ಲೇಖಕ: admin

ಮಡಿಕೇರಿ ಸೆ.16 : ಭಾರತೀಯ ಸೇನೆಯಲ್ಲಿ ಸೇವೆಯಲ್ಲಿರುವಾಗಲೇ ಅನಾರೋಗ್ಯದಿಂದ ನಿಧನ ಹೊಂದಿದ ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದ ಯೋಧ ಯು.ಕೆ.ಜಿತನ್ (33) ಅವರ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ನಡೆಯಿತು. ಸಕಲ ಸೇನಾ ಗೌರವ ಮತ್ತು ಸರ್ಕಾರಿ ಗೌರವಗಳೊಂದಿಗೆ ಜಿತನ್ ಅವರಿಗೆ ನಮನ ಸಲ್ಲಿಸಲಾಯಿತು. ಸುರಿಯುವ ಮಳೆಯ ನಡುವೆಯೂ ನೂರಾರು ಸಂಖ್ಯೆಯಲ್ಲಿದ್ದ ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಉದಿಯನ ಕಾಳಪ್ಪ ಹಾಗೂ ದಮಯಂತಿ ಅವರ ಪುತ್ರ ಜಿತನ್ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾರತೀಯ ಸೇನೆಯಲ್ಲಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಿತನ್ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರಸ್ತುತ ಎಂಇಜಿ ಸೆಂಟರ್ ನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಸೆ.16 : ವಿರಾಜಪೇಟೆಯ ಕೊಳತ್ತೋಡು ಬೈಗೋಡು ಸಮೀಪ ಬೀಟೆ ಮರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ.35 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ. ವಿರಾಜಪೇಟೆಯ ಜೈನರ ಬೀದಿ ನಿವಾಸಿ ಕೆ.ಆರ್.ಪ್ರದೀಪ್ ಹಾಗೂ ಬಿಟ್ಟಂಗಾಲ ನಿವಾಸಿ ಪಿ.ಎಸ್.ಅರ್ಜುನ್ ಬಂಧಿತ ಆರೋಪಿಗಳು. ವಿರಾಜಪೇಟೆ ಅರಣ್ಯ ವಲಯ ವ್ಯಾಪ್ತಿಯ ಕೊಳತ್ತೋಡು ಬೈಗೋಡು ಗ್ರಾಮದ ಸಮೀಪ ಗೋಣಿಕೊಪ್ಪ -ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಬೀಟೆ ಮರದ 50 ನಾಟಗಳನ್ನು ತುಂಬಿಸಿ ಸಾಗಿಸುತ್ತಿದ್ದ ಇಚರ್ ವಾಹನವನ್ನು ಅರಣ್ಯ ಇಲಾಖಾ ತಂಡ ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸುವಲ್ಲಿ ಯಶಶ್ವಿಯಾಗಿದೆ. ವಿರಾಜಪೇಟೆ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶರಣಬಸಪ್ಪ ಬಿ.ಎಂ. ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೊಚ್ಚೆರ ಎ.ನೆಹರೂರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿರಾಜಪೇಟೆ ವಲಯದ ಅರಣ್ಯ ಅಧಿಕಾರಿ ಕಳ್ಳಿರ ಎಂ.ದೇವಯ್ಯ, ವಿರಾಜಪೇಟೆ ವಲಯದ ಉಪವಲಯ ಅರಣ್ಯಧಿಕಾರಿಗಳಾದ ದೇಯಂಡ ಸಂಜಿತ್ ಸೋಮಯ್ಯ, ಆನಂದ ಕೆ. ಆರ್., ಅನಿಲ್ ಸಿ. ಟಿ.,…

Read More

ಮಡಿಕೇರಿ ಸೆ.16 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಧಾನ ಹಕ್ಕೊತ್ತಾಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಆರಂಭಿಸಿರುವ ಪಾದಯಾತ್ರೆ ಎರಡನೇ ದಿನವಾದ ಇಂದು ಕುಂಯ್ಯಂಗೇರಿ ನಾಡಿನ ಚೋರಂಗೆ ಮಾನಿ ನಾಡ್ ಮಂದ್ (ಹೊದ್ದೂರು-ಬೆಟ್ಟಗೇರಿ), ಕಗ್ಗೋಡು ನಾಡ್ ಮಂದ್-ಹಾಕತ್ತೂರು ಮತ್ತು ಮಡಿಕೇರಿ ನಗರದ ಮಿಡ್ಲ್ ಗ್ರೌಂಡ್ ಮಂದ್‌ನಲ್ಲಿ ನಡೆಯಿತು. ವಿವಿಧೆಡೆ ಕೊಡವ ಜನಜಾಗೃತಿ ಭಾಷಣ ಮಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ದೇಶದ ಸಂವಿಧಾನದಡಿ ನ್ಯಾಯಯುತ ಹಕ್ಕುಗಳನ್ನು ಪಡೆಯಲು ಅತ್ಯಂತ ಸೂಕ್ಷ್ಮ ಜನಾಂಗವಾದ ಕೊಡವರು ಅರ್ಹರಾಗಿದ್ದಾರೆ. ಹಕ್ಕುಗಳ ಬಗ್ಗೆ ಕೊಡವರು ಜಾಗೃತರಾಗಬೇಕು ಎಂದು ಕರೆ ನೀಡಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಕೊಡವರು ತಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸಿಎನ್‌ಸಿಯ ಹೋರಾಟಕ್ಕೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. ಸೆ.17 ರಂದು ಬೆಳಗ್ಗೆ 9.30 ಗಂಟೆಗೆ ಮುತ್ತ್ನಾಡ್ ಮಂದ್ (ಕಾಲೂರು), ಮಧ್ಯಾಹ್ನ 12 ಗಂಟೆಗೆ ಬದಿಗೇರಿ ನಾಡ್ ಮಂದ್ (ಮುಕ್ಕೋಡ್ಲು) ಸೆ.18. ರಂದು…

Read More

ಮಡಿಕೇರಿ ಸೆ.16 : ಕೊಡಗು ಜಿಲ್ಲಾ ಮಹಾಬೋಧಿ ಪತ್ತಿನ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ರೂ.76,206 ರಷ್ಟು ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಸಿ.ಸತೀಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಘವು ಪ್ರಸ್ತುತ 1322 ಮಂದಿ ಸದಸ್ಯರುಗಳನ್ನು ಹೊಂದಿದ್ದು, ಸದಸ್ಯರಿಂದ ರೂ.11,47,300 ಲಕ್ಷ ಪಾಲು ಬಂಡವಾಳ ಸಂಗ್ರಹಿಸಲಾಗಿದೆ. ಸಂಘದ ದುಡಿಯುವ ಬಂಡವಾಳವು ರೂ. 16,79,100 ಆಗಿದ್ದು, ಸಂಘ ಪ್ರಸ್ತುತ ರೂ.4,70,040 ರಷ್ಟು ವಿವಿಧ ಠೇವಣಿಗಳನ್ನು ಹೊಂದಿರುತ್ತದೆ. ಹಾಗೂ ಸಂಘವು ಸದಸ್ಯರುಗಳಿಗೆ ಜಾಮೀನು ಸಾಲವನ್ನು ನೀಡುತ್ತಿದ್ದು, ಇದುವರೆಗೆ ರೂ.17,08,549 ಗಳಷ್ಟು ಸದಸ್ಯರಿಗೆ ಜಾಮೀನು ಸಾಲವಾಗಿ ನೀಡಲಾಗಿದೆ ಎಂದು ಹೇಳಿದ್ದಾರೆ. ಸಂಘದಲ್ಲಿರುವ ಠೇವಣಿಗಳಿಗೆ ಕನಿಷ್ಠ ಶೇ.2 ರಿಂದ ಗರಿಷ್ಠ ಶೇ.8 ರವರೆಗೆ ಆಕರ್ಷಕ ಬಡ್ಡಿ ನೀಡಲಾಗುತ್ತಿದೆ. ಹಿರಿಯ ನಾಗರೀಕರಿಗೆ 8.5 ರಷ್ಟು ಬಡ್ಡಿ ನೀಡಲಾಗುತ್ತಿದ್ದು, ಗ್ರಾಹಕರು ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಂಘದ ವ್ಯವಹಾರ ನಿಧಾನಗತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಲಾಭದಲ್ಲಿದೆ. ಸಂಘದಲ್ಲಿ ಪ್ರಸ್ತುತ ಮರಣೋತ್ತರ ಸಹಾಯಧನ ನಿಧಿ ಯೋಜನೆ ಜಾರಿಯಲ್ಲಿದೆ. ಹೊಸದಾಗಿ…

Read More

ಮಡಿಕೇರಿ ಸೆ.16 : ಸೆ.18 ರಂದು ನಡೆಯಲಿರುವ ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಮಾಲಿನ್ಯಕಾರಿ ಪಿ.ಓ.ಪಿ.ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ, ಮಣ್ಣಿನ ಗಣೇಶ ಮೂರ್ತಿ ಬಳಕೆ ಮಾಡುವ ಮೂಲಕ ಜಲಮಾಲಿನ್ಯ ತಡೆದು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ.ಎಂ.ಸತೀಶ್ ಕುಮಾರ್ ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಮಡಿಕೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ( ಎನ್‍ಎಸ್‍ಎಸ್)ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್…

Read More

ಮಡಿಕೇರಿ ಸೆ.16 : ಮೈಸೂರಿನ ಕಲಾ ಮಂದಿರದಲ್ಲಿ ಸೆ.26 ರಂದು ನಡೆಯಲಿರುವ ವಿಶ್ವ ಕಿವುಡರ ದಿನಾಚರಣೆಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ, ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 25 ಜಿಲ್ಲಾ ಕಿವುಡರ ಸಂಘದ 600ಕ್ಕೂ ಹೆಚ್ಚು ಮಂದಿ ಪ್ರಥಮ ಬಾರಿಗೆ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.16 : ವೃತ್ತಿಪರ ಶಿಕ್ಷಣ(ಪ್ರೊಪೆಸನಲ್ ಕೋರ್ಸ್) 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ(ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.KSB.GOV.IN  ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.  

Read More

ಮಡಿಕೇರಿ ಸೆ.16 : ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಸ್ವಚ್ಛ ಹಾಗೂ ಸುಂದರ ಪರಿಸರವನ್ನು ನಿರ್ಮಿಸಲು ಎಲ್ಲರೂ ಕೈ ಜೋಡಿಸುವಂತೆ ಕೊಡಗು ಜಿಲ್ಲಾ ಪಂಚಾಯತ್ ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ‘ಸ್ವಚ್ಛತಾ ಹೀ ಸೇವಾ ಆಂದೋಲನದ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾತನಾಡಿದರು. ಕೊಡಗು ಜಿಲ್ಲೆಯು ಪ್ರಾಕೃತಿಕ ಸೌಂದರ್ಯಕ್ಕೆ ಹೆಸರಾಗಿದ್ದು, ಇದರ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರವು 15 ದಿನಗಳ ಕಾಲ ದೇಶಾದ್ಯಂತ ಸ್ವಚ್ಛತೆ ಕುರಿತು ಸ್ವಚ್ಛತೆಯೇ ಸೇವೆ ಎಂಬ ಹೆಸರಿನಲ್ಲಿ ಸ್ವಚ್ಛತಾ ಆಂದೋಲನ ಜರುಗುತ್ತಿದೆ ಎಂದು ತಿಳಿಸಿದರು. ಇದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲೆ, ಕಾಲೇಜು, ಅಂಗನವಾಡಿ ಸರ್ಕಾರಿ ಕಚೇರಿಗಳಲ್ಲಿ ಶ್ರಮದಾನ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿದೆ. ಅಕ್ರಮವಾಗಿ ತ್ಯಾಜ ಸುರಿವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು.…

Read More

ಮಡಿಕೇರಿ ಸೆ.16 : ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ವತಿಯಿಂದ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಶ್ರೀಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಶ್ರೀ ಹೊನ್ನಮ್ಮ ತಾಯಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವು ಸೆ.18 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಬಿ.ವೀರೇಶ, ಉಪಾಧ್ಯಕ್ಷ ಡಿ.ಎಂ.ಪ್ರಸನ್ನ, ಕಾರ್ಯದರ್ಶಿ ಎಂ.ಜೆ.ಕಿರಣ್ ಕುಮಾರ್, ಸದಸ್ಯರಾದ ಎಂ.ಬಿ.ವಸಂತಕುಮಾರ, ಕೆ.ಕೆ.ರವಿ, ಡಿ.ಬಿ.ಮಧು, ಡಿ.ಯು.ಹರ್ಷಿತ್, ಡಿ.ಬಿ.ಶಶಿಧರ, ಡಿ.ಕೆ.ಲೋಕೇಶ್, ಡಿ.ಕೆ.ಶಾಂತಪ್ಪ, ಡಿ.ಎಚ್.ರತನ್, ಎಂ.ಎಲ್.ಆಕಾಶ್, ಡಿ.ಬಿ.ರಾಜು, ಕೆ.ಬಿ.ಪುಷ್ಪಾಧರ, ಪ್ರಧಾನ ಅರ್ಚಕರಾದ ವೀರಯ್ಯ ಹಿರೇಮಠ್, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಸೆ.16 : ಪ್ರಸಕ್ತ(2023-24) ಸಾಲಿನ ಪ್ರಥಮ ಡಿಇಎಲ್‍ಇಡಿ ಕೋರ್ಸ್ ಗೆ ಸರ್ಕಾರಿ ಕೋಟಾದಡಿ ದಾಖಲಾಗಲು ಸೆ.27 ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಸಂಬಂಧವಾಗಿ ಆಸಕ್ತಿ ಹೊಂದಿದ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು(ಸಾಮಾನ್ಯ ಅಭ್ಯರ್ಥಿಗಳು ಶೇ.50 ಹಾಗೂ ಪ.ಜಾತಿ, ಪ.ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶೇ.45 ಅಂಕ ಪಡೆದಿರಬೇಕು). ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooeducation.kar.nic.in ನಲ್ಲಿ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿಯನ್ನು ಕ್ರಮವಾಗಿ ಭರ್ತಿ ಮಾಡುವುದು. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗೆ ಸಲ್ಲಿಸುವುದು. ಅರ್ಜಿಯನ್ನು ಸೆ.27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಬ್ಯಾಂಕ್‍ನಲ್ಲಿ ಡಿ.ಡಿ. ಮೂಲಕ ಪಾವತಿಸಲು ಸೆಪ್ಟೆಂಬರ್, 27 ಕೊನೆಯ ದಿನ(ಸಾಮಾನ್ಯ ಅಭ್ಯರ್ಥಿಗೆ ಅರ್ಜಿ ಶುಲ್ಕ ರೂ.150, ದಾಖಲಾತಿ ಶುಲ್ಕ ರೂ.3065, ಒಟ್ಟು ರೂ.3,215, ಪ.ಜಾತಿ ಹಾಗೂ ಪ.ಪಂ.ರೂ.50), ಹೆಚ್ಚಿನ ಮಾಹಿತಿಗೆ ಡಯಟ್ ಕೂಡಿಗೆ ದೂ.ಸಂ.08276-278287, 9448813576, 8139956802 ನ್ನು…

Read More