ಲೇಖಕ: admin

ಮಡಿಕೇರಿ ನ.21 :  ಕನ್ನಡ ರಾಜ್ಯೋತ್ಸವದ ಅಂಗವಾಗಿ  ಬಳ್ಳಾರಿಯ  ಸ್ಮಿಯಾಕ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ  “ಕರ್ನಾಟಕ ಸಾಧಕ ರತ್ನ” ರಾಜ್ಯೋತ್ಸವ ಪ್ರಶಸ್ತಿಗೆ ಆರ್.ಕೆ.ಬಾಲಚಂದ್ರ  ಆಯ್ಕೆಯಾಗಿದ್ದಾರೆ.  ಆರ್.ಕೆ.ಬಾಲಚಂದ್ರ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ , ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ಮಡ ಕಲಿಸುವಿಕೆ, ರಾಜ್ಯಾದ್ಯಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ನೀಡಿದ ತರಬೇತಿಯ ಸೇವೆ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವಿಸಲಾಗುವುದು. ನ.26 ರಂದು ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ  ಪ್ರಶಸ್ತಿ  ಪ್ರದಾನ ಮಾಡಲಾಗುವುದು.   

Read More

ನಾಪೋಕ್ಲು ನ.21 : ಕೈಕಾಡು ಗ್ರಾಮ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದ ಪಿ.ಸಿ. ಅಪ್ಪಾಜಿ(ಪೇರಿಯಂಡ-81) ನಿಧನರಾಗಿದ್ದಾರೆ. ಇವರು ಪ್ರಖ್ಯಾತ ಕೊಡವ ಆಂದೊಳತ ಪಾಟ್ ಅನ್ನು ಬರೆದ ಪೇರಿಯಂಡ ದಿವಂಗತ ಚೆಂಗಪ್ಪನವರ ಕಿರಿಯ ಪುತ್ರ. ಪ್ರಾರಂಭದಲ್ಲಿ ಪತ್ರಕರ್ತರಾಗಿ ಕೊಡಗು ದೈನಿಕ (ಕೊಡಗು ಪ್ರೆಸ್ಸ್) ದಲ್ಲಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ ಇವರು ತದನಂತರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿ ಅoತಿಮವಾಗಿ ದಿ. ಮೈಸೂರ್ ಪ್ರಿಂಟರ್ಸ್ ಲಿಮಿಟೆಡ್ ನ ಪ್ರಜಾವಾಣಿ ಪತ್ರಿಕೆಯ ಕ್ರೀಡಾ ವಿಭಾಗದಲ್ಲಿ, ವಿಶೇಷವಾಗಿ ಕುದುರೆ ಓಟದ ಬರವಣಿಗೆಗಾರರಾಗಿ ಜನಮನ್ನಣೆ ಗಳಿಸಿದ್ದರು. ಇವರ ಅಂತ್ಯಕ್ರಿಯು ನ.22 ರಂದು ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ ಸ್ವಂತ ನಿವಾಸದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ನ.21 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.26 ರಂದು ನಡೆಯುವ 33 ನೇ ಕೊಡವ ನ್ಯಾಷನಲ್ ಡೇ ಯಶಸ್ಸಿಗಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ದೇವಟ್ ಪರಂಬುವಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕೊಡವ ನರಮೇಧದ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಮುಖರು ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರನ್ನು ಸ್ಮರಿಸಿದರು. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ನಿರಂತರ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಕೊಡವ ನ್ಯಾಷನಲ್ ಡೇ ಸಂದರ್ಭ ಮತ್ತೊಮ್ಮೆ ಕೊಡವರ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಅಂದು ಭಾರತೀಯ ಸಂವಿಧಾನದ ದಿನವನ್ನು ಕೂಡ ಸಿಎನ್‍ಸಿ ವತಿಯಿಂದ ಆಚರಿಸಲಾಗುವುದು ಎಂದು ನಾಚಪ್ಪ ಹೇಳಿದರು. ಪುತ್ತರಿ ಹಬ್ಬ ಸರ್ವರಿಗೂ ಧಾನ್ಯ, ಸಂಪತ್ತು, ಪ್ರಶಾಂತತೆ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದರು. ಸಿಎನ್‍ಸಿಯ ಸದಸ್ಯರಾದ ಕಲಿಯಂಡ ಪ್ರಕಾಶ್, ಅಲ್ಮಂಡ ಜೈ, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್ ಮತ್ತಿತರರು ವಿಶೇಷ ಪ್ರಾರ್ಥನೆ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ನ.21 : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಸಿದ್ಧಗೊಳಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಘಟಕ, ಎನ್‍ಎಸ್‍ಎಸ್ ಘಟಕ ಹಾಗೂ ನಗರದ ಲಯನ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಲಯನ್ಸ್ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ…

Read More

ಕಡಂಗ ನ.21 :  ಕರ್ನಾಟಕ ಹಾಗೂ ಕೇರಳದ ನಾನಾ ಭಾಗಗಳಲ್ಲಿ ಹಲವಾರು ರೋಗಿಗಳಿಗೆ ಹಾಗೂ ಬಡ ಅನಾಥ ಕುಟುಂಬಕ್ಕೆ ಸಹಾಯಕ್ಕಾಗಿ ಜಾಲತಾಣಗಳ ಮೂಲಕ ವಿಡಿಯೋ ಮಾಡಿ ಜನ ಮನ ಗೆದ್ದ ಚಾರೀಟಿ ಕಾರ್ಯಕರ್ತ ನಾಪೋಕ್ಲು ಸಮೀಪದ ಚೆರಿಯಪರಂಬು ನಿವಾಸಿ ಜಾಬಿರ್ ನಿಝಾಮಿ (ಸೇವ್ ದಿ ಡ್ರಿಮ್ಸ್ ಟ್ರಸ್ಟ್) ಅವರನ್ನು ಕಡಂಗ  ಕೆಡಿಎಸ್ ಮುಸ್ಲಿಂ ಯೂತ್ ಚಾರೀಟಿ ವತಿಯಿಂದ ಸನ್ಮಾನಿಸಲಾಯಿತು. ಶಾದಿಮಹಲ್ ಸಭಾಂಗಣದಲ್ಲಿ  ನಡೆದ ಸರಳ ಕಾರ್ಯಕ್ರಮದಲ್ಲಿ  ಕೆಡಿಎಸ್ ಮುಸ್ಲಿಂ ಯೂತ್ ಚಾರೀಟಿ  ಪದಾಧಿಕಾರಿಗಳು ನಸ್ಮಾನಿಸಿ ಗೌರವಿಸಿದರು. ಕೆಡಿಎಸ್ ಮುಸ್ಲಿಂ ಯೂತ್ ಚಾರಿಟಿಯ ಅಧ್ಯಕ್ಷ ಸಿ.ಎ.ಜುನೈದ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವ್ ದಿ ಡ್ರಿಮ್ಸ್ ನ ನಿರ್ದೇಶಕರಾದ ಮೈಸಿ ಕತ್ತಣಿರ, ಆರಫಾತ್, ಅಹ್ಮದ್ ನಾಪೋಕ್ಲು, ಹೋದ್ದೂರು ಗ್ರಾ.ಪಂ. ಸದಸ್ಯ ಮೊಯ್ದು, ಮೊಯ್ಯದ್ದೀನ್ ಮಸೀದಿಯ ಮಾಜಿ ಅಧ್ಯಕ್ಷ ಇಬ್ರಾಹಿಂ,ಮೊಯ್ದು ಮುಸ್ಲಿಯಾರ್, ಕೆಡಿಎಸ್ ನಿರ್ದೇಶಕರಾದ ಫತಾಯಿ, ಅಬ್ದುಲ್ ರಹ್ಮನ್, ಉಸ್ಮಾನ್,ಸುಬೈರ್,ರಝಾಕ್ ಪಿ.ಇ, ಕೆಡಿಎಸ್ ಆಡಳಿತ ಮಂಡಳಿಯ ಮಮ್ಮು,ರಝಾಕ್ ಸಿ.ಎ,ಸೌಕತ್, ಶರೀಫ್, ಎ.ಎ.ರಝಿಕ್,  ಮುಜೀಬ್, ಮತಿತ್ತರರು ಇದ್ದರು.…

Read More

ಮಡಿಕೇರಿ ನ.21 : ಮುಖ್ಯಮಂತ್ರಿಗಳ ನಿಧಿ ಮತ್ತು ಪ್ರಾಕೃತಿಕ ವಿಕೋಪ ನಿಧಿಯಡಿ ಬಂದ ಅನುದಾನದಲ್ಲಿ ಹಿಂದಿನ ಶಾಸಕರುಗಳು ತಮ್ಮ ಹಿಂಬಾಲಕರಿಗಾಗಿ ಕಾಮಗಾರಿಗಳನ್ನು ಕೈಗೊಂಡಿದ್ದರು. ಆದರೆ ಇಂದಿನ ಕಾಂಗ್ರೆಸ್ ಶಾಸಕರುಗಳು ಜನರಿಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತಿರುಗೇಟು ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಶಾಸಕರುಗಳು ಕಳೆದ 20 ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಯಾವ ಉಪಕಾರ ಮಾಡಿದ್ದಾರೆ ಎನ್ನುವುದನ್ನು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಇವರುಗಳು ಮಾಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮೊದಲು ಶ್ವೇತಪತ್ರ ಹೊರಡಿಸಲಿ, ನಂತರ ನಾವು ಹೊರಡಿಸುತ್ತೇವೆ ಎಂದರು. ಕಾಂಗ್ರೆಸ್ ಶಾಸಕರುಗಳು ಬಂದು ಆರು ತಿಂಗಳುಗಳಷ್ಟೇ ಆಗಿದೆ, ಮಾಜಿ ಶಾಸಕರುಗಳು ಆತುರ ಪಡದೆ ಸ್ವಲ್ಪ ಸಹನೆಯಿಂದ ಕಾದು ನೋಡಬೇಕು. ಅಭಿವೃದ್ಧಿ ಎಂದರೆ ಏನು ಎನ್ನುವುದನ್ನು ಮುಂದಿನ ಒಂದು ವರ್ಷದಲ್ಲಿ ಇಬ್ಬರು ಶಾಸಕರು ತೋರಿಸಿಕೊಡಲಿದ್ದಾರೆ ಎಂದು ತಿಳಿಸಿದರು. ಹಿಂದಿನ ಶಾಸಕರು ಲಭ್ಯ ಅನುದಾನವನ್ನು ಜನರ ಹಿತಕ್ಕೆ ಪೂರಕವಾದ ಕಾಮಗಾರಿಗಳಿಗೆ ಬಳಸಲು…

Read More

ಮಡಿಕೇರಿ ನ.21 : ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದ್ದಾರೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಓದುವ ಹವ್ಯಾಸ ಜ್ಞಾನವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಅಧ್ಯಯನ ಮಾಡಿದರೆ ಪದವಿ ಹಂತವನ್ನು ಮುಗಿಸಿದ ತಕ್ಷಣ ಸರಕಾರಿ ಉದ್ಯೋಗವನ್ನು ಪಡೆಯಲು ಅನುಕೂಲವಾಗುತ್ತದೆ. ಮಾಹಿತಿ ಮತ್ತು ತಂತ್ರಜ್ಞಾನ ಕೈ ಬೆರಳಿನಲ್ಲಿದ್ದರೂ ಪುಸ್ತಕವನ್ನು ಕೈಯಲ್ಲಿಡಿದು ಓದುವ ಅನುಭವವೇ ಶ್ರೇಷ್ಠವಾದದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರೊ.ರಾಘವ ಕರೆ ನೀಡಿದರು. ಕಾಲೇಜ್…

Read More

ಮಡಿಕೇರಿ ನ.21 : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಸಿದ್ಧಗೊಳಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಘಟಕ, ಎನ್‍ಎಸ್‍ಎಸ್ ಘಟಕ ಹಾಗೂ ನಗರದ ಲಯನ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಲಯನ್ಸ್ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ…

Read More

ಸಿದ್ದಾಪುರ ನ.21 :  ಕೊಡಗಿನ ಕಾಫಿ ತೋಟಗಳ ಕಡಿದಾದ ರಸ್ತೆಯಲ್ಲಿ ತಮ್ಮ ಕಾರುಗಳನ್ನು ಚಲಾಯಿಸಿ ನಿಗದಿತ ಸಮಯ ಸಾಧಿಸುವ ಮೂಲಕ ದೆಹಲಿಯ ಹರಿಕೃಷ್ಣ ವಾದಿಯ- ಹಿಮಾಚಲಪ್ರದೇಶದ ಕುನಾಲ್ ಕಶ್ಯಪ್ ಜೋಡಿ ಸಮಗ್ರ ಚಾಂಪಿಯನ್‌ಶಿಪ್ ತಮ್ಮದಾಗಿಸಿಕೊಂಡಿದ್ದಾರೆ. ಬ್ಲೂ ಬ್ಯಾಂಡ್ ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್‌ಶಿಪ್ ನೇತೃತ್ವದಲ್ಲಿ ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಹಕಾರದೊಂದಿಗೆ ನಡೆದ ರೋಬಸ್ಟಾ-2023  ರ್‍ಯಾಲಿಯ ಅಂತಿಮ ದಿನದಂದು ಹೊಸಳ್ಳಿ ಹಾಗೂ ಮಾರ್ಗೊಳ್ಳಿ ಕಾಫಿ ತೋಟಗಳ ಕಡಿದಾದ ರಸ್ತೆಯಲ್ಲಿ ರೋಮಾಂಚನಕಾರಿಯಾಗಿ ತಮ್ಮ ಕಾರುಗಳನ್ನ ಚಲಾಯಿಸಿ ಸಾಧನೆಯ ಗುರಿ ಮುಟ್ಟಿದ್ದಾರೆ. ನಾಲ್ಕು ಚಕ್ರದ ವಾಹನಗಳಿಗೆ ಐದನೇ ಸುತ್ತಿನ ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್‌ಶಿಪ್ ಅತ್ಯಂತ ರೋಚಕವಾಗಿತ್ತು. ಪಾಲಿಬೆಟ್ಟ ವ್ಯಾಪ್ತಿಯಲ್ಲಿರುವ ಕಾಫಿ ತೋಟದ ದುರ್ಗಮ ಹಾದಿಯಲ್ಲಿ ಮೈನವಿರೇಳಿಸುವ ರ‍್ಯಾಲಿ ನಡೆಯಿತು. ಅರೋರ ವಿಕ್ರಂ ರಾವ್- ಸೌಮ್ಯ ಜೋಡಿ ದ್ವಿತೀಯ ಹಾಗೂ ಜಾಹನ್ ಸಿಂಗ್ ಗಿಲ್- ಸೂರಜ್ ಕೇಶವ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಐಎನ್‌ಆರ್‌ಸಿ2 ವಿಭಾಗದಲ್ಲಿ ಹರಿಕೃಷ್ಣ ವಾದಿಯ- ಕುನಾಲ್…

Read More

ಮಡಿಕೇರಿ ನ.21 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ “ಮಲ್ಲೇಂಗಡ ಬೆಳ್ಯಪ್ಪ” ಅವರ ಸ್ಮರಣಾರ್ಥ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್‍ಶಿಪ್ ಕಪ್-2023” ಪಂದ್ಯಾವಳಿಯ ವಿಜೇತರ ಪಟ್ಟಿ ಪ್ರಕಟವಾಗಿದೆ. ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ 15 ವರ್ಷದೊಳಗಿನ ಬಾಲಕರ ಸಿಂಗಲ್ಸ್ ನಲ್ಲಿ ಅವಿನೇಶ್ ಪ್ರಥಮ, ಲಿತೇಶ್ ದ್ವಿತೀಯ, 18 ವರ್ಷದೊಳಗಿನ ಬಾಲಕರ ಸಿಂಗಲ್ಸ್ ನಲ್ಲಿ ಸಹದ್ ಪ್ರಥಮ, ಹೆಚ್.ಎನ್.ಪ್ರಜ್ವಲ್ ದ್ವಿತೀಯ, 25 ವರ್ಷದೊಳಗಿನ ಬಾಲಕರ ಸಿಂಗಲ್ಸ್ ನಲ್ಲಿ ಪ್ರಜ್ವಲ್ ಪ್ರಥಮ, ವಿ.ವೈ.ಚೇತನ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. 15 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್ ನಲ್ಲಿ ಲೋಚನಾ ಪ್ರಥಮ, ಫಿದಾ ದ್ವಿತೀಯ, 18 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸಿಂಚನಾ ಪ್ರಥಮ, ಜ್ಞಾನ ದ್ವಿತೀಯ, 25 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನವ್ಯ ಪ್ರಥಮ, ದಿವ್ಯಾ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ ರಚನ್ ಪೊನ್ನಪ್ಪ ಪ್ರಥಮ, ಈಶ್ವರ್ ದ್ವಿತೀಯ, ಪುರುಷರ ಡಬಲ್ಸ್…

Read More