ಲೇಖಕ: admin

ಮಡಿಕೇರಿ ಅ.11 : ಮಳೆಯ ಅಭಾವದಿಂದ ಕಾವೇರಿ ನೀರು ಹಂಚಿಕೆಯ ವಿವಾದ ಉದ್ಭವವಾದ ಯಾವುದೇ ಸಂದರ್ಭಗಳಲ್ಲಿ ಸರ್ಕಾರಗಳಾಗಲಿ, ರಾಜಕೀಯ ಪಕ್ಷಗಳಾಗಲಿ ಅದರ ಬಗೆಹರಿಕೆಗೆ ಆಸಕ್ತಿಯನ್ನೇ ತೋರಿಲ್ಲ. ಈ ಹಿನ್ನೆಲೆ ಕಾವೇರಿ ನದಿ ನೀರಿನ ಹಂಚಿಕೆಗೆ ಕನ್ನಡಿಗರೆಲ್ಲರ ಬೆಂಬಲವನ್ನು ಪಡೆಯುವ ನಿಟ್ಟಿನಲ್ಲಿ ‘ಕಾವೇರಿ ತಾಯಿ…ಕಾಪಾಡು ತಾಯಿ’ ಯಾತ್ರೆಯನ್ನು ಕದಂಬ ಸೈನ್ಯ ಹಮ್ಮಿಕೊಂಡಿರುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆರೆಯ ತಮಿಳುನಾಡಿನಲ್ಲಿ ಕಾವೇರಿಯ ವಿಚಾರ ಎದುರಾದ ಸಂದರ್ಭಗಳಲ್ಲೆಲ್ಲ ಅಲ್ಲಿನ ಜನತೆ ಪಕ್ಷಾತೀತವಾಗಿ ಒಗ್ಗೂಡುತ್ತಾರೆ. ಆದರೆ, ಕರ್ನಾಟಕದಲ್ಲಿ ಅದು ಸಾಧ್ಯವಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿ, ಕಾವೇರಿ, ಕೃಷ್ಣ, ಮಹದಾಯಿ ಪ್ರತಿಯೊಬ್ಬ ಕನ್ನಡಿಗರ ಹೃದಯ ಬಡಿತವಾಗಬೇಕೆಂದು ಆಶಿಸಿದರು. ಮಳೆಯಿಲ್ಲದೆ ಕಾವೇರಿಯಲ್ಲಿ ನಮ್ಮ ಬಳಕೆಗೆ ಅಗತ್ಯ ನೀರಿಲ್ಲ ಎನ್ನುವುದನ್ನು ಕೇಂದ್ರಕ್ಕೆ ತಿಳಿಸುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿದ್ದರೆ, ವಿರೋಧ ಪಕ್ಷಗಳಿಂದ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನಗಳು ನಡೆಯುತ್ತಿಲ್ಲವೆಂದು ತೀವ್ರ ಬೇಸರ ವ್ಯಕ್ತಪಡಿಸಿ, ಎಲ್ಲಾ ಸರ್ಕಾರಗಳು ರಾಜಕೀಯ ಪಕ್ಷಗಳು ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತವನ್ನು ಬಲಿಕೊಡುತ್ತಿರುವುದಾಗಿ…

Read More

ಮಡಿಕೇರಿ ಅ.11 : ಪೊಡನೋಳನ ಕುಟುಂಬಸ್ಥರಿಂದ ಮಾಜಿ ಸೈನಿಕರಾದ ಪೊಡನೋಳನ ದಿನೇಶ್ ಹಾಗೂ ಪೊಡನೋಳನ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಪೊಡನೋಳನ ಕುಟುಂಬಸ್ಥರ ಐನ್ ಮನೆಯಲ್ಲಿ  ನಡೆದ ಸರಳ ಕಾರ್ಯಕ್ರಮದಲ್ಲಿ ಕುಟುಂಬದ ಹಿರಿಯರು ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಕುಟುಂಬದ ಪ್ರಮುಖರು ಮಾತನಾಡಿ, ಕೋಪಟ್ಟಿ ಗ್ರಾಮದ ಪೊಡನೋಳನ ದಿನೇಶ್ ಕುಂದಚೇರಿ ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, 18 ವರ್ಷಗಳ ಕಾಲ ತಮ್ಮನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ನಿವೃತ್ತರಾದ ನಂತರ ಅನೇಕ ಸಂಘ, ಸಂಸ್ಥೆಗಳು ಸೇರಿದಂತೆ ಪಂಚಾಯಿತಿ ಅಧ್ಯಕ್ಷರಾಗಿ ಉತ್ತಮ ಜನಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಹೆಸರುವಾಸಿಯಾಗಿದ್ದಾರೆ. ಕೋಪಟ್ಟಿ ಗ್ರಾಮದ ಪೊಡನೋಳನ ಶ್ರೀನಿವಾಸ್ ಅವರು ಚೇರಂಬಾಣೆ ವಿ.ಎಸ್.ಎಸ್.ಎನ್ ಬ್ಯಾಂಕ್ ಉಪಾಧ್ಯಕ್ಷರಾಗಿ 2ನೇ ಬಾರಿಗೆ ಆಯ್ಕೆಯಾಗಿದ್ದು, ಇವರು ಸಹ 18 ವರ್ಷಗಳ ಕಾಲ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಅಲ್ಲದೇ ವಿವಿಧ ಸಂಘ, ಸಂಸ್ಥೆಯಲ್ಲಿ ಗುರುತಿಸಿಕೊಂಡು ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಇವರು  ಕೋಪಟ್ಟಿ ಗ್ರಾಮದ ಮಹಾವಿಷ್ಣು ದೇವಾಲಯದ ಉಸ್ತುವಾರಿ ಹಾಗೂ ಪೊಡನೊಳನ ಐನ್ ಮನೆಯಲ್ಲಿ…

Read More

ಮಡಿಕೇರಿ ಅ.11 : ನಗರ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮಡಿಕೇರಿಯ ರೋಶಿನಿ ಆಳ್ವ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮಡಿಕೇರಿಯ ಅಶೋಕ್ ಆಳ್ವ, ಲತಾ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ರೋಶಿನಿ ಆಳ್ವ, ನಗರದ ಸಂತ ಜೋಸೆಫರ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯ ದೈಹಿಕ ಶಿಕ್ಷಕಿ ಪ್ರಮೀಳಾ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

Read More

ಮಡಿಕೇರಿ ಅ.11 :  ಭಾರತದಲ್ಲಿನ ಆಚರಣೆಗಳು ಸಂಸ್ಕೃತಿ, ಸಂಪ್ರದಾಯ ಮತ್ತು ಏಕತೆಯ ರೋಮಾಂಚಕ ಅಭಿವ್ಯಕ್ತಿಯಾಗಿದ್ದು, ಎಲ್ಲಾ ಹಿನ್ನೆಲೆಯ ಜನರನ್ನು ವಿಶೇಷ ಸಂದರ್ಭಗಳಲ್ಲಿ ಸಂತೋಷದಿಂದಿರಲು, ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮ ಆಚರಣೆಗಳು ಉತ್ಸಾಹಭರಿತ ಮತ್ತು ಶಕ್ತಿಯುತ ಮೆರವಣಿಗೆಗಳಿಗೆ ಹೆಸರುವಾಸಿ ಯಾಗಿದೆ. ಈ ಹೆಚ್ಚಿನ ಉತ್ಸವಗಳಲ್ಲಿ ಸಂಗೀತವು ಒಂದು ಮುಖ್ಯ ಭಾಗವಾಗಿದ್ದು ಅದು ಮನಸ್ಸನ್ನು ಸೂರೆಗೊಳ್ಳುತ್ತದೆ. ಇದರಲ್ಲಿ ಸಾಮಾನ್ಯವಾಗಿ ಹಾಡುಗಳು, ವಾದ್ಯಗಳಾದ ಕೊಳಲು, ಶೇಹನಾಯ್ ಯಿಂದ ಹಿಡಿದು, ಚಂಡೆವಾದನ, ಡೋಲು, ಕೊಂಬು ಕೊಟ್ಟು, ಹಿತ್ತಾಳೆ ಬ್ಯಾಂಡ್‌ಗಳು, ಮತ್ತು ಕೆಲವು ಸಮಯಗಳಲ್ಲಿ ಕರ್ಣ ಕಠೋರ ಸಂಗೀತವನ್ನು ಕೂಡಾ ಒಳಗೊಂಡಿರುತ್ತವೆ. ಈ ಕೊನೆಯ ಅಂಶವನ್ನು ಹೆಚ್ಚು ಮಾಡುತ್ತಿರುವುದರಲ್ಲಿ ಒಂದು , ಡಿಜೆ ಧ್ವನಿ ವ್ಯವಸ್ಥೆಗಳ ಬಳಕೆ. ಇದು ಜನರಲ್ಲಿ ಸಂಭ್ರಮದ ವಾತಾವರಣವನ್ನು ಉಂಟು ಮಾಡಿ, ಮನಸ್ಸನ್ನು ಹುಚ್ಚೆಬ್ಬಿಸುತ್ತದೆ. ಡಿಜೆ ಸೌಂಡ್ ಸಿಸ್ಟಂಗಳು, ಅವುಗಳ ಉತ್ಕರ್ಷದ ಬಾಸ್ ಮತ್ತು ಹೆಚ್ಚಿನ ಶಬ್ದಕ್ಕೆ ಹೆಸರುವಾಸಿಯಾಗಿದ್ದು, ಇತ್ತೀಚಿಗಿನ ದಿನಗಳಲ್ಲಿ ಎಲ್ಲಾ ಹಬ್ಬ, ಮೆರವಣಿಗೆ, ಸಂತೋಷ ಕೂಟದ ಅವಿಭಾಜ್ಯ ಅಂಗವಾಗಿದೆ. ಕೆಲವೊಮ್ಮೆ…

Read More

ಮಡಿಕೇರಿ ಅ.11 : ಮಡಿಕೇರಿ ದಸರಾ ಅಂಗವಾಗಿ  ಸಾಂಸ್ಕೃತಿಕ ಕಾಯ೯ಕ್ರಮಗಳು ಅ.16 ರಿಂದ 24 ರವರೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜರುಗಲಿದ್ದು, ಈ ವಷ೯ ವೈವಿಧ್ಯಮಯ ಕಾಯ೯ಕ್ರಮಗಳನ್ನು ಸ್ಥಳೀಯ ಮತ್ತು ಹೊರಜಿಲ್ಲೆಯ ಕಲಾವಿದರಿಂದ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿನ ಕಲಾಸಂಭ್ರಮ ವೇದಿಕೆಯಲ್ಲಿ ಪ್ರತಿ ನಿತ್ಯ ಸಂಜೆ 6.30 ಗಂಟೆಯಿಂದ ಸಾಂಸ್ಕೃತಿಕ ವೈವಿಧ್ಯತೆಯ ಕಾಯ೯ಕ್ರಮಗಳು ಪ್ರದಶಿ೯ತಗೊಳ್ಳಲಿದೆ. ಅ.16 ರಂದು ಸೋಮವಾರ ಅಂತರರಾಷ್ಟ್ರೀಯ ಖ್ಯಾತಿಯ ಬೆಂಗಳೂರಿನ ಕಲಾವಿದ ಡ್ರಮ್ ದೇವಾ ಅವರ ತಂಡದಿಂದ ವಾದ್ಯ ಮತ್ತು ಸಂಗೀತ ಕಾಯ೯ಕ್ರಮ ಇರುತ್ತದೆ. ವೀರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯಿಂದ ನೃತ್ಯ ವೈವಿಧ್ಯ, ಮಡಿಕೇರಿಯ ಕಲಾಕಾವ್ಯ ನೃತ್ಯ ಶಾಲೆಯಿಂದ ನೃತ್ಯ ವೈವಿಧ್ಯ , ಮದೆನಾಡಿನ ಶ್ರೀ ಆದಿಚುಂಚನಗಿರಿ ಪಬ್ಲಿಕ್ ಸ್ಕೂಲ್ ವಿದ್ಯಾಥಿ೯ಗಳಿಂದ ಶಿವಚರಿತಾಮೖತಂ ನೖತ್ಯ ರೂಪಕ ಸೇರಿದಂತೆ ವಿವಿಧ ಕಾಯ೯ಕ್ರಮಗಳು ಮೊದಲ ದಿನದ ಆಕಷ೯ಣೆಯಾಗಿದೆ. ಅ.17 ರಂದು ಮಂಗಳವಾರ ಮಡಿಕೇರಿಯ ನಾಟ್ಯ ನಿಕೇತನ ನೃತ್ಯ ಶಾಲಾ…

Read More

ಮಡಿಕೇರಿ ಅ.11 : ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಕೆಎಸ್ ಆರ್ ಟಿಸಿ ಬಸ್ ನಿಂದ ಮತ್ತೆ ಹಾನಿಯಾಗಿದೆ. ಇತ್ತೀಚೆಗಷ್ಟೆ ಬಸ್ ಡಿಕ್ಕಿಯಾಗಿ ಹಾನಿಗೀಡಾಗಿದ್ದ ವೃತ್ತವನ್ನು ದುರಸ್ತಿ ಪಡಿಸಲಾಗಿತ್ತು. ಅಲ್ಲದೆ ವೃತ್ತಕ್ಕೆ ವಾಹನಗಳು ಡಿಕ್ಕಿ ಹೊಡೆಯಬಾರದು ಎಂದು ಕಬ್ಬಿಣದ ತಡೆ ಬೇಲಿಯನ್ನು ನಿರ್ಮಿಸಲಾಗಿತ್ತು. ಆದರೆ ಇಂದು ಮತ್ತೆ ಕೆಎಸ್ ಆರ್ ಟಿಸಿ ಬಸ್ ವೊಂದು ತಡೆ ಬೇಲಿಗೆ ಹಾನಿ ಉಂಟು ಮಾಡಿದೆ.

Read More

ಬೆಂಗಳೂರು ಅ 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು. ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ  ಬಿ.ಕೆ.ರವಿ ಅವರ ಸಂಪಾದಕತ್ವದ “ಮೀಡಿಯಾ ಆಫ್ ದಿ ಮಿಲೇನಿಯಂ” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಬಿ.ಕೆ.ರವಿ ಅವರಿಗೆ ಬರೆಯುವ ಶಕ್ತಿ ಇದೆ. ಇದುವರೆಗೂ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ ಕ್ಷೇತ್ರದ ಅರಿವನ್ನು ವಿಸ್ತರಿಸಲಿ. ವೃತ್ತಿಧರ್ಮ ಕಾಪಾಡಿಕೊಂಡರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಪತ್ರಕರ್ತರು ಮುಂದಾಗಬೇಕು. ಸಂವಿಧಾನ ಉಳಿದರೆ ಪತ್ರಿಕಾ ವೃತ್ತಿಯ ಸ್ವಾತಂತ್ರ್ಯವೂ ಉಳಿಯುತ್ತದೆ ಎಂದು ತಿಳಿಸಿದರು.‌ ಭಾರತೀಯ ಮಾಧ್ಯಮ ಮತ್ತು ಉದ್ಯಮ ಸೃಷ್ಟಿಸಿರುವ ಮತ್ತು ಎದುರಿಸುತ್ತಿರುವ ಇವತ್ತಿನ ಸಮಸ್ಯೆಗಳಿಗೆ ಮಾಧ್ಯಮ ಸಾಕ್ಷರತೆ ಪರಿಹಾರ ಆಗಬಲ್ಲದು. ಹೀಗಾಗಿ ಪದವಿ ಪೂರ್ವ ಹಂತದಿಂದಲೇ ಮಾಧ್ಯಮ ಸಾಕ್ಷರತೆಗೆ ಪೂರಕವಾದ ಪಠ್ಯಗಳನ್ನು ಅಳವಡಿಸಲು ಕ್ರಮ ವಹಿಸುವಂತೆ ಕೃತಿಯ ಸಂಪಾದಕರಾದ ಬಿ.ಕೆ.ರವಿ ಅವರು…

Read More

ಮೈಸೂರು ಅ.11 : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು. ಈ ಸಂದರ್ಭ ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಜಿ.ಪಂ ಸಿಇಓ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಅ.11 :  ಸಾಮಾಜಿಕ ಜಾಗೃತಿ  ಮೂಡಿಸುವ  “ನಂಬಿಕೆ” ಎಂಬ ಕಿರುಚಿತ್ರ  ಚಿತ್ರೀಕರಣಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಚಾಲನೆ ನೀಡಿದರು. ವಿಶ್ವ ಕುಂಬೂರ್ ಅವರ ನಿಶು ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಕುಂದುರುಮೊಟ್ಟೆ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಸವಿತಾ ರೈ ಕ್ಲಪ್ ಮಾಡುವ ಮೂಲಕ ಚಾಲನೆ ನೀಡಿದರು. ವಿಶ್ವಕುಂಬೂರು ಅವರ ನಿಶು ಕ್ರಿಯೇಷನ್‍ನಡಿ ನಿರ್ಮಾಣಗೊಳ್ಳುತ್ತಿರುವ ಚಿತ್ರವನ್ನು ಗೌತಮ್ ಸೂರ್ಯ ನಿರ್ದೇಶಿಸುತ್ತಿದ್ದು, ನಾಗೇಶ್ ಶೆಟ್ಟಿ ಛಾಯಾಗ್ರಹಣ ಇದೆ.  ವಿಶ್ವ ಕುಂಬೂರ್ ನಟ ಮತ್ತು ನಿರ್ಮಾಪಕರಾಗಿದ್ದು, ಹತ್ತು ಜನ ಪತ್ರಕರ್ತರೆ ನಟಿಸುತ್ತಿರುವುದು ವಿಶೇಷ. ಚಿತ್ರೀಕರಣವು ಕೊಡಗಿನಾದ್ಯಂತ ನಡೆಯಲಿದೆ.

Read More

ವಿರಾಜಪೇಟೆ  ಅ.11 :   ಕೊಡಗು ಜಿಲ್ಲೆಯ ಪ್ರಾಕೃತಿಕ ಸೌಂದರ್ಯವನ್ನು ಛಾಯಾಚಿತ್ರಗಳ ಮೂಲಕ ಪ್ರಸಾರಪಡಿಸುವ ಹಾಗೂ ಕೊಡಗು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ಸಾಹಿ ಛಾಯಾಚಿತ್ರ ಗ್ರಾಹಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆ ಮತ್ತು ಸಾದಿಕ್ ಆರ್ಟ್ಸ್ ಲಿಂಕ್ ವಿರಾಜಪೇಟೆ ಸಂಯುಕ್ತ ಆಶ್ರಯದಲ್ಲಿ ಕೊಡಗು ಕಲಾ ಉತ್ಸವದ ಅಂಗವಾಗಿ ಪ್ರಕೃತಿ ಸೌಂದರ್ಯ ಮತ್ತು ಪುರಾತನ ಕಟ್ಟಡಗಳ ಬಗ್ಗೆ ಛಾಯಾಚಿತ್ರ ಸ್ಪರ್ಧೆ ನಡೆಯಲಿದೆ. ಸ್ಪರ್ಧೆ ಯ ಬಗ್ಗೆ ಮಾಹಿತಿ ನೀಡಿದ ಸಾದೀಕ್ ಆರ್ಟ್ಸ್ ಲಿಂಕ್ ನ ಸಂಚಾಲಕ  ಸಾದೀಕ್ ಹಂಸ ಛಾಯಾಚಿತ್ರ ಸ್ಪರ್ಧೆ ಎರಡು ವಿಭಾಗದಲ್ಲಿ ನಡೆಯಲಿದ್ದು,  ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತು ಪುರಾತನ ಕಟ್ಟಡಗಳ ಛಾಯಾಚಿತ್ರಗಳನ್ನು ಸೆರೆಹಿಡಿದು ಕಳುಹಿಸಬೇಕು. ಛಾಯಾಚಿತ್ರ ಗ್ರಾಹಕರು ಮತ್ತು ಹವ್ಯಾಸಿ ಛಾಯಾಚಿತ್ರ ಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯು ಮುಕ್ತವಾಗಿದ್ದು ಎಲ್ಲಾ ವರ್ಗದ ವ್ಯಕ್ತಿಗಳು ಭಾಗವಹಿಸುವುದಾಗಿದೆ ಎಂದರು. ಪ್ರವಾಸೋದ್ಯಮವನ್ನು ಪ್ರೋತ್ಸಾಹ…

Read More