ಲೇಖಕ: admin

ಮಡಿಕೇರಿ ಅ.12 : ವಿಶ್ವ ವಿಖ್ಯಾತ ಮೈಸೂರು ದಸರಾ ಸಿನಿಮೋತ್ಸವದಲ್ಲಿ ಕೊಡಗಿನ ನಿರ್ದೇಶಕರು ಹಾಗೂ ಕಲಾವಿದರ ನಾಲ್ಕು ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇದೇ ಮೊದಲ ಬಾರಿಗೆ ಕೊಡಗಿನ ನಿರ್ದೇಶಕರುಗಳ ಇಷ್ಟು ಸಂಖ್ಯೆಯ ಚಿತ್ರಗಳು ಆಯ್ಕೆಯಾಗಿದ್ದು, ಚಿತ್ರ ತಂಡಗಳಲ್ಲಿ ಹರ್ಷ ಮೂಡಿದೆ. ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ “ಅಂತರ್ಮುಖ” ಕನ್ನಡ ಚಿತ್ರ, ಸ್ವಸ್ತಿಕ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ, ಹಲವು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದ “ಪೊಮ್ಮಾಲೆ ಕೊಡಗ್” ಕೊಡವ ಚಿತ್ರ, ಕೊಡಗಿನ ಪ್ರಥಮ ಮಹಿಳಾ ನಿರ್ದೇಶಕಿ ಎಂಬ ಕೀರ್ತಿಗೆ ಪಾತ್ರರಾಗಿರುವ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ದೇಶನದ “ರಂಗಪ್ರವೇಶ” ಕನ್ನಡ ಚಿತ್ರ ಮತ್ತು ಸಿಂಚನ ಪೊನ್ನವ್ವ ನಿರ್ದೇಶನದ “ಕೌಡಿಕಳಿ” ಕೊಡವ ಚಿತ್ರ ದಸರಾ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ. ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪರಂಪರೆಗೆ ಒತ್ತು ನೀಡಿರುವ ನಾಲ್ಕು ಚಿತ್ರಗಳು ದಸರಾ ಉತ್ಸವದ ಸಂದರ್ಭ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ. ಅ.16 ರಂದು ಬೆಳಗ್ಗೆ 10.15ಗೆ “ಅಂತರ್ಮುಖ”,…

Read More

ಮಡಿಕೇರಿ ಅ.12 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಟಿ.ಶೆಟ್ಟಿಗೇರಿಯ ತಾಳೇರಿ ನಾಡ್ ಮಂದ್ ನಲ್ಲಿ ಕೊಡವ ಲ್ಯಾಂಡ್ ಹಕ್ಕೊತ್ತಾಯದ ಪಾದಯಾತ್ರೆ ಮತ್ತು ಕೊಡವ ಜಾಗೃತಿ ಸಭೆ ನಡೆಯಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಪೆರುಮಾಳ್” ಪಟ್ಟಿ ನಾಡ್ ಮಂದ್ ನಿಂದ ಟಿ.ಶೆಟ್ಟಿಗೇರಿ ಪಟ್ಟಣದಲ್ಲಿ ಪಾದಯಾತ್ರೆ ಸಾಗಿತು. ಕೊಡವ, ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಪಾಲ್ಗೊಂಡು ಮಾನವ ಸರಪಳಿ ನಿರ್ಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ನಾಚಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಳೇರಿ ಮೂಂದ್‌ನಾಡ್ ತಕ್ಕ ಕೈಬುಲಿರ ಹರೀಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬೊಳ್ಳಜಿರ ಸುಶೀಲ, ಕೈಬುಲಿರ ಪಾರ್ವತಿ ಅಪ್ಪಯ್ಯ, ಅಜ್ಜಮಾಡ ಸಾವಿತ್ರಿ, ತೀತಿರ ಅನಿತಾ, ಕೈಬುಲಿರ ಪಾರ್ವತಿ, ಮಚ್ಚಮಾಡ ಹೇಮ ನಾಣಯ್ಯ, ಕಳ್ಳಿಚಂಡ ದೇವಿಕ ನಂಜಪ್ಪ, ಮಚ್ಚಮಾಡ ಸವಿ ನಾಣಯ್ಯ, ತಡಿಯಂಗಡ ಗಾನ ಸೋಮಣ್ಣ, ಮುಕ್ಕಾಟಿರ ಅಂಜನ ಪೊನ್ನಣ್ಣ, ಮುಕ್ಕಾಟಿರ ಮಿನಿತ ಸಂದೀಪ್, ಬಾಚಿರ ನಿಶಾ ಪ್ರದೀಪ್, ಬಾಚಿರ ಶೈಲಾ, ಚಟ್ಟಂಗಡ ರಮ್ಯ ಕರುಂಬಯ್ಯ,…

Read More

ಮಡಿಕೇರಿ ಅ.12 :  ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಹುದಿಕೇರಿ ಪಟ್ಟಣ, ಅಂಜಿಗೇರಿ ನಾಡ್ -ಮಡಕೋಡ್ ನಾಡ್ ಮಂದ್ ನಲ್ಲಿ ಕೊಡವ ಲ್ಯಾಂಡ್ ಗಾಗಿ ಒತ್ತಾಯಿಸಿ ಪಾದಯಾತ್ರೆ ನಡೆಯಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕೊಡವ ಲ್ಯಾಂಡ್ ಹಕ್ಕೊತ್ತಾಯದ ಕುರಿತು ವಿವರಿಸಿದರು. ನಾಡ್ ತಕ್ಕರುಗಳಾದ ಚಕ್ಕೇರ ರಾಜೇಶ್, ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ, ಹಿರಿಯರಾದ ಚಕ್ಕೇರ ಕಾಶಿ, ಊರು ತಕ್ಕರಾದ ಬೊಳ್ಳಜಿರ ಮಣಿ, ಪ್ರಮುಖರಾದ ಕಳ್ಳಂಗಡ ಗಣೇಶ್, ಕಿರಿಯಮಾಡ ರಾಯ್ ಕುಶಾಲಪ್ಪ, ಕಿರಿಯಮಾಡ ಸೋನಪ್ಪ, ಚೆಕ್ಕೇರ ಚಂದ್ರಪ್ರಕಾಶ್, ಹೊಟ್ಟೆಂಗಡ ಬಿದ್ದಪ್ಪ, ಬೊಳ್ಳಜಿರ ಜೋಯಪ್ಪ, ಬೊಳ್ಳಜಿರ ಮಹೇಶ್, ಲೋಕನಾಥ್, ಬಿ.ಟಿ.ಅಯ್ಯಪ್ಪ, ಚೆಕ್ಕೇರ ಬೋಪಣ್ಣ, ಕಿರಿಯಮಾಡ ಮಿಲನ್ ಗಣಪತಿ, ನೂರೆರ ಮಾಚಯ್ಯ, ಮಂಡಂಗಡ ಮೋಹನ್, ಬೊಜ್ಜಂಗಡ ತಿಮ್ಮಯ್ಯ, ಬಲ್ಯಮಿದೇರಿರ ಪ್ರಕಾಶ್, ಚಂಗುಲಂಡ ಸೂರಜ್, ಚೆಕ್ಕೇರ ರಂಜಿತ್, ಬಯೊವಂಡ ಕಿಶೋರ್ ಕಾರ್ಯಪ್ಪ, ಅಯ್ಯನೆರವಂಡ ಪ್ರಥ್ವಿ ಪೂವಣ್ಣ, ಮಂಡಂಗಡ ಅಶೋಕ್, ಬೊಟ್ಟಂಗಡ ಪೊನ್ನಪ್ಪ, ಪಟ್ಟಮಾಡ ಲಲಿತ, ಬೊಜ್ಜಂಗಡ…

Read More

ಮಡಿಕೇರಿ ಅ.12 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 3ನೇ ಹಂತದ ಪಾದಯಾತ್ರೆ ಪೊನ್ನಂಪೇಟೆಯಲ್ಲಿ ಮುಕ್ತಾಯಗೊಂಡಿತು. ನಾಲ್ಕನೇ ಹಂತದ ಪಾದಯಾತ್ರೆ ಅ.20 ರಿಂದ ಪೊನ್ನಂಪೇಟೆ ತಾಲ್ಲೂಕಿನ ಕುಂದದಿಂದ ಆರಂಭಗೊಳ್ಳಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪೊನ್ನಂಪೇಟೆ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ನಂತರ ಬಸ್ ನಿಲ್ದಾಣದ ಬಳಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಕೊಡವ ಲ್ಯಾಂಡ್ ಗಾಗಿ ಹಕ್ಕೊತ್ತಾಯ ಮಂಡಿಸಲಾಯಿತು. ಎನ್.ಯು.ನಾಚಪ್ಪ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾರ್ಯಕ್ರಮ ಆರಂಭಿಸಿ ಹಕ್ಕೊತ್ತಾಯಗಳ ಕುರಿತು ವಿವರಿಸಿದರು. ಸಿಎನ್‌ಸಿಯ 9 ಬೇಡಿಕೆಗಳ ಕುರಿತು ಪಾದಯಾತ್ರೆ ಸಂದರ್ಭ ಜನಜಾಗೃತಿ ಮೂಡಿಸಿ ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದರು. ಭೌಗೋಳಿಕ-ರಾಜಕೀಯ ಸ್ವಾಯತ್ತತೆಯು ಯುಎನ್/ವಿಶ್ವ ರಾಷ್ಟ್ರ ಸಂಸ್ಥೆ ಚಾರ್ಟರ್‌ನಲ್ಲಿ ಪ್ರತಿಪಾದಿಸಲ್ಪಟ್ಟ ನಿರ್ದಿಷ್ಟ ಪ್ರದೇಶದ ಪ್ರಾಚೀನ ಸೂಕ್ಷ್ಮ-ಮಿನಿಸ್ಕ್ಯೂಲ್ ರೇಸ್ ಅನ್ನು ರಕ್ಷಿಸಲು, ಉತ್ತೇಜಿಸಲು ಮತ್ತು ಪುನರುಜ್ಜೀವನಗೊಳಿಸಲು ಮೂಲಭೂತ ನೀತಿಯಾಗಿ ಸಾಂವಿಧಾನಿಕ ವ್ಯವಸ್ಥೆಯಾಗಿದೆ. 2002…

Read More

ಮಡಿಕೇರಿ ಅ.12 :  ಮಡಿಕೇರಿ ನಗರ ದಸರಾ ಕ್ರೀಡಾಕೂಟ ಸಮಿತಿ ವತಿಯಿಂದ  ಅ.15  ರಂದು  5+2 ಆಟಗಾರರ ಮುಕ್ತ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ. ಪಂದ್ಯಾಟವನ್ನು ನಗರದ ಮ್ಯಾನ್ಸ್ ಕಾಂ ಪೌಂಡ್ ಫುಟ್ಬಾಲ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಪ್ರಥಮ ಬಹುಮಾನವಾಗಿ ನಗದು ರೂಪಾಯಿ15000 ಹಾಗೂ ಆಕರ್ಷಕ ಟ್ರೋಫಿ ದ್ವಿತೀಯ ಬಹುಮಾನವಾಗಿ ನಗದು ರೂಪಾಯಿ 10000 ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಪ್ರವೇಶ ಶುಲ್ಕ 800 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಈ ಪಂದ್ಯಾಟದಲ್ಲಿ ಭಾಗವಹಿಸಲು ಇಚ್ಛೆ ಇರುವ ತಂಡಗಳು ಅ. 14  ರ ಮಧ್ಯಾಹ್ನ 2 ಗಂಟೆ ಒಳಗೆ ಮುಂಗಡ ಹಣ ರೂ. 500 ನೀಡಿ ನೊಂದಾಯಿಸಿಕೊಳ್ಳುತಕ್ಕದ್ದು. ಸಂಪರ್ಕಿಸಬೇಕಾದ ಸಂಖ್ಯೆ ಕ್ರಿಸ್ಟೊಫರ್ :-7019909495,  ಉಮೇಶ್ :-9448976406

Read More

ಬೆಂಗಳೂರು ಅ.12 :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಧ್ಯಮದಲ್ಲಿ ಪ್ರಕಟವಾದ/ಪ್ರಸಾರವಾದ ವರದಿ ಸಹಿತ ಅರ್ಜಿಗಳನ್ನು ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರೋಡ್, ಬೆಂಗಳೂರು-560009 ಇಲ್ಲಿಗೆ ದಿನಾಂಕ 30.10.2023 ರೊಳಗಾಗಿ ತಲಪುವಂತೆ ಕಳುಹಿಸಲು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) 2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ) 3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ) 4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿಗೆ) 5. ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿಗೆ) 6. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶಾತ್ಮಕ ವರದಿ) 7. ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಪ್ರಕಟವಾದ…

Read More

ಮಡಿಕೇರಿ ಅ.12 :  ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದು, ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ವತಿಯಿಂದ ನವರಾತ್ರಿ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅ.15 ರಂದು ಕರಗ ಸಾಗುವ ರಸ್ತೆಯಲ್ಲಿ ರಂಗೋಲಿ ಸ್ಪರ್ಧೆ ಆಯೋಜಿತವಾಗಿದ್ದು ಚುಕ್ಕಿ,, ಪುಡಿ. ಅಳೆ.ಮತ್ತು ಪುಷ್ಪ ರಂಗೋಲಿ ವಿಭಾಗಗಳ ಸ್ಪರ್ಧೆಗಳು ಜರುಗಲಿದೆ. ಅ.23 ರಂದು ಆಯುಧ ಪೂಜೆ ಅಂಗವಾಗಿ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ಆಯೋಜಿತವಾಗಿದ್ದು. ಲಾರಿ, ಬಸ್, ಕಾರ್, ಸೈಕಲ್, ಬೈಕ್, ಆಟೋ, ಟಾಟಾಏಸ್, ಜೀಪ್, ಪಿಕ್ಅಪ್, ಜೆಸಿಬಿ ಹಾಗೂ ಇನ್ನಿತರ ವಾಹನ ಅಲಂಕಾರ ಸ್ಪರ್ಧೆ ಜರುಗಲಿದೆ. ನವರಾತ್ರಿಯ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯ ಅಂಗವಾಗಿ ನಗರದ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ಜರುಗಲಿದ್ದು, ನವರಾತ್ರಿಯ 9 ದಿನವೂ ಮಡಿಕೇರಿ ನಗರದ ದಶ ದೇವಾಲಯಗಳು, ಸರಕಾರಿ, ಅರೆ ಸರಕಾರಿ ಕಚೇರಿಗಳು, ವಿವಿಧ ಕಟ್ಟಡಗಳು, ಚಿನ್ನದ ಅಂಗಡಿ, ಬಟ್ಟೆ ಅಂಗಡಿ, ಬೇಕರಿ, ಹೋಟೆಲ್, ಬ್ಯಾಂಕ್, ಸೇರಿದಂತೆ ವಿವಿಧ…

Read More

ಮಡಿಕೇರಿ ಅ.12 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಯ ಮಿತ್ರ ಪಕ್ಷ ಆಮ್ ಆದ್ಮಿ ಪಾರ್ಟಿಗೆ ಕೊಡಗು- ಮೈಸೂರು ಕ್ಷೇತ್ರವನ್ನು ಹಂಚಿಕೆ ಮಾಡಬೇಕೆಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ 28 ಪಕ್ಷಗಳ ಮೈತ್ರಿಯ ಇಂಡಿಯಾ ಒಕ್ಕೂಟ ಸ್ಥಾಪನೆಯಾಗಿದ್ದು, ಅದರಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಒಂದಾಗಿದೆ. ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರಿಂದ ಗೆಲುವು ಸಾಧಿಸುವುದು ಸುಲಭವಾಗಲಿದೆ. ಆಮ್ ಆದ್ಮಿ ಪಾರ್ಟಿಯಲ್ಲಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಆದ್ದರಿಂದ ಕೊಡಗು- ಮೈಸೂರು ಕ್ಷೇತ್ರವನ್ನು ನಮ್ಮ ಪಕ್ಷಕ್ಕೆ ನೀಡಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಬೇಕೆಂದು ಮನವಿ ಮಾಡಿದ್ದಾರೆ. ಕಳೆದ 9.5 ವರ್ಷಗಳ ಕೇಂದ್ರ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ನಿರಂತರ ಬೆಲೆ ಮತ್ತು ತೆರಿಗೆ ಏರಿಕೆಯಿಂದ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಯುವ ಸಮೂಹ ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ಕೊಡಗು- ಮೈಸೂರು ಕ್ಷೇತ್ರದ ಸಂಸದರು…

Read More

ಕಡಂಗ ಅ.12 : ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲೆಯ ಪ್ರತಿಷ್ಠಿತ ಸಮನ್ವಯ ವಿದ್ಯಾ ಸಂಸ್ಥೆ ಅನ್ವಾರುಲ್ ಹುದಾ ಹಾಗೂ ಸುನ್ನೀ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅನುಪಮ ವ್ಯಕ್ತಿತ್ವ ಅನಘ್ರ್ಯ ಸಂದೇಶ ಎಂಬ ಘೋಷಣೆಯೊಂದಿಗೆ ವಿರಾಜಪೇಟೆ ಪಟ್ಟಣದಲ್ಲಿ ಬೃಹತ್ ಸಂದೇಶ ಜಾಥಾ ನಡೆಯಿತು. ಸ್ವಾಗತ ಸಮಿತಿ ಮುಖ್ಯಸ್ಥ ಸಯ್ಯದ್ ಮಹ್ದೀಅಲ್ ಬುಖಾರಿ ತಙಂಳ್ ಅವರ ಪ್ರಾರ್ಥನೆಯೊಂದಿಗೆ ಜಾಥಾಕ್ಕೆ ಪಂಜರ್ ಪೇಟೆಯಿಂದ ಚಾಲನೆ ನೀಡಲಾಯಿತು. ಪಂಜರಪೇಟೆಯಿಂದ ಪ್ರಾರಂಭಗೊಂಡ ಜಾಥಾ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಗಡಿಯಾರಕಂಬ ಮುಖಾಂತರ ಪಟ್ಟಣದ ಮುಖ್ಯ ಬೀದಿಯಲ್ಲಿ ಸಂಚರಿಸಿ ಅನ್ವಾರುಲ್ ಹುದಾ ಕ್ಯಾಂಪಸ್ ನಲ್ಲಿ ಸಮಾಪನಗೊಂಡಿತು. ಅನ್ವಾರುಲ್ ಹುದಾ ಸಂಸ್ಥೆಯ ಸಾರಥಿ ಶೈಖುನಾ ಅಶ್ರಫ್ ಅಹ್ಸನಿ ಉಸ್ತಾದ್ ಮಾತನಾಡಿ, ಮೊಹಮ್ಮದ್ ಪೈಗಂಬರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಬೇಕು, ಯುವ ಸಮೂಹದ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಕರೆ ನೀಡಿದರು. ದಫ್, ಸ್ಕೌಟ್ ಹಾಗೂ ವಿದ್ಯಾರ್ಥಿಗಳ ಪ್ಲವರ್ ಶೋ ಪ್ರದರ್ಶನ ಜಾಥಾದಲ್ಲಿ ಆಕರ್ಷಣೆಯಾಗಿತ್ತು. ಡೋನೇಟರ್ಸ್ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಪಟ್ಟಣದಲ್ಲಿ…

Read More

ಮಡಿಕೇರಿ ಅ.12 : ಉಡುಪಿಯ ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಮೂರ್ನಾಡುವಿನ ವಿವೇಕ ಜಾಗ್ರತ ಬಳಗದ ವತಿಯಿಂದ ಅ.15 ರಂದು ಮರಗೋಡಿನಲ್ಲಿ ವಿಶಿಷ್ಟ “ಆತ್ಮೋನ್ನತಿ ಶಿಬಿರ” ನಡೆಯಲಿದೆ. ಅಂದು ಬೆಳಗ್ಗೆ 9.30 ಗಂಟೆಯಿಂದ 1.30 ರವರೆಗೆ ಮರಗೋಡಿನ ಗೌಡ ಸಮಾಜದಲ್ಲಿ ಡಿವೈನ್ ಪಾರ್ಕ್ ನ ಅಧಿಕಾರಿಗಳಾದ ರಾಜೇಶ್ ನಾಯರ್ ಹಾಗೂ ಪ್ರೇಮ ಪ್ರಭಾಕರ್ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆತ್ಮೋನ್ನತಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮೂರ್ನಾಡು ವಿವೇಕ ಜಾಗ್ರತ ಬಳಗದ ಅಧ್ಯಕ್ಷರಾದ ಬಿ.ಟಿ.ದಿವ್ಯ ತೇಜಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ವರವಾಗಿ ಬಂದಿರುವ ಈ ಮಾನವ ಜನ್ಮದ ಒಳಗಿರುವ ಪ್ರಾಣಶಕ್ತಿಯಾದ ದೇವರ ಮಧುರ ವಾಣಿಯನ್ನು ಒಳಕಿವಿಯಿಂದ ಕೇಳಿ, ದಿವ್ಯದರುಶನ ಭಾಗ್ಯ ಪಡೆದು ದೇವರೇ ಆಗಿ ಇತರರನ್ನೂ ದೇವರಾಗಿಸುವುದು ಶಿಬಿರದ ಉದ್ದೇಶವಾಗಿದೆ. ಒಳಗಿರುವ ಆತ್ಮಶಕ್ತಿಯನ್ನು ಮೇಲೇರಿಸಿ ಪುನೀತರಾಗುವುದೇ ಆತ್ಮೋನ್ನತಿಯ ಸರಳ ವಿಧಾನವಾಗಿದೆ. ಪಶುತ್ವದಿಂದ ಮಾನವತ್ವವನ್ನು ಪಡೆದು, ದೈವತ್ವಕ್ಕೇರುವ ಅತ್ಯಪರೂಪದ ಈ ಸೌಭಾಗ್ಯವೇ ಆತ್ಮೋನ್ನತಿ ಶಿಬಿರವಾಗಿದೆ. ಬಂಧನ,…

Read More