಸರ್ಕಾರದ ಗಮನ ಸೆಳೆಯಲು ಐದು ಹಂತಗಳಲ್ಲಿ ಪಾದಯಾತ್ರೆ ನಡೆಸುತ್ತಿದ್ದು, ಬೇಡಿಕೆ ಈಡೇರುವವರೆಗೆ ಸಿಎನ್ಸಿ ಹೋರಾಟ ಮುಂದುವರೆಯಲಿದೆ ಎಂದರು. ಸೆ.18 ರಂದು ಬೆಳಗ್ಗೆ 10 ಗಂಟೆಗೆ ಸೂರ್ಲಬ್ಬಿ ನಾಡ್ ಮಂದ್ (ಸೂರ್ಲಬ್ಬಿ), ಮಧ್ಯಾಹ್ನ 2.30 ಗಂಟೆಗೆ ಗಡಿ ನಾಡ್ ಮಂದ್ (ಬಿಳಿಗೇರಿ-ಮಾದಾಪುರ), ಸೆ.19 ರಂದು ಬೆಳಗ್ಗೆ 10 ಗಂಟೆಗೆ ಪಾಲೇರಿ ನಾಡ್ ಮಂದ್ (ಪಾಲೇರಿ) ಮತ್ತು ಸಂಜೆ 4.30 ಗಂಟೆಗೆ ಮೂಡಗೇರಿ ನಾಡ್ ಮಂದ್ (ಕೆದಕಲ್) ನಲ್ಲಿ ಮೊದಲ ಹಂತದ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.…
ಮಡಿಕೇರಿ ಸೆ.16 : ವಿದ್ಯಾರ್ಥಿನಿಯರಿಗೆ ಶೇಕಡ 0.50 ರಷ್ಟು ರಿಯಾಯಿತಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲಾಗುವುದು. ಆ ಮೂಲಕ ಅವರು ತಮ್ಮ ಉನ್ನತ ಶಿಕ್ಷಣದ ಕನಸನ್ನು ಈಡೇರಿಸಿಕೊಳ್ಳಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕ ಶೈಲೇಶ್ ಸುರೇಶ್ ನಾಯ್ಕ ಹೇಳಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ ಬ್ಯಾಂಕ್ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಬ್ಯಾಂಕಿಂಗ್ ಸಾಲ ಸೌಲಭ್ಯ, ವಿದೇಶಿ ವ್ಯಾಸಂಗಕ್ಕಾಗಿ ನಿಗದಿಪಡಿಸಿದ ಶೈಕ್ಷಣಿಕ ಸಾಲ, ಬ್ಯಾಂಕಿಂಗ್ ಸ್ಪಾಮ್, ಸೈಬರ್ ಸೆಕ್ಯುರಿಟಿಯನ್ನು ಮೀರಿ ಬೆಳೆಯುತ್ತಿರುವ ಸೈಬರ್ ಅಪರಾಧ, ಬ್ಯಾಂಕಿಂಗ ಫ್ರಾಡ್ ಗಳ ಕುರಿತು ತಿಳಿಸಿದರು. ಪ್ರತೀ ತಿಂಗಳು 50 ರೂ.ಗಳನ್ನು ಖಾತೆಗೆ ಜಮಾ ಮಾಡುತ್ತಾ ಬಂದರೆ ನಿಮ್ಮ 60 ನೇ ವರ್ಷಕ್ಕೆ ಪಿಂಚಣಿಯ ರೂಪದಲ್ಲಿ ಆ ಹಣ ಯೋಜಿತ ನೆಲೆಯಲ್ಲಿ ಕೈ ಸೇರಲಿದೆ. ಅಲ್ಲದೆ ಶೂನ್ಯ ಮೊತ್ತದಲ್ಲಿ ನೀವು ತರೆದಿರುವ ವಿದ್ಯಾರ್ಥಿ ಖಾತೆಯನ್ನು ಉದ್ಯೋಗಿಗಳಾದ ಮೇಲೆ ಸಂಬಳದ ಖಾತೆಯಾಗಿ ಪರಿವರ್ತಿಸುವ ಅವಕಾಶ…






