ಲೇಖಕ: admin

ವಿರಾಜಪೇಟೆ  ಸೆ.16 :  ಐತಿಹಾಸಿಕ ಗೌರಿ ಗಣೇಶ ಹಬ್ಬವೂ ಎಂದಿನಂತೆ  ಹಳೆ ವೈಭವದೊಂದಿಗೆ ನಡೆಯಲಿದೆ ಎಂದು ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಬರೀಶ್ ಶೆಟ್ಟಿ ತಿಳಿಸಿದರು. ನಗರದ ಪುರಭವನದಲ್ಲಿ  ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ವಿವಿಧ ಸಮಿತಿಗಳಿಗೆ ಗಣಪತಿ ಕೂರಿಸಲು ಏಕಗವಾಕ್ಷಿಯ ಮೂಲಕ ಅನುಮತಿ ನೀಡುವ ಸಲುವಾಗಿ ಕರೆಯಲಾಗಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಗೊಂದಲಗಳು ಬೇಡ ಈಗಾಗಲೇ ಶಾಸಕರು ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಹಬ್ಬದ ಸಂದರ್ಭಕ್ಕೆ ಆಗಬೇಕಾದ ವ್ಯವಸ್ಥೆಗಳಿಗೆ ಬೇಕಾದ ಸಿದ್ಧತೆಗಳಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಉಳಿದಂತೆ ಜನೋತ್ಸವ ಸಮಿತಿ ವತಿಯಿಂದಲೂ ಹಬ್ಬದ ರಂಗು ಹೆಚ್ಚಿಸಲು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಶಿವರುದ್ರ ಮಾತನಾಡಿ, ಡಿಜೆ ಬಳಕೆ ಮಾಡದಂತೆ ಇರುವ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಮಾಹಿತಿ ನೀಡಿದರು. ರಾತ್ರಿ ಹತ್ತರ ಬಳಿಕ ಧ್ವನಿವರ್ಧಕ ಬಳಕೆ ಮಾಡಬಾರದು ಎಂದು ಸೂಚನೆ ನೀಡಿದರು. ಪುರಸಭೆ ಸದಸ್ಯೆ ದೇಚಮ್ಮ ಕಾಳಪ್ಪ ಉತ್ಸವದ ಕೊನೆಯ ದಿನ…

Read More

ಮಡಿಕೇರಿ ಸೆ.16 :  ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ದುಬೈ ವತಿಯಿಂದ ಇತ್ತೀಚೆಗೆ ಚೆನ್ನೈನ “ಚೆನ್ನೈ ಟ್ರೇಡ್ ಸೆಂಟರ್” ಸಭಾಂಗಣದಲ್ಲಿ ನಡೆದ 42ನೇ ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ- 2023’ರಲ್ಲಿ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕೇಂದ್ರದ 42 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಕೇವಲ 3 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮೆರೆದು 34 ಚಾಂಪಿಯನ್ ಟ್ರೋಫಿ, 5 ಚಿನ್ನದ ಪದಕ ಮತ್ತು 3 ಬೆಳ್ಳಿಯ ಪದಕ ಗೆದ್ದುಕೊಂಡರು. ::: ಚಾಂಪಿಯನ್ ಟ್ರೋಫಿ ವಿಜೇತರು ::: ಅದಿತ್ ಗೌತಮ್ ಕೆ, ಅಫ್ಫಾನ್ ಅಹಮದ್ ಟಿ.ಬಿ, ಅಹಾನ್ ಬರ್ನ್ವಾಲ್, ಆಲ್ಫಾ ಎ.ಆರ್, ಅಲುಫ್ ಎ.ಆರ್, ಅನೇಶನ್ ಪಿ, ಅಪೇಕ್ಷಾ ಆರ್.ರೈ, ಭುವನ್ ತಿಮ್ಮಯ್ಯ ಎಂ, ಜಾರ್ಜ್ ಮ್ಯಾಥ್ಯೂ, ಕಿಶಿ ಕಾವೇರಮ್ಮ ಎ.ಎಲ್, ಕೋಸಿಗಿ ಸಮರ್ಥ್ ಸಾಮ್ರಾಟ್, ಕೋಸಿಗಿ ಸಾತ್ವಿಕ್ ಸಾಮ್ರಾಟ್, ಕೃಷ್ಣ ಪ್ರಿಯಾ ಪಿ.ಕೆ, ಲಾಲಿತ್ಯ…

Read More

ಮಡಿಕೇರಿ ಸೆ.16 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟ ಸಹಕಾರದಲ್ಲಿ ಸೆಪ್ಟೆಂಬರ್, 17 ರಂದು ಮಧ್ಯಾಹ್ನ 3 ಗಂಟೆಗೆ ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಸೆ.16 : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್, 19 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 8 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.16 : ಅಂಚೆ ಅದಾಲತ್‍ನ ಮುಂದಿನ ಸಭೆಯು ಸೆ.25 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆಯ ಅಶೋಕಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಸೆಪ್ಟೆಂಬರ್, 22 ರೊಳಗೆ ತಲುಪುವಂತೆ ಕಳುಹಿಸುವಂತೆ ಕೋರಿದೆ. ನಂತರ ಸೆಪ್ಟೆಂಬರ್, 25 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧಿಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.16 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್‍ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 3 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272–225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.16 : ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ  ಶನಿವಾರಸಂತೆ ಪೊಲೀಸ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳೆ ಗ್ರಾಮ ನಿವಾಸಿ  ಚಂದನ್ (28)ಎಂಬಾತನೇ ಬಂಧಿತ ಆರೋಪಿ.   ಸೆ.14 ರಂದು  ನಿಡ್ತ ಗ್ರಾಮ ನಿವಾಸಿ  ಎನ್.ಪಿ.ಶಿವರಾಜ್  ಶನಿವಾರಸಂತೆ ಪಟ್ಟಣದ ಮಹಿಳಾ ಸಮಾಜದ ಮುಂಭಾಗದಲ್ಲಿ ನಿಲ್ಲಿಸಿದ್ದ  ಕಾರನ್ನು  ಕಳ್ಳತನ ಮಾಡಿರುವ ಬಗ್ಗೆ ದೂರು ನೀಡಲಾಗಿತ್ತು.    ಸೋಮವಾಪೇಟೆ ಉಪವಿಭಾಗ ಡಿಎಸ್‌ಪಿ ಆರ್ .ವಿ.ಗಂಗಾಧರಪ್ಪ, ಶನಿವಾರಸಂತೆ ಪೊಲೀಸ್ ಠಾಣೆ ಪಿಐ ಮಂಜುನಾಥ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಆರೋಪಿ ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.   ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.  

Read More

ನಾಪೋಕ್ಲು ಸೆ.17 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಏರ್ಪಡಿಸಲಾಗಿದ್ದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಗೈಡ್ಸ್ ವಿಭಾಗದಲ್ಲಿ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಯುಕ್ತ ಪೊನ್ನಮ್ಮ,ಆಫಿಯ,ಆಶ್ರಿಯ,ಸಜಾ ಫಾತಿಮ, ಶರಣ್ಯ, ದುಂದುಭಿ, ಅಹನಿ ಶಾರದಾ, ಶಾಸ್ತಾ ಪೊನ್ನಮ್ಮ ಗೈಡ್ ಕ್ಯಾಪ್ಟನ್ ಕಾಳೆಯಂಡ ಅಮಿತ ನೇತೃತ್ವದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ತಮ್ಮಯ್ಯ,ಸ್ಥಾಪಕ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ ಇದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.16 :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸಂಪಾಜೆ ಸ್ಥಳೀಯ ಸಂಸ್ಥೆಗೊಳಪಟ್ಟ ಒಂಭತ್ತು ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ಉದ್ಘಾಟಿಸಿದರು. ಈ ಸಂದರ್ಭ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಧನಂಜಯ ಎಂ ,ಸಂಸ್ಥೆಯ ಎಡಿಸಿ ಹ್ಯಾರಿಸ್ ಕೆ.ಎ, ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರತ್ನ ಚರ್ಮಣ, ಕೆಪಿಎಸ್ ಉಪ ಪ್ರಾಂಶುಪಾಲರಾದ ಎಂ.ಎಸ್ ಶಿವಣ್ಣ,ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಉಷಾರಾಣಿ, ಖಜಾಂಜಿ ಗಂಗಮ್ಮ, ರಂಜಿತ್ , ಶಿಕ್ಷಣ ಸಂಯೋಜಕ ಹರೀಶ್ ಇನ್ನಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ ದೊಡ್ಡೇಗೌಡ ಅವರನ್ನು ಕಿರು ಕಾಣಿಕೆ…

Read More

ವಿರಾಜಪೇಟೆ ಸೆ.16 : ವಿರಾಜಪೇಟೆ ಕಾವೇರಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ನನ್ನ ಮಣ್ಣು ನನ್ನ ದೇಶ ” ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಕಾರ್ಲ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಸಿ.ಎಂ.ಸೋಮಣ್ಣ, ಬಿ.ಯು. ಅಂಬಿಕಾ, ನೇಚರ್ ಕ್ಲಬ್ ಸದಸ್ಯರಾದ ಅನುಪಮ ಸಿ.ಪಿ., ಹೆಚ್ ವಿ. ನಾಗರಾಜು ಇದ್ದರು.

Read More