ಲೇಖಕ: admin

ಮಡಿಕೇರಿ ಸೆ.13 : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.17 ರಂದು ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಆಚರಿಸಲಾಗುವುದೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಅಪರಾಹ್ನ 3 ಗಂಟೆಗೆ ನಗರದ ಬಾಲಭವನದಲ್ಲಿ ಕೊಡಗು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎಂ.ಹೆಚ್.ರಫೀಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ಕೊಡವ ವಾರಪತ್ರಿಕೆಯ ಸಂಪಾದಕ ಯು.ಎಂ.ಪೂವಯ್ಯ, ಸಾಹಿತಿ ಡಾಟಿ ಪೂವಯ್ಯ, ಕಲಾವಿದ ಜೂ.ವಿಷ್ಣುವರ್ಧನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳು, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಾಗುವಂತೆ ನಾಗರಾಜ್ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಸೆ.13 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವು ಸೆ.15 ರಂದು ಮಧ್ಯಾಹ್ನ 12 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ. ಪ್ರಸಾದ್, ಸಂತ ಅನ್ನಮ್ಮ ಶಾಲೆಯ ವ್ಯವಸ್ಥಾಪಕರು ರೆ.ಫಾ.ಐಸಾಕ್ ರತ್ನಾಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್ ಎನ್, ತಾ.ಪಂ.ಇಒ ಕೆ.ಸಿ ಅಪ್ಪಣ್ಣ, ಪೊಲೀಸ್ ಉಪಾಧ್ಯಕ್ಷರಾದ ಮೋಹನ್ ಕುಮಾರ್ ಆರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್,…

Read More

ಮಡಿಕೇರಿ ಸೆ.13 : ಕರ್ನಾಟಕ ಲೋಕಾಯುಕ್ತ ಮಡಿಕೇರಿ ಕಚೇರಿಯ ಡಿವೈಎಸ್‍ಪಿ ಎಂ.ಎಸ್.ಪವನ್ ಕುಮಾರ್ ಅವರು ಕುಶಾಲನಗರ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕುಂದುಕೊರತೆ ಆಲಿಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 1, ಕುಶಾಲನಗರ ಪುರಸಭೆಗೆ ಸಂಬಂಧಿಸಿದಂತೆ 2, ಗ್ರಾ.ಪಂ.ಸಂಬಂಧಿಸಿದಂತೆ 2, ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ 1 ದೂರು ಅರ್ಜಿಗಳು ಸ್ವೀಕೃತವಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಅರ್ಜಿಗಳನ್ನು ವಿಲೇವಾರಿ ಮಾಡಿ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್‍ಪಿ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.13 : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ‘ನಿಫಾ’ ವೈರಸ್ ಕಾಯಿಲೆಯು 1998 ಮತ್ತು 1999 ನೇ ಇಸವಿಯಲ್ಲಿ, ಮಲೇಷಿಯಾ ಮತ್ತು ಸಿಂಗಪೂರ ದೇಶಗಳಲ್ಲಿನ ಮನೆಯಲ್ಲಿ ಸಾಕಿರುವ ಹಂದಿಗಳಲ್ಲಿ ಪತ್ತೆಯಾಗಿದೆ. ಮಲೇಷಿಯಾ ದೇಶದ ನಿಫಾ ಗ್ರಾಮದಲ್ಲಿ ಈ ವೈರಸ್ ಪ್ರಭೇದವನ್ನು ಪ್ರಪ್ರಥಮವಾಗಿ ಕಂಡು ಹಿಡಿಯಲಾಗಿದೆ. ಮನೆಯಲ್ಲಿ ಸಾಕುವ ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳಿಗಳೂ ಸಹ ಸೋಂಕಿಗೆ ತುತ್ತಾಗುವ ಸಂಭವವಿರುತ್ತದೆ. ಈ ಕಾಯಿಲೆಯು 2001 ರಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿ ಗ್ರಾಮದಲ್ಲಿ ಈ ಮೊದಲು ಕಾಣಿಸಿಕೊಂಡಿತ್ತು ಅಲ್ಲದೆ ನೆರೆಯ ಬಾಂಗ್ಲಾ ದೇಶದಲ್ಲಿ 2003, 2004, 2005, 2007 ಹಾಗೂ 2008 ರಲ್ಲಿ ಕಾಣಿಸಿಕೊಂಡಿತ್ತು. ಒಟ್ಟಾರೆ ಮಲೇಷಿಯಾ, ಸಿಂಗಪೂರ್ ಬಾಂಗ್ಲಾದೇಶ ಮತ್ತು ಭಾರತದಲ್ಲಿ ಈವರೆಗೆ 477…

Read More

ಮಡಿಕೇರಿ ಸೆ.13 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಸೆ.15 ರಂದು ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಿಂದ (ತಾವುನಾಡ್) ಪಾದಯಾತ್ರೆ ಆರಂಭಿಸಲಾಗುವುದು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಶುಕ್ರವಾರ ಬೆಳಗ್ಗೆ 8 ಗಂಟೆಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಬೇಡಿಕೆ ಪರ ಪ್ರಾರ್ಥನೆ ಸಲ್ಲಿಸಿ 9ಗಂಟೆಗೆ ಪಾದಯಾತ್ರೆಯನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಮೊದಲ ಹಂತದಲ್ಲಿ ಸೆ.15 ರಂದು ತಾವುನಾಡ್, ದೇಶ ಮಂದ್ (ತಲಕಾವೇರಿ- ಭಾಗಮಂಡಲ-ಪುಲಿಕೋಟ್) 10.00 ಗಂಟೆಗೆ ಬಲ್ಲತ್‍ನಾಡ್ (ಬಲ್ಲಮಾವಟಿ) 2.30 ಗಂಟೆಗೆ ಬೆಂಗ್‍ನಾಡ್ (ಚೇರಂಬಾಣೆ) (ಮಡಿಕೇರಿ ತಾಲೂಕು) ಮೂಲಕ ಹಾದುಹೋಗುತ್ತದೆ. ಸೆ.16 ರಂದು ಬೆಳಗ್ಗೆ 9.30 ಗಂಟೆಗೆ ಕುಯ್ಯಂಗೇರಿನಾಡ್ “ಚೋರಂಗೆ ಮಾನಿ ಮಂದ್” ನಲ್ಲಿ…

Read More

ವಿರಾಜಪೇಟೆ ಸೆ.13 : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟದ ಕಬ್ಬಡಿ ಪಂದ್ಯಾವಳಿ ಬಾಳುಗೋಡು ಏಕಲವ್ಯ ಮಾದರಿ ವಸತಿ ಕಾಲೇಜಿನಲ್ಲಿ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ತಿತಿಮತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾಲ್ರ್ಸ್ ಡಿಸೋಜಾ, ವಿದ್ಯಾರ್ಥಿಗಳು ಉತ್ತಮ ಪೈಪೋಟಿಯೊಂದಿಗೆ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಐ.ಎಂ.ದಿಲನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಮಾರು 18ಕ್ಕೂ ಅಧಿಕ ಕಾಲೇಜುಗಳ ನಡುವೆ ಜರುಗಿದ ಈ ಕ್ರೀಡಾಕೂಟ ಬಾಲಕರ ವಿಭಾಗದಲ್ಲಿ ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜು ಸಿದ್ದಾಪುರ ಮತ್ತು ಬಾಲಕಿಯರ ವಿಭಾಗದಲ್ಲಿ ತಿತಿಮತಿ ಪದವಿ ಪೂರ್ವ ಕಾಲೇಜು ವಿಜೇತರಾಗಿ ಜಿಲ್ಲಾಮಟ್ಟವನ್ನು ಪ್ರವೇಶಿಸಿತು. ಬಾಲಕ ಮತ್ತು ಬಾಲಕಿಯರ ವಿಭಾಗದ ರನ್ನರ್ಸ್ ಸ್ಥಾನವನ್ನು ಕ್ರಮವಾಗಿ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಪೊನ್ನಂಪೇಟೆ ತಮ್ಮದಾಗಿಸಿಕೊಂಡಿತು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ತಿತಿಮತಿ ಮೊರಾರ್ಜಿ ಶಾಲೆ ಪ್ರಾಂಶುಪಾಲರಾದ ಷಡಕ್ಷರಿ ಮತ್ತು ಶ್ರೀಮಂಗಲ…

Read More

ಮಡಿಕೇರಿ ಸೆ.13 : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.17 ರಂದು ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಆಚರಿಸಲಾಗುವುದೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಅಪರಾಹ್ನ 3 ಗಂಟೆಗೆ ನಗರದ ಬಾಲಭವನದಲ್ಲಿ ಕೊಡಗು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎಂ.ಹೆಚ್.ರಫೀಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ಕೊಡವ ವಾರಪತ್ರಿಕೆಯ ಸಂಪಾದಕ ಯು.ಎಂ.ಪೂವಯ್ಯ, ಸಾಹಿತಿ ಡಾಟಿ ಪೂವಯ್ಯ, ಕಲಾವಿದ ಜೂ.ವಿಷ್ಣುವರ್ಧನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳು, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಾಗುವಂತೆ ನಾಗರಾಜ್ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಸೆ.13 : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಸೆ.29 ರಿಂದ ಅ.1 ರವರೆಗೆ ನಗರದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್‍ನ ಅಧ್ಯಕ್ಷ ಪ್ರವೀಣ್ ಶೇಟ್ ಪಂದ್ಯಾವಳಿ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ಯುವ ಪ್ರತಿಭಾವಂತ ಆಟಗಾರರಿಗೆ ಉತ್ತೇಜನ ನೀಡುವ ಪ್ರಮುಖ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಪಂದ್ಯಾವಳಿಯಲ್ಲಿ 250 ಕ್ಕೂ ಹೆಚ್ಚಿನ ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಪಂದ್ಯಾವಳಿ 14 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗ, 18 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗ, ಪುರುಷ ಮತ್ತು ಮಹಿಳೆಯರ ಮುಕ್ತ ಸಿಂಗಲ್ಸ್ ಮತ್ತು ಡಬಲ್ಸ್, ಮಿಕ್ಸ್‍ಡ್ ಡಬಲ್ಸ್, 50 ವರ್ಷ ಮೇಲ್ಪಟ್ಟವರ ಸಿಂಗಲ್ಸ್ ಮತ್ತು ಡಬಲ್ಸ್, 60 ವರ್ಷ ಮೇಲ್ಪಟ್ಟವರ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗಗಳಲ್ಲಿ ನಡೆಯಲಿದೆಯೆಂದು ಮಾಹಿತಿ ನೀಡಿದರು. ಬಾಲಕ ಮತ್ತು ಬಾಲಕಿಯರ ವಿಭಾಗಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.…

Read More

ಮಡಿಕೇರಿ ಸೆ.13 : ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಅನೇಕ ಸಮಸ್ಯೆಗಳಿವೆ, ಕಳೆದ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ತಾಲ್ಲೂಕು ಕಚೇರಿ ಬಗ್ಗೆ ಆಸಕ್ತಿ ತೋರದ ಪರಿಣಾಮ ಇಂದು ಜನರು ಕಷ್ಟ ಅನುಭವಿಸುವಂತ್ತಾಗಿದೆ ಎಂದು ಆರೋಪಿಸಿರುವ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಕೊರತೆಗಳ ಕುರಿತು ಅಧಿಕಾರಿಗಳು ಶಾಸಕರ ಗಮನ ಸೆಳೆಯಬೇಕೆಂದು ಒತ್ತಾಯಿಸಿದ್ದಾರೆ. ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಆಧಾರ್ ಕಾರ್ಡ್‍ಗೆ ಸಂಬಂಧಿಸಿದ ದಾಖಲೆ, ಆದಾಯ ದೃಢೀಕರಣ ಪತ್ರ ಮತ್ತಿತರ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಬೆಳಗ್ಗೆಯಿಂದ ಸಂಜೆಯವರೆಗೆ ಸಾಲುಗಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯ ತಾಂತ್ರಿಕ ವ್ಯವಸ್ಥೆಗಳು ಇನ್ನೂ ಕೂಡ ಮೇಲ್ದರ್ಜೆಗೇರಿಲ್ಲ, ಪ್ರತಿದಿನ ಸರ್ವರ್ ಸಮಸ್ಯೆ ಮತ್ತು ವಿದ್ಯುತ್ ಕಡಿತದ ಕಾರಣಗಳನ್ನು ನೀಡಲಾಗುತ್ತಿದೆ. ಸರ್ವರ್ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಅರ್ಜಿದಾರರು ನಿತ್ಯ ತಾಲ್ಲೂಕು ಕಚೇರಿಗೆ ಅಲೆಯಲೇಬೇಕಾಗಿದೆ. ರಾಜ್ಯ…

Read More

ಮಡಿಕೇರಿ ಸೆ.13 : ಇಂದಿನ ಯುವಜನಾಂಗ ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ. ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಸುಂದರ ಸಮಾಜವನ್ನು ನಿರ್ಮಿಸುವ ಕಾರ್ಯದಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಮಡಿಕೇರಿಯ ಅಹ್ಮದಿಯಾ ಮುಸ್ಲಿಂ ಜಮಾಅತ್’ನ ಧರ್ಮಗುರು ಖಲೀಂ ಖಾನ್ ಅಭಿಪ್ರಾಯಪಟ್ಟರು. ಮಡಿಕೇರಿಯ ಅಹ್ಮದಿಯಾ ಮುಸ್ಲಿಂ ಜಮಾಅತ್ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾ ಕಾರಾಗೃಹದ ಸಭಾಂಗಣದಲ್ಲಿ ಕಾರಾಗೃಹದಲ್ಲಿನ ಖೈದಿಗಳಿಗೆ ಆಯೋಜಿಸಲಾಗಿದ್ದ ‘ಆಮೂಲಾಗ್ರ ಸುಧಾರಣೆ'(ಡಿ-ರಾಡಿಕಲೈಸೇಷನ್) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹುಟ್ಟಿನಿಂದ ಎಲ್ಲರೂ ಮುಗ್ಧರು. ಬೆಳೆಯುತ್ತಾ ಹೋದಂತೆ ತಪ್ಪುಗಳನ್ನು ಮಾಡುತ್ತಾರೆ. ಆದರೆ ತಪ್ಪುಗಳ ಬಗ್ಗೆ ಪಶ್ಚಾತ್ತಾಪಪಟ್ಟು ಉತ್ತಮ ನಾಗರಿಕನಾಗಿ ಸುಧಾರಣೆ ಹೊಂದಲು ಖಂಡಿತವಾಗಿಯೂ ಸಾಧ್ಯವಿದೆ ಎಂದರು. ಅಹ್ಮದಿಯಾ ಜಮಾಅತ್’ನ ಜಾಗತಿಕ ನೇತಾರರಾದ ಹಝ್ರತ್ ಮಿರ್ಝಾ ಮಸ್ರೂರ್ ಅಹ್ಮದ್ ಅವರ “ಯಾವುದೇ ಮನುಷ್ಯನು ದೌರ್ಬಲ್ಯ ಮತ್ತು ನ್ಯೂನ್ಯತೆಗಳಿಂದ ಮುಕ್ತನಾಗಿರುವುದಿಲ್ಲ. ಆದ್ದರಿಂದ ಸುಧಾರಣೆಗೆ ನಾವು ನಿರಂತರ ಪ್ರಯತ್ನವನ್ನು ಮಾಡಬೇಕಾಗುತ್ತದೆ” ಎಂಬ…

Read More