ಮಡಿಕೇರಿ ಅ.11 : ಯುವ ದಸರಾ ನೃತ್ಯ ಸ್ಪರ್ಧೆಗೆ ತಂಡಗಳನ್ನು ಆಯ್ಕೆ ಮಾಡಲು, ಆಯ್ಕೆ ಪ್ರಕ್ರಿಯೆಯನ್ನು ಅ.14 ರಂದು ನಗರದ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಆಯ್ಕೆಯಾದ ತಂಡಗಳ ನಡುವೆ ಅ.21 ರಂದು ನಗರದ ಗಾಂಧಿ ಮೈದಾನದ ಭವ್ಯ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯ ನೀತಿ ನಿಯಮಗಳನ್ನು ಎಲ್ಲಾ ತಂಡಗಳು ಕಡ್ಡಾಯವಾಗಿ ಪಾಲಿಸಬೇಕು. ಶಾಸ್ತ್ರೀಯ ನೃತ್ಯ ಪ್ರಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಕಾರವನ್ನು ಆಯ್ದುಕೊಳ್ಳಬಹುದು. ಸ್ಪರ್ಧೆಗೆ ವಯೋಮಿತಿಯ ನಿರ್ಬಂಧವಿಲ್ಲ. ತಂಡವು ಕನಿಷ್ಠ 12 ಮಂದಿ ಗರಿಷ್ಠ 35 ಮಂದಿ ಕಲಾವಿದರು ಇರತಕ್ಕದ್ದು. ನೃತ್ಯಗಳು ಪರಿಕಲ್ಪನೆ ಹಾಗೂ ಸಾಮಾಜಿಕ ಸಂದೇಶವನ್ನು ಒಳಗೊಂಡಿರಬೇಕು. ಹಾಡಿನ ಭಾಷೆ ಹಾಗೂ ಉಡುಗೆ ತೊಡುಗೆಗಳು ಸಭ್ಯವಾಗಿರಬೇಕು. ಯಾರ ನಂಬಿಕೆಗಳಿಗೂ ನೋವನ್ನುಂಟು ಮಾಡಬಾರದು. ಕಾಲಾವಧಿ 10+2 ನಿಮಿಷಗಳು. ಬೆಂಕಿ, ಬಣ್ಣ, ನೀರು ಸೇರಿದಂತೆ ವೇದಿಕೆಗೆ ಹಾನಿ ಉಂಟುಮಾಡುವ ಯಾವುದೇ ಪರಿಕರಗಳನ್ನು ಬಳಸುವಂತಿಲ್ಲ. ತೀರ್ಪುಗಾರರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು. ಹೆಚ್ಚಿನ ಮಾಹಿತಿಗೆ ಕವನ್ ಕೋತ್ತೋಳಿ 9741292825, ಯುವ ದಸರಾ ಸಂಚಾಲಕರಾದ…
ಲೇಖಕ: admin
ಮಡಿಕೇರಿ ಅ.11 : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭಾಗಮಂಡಲ ಫೀಡರ್ನಲ್ಲಿ ತುಲಾ ಸಂಕ್ರಮಣ ಕಾವೇರಿ ತೀರ್ಥೋಧ್ಬವ ಪ್ರಯುಕ್ತ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ ಬೆಟ್ಟಗೇರಿ, ಅಪ್ಪಂಗಳ, ಚೇರಂಬಾಣೆ, ಕೋಪಟ್ಟಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಅ.11 : ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್ಡಿಆರ್ಎಫ್ ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡಲಾಯಿತು. ನಗರದ ಖಾಸಗಿ ಹೋಟೆಲ್ನಲ್ಲಿ 10 ನೇ ಬೆಟಾಲಿಯನ್ನ ಎನ್ಡಿಆರ್ಎಫ್ ತಂಡದ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಲೂ, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ ರಾಜಾ ಮಾತನಾಡಿ ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಿನ್ನೆಲೆ, ಈ ಬಾರಿಯೂ ಸಹ ಎನ್ಡಿಆರ್ಎಫ್ ತಂಡ ಜಿಲ್ಲೆಗೆ ಆಗಮಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿತ್ತು ಎಂದು ಹೇಳಿದರು. ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಬರುವ ಕೊಡಗು ವಿಶೇಷ ಜಿಲ್ಲೆಯಾಗಿದೆ. ಬರೆಕುಸಿತ, ಪ್ರವಾಹ ಉಂಟಾದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಅಣಕು ಪ್ರದರ್ಶನವನ್ನು ಏರ್ಪಡಿಸಿ ಜಿಲ್ಲೆಯ ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಿತ್ತು ಎಂದು ಹೇಳಿದರು. ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದ ಎನ್ಡಿಆರ್ಎಫ್ ತಂಡ ಹಲವು ಕಾರ್ಯ ಚಟುವಟಿಕೆಗಳನ್ನು…
ಕೂಡಿಗೆ ಅ.11: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉತ್ತರ ಕೊಡಗಿನ ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಶಾಲಾ ಮಕ್ಕಳ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ವರ್ಣ ರಂಜಿತ ತೆರೆಬಿತ್ತು. ಸುತ್ತಲೂ ಹಸಿರು ಪರಿಸರದಿಂದ ಕಂಗೊಳಿಸುತ್ತಿದ್ದ ಹಾಕಿ ಟರ್ಫ್ ಮೈದಾನದಲ್ಲಿ ರಾಜ್ಯಮಟ್ಟದ ಟೂರ್ನಿಯಿಂದ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡ ಕ್ರೀಡಾಳುಗಳ ಸಂಭ್ರಮ ಮುಗಿಲು ಮುಟ್ಟುತ್ತಿತ್ತು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಹಾಕಿಯ ತವರಾದ ಕೊಡಗಿನಲ್ಲಿ ಹಾಕಿ ಕ್ರೀಡೆಗೆ ಕ್ರೀಡಾಭಿಮಾನಿಗಳು ನೀಡುತ್ತಿರುವ ಪ್ರೋತ್ಸಾಹ ಅನನ್ಯವಾದುದು. ಕೊಡಗಿನಲ್ಲಿ ಕಲೆ, ಸಾಂಸ್ಕೃತಿಕ ಪರಂಪರೆಯೊಂದಿಗೆ ಹಾಕಿ ಕ್ರೀಡೆ ಕೂಡ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು. ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ರಾಷ್ಟ್ರೀಯ 17 ವಯೋಮಾನದ ಬಾಲಕಿಯರ ಹಾಕಿ ಟೂರ್ನಿಯ ಯಶಸ್ವಿ ಸಂಘಟನೆಗೆ ಎಲ್ಲರ ಪ್ರೋತ್ಸಾಹ ಅಗತ್ಯವಿದೆ ಎಂದು ಡಾ ಸದಾಶಿವಯ್ಯ ಪಲ್ಲೇದ್ ಹೇಳಿದರು. ಮೂರು ದಿನಗಳ ಕಾಲ ಹಾಕಿ ಟೂರ್ನಿ…
ಮಡಿಕೇರಿ ಅ.11 : ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯ ಮೈಸೂರು ವಿಭಾಗದಲ್ಲಿ ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ರಾಷ್ಟ್ರೀಯ ಕ್ರೀಡೆಗೆ ಆಯ್ಕೆಯಾಗಿದೆ. ಮೈಸೂರು ತಂಡದ ಸಿ.ಎಂ.ತ್ವಿಶ ದೇಚಮ್ಮ ಉತ್ತಮ ಗೋಲ್ ಕೀಪರ್ ಆಗಿ ಆಟ ಪ್ರದರ್ಶಿಸಿದರು. ಅಂತಿಮ ಟೂರ್ನಿಯಲ್ಲಿ ತೀವ್ರ ಸೆಣಸಾಟ ನಡೆಸಿದ ಉಭಯ ತಂಡಗಳು ಸಮಬಲ ಪ್ರದರ್ಶಿಸಿದವು. ಟೂರ್ನಿಯಲ್ಲಿ ಹೆಚ್ಚು ಗೋಲು ಗಳಿಸಿದ ಮೈಸೂರು ವಿಭಾಗದ ತಂಡವು ಪ್ರಥಮ ಸ್ಥಾನ ಗಳಿಸಿ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡಿತು. ಕೂಡಿಗೆ ಕ್ರೀಡಾಶಾಲಾ ತಂಡವು ದ್ವಿತೀಯ ಸ್ಥಾನ ಗಳಿಸಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ರಾಷ್ಟ್ರೀಯ ಟೂರ್ನಿಗೆ ಆಯ್ಕೆಗೊಂಡ ತಂಡಗಳಿಗೆ ಟ್ರೋಫಿ ವಿತರಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್ ಪಲ್ಲೇದ್, ಕ್ರೀಡಾಶಾಲೆಯ ಮುಖ್ಯ ಶಿಕ್ಷಕ ಬಿ.ಟಿ.ದೇವಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ…
ಮಡಿಕೇರಿ ಅ.11 : ಮಳೆಯ ಅಭಾವದಿಂದ ಕಾವೇರಿ ನೀರು ಹಂಚಿಕೆಯ ವಿವಾದ ಉದ್ಭವವಾದ ಯಾವುದೇ ಸಂದರ್ಭಗಳಲ್ಲಿ ಸರ್ಕಾರಗಳಾಗಲಿ, ರಾಜಕೀಯ ಪಕ್ಷಗಳಾಗಲಿ ಅದರ ಬಗೆಹರಿಕೆಗೆ ಆಸಕ್ತಿಯನ್ನೇ ತೋರಿಲ್ಲ. ಈ ಹಿನ್ನೆಲೆ ಕಾವೇರಿ ನದಿ ನೀರಿನ ಹಂಚಿಕೆಗೆ ಕನ್ನಡಿಗರೆಲ್ಲರ ಬೆಂಬಲವನ್ನು ಪಡೆಯುವ ನಿಟ್ಟಿನಲ್ಲಿ ‘ಕಾವೇರಿ ತಾಯಿ…ಕಾಪಾಡು ತಾಯಿ’ ಯಾತ್ರೆಯನ್ನು ಕದಂಬ ಸೈನ್ಯ ಹಮ್ಮಿಕೊಂಡಿರುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ತಮಿಳುನಾಡಿನಲ್ಲಿ ಕಾವೇರಿಯ ವಿಚಾರ ಎದುರಾದ ಸಂದರ್ಭಗಳಲ್ಲೆಲ್ಲ ಅಲ್ಲಿನ ಜನತೆ ಪಕ್ಷಾತೀತವಾಗಿ ಒಗ್ಗೂಡುತ್ತಾರೆ. ಆದರೆ, ಕರ್ನಾಟಕದಲ್ಲಿ ಅದು ಸಾಧ್ಯವಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿ, ಕಾವೇರಿ, ಕೃಷ್ಣ, ಮಹದಾಯಿ ಪ್ರತಿಯೊಬ್ಬ ಕನ್ನಡಿಗರ ಹೃದಯ ಬಡಿತವಾಗಬೇಕೆಂದು ಆಶಿಸಿದರು. ಮಳೆಯಿಲ್ಲದೆ ಕಾವೇರಿಯಲ್ಲಿ ನಮ್ಮ ಬಳಕೆಗೆ ಅಗತ್ಯ ನೀರಿಲ್ಲ ಎನ್ನುವುದನ್ನು ಕೇಂದ್ರಕ್ಕೆ ತಿಳಿಸುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿದ್ದರೆ, ವಿರೋಧ ಪಕ್ಷಗಳಿಂದ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನಗಳು ನಡೆಯುತ್ತಿಲ್ಲವೆಂದು ತೀವ್ರ ಬೇಸರ ವ್ಯಕ್ತಪಡಿಸಿ, ಎಲ್ಲಾ ಸರ್ಕಾರಗಳು ರಾಜಕೀಯ ಪಕ್ಷಗಳು ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತವನ್ನು ಬಲಿಕೊಡುತ್ತಿರುವುದಾಗಿ…
ಮಡಿಕೇರಿ ಅ.11 : ಪೊಡನೋಳನ ಕುಟುಂಬಸ್ಥರಿಂದ ಮಾಜಿ ಸೈನಿಕರಾದ ಪೊಡನೋಳನ ದಿನೇಶ್ ಹಾಗೂ ಪೊಡನೋಳನ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಪೊಡನೋಳನ ಕುಟುಂಬಸ್ಥರ ಐನ್ ಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕುಟುಂಬದ ಹಿರಿಯರು ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಕುಟುಂಬದ ಪ್ರಮುಖರು ಮಾತನಾಡಿ, ಕೋಪಟ್ಟಿ ಗ್ರಾಮದ ಪೊಡನೋಳನ ದಿನೇಶ್ ಕುಂದಚೇರಿ ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, 18 ವರ್ಷಗಳ ಕಾಲ ತಮ್ಮನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ನಿವೃತ್ತರಾದ ನಂತರ ಅನೇಕ ಸಂಘ, ಸಂಸ್ಥೆಗಳು ಸೇರಿದಂತೆ ಪಂಚಾಯಿತಿ ಅಧ್ಯಕ್ಷರಾಗಿ ಉತ್ತಮ ಜನಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಹೆಸರುವಾಸಿಯಾಗಿದ್ದಾರೆ. ಕೋಪಟ್ಟಿ ಗ್ರಾಮದ ಪೊಡನೋಳನ ಶ್ರೀನಿವಾಸ್ ಅವರು ಚೇರಂಬಾಣೆ ವಿ.ಎಸ್.ಎಸ್.ಎನ್ ಬ್ಯಾಂಕ್ ಉಪಾಧ್ಯಕ್ಷರಾಗಿ 2ನೇ ಬಾರಿಗೆ ಆಯ್ಕೆಯಾಗಿದ್ದು, ಇವರು ಸಹ 18 ವರ್ಷಗಳ ಕಾಲ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಅಲ್ಲದೇ ವಿವಿಧ ಸಂಘ, ಸಂಸ್ಥೆಯಲ್ಲಿ ಗುರುತಿಸಿಕೊಂಡು ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಇವರು ಕೋಪಟ್ಟಿ ಗ್ರಾಮದ ಮಹಾವಿಷ್ಣು ದೇವಾಲಯದ ಉಸ್ತುವಾರಿ ಹಾಗೂ ಪೊಡನೊಳನ ಐನ್ ಮನೆಯಲ್ಲಿ…
ಮಡಿಕೇರಿ ಅ.11 : ನಗರ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮಡಿಕೇರಿಯ ರೋಶಿನಿ ಆಳ್ವ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮಡಿಕೇರಿಯ ಅಶೋಕ್ ಆಳ್ವ, ಲತಾ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ರೋಶಿನಿ ಆಳ್ವ, ನಗರದ ಸಂತ ಜೋಸೆಫರ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯ ದೈಹಿಕ ಶಿಕ್ಷಕಿ ಪ್ರಮೀಳಾ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ಮಡಿಕೇರಿ ಅ.11 : ಭಾರತದಲ್ಲಿನ ಆಚರಣೆಗಳು ಸಂಸ್ಕೃತಿ, ಸಂಪ್ರದಾಯ ಮತ್ತು ಏಕತೆಯ ರೋಮಾಂಚಕ ಅಭಿವ್ಯಕ್ತಿಯಾಗಿದ್ದು, ಎಲ್ಲಾ ಹಿನ್ನೆಲೆಯ ಜನರನ್ನು ವಿಶೇಷ ಸಂದರ್ಭಗಳಲ್ಲಿ ಸಂತೋಷದಿಂದಿರಲು, ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮ ಆಚರಣೆಗಳು ಉತ್ಸಾಹಭರಿತ ಮತ್ತು ಶಕ್ತಿಯುತ ಮೆರವಣಿಗೆಗಳಿಗೆ ಹೆಸರುವಾಸಿ ಯಾಗಿದೆ. ಈ ಹೆಚ್ಚಿನ ಉತ್ಸವಗಳಲ್ಲಿ ಸಂಗೀತವು ಒಂದು ಮುಖ್ಯ ಭಾಗವಾಗಿದ್ದು ಅದು ಮನಸ್ಸನ್ನು ಸೂರೆಗೊಳ್ಳುತ್ತದೆ. ಇದರಲ್ಲಿ ಸಾಮಾನ್ಯವಾಗಿ ಹಾಡುಗಳು, ವಾದ್ಯಗಳಾದ ಕೊಳಲು, ಶೇಹನಾಯ್ ಯಿಂದ ಹಿಡಿದು, ಚಂಡೆವಾದನ, ಡೋಲು, ಕೊಂಬು ಕೊಟ್ಟು, ಹಿತ್ತಾಳೆ ಬ್ಯಾಂಡ್ಗಳು, ಮತ್ತು ಕೆಲವು ಸಮಯಗಳಲ್ಲಿ ಕರ್ಣ ಕಠೋರ ಸಂಗೀತವನ್ನು ಕೂಡಾ ಒಳಗೊಂಡಿರುತ್ತವೆ. ಈ ಕೊನೆಯ ಅಂಶವನ್ನು ಹೆಚ್ಚು ಮಾಡುತ್ತಿರುವುದರಲ್ಲಿ ಒಂದು , ಡಿಜೆ ಧ್ವನಿ ವ್ಯವಸ್ಥೆಗಳ ಬಳಕೆ. ಇದು ಜನರಲ್ಲಿ ಸಂಭ್ರಮದ ವಾತಾವರಣವನ್ನು ಉಂಟು ಮಾಡಿ, ಮನಸ್ಸನ್ನು ಹುಚ್ಚೆಬ್ಬಿಸುತ್ತದೆ. ಡಿಜೆ ಸೌಂಡ್ ಸಿಸ್ಟಂಗಳು, ಅವುಗಳ ಉತ್ಕರ್ಷದ ಬಾಸ್ ಮತ್ತು ಹೆಚ್ಚಿನ ಶಬ್ದಕ್ಕೆ ಹೆಸರುವಾಸಿಯಾಗಿದ್ದು, ಇತ್ತೀಚಿಗಿನ ದಿನಗಳಲ್ಲಿ ಎಲ್ಲಾ ಹಬ್ಬ, ಮೆರವಣಿಗೆ, ಸಂತೋಷ ಕೂಟದ ಅವಿಭಾಜ್ಯ ಅಂಗವಾಗಿದೆ. ಕೆಲವೊಮ್ಮೆ…
ಮಡಿಕೇರಿ ಅ.11 : ಮಡಿಕೇರಿ ದಸರಾ ಅಂಗವಾಗಿ ಸಾಂಸ್ಕೃತಿಕ ಕಾಯ೯ಕ್ರಮಗಳು ಅ.16 ರಿಂದ 24 ರವರೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜರುಗಲಿದ್ದು, ಈ ವಷ೯ ವೈವಿಧ್ಯಮಯ ಕಾಯ೯ಕ್ರಮಗಳನ್ನು ಸ್ಥಳೀಯ ಮತ್ತು ಹೊರಜಿಲ್ಲೆಯ ಕಲಾವಿದರಿಂದ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿನ ಕಲಾಸಂಭ್ರಮ ವೇದಿಕೆಯಲ್ಲಿ ಪ್ರತಿ ನಿತ್ಯ ಸಂಜೆ 6.30 ಗಂಟೆಯಿಂದ ಸಾಂಸ್ಕೃತಿಕ ವೈವಿಧ್ಯತೆಯ ಕಾಯ೯ಕ್ರಮಗಳು ಪ್ರದಶಿ೯ತಗೊಳ್ಳಲಿದೆ. ಅ.16 ರಂದು ಸೋಮವಾರ ಅಂತರರಾಷ್ಟ್ರೀಯ ಖ್ಯಾತಿಯ ಬೆಂಗಳೂರಿನ ಕಲಾವಿದ ಡ್ರಮ್ ದೇವಾ ಅವರ ತಂಡದಿಂದ ವಾದ್ಯ ಮತ್ತು ಸಂಗೀತ ಕಾಯ೯ಕ್ರಮ ಇರುತ್ತದೆ. ವೀರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯಿಂದ ನೃತ್ಯ ವೈವಿಧ್ಯ, ಮಡಿಕೇರಿಯ ಕಲಾಕಾವ್ಯ ನೃತ್ಯ ಶಾಲೆಯಿಂದ ನೃತ್ಯ ವೈವಿಧ್ಯ , ಮದೆನಾಡಿನ ಶ್ರೀ ಆದಿಚುಂಚನಗಿರಿ ಪಬ್ಲಿಕ್ ಸ್ಕೂಲ್ ವಿದ್ಯಾಥಿ೯ಗಳಿಂದ ಶಿವಚರಿತಾಮೖತಂ ನೖತ್ಯ ರೂಪಕ ಸೇರಿದಂತೆ ವಿವಿಧ ಕಾಯ೯ಕ್ರಮಗಳು ಮೊದಲ ದಿನದ ಆಕಷ೯ಣೆಯಾಗಿದೆ. ಅ.17 ರಂದು ಮಂಗಳವಾರ ಮಡಿಕೇರಿಯ ನಾಟ್ಯ ನಿಕೇತನ ನೃತ್ಯ ಶಾಲಾ…






