ನಾಪೋಕ್ಲು ಅ.13 : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಮುರ್ನಾಡು ಪದವಿ ಕಾಲೇಜಿನ ಪ್ರಥಮ ಬಿಕಾಂ ನ ವಿದ್ಯಾರ್ಥಿ ಆರ್. ಕೃಷಿಕ ರಾಜ್ ಚಿನ್ನದ ಪದಕ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ವುಶು ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ಅ.13 : ವಿರಾಜಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟೀಯ ಸೇವಾ ಯೋಜನಾ ಘಟಕದ ಸಂಯುಕ್ತಾಶ್ರಯದಲ್ಲಿ ‘ಹಿರಿಯ ನಾಗರೀಕರ ದಿನ ಮತ್ತು ಮಾನಸಿಕ ಆರೋಗ್ಯ ದಿನಾಚರಣೆ’ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಆರ್.ಮಂಜುನಾಥ್ ಉದ್ಘಾಟಿಸಿ, ಮಾತನಾಡಿ, ಹಿರಿಯ ನಾಗರಿಕರನ್ನು ಸಮಾಜದಲ್ಲಿ ಮತ್ತು ಮನೆಯಲ್ಲಿ ಪ್ರೀತಿಯಿಂದ ಗೌರವದಿಂದ ಕಾಣಬೇಕೆಂದು ಕರೆ ನೀಡಿದರು. ಅಲ್ಲದೇ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎಂದು ತಿಳಿಹೇಳಿದರು. ವಿರಾಜಪೇಟೆಯ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್ಕೊಟಾರಿ, ಅಪರ ಸಿವಿಲ್ ನ್ಯಾಯಾಧೀಶ ಪ್ರದೀಪ ಪೋತದಾರ್, ರಾಷ್ಟ್ರೀಯ ಸೇವಾ ಯೋಜನಾ ಘಟಕದ…
ನಾಪೋಕ್ಲು ಅ.13 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾ ನಿಲಯದ ವಿದ್ಯಾರ್ಥಿ ಎಸ್.ಡಿ.ಗವೀನ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ 4*100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕೆ.ಎಲ್.ಚಿರಾಗ್ 400 ಮೀ.ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಾಜಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ, 4*100 ಮೀ ರಿಲೆ ಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿ ದರ್ಶನ 4*100 ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಮೇಘನ್ 4*100 ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿ ನಿಕ್ಷಿತ್ 80 ಮೀ ಹಡಲ್ಸ್ ಪ್ರಥಮ ಸ್ಥಾನ, ಕೆ.ಸಿ.ಪೂರ್ವಿಕ 400 ಮೀ ಓಟದಲ್ಲಿ ಪ್ರಥಮ, 600 ಮೀ ನಲ್ಲಿ ಪ್ರಥಮ ಸ್ಥಾನ ಗಳಿದ್ದರೆ. ಬಿಸ್ಮಿತ 4*100 ಮೀ. ರಿಲೆಯಲ್ಲಿ ಪ್ರಥಮ ಸ್ಥಾನ, 80 ಮೀ…
ನಾಪೋಕ್ಲು ಅ.13 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇರುವೈಲು ರಘುರಾಮ ಆಸ್ರಣ್ಣ ಮತ್ತು ಲೀಲಾ ಅಸ್ರಣ್ಣ ದತ್ತಿನಿದಿ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಉದ್ಘಾಟಿಸಿದರು. ಕಾಲೇಜಿನ ಇತಿಹಾಸ ಉಪನ್ಯಾಸಕ ಪರಶುರಾಮ ಕನ್ನಡ ನಾಡು ನುಡಿ ಪರಂಪರೆ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಪ್ರಾಂಶುಪಾಲರು, ಸಾಹಿತಿಗಳಾದ ಬಾರಿಯಂಡ ಜೋಯಪ್ಪ ಅವರು ಕೊಡಗಿನ ಆರ್ಥಿಕ ಸ್ಥಿತಿ ಅಂದು ಇಂದು ಈ ಕುರಿತು ತಮ್ಮ ಉಪನ್ಯಾಸ ದಲ್ಲಿ 60 ವರ್ಷಗಳ ಹಿಂದಿನ ಬರಗಾಲ ಆರ್ಥಿಕ ಸ್ಥಿತಿ ಬದುಕು ಬವಣೆ ಹಾಗೂ ಇಂದಿನ ಆರ್ಥಿಕ ಪರಿಸ್ಥಿತಿಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿ, ದತ್ತಿನಿಧಿ ಹಾಗೂ ಪರಿಷತ್ತಿನ ಸದಸ್ಯತ್ವವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ…
ಮಡಿಕೇರಿ ಅ.13 : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಅ.15, 16 ಮತ್ತು 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಅಕ್ಟೋಬರ್, 15 ರಂದು ಬೆಳಗ್ಗೆ 11.30 ಗಂಟೆಗೆ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದ ತುಲಾ ಸಂಕ್ರಮಣ ಜಾತ್ರೆಯ ಪ್ರಯುಕ್ತ ನಡೆಯುವ (ಕಾವೇರಿ ಉತ್ಸವ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 4.30 ಗಂಟೆಗೆ ನಗರದ ಪಂಪಿನಕೆರೆಯಲ್ಲಿ ನಡೆಯುವ ಕರಗ ಉತ್ಸವದಲ್ಲಿ (ಮಡಿಕೇರಿ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ) ಪಾಲ್ಗೊಳ್ಳಲಿದ್ದಾರೆ. ನಂತರ ರಾತ್ರಿ 7.30 ಗಂಟೆಗೆ ಗೋಣಿಕೊಪ್ಪ ದಸರಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆಯಲ್ಲಿ ನಡೆಯುವ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಕುಶಾಲನಗರ, ನಂತರ ಸಂಜೆ 4 ಗಂಟೆಗೆ ಕೊಡಗು ವಿಶ್ವವಿದ್ಯಾಲಯಕ್ಕೆ ಭೇಟಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಕ್ಟೋಬರ್,…
ಮಡಿಕೇರಿ ಅ.13 : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಉಪ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ತಮ್ಮ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕøತಿಕ, ಬಹುಮಾನ ವಿತರಣೆ, ಹೀಗೆ ವಿವಿಧ ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ನಗರದ ಕೋಟೆ ಆವರಣದಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ಏರ್ಪಡಿಸುವುದು, ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ನಗರದ ಕೋಟೆ ಆವರಣದಿಂದ ಜನರಲ್…
ಕುಶಾಲನಗರ, ಅ.12 : ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಸಾಯನಶಾಸ್ತ್ರ ವಿಷಯದ ಉಪನ್ಯಾಸಕಿಯಾಗಿರುವ ಮೂಲತಃ ಕುಶಾಲನಗರ ತಾಲ್ಲೂಕಿನ ಚಿಕ್ಕ ಅಳುವಾರದ ನಿವಾಸಿ ಎಸ್.ಶೃತಿ ಮಂಜುನಾಥ್ ಎಂಬವರು ಮಂಗಳೂರಿನ ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅನ್ವಯಿಕ ವಿಜ್ಞಾನದಲ್ಲಿ ಪ್ರಸಕ್ತ ಸಂಶೋಧನೆ ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಉತ್ತಮ ಪ್ರಬಂಧ ಮಂಡನೆ ಮಾಡಿದ ಎಸ್. ಶೃತಿ ಮಂಜುನಾಥ್ ಅವರಿಗೆ ಪ್ರಶಸ್ತಿ ಲಭಿಸಿದೆ. “ಕಾರ್ಖಾನೆಗಳಿಂದ ಹೊರಹೋಗುವ ತ್ಯಾಜ್ಯ ನೀರನ್ನು ಸ್ವಚ್ಛಗೊಳಿಸಲು ” ಬಣ್ಣ: ಹೊರಹೀರುವಿಕೆ: ಅಧ್ಯಯನಕ್ಕಾಗಿ ಬಾಳೆ ದಿಂಡಿನ ಖಾಂಡದ ಕೋಶಗಳುಳ್ಳ ನಾರಿನ ಆಧಾರಿತ ಕಾಂತೀಯ ಅತೀ ಸೂಕ್ಷ್ಮ ಸಂಯೋಜಿತ ವಸ್ತುಗಳನ್ನು ಹೀರಿಕೊಳ್ಳುವ ಅಭಿವೃದ್ದಿ” ಕುರಿತು ಮಂಡಿಸಿದ ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಶೃತಿ ಮಂಡಿಸಿದ ಉತ್ತಮ ಪ್ರಬಂಧಕ್ಕೆ ದ್ವಿತೀಯ ಸ್ಥಾನ ಲಭಿಸಿದೆ. *ಪಿ.ಎಚ್.ಡಿ.ಅಧ್ಯಯನ* : ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ. ಬಿ ವಿಶಾಲಾಕ್ಷಿ ಯವರ ಮಾರ್ಗದರ್ಶನ ದಡಿಯಲ್ಲಿ ಶೃತಿ ಅವರು ಪಿ ಎಚ್ ಡಿ ಅದ್ಯಯನ ಮಾಡುತ್ತಿದ್ದಾರೆ. ಶೃತಿ ಅವರು ಸೋಮವಾರಪೇಟೆಯ ಪುಷ್ಪ ಎಸ್. ಸಾಲ್ಯಾನ್ ಅವರ ಪುತ್ರಿಯಾಗಿದ್ದಾರೆ.
ಚೆಟ್ಟಳ್ಳಿ ಅ.12 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ದಾಖಲೆಯ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಪೇರಿಯನ ಪೂಣಚ್ಚ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಸುಂಟಿಕೊಪ್ಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಲೋಕೇಶ್, ಉಪಚುನಾವಣಾಧಿಕಾರಿಯಾಗಿ ಚೆಟ್ಟಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಶೋಕ್ ಎನ್.ಎಸ್ ಕಾರ್ಯನಿರ್ವಹಿಸಿದರು. ಇತ್ತೀಚೆಗೆ ನಡೆದ ಸಂಘದ ಚುನಾವಣೆಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಬಲ್ಲಾರಂಡ ಮಣಿ ಉತ್ತಪ್ಪ ಅವರ ಬಳಗ ಭರ್ಜರಿ ಗೆಲವು ಸಾಧಿಸಿತ್ತು. ಎಲ್ಲಾ 12 ಸ್ಥಾನಗಳಲ್ಲಿ ಮಣಿ ಉತ್ತಪ್ಪ ಅವರ ಬೆಂಬಲಿಗರು ಗೆಲುವು ಸಾಧಿಸಿದ್ದರು. ಕಳೆದ ಮೂರು ಅವಧಿಯೂ ಮಣಿ ಉತ್ತಪ್ಪ ಅವರೇ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ನೂತನ ಕಟ್ಟಡ, ನರೇಂದ್ರಮೋದಿ ಸಹಕಾರ ಭವನ, ಕಾಫಿ ಗುಣಮಟ್ಟ ಪರೀಕ್ಷಾ ಕೇಂದ್ರ, ಮಣ್ಣು ಪರೀಕ್ಷಾ ಘಟಕ, ಕುಡಿಯುವ ನೀರಿನ ಘಟಕ, ಈರಳೆ ಶಾಖೆಯ ಅಭಿವೃದ್ಧಿ ಸೇರಿದಂತೆ ಹಲವು…
ಮಡಿಕೇರಿ ಅ.12 : ಕೊಡವ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ, ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿ ಕಲ್ಪಿಸಲು ಸೂಕ್ತ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಯುನೈಟೆಡ್ ಕೊಡವ ಆರ್ಗನೈಜೇಷನ್ – ಯುಕೊ’ ನಿಯೋಗ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದತು. ಇಂದು ಬೆಂಗಳೂರಿನ ದೇವರಾಜ ಅರಸು ಭವನದಲ್ಲಿರುವ ಕಛೇರಿಯಲ್ಲಿ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದಲ್ಲಿ ಆಯೋಗವನ್ನು ಭೇಟಿ ಮಾಡಿ ಚರ್ಚಿಸಿದ ನಿಯೋಗ ಕೊಡಗು ಜಿಲ್ಲೆಯಲ್ಲಿ ಕೇವಲ 1.75 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಕೊಡವ ಸಮುದಾಯವು ಅಲ್ಪಸಂಖ್ಯಾತ ಜನಾಂಗವಾಗಿದೆ. ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ತನ್ನ ಆದ ವೈಶಿಷ್ಟ್ಯತೆಯನ್ನು ಕಾಪಾಡಿಕೊಂಡು ಬಂದಿರುವ ಈ ಸಣ್ಣ ಸಮುದಾಯ ವಿವಿದ ಆಯಾಮಗಳಲ್ಲಿ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಪ್ರಸ್ತುತ ಕೊಡವ ಸಮುದಾಯವು ಕರ್ನಾಟಕ ರಾಜ್ಯದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ 3A ಅಡಿಯಲ್ಲಿ ವರ್ಗೀಕರಣಗೊಂಡು ಒಕ್ಕಲಿಗರು ಹಾಗು ಬಲಿಜ…
ಮಡಿಕೇರಿ ಅ.12 : ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ, ನದಿ ತಟಗಳ ಅಭಿವೃದ್ಧಿ ಹಾಗೂ ನದಿ ವ್ಯಾಪ್ತಿಯ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರದಿಂದ ಯೋಜನೆ ರೂಪಿಸಬೇಕೆಂದು ಕಾವೇರಿ ರಿವರ್ ಸೇವಾ ಟ್ರಸ್ಟ್ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಹಾಗೂ ಜಿ.ಪಂ ಸಿಇಓ ವರ್ಣಿತ್ ನೇಗಿ ಅವರಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಸಂರಕ್ಷಿಸುವ ಅಗತ್ಯವಿದೆ ಎಂದರು. ನಗರ, ಪಟ್ಟಣ ಮತ್ತು ಗ್ರಾಮಗಳ ತ್ಯಾಜ್ಯ, ಕಲುಷಿತ ನೀರು ನದಿಗೆ ನೇರವಾಗಿ ಸೇರುತ್ತಿದೆ. ನದಿದಂಡೆ ಒತ್ತುವರಿಯಾಗುತ್ತಿದ್ದು, ಅಕ್ರಮವಾಗಿ ಹೊಟೇಲ್, ಅಂಗಡಿ ಮುಂಗಟ್ಟುಗಳು ನಿರ್ಮಾಣವಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ಅವೈಜ್ಞಾನಿಕವಾಗಿ ವಿಲೇವಾರಿಯಾಗಿ ನದಿ ಕಲುಷಿತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಡಿಕೇರಿ ತಾಲ್ಲೂಕಿನ ತಲಕಾವೇರಿ-ಭಾಗಮಂಡಲದಲ್ಲಿ ಸಮರ್ಪಕ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮುದಾಯ ಶೌಚಾಲಯ ಮತ್ತು ಸಮರ್ಪಕ ನಿರ್ವಹಣೆ, ಗ್ರಾ.ಪಂ…






