ಮಡಿಕೇರಿ ಸೆ.12 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಕೈಮೀರುತ್ತಿದೆ. ಸಿದ್ದಾಪುರದ ಮಾಲ್ದಾರೆ- ಹುಂಡಿ ಗ್ರಾಮ ವ್ಯಾಪ್ತಿಯಲ್ಲಿ 20 ಕ್ಕೂ ಅಧಿಕ ಸಂಖ್ಯೆಯ ಗಜ ಪರಿವಾರ ಹಾಡಹಗಲೇ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಜೀವಭಯ ಮೂಡಿದೆ. ಕಳೆದ ಒಂದು ವಾರದಿಂದ ತೋಟದಿಂದ ತೋಟಕ್ಕೆ ಸಂಚರಿಸುತ್ತಿರುವ ಕಾಡಾನೆಗಳ ಹಿಂಡು ಅಪಾರ ನಷ್ಟ ಉಂಟು ಮಾಡಿವೆ. ಮೂರಕ್ಕೂ ಹೆಚ್ಚು ಮರಿಗಳ ಸಹಿತ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿರುವ ಗಜ ಪರಿವಾರದಿಂದ ಕಾರ್ಮಿಕರು ತೋಟಗಳಿಗೆ ಕೆಲಸಕ್ಕೆ ಬರುತ್ತಿಲ್ಲ. ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಲು ಧೈರ್ಯ ತೋರುತ್ತಿಲ್ಲ. ವಾಹನ ಚಾಲಕರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿದೆ. ಮರಿಗಳು ಜೊತೆಯಲ್ಲೇ ಇರುವುದರಿಂದ ಮನುಷ್ಯರ ಮೇಲೆ ದಿಢೀರ್ ದಾಳಿ ನಡೆಸುವ ಸಾಧ್ಯತೆಗಳೇ ಹೆಚ್ಚಾಗಿದೆ. ಅರಣ್ಯ ಸಿಬ್ಬಂದಿಗಳು ಆನೆಗಳನ್ನು ಕಾಡಿಗಟ್ಟಿದರೂ ಮರಳಿ ಬಂದು ತೋಟಗಳಲ್ಲಿ ನೆಲೆ ನಿಲ್ಲುತ್ತಿವೆ. ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದು, ಅರಣ್ಯ ಇಲಾಖೆ ಕೂಡ ಅಸಹಾಯಕವಾಗಿದೆ. ಕಾಡಾನೆಗಳ ದಾಳಿಯನ್ನು ತಡೆಯಲು ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಕಳೆದ ಒಂದು ದಶಕದಿಂದ ಗ್ರಾಮಸ್ಥರು ಒತ್ತಾಯಿಸುತ್ತಲೇ…
ಲೇಖಕ: admin
ಮಡಿಕೇರಿ ಸೆ.12 : ವಿರಾಜಪೇಟೆ ತಾಲ್ಲೂಕು ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಸೆ.20 ರಂದು ಬೆಳಗ್ಗೆ 10.30 ಗಂಟೆಗೆ ಚಪ್ಪಂಡ ಹರೀಶ್ ಉತ್ತಯ್ಯ ಅಧ್ಯಕ್ಷತೆಯಲ್ಲಿ ‘ಅಮರ ಜವಾನ ಸ್ಮಾರಕ’ದಲ್ಲಿ ನಡೆಯಲಿದೆ. ಹಾಗೆಯೇ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ದಿವಂಗತ ಮಾಜಿ ಯೋಧರಿಗೆ ಶ್ರದ್ಧಾಂಜಲಿಯನ್ನು ಸಂಘದ ವತಿಯಿಂದ ಅರ್ಪಿಸಲಾಗುವುದು. ಕರ್ನಲ್ ಮಂಡೆಟಿರ ಅವಿನ್ ಉತ್ತಯ್ಯ(ಸೇನಾ ಮೆಡಲ್), ಕರ್ನಲ್ ಮಾಚಿಮಂಡ ಡಿ.ಮುತ್ತಪ್ಪ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ತಹಶೀಲ್ದಾರರಾದ ಎಚ್.ಎನ್.ರಾಮಚಂದ್ರ, ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕುಮಾರ್, ಕೊಂಗಂಡ ಬೋಜಮ್ಮ ಮುತ್ತಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.
ಕೊಡ್ಲಿಪೇಟೆ ಸೆ.12 : 2022.23 ನೇ ಸಂಘವು ಉತ್ತಮವಾಗಿ ಕಾರ್ಯ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ರೂ. 61 ಲಕ್ಷ ಲಾಭಗಳಿಸಿ ಮುನ್ನಡೆಯುತ್ತಿದ್ದು,ಸಾಲ ಪಡೆದ ಸಂಘದ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಕೊಡ್ಲಿಪೇಟೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಕೆ.ಪಿ.ಪ್ರಸನ್ನ ಮನವಿ ಮಾಡಿದರು. ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 136.98 ಲಕ್ಷ ಗೊಬ್ಬರ ಮತ್ತು ನಿಯಂತ್ರಿತ ದಾಸ್ತಾನು ಮಾರಾಟ ಮಾಡಲಾಗಿದೆ. ಎಲ್ಲಾ ಸದಸ್ಯರು ತಮ್ಮದೇ ಸಂಸ್ಥೆಯಲ್ಲಿ ವ್ಯವಹರಿಸಿ ಸಂಘದ ಬೆಳವಣಿಗೆಗೆ ಒತ್ತು ನೀಡಬೇಕು ಎಂದರು. ಸಂಘದಿಂದ ಇ ಸ್ಟಾಂಪ್ ವಿತರಿಸಲು ಪರವಾನಗಿ ಪಡೆದು ಇ ಸ್ಟಾಂಪ್ ವಿತರಿಸುತ್ತಿದ್ದು,ಇದರ ಪ್ರಯೋಜನವನ್ನು ಸದಸ್ಯರು ಪಡೆದುಕೊಳ್ಳಬೇಕು ಎಂದರು. ಸಭೆಯ ಆರಂಭದಲ್ಲಿ ನಕಲಿ ಚಿನ್ನ(ರೋಲ್ ಗೋಲ್ಡ್) ಅಡವಿಟ್ಟು ಚಿನ್ನಾಭರಣ ಸಾಲ ಪಡೆದು ಸಂಘಕ್ಕೆ ವಂಚನೆ ಮಾಡಿದ ಪ್ರಕರಣ ಮಹಾಸಭೆಯಲ್ಲಿ ತೀವ್ರ ಚರ್ಚೆಗೆ…
ಮಡಿಕೇರಿ ಸೆ.12 : ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಶ್ (ಸ್ಕಾಲರ್ಶಿಪ್ ಫಾರ್ ಪ್ರಮೋಷನ್ ಆಫ್ ಆಟಿಟ್ಯೂಡ್ ಅಂಡ್ ರಿಸರ್ಚ್ ಇನ್ ಸ್ಟ್ಯಾಂಪ್ ಹಾಬಿ) ಸ್ಟ್ಯಾಂಪ್ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನ. ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ. ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆ ಅಡಿ 2022-23 ಶೈಕ್ಷಣಿಕ ವರ್ಷದಲ್ಲಿ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ ಫಿಲಾಟೆಲಿಕ್ ಕ್ಲಬ್ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.…
ಮಡಿಕೇರಿ ಸೆ.12 : ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯುವ ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿವಿಧ ಸಮಾಜಗಳ ಮುಖಂಡರ ಜೊತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮಾಜದ ಮುಖಂಡರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ಭಾರತ ಸಾರ್ವಭೌಮತ್ವ, ಅಖಂಡತೆ ಮತ್ತು ಏಕತೆಯನ್ನು ಎತ್ತಿ ಹಿಡಿಯುವುದರ ಜೊತೆಗೆ, ಕಾಪಾಡುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ…
ಮಡಿಕೇರಿ ಸೆ.12 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ 2022-23 ನೇ ಸಾಲಿನ ಹಾಗೂ 56ನೇ ವಾರ್ಷಿಕ ಮಹಾಸಭೆಯು ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಯೂನಿಯನ್ ಸಭಾಂಗಣದಲ್ಲಿ ನಡೆಯಿತು. ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಮಾತನಾಡಿ, ಸಹಕಾರ ಸಂಘಗಳ ಸದಸ್ಯರು ಸಕ್ರೀಯವಾಗಿ ಸಂಘದ ಕಾರ್ಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಬೇಕು. ಆಗ ಮಾನದಂಡಗಳಿಗೆ ಅನುಸಾರವಾಗಿ ಚುನಾವಣೆ ಹಕ್ಕು ಹಾಗೂ ಸದಸ್ಯತ್ವ ಅರ್ಹತೆಗಳು ಮುಂದುವರೆಯುತ್ತವೆ. ಯೂನಿಯನ್ ಪ್ರಮುಖ ಉದ್ದೇಶವಾದ ಶಿಕ್ಷಣ, ತರಬೇತಿ, ಪ್ರಚಾರ ಕಾರ್ಯಕ್ರಮಗಳಲ್ಲಿ ಸದಸ್ಯ ಸಂಘಗಳ ಪ್ರತಿನಿಧಿಗಳು ಕಡ್ಡಾಯವಾಗಿ ಹಾಜರಾಗಿ ಮಾಹಿತಿಯನ್ನು ಸದಸ್ಯರಿಗೆ ತಲುಪುವ ಕೆಲಸ ಮಾಡಬೇಕು. ಸದಸ್ಯ ಸಂಘಗಳ ಕೋರಿಕೆ ಅನ್ವಯ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೀತಿಯ ತರಬೇತಿಗಳನ್ನು, ಕಾರ್ಯಾಗಾರ ಹಮ್ಮಿಕೊಂಡು ಸಂಘಗಳ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಪ್ರಯತ್ನಿಸಬಹುದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಕಾಫಿಗೆ ಉಚಿತ 10 ಎಚ್.ಪಿ. ಉಚಿತ ವಿದ್ಯುತ್ ಪೂರೈಸಬೇಕೆಂದು ಸರ್ಕಾರವನ್ನು ಕೋರುವಂತೆ ಈ…
ಮಡಿಕೇರಿ ಸೆ.12 : “ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಸೆಪ್ಟೆಂಬರ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11ಕೆವಿ ಆಲೂರು ಸಿದ್ದಾಪುರ, 66/11ಕೆವಿ ಸುಂಟಿಕೊಪ್ಪ, 66/11ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ, ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಾಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.12 : ಹೊಸ್ಕೇರಿ ಗ್ರಾಮ ವ್ಯಾಪ್ತಿಯಲ್ಲಿರುವ ದೇವರಕಾಡಿನಲ್ಲಿ ವಿದ್ಯುತ್ ಸಬ್ ಸ್ಟೇಷನ್ ಸ್ಥಾಪಿಸಲು ಚೆಸ್ಕಾಂ ಯೋಜನೆ ರೂಪಿಸಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಹೊಸ್ಕೇರಿ ಮತ್ತು ಮರಗೋಡು ಗ್ರಾಮಸ್ಥರು ಯೋಜನೆಯನ್ನು ವಿರೋಧಿಸಿ ಶಾಸಕರುಗಳು, ಜಿಲ್ಲಾಡಳಿತ, ಅರಣ್ಯ ಇಲಾಖೆ, ಚೆಸ್ಕಾಂ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಆದರೆ ಸೂಕ್ತ ಉತ್ತರ ದೊರೆಯದೆ ಇರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ ಎಂದು ಗಮನ ಸೆಳೆದಿದ್ದಾರೆ. ತಲೆತಲಾಂತರಗಳಿಂದ ಗ್ರಾಮಸ್ಥರು ಪ್ರಕೃತಿಯನ್ನೇ ದೇವರೆಂದು ಭಾವಿಸಿ ಇಲ್ಲಿನ ಅರಣ್ಯವನ್ನು ನಾಶ ಮಾಡದೆ ಉಳಿಸಿಕೊಂಡು ಬಂದಿದ್ದಾರೆ. ಗ್ರಾಮ ದೇವತೆಗಳಾದ ಶ್ರೀಚಾಮುಂಡೇಶ್ವರಿ, ಶ್ರೀಅಯ್ಯಪ್ಪ ದೇವರು ಹಾಗೂ ನಾಗದೇವರ ಸಾನಿಧ್ಯ ಇಲ್ಲಿದೆ. ಸಬ್ ಸ್ಟೇಷನ್ ಯೋಜನೆ ಅನುಷ್ಠಾನದಿಂದ ದೇವರಕಾಡು ನಾಶವಾಗುವುದಲ್ಲದೆ ಪರಿಸರ ಮಾಲಿನ್ಯವಾಗಲಿದೆ ಮತ್ತು ಸುತ್ತಮುತ್ತಲ ಗ್ರಾಮಸ್ಥರ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ದೇವರಕಾಡು ಮತ್ತು ಗ್ರಾಮಸ್ಥರ ಪರವಾಗಿ…
ಮಡಿಕೇರಿ ಸೆ.12 : ಮೂರ್ನಾಡು ಸಮುದಾಯ ಭವನದಲ್ಲಿ ಪೋಷಣ್ ಮಾಸಾಚರಣೆ ನಡೆಯಿತು. ಮೂರ್ನಾಡು ವೃತ್ತಕ್ಕೆ ಸಂಬಂಧಿಸಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಾಲ್ಗೊಂಡ ಫಲಾನುಭವಿಗಳು ವಿವಿಧ ರೀತಿಯ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಿದರು. ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸವಿತ ಕೀರ್ತನ್ ಪೋಷಣ್ ಮಾಸಾಚರಣೆಯ ಉದ್ದೇಶ, ಪೌಷ್ಟಿಕ ಆಹಾರದ ಮಹತ್ವ, ಮಾತೃವಂದನ ಸಪ್ತಾಹ, ಆಹಾರದಲ್ಲಿರುವ ಔಷಧೀಯ ಗುಣಗಳು, ಪೌಷ್ಟಿಕತೆಯ ಬಗ್ಗೆ ಮಾಹಿತಿ ನೀಡಿದರು.
ಕಡಂಗ ಸೆ.12 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುತ್ತಿರುವ 2023-24 ನೇ ಸಾಲಿನ ಎರಡನೇ ಜೊತೆ ಸಮವಸ್ತ್ರದ ಬಟ್ಟೆ, ಶೂ ಹಾಗೂ ಸಾಕ್ಸ್ ಗಳ್ಳನ್ನು ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನರಿಯಂದಡ ಗ್ರಾ.ಪಂ ಅಧ್ಯಕ್ಷ ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಮುಖ್ಯ ಶಿಕ್ಷಕಿ ಶಾಂತಿ ಕುಮಾರಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಫಾತಿಮಾ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾ.ಪಂ ಸದಸ್ಯರಾದ ಸುಬೀರ್, ರಾಣಿ ಗಣಪತಿ, ವಾಣಿ ಕವಿತಾ ,ಮಮ್ಮದ್, ಶಿಕ್ಷಕ ವೃಂದದವರು, ಗ್ರಾಮಸ್ಥರು ಹಾಜರಿದ್ದರು. ವರದಿ : ನೌಫಲ್






