ಲೇಖಕ: admin

ಕುಶಾಲನಗರ ಜ.26 NEWS DESK : ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮೊದಲಿಗೆ ಧ್ವಜಾರೋಹಣ ನೆರವೇರಿಸಿ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಹಾಗೂ ಡಯಟ್ ಸಂಸ್ಥೆಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್, ಇಡೀ ವಿಶ್ವಕ್ಕೆ ಮಾದರಿಯಾದ ನಮ್ಮ ದೇಶದ ಸಂವಿಧಾನವು ಧರ್ಮಗ್ರಂಥವಿದ್ದಂತೆ.  ಸಂವಿಧಾನ ಕೇವಲ ಸ್ಮರಣೆಯಲ್ಲ; ಇದು ದೇಶದ ಪುನಶ್ಚೇತನದ ಶಕ್ತಿಯಾಗಿದೆ ಎಂದು ಬಣ್ಣಿಸಿದರು. ಸಂವಿಧಾನವು ಪ್ರಜಾಪ್ರಭುತ್ವದ ಆದರ್ಶ, ನ್ಯಾಯಾಂಗ ವ್ಯವಸ್ಥೆಯ ಅಡಿಪಾಯ, ರಾಷ್ಟ್ರದ ಪ್ರಗತಿಯ ಮೂಲವಾಗಿದೆ. ಶಿಕ್ಷಣದ ಮೂಲಕ ಭವಿಷ್ಯ ನಿರ್ಮಿಸುವುದು ಎಲ್ಲರ ಹೊಣೆ’ ಎಂದು ಹೇಳಿದರು. ವಿಶ್ವದಲ್ಲೇ ಗಟ್ಟಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಹಿಡಿದಿದೆ. ದೇಶದ ಹೊಣೆಗಾರಿಕೆ ಅರಿತ ನಾವುಗಳು ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಮಚಂದ್ರರಾಜೇ ಅರಸ್ ಹೇಳಿದರು.…

Read More

ಕಾರ್ಕಳ ಜ.26 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಉಪಸ್ಥಿತರಿದ್ದರು. ಕನ್ನಡ ಭಾಷಾ ಮುಖ್ಯಸ್ಥರಾದ ಶ್ರೀ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಜ.26 NEWS DESK : ಕೊಡಗು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಕಚೇರಿಯ ಲಿಪಿಕ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Read More

ಮಡಿಕೇರಿ ಜ.26 NEWS DESK : ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜ.28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಿನ್ನೆಲೆ ವಿವಿಧ ಸಿದ್ಧತೆ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ ಇದ್ದರು.

Read More

ಸೋಮವಾರಪೇಟೆ ಜ.26 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದ ಆರಾಧ್ಯ ದೇವತೆ ಶ್ರೀ ತಪೋವನೇಶ್ವರಿ ದೇವಿಯ 19ನೇ ವರ್ಷದ ಪ್ರತಿಷ್ಠಾಪನಾ ವರ್ಧಂತಿಮಹೋತ್ಸವ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ಪ್ರತಿ ವರ್ಷದಂತೆ ಈ ವರ್ಷವೂ ರಥಸಪ್ತಮಿಯ ಶುಭದಿನದಂದು ಬೆಂಗಳೂರಿನ ರಾಜೇಶ್ವರಿ ಅಮ್ಮನವರ ನೇತೃತ್ವದಲ್ಲಿ ಬೆಳಗಿನಿಂದಲೇ ತಪೋಕ್ಷೇತ್ರದಲ್ಲಿರುವ ತಪೋವನೇಶ್ವರಿ ದೇವಿಗೆ ಅಭಿಷೇಕ,ಅರ್ಚನೆ ಸೇರಿದಂತೆ ವಿಶೇಷ ಪೂಜೆ ನಡೆಯಿತು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ದೇವಿಗೆ ಪ್ರಿಯರಾದ ಮಕ್ಕಳಲ್ಲಿ ದೇವಿಯ ಸಂತುಷ್ಟ ಕಾಣುವನಿಟ್ಟಿನಲ್ಲಿ ಪುಟ್ಟ,ಪುಟ್ಟ ಮಕ್ಕಳಿಗೆ ಸಿಹಿ ತಿನ್ನಿಸಿ ಆಟದ ಸಾಮಗ್ರಿಗಳನ್ನು ನೀಡಿ ಮಕ್ಕಳನ್ನು ಸಂತೋಷ ಗೊಳಿಸಲಾಯಿತು,ನಂತರ ಮಹಿಳೆಯರಿಗೆ ಮಡಿಲು ಅಕ್ಕಿ ನೀಡಿ ಆಶೀರ್ವದಿಸಲಾಯಿತು.  ಈ ಸಂದರ್ಭ ಕ್ಷೇತ್ರದ ಪೂಜ್ಯರಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ ಕಳೆದ 19 ವರ್ಷಗಳಿಂದ ರಾಜೇಶ್ವರಿ ಅಮ್ಮ ಚಾಚುತಪ್ಪದೆ ದೇವಿಯ ಸೇವೆ ಮಾಡಿಕೊಂಡು ಬರುತ್ತಿದ್ದಾರೆ,ಪ್ರತಿವರ್ಷ ರಥಸಪ್ತಮಿಯ ಶುಭದಿನದಂದು ದೇವಿಪ್ರತಿಷ್ಟಾಪನೆಯ ವರ್ಧಂತಿ ನಡೆಸಲಾಗುತ್ತದೆ,ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಪಾಲ್ಗೊಳ್ಳುತ್ತಾರೆ ಎಂದರು. ತಪೊಕ್ಷೇತ್ರದ ಆರಾಧ್ಯ ದೇವರುಗಳಾದ ವೀರಭದ್ರಸ್ವಾಮಿ ಹಾಗೂ…

Read More

ವಿರಾಜಪೇಟೆ ಜ.26 NEWS DESK : ಬೈತೂರು ಉತ್ಸವ ಹಿನ್ನೆಲೆ ದಕ್ಷಿಣ ಕೊಡಗಿನ ವಿರಾಜಪೇಟೆಯಿಂದ ಕೇರಳದ ಬೈತೂರಪ್ಪ ದೇವಾಲಯಕ್ಕೆ ಕೊಡಗಿನ ಯುವಕರು 4ನೇ ವರ್ಷದ ಪಾದಯಾತ್ರೆ ನಡೆಸಿದರು. ಭಕ್ತರಾಗಿರುವ ಚೆಟ್ಟೋಳಿರ ಶರತ್‌ ಸೋಮಣ್ಣ, ಕಾಳಮಂಡ ರಾಬಿನ್ ಅಚ್ಚಮ್ಮ, ಮಾಚಂಗಡ ಸಚಿನ್ ತಮ್ಮಯ್ಯ, ಮುದ್ದಿಯಡ ಕರಣ್ ಕಾವೇರಪ್ಪ, ಚೈಯ್ಯಂಡ ಕೀರ್ತನ್ ಅಯ್ಯಪ್ಪ ಇವರುಗಳೊಂದಿಗೆ ಯುವತಿಯಾದ ಅಳ್ಳಂಡ ಶಹನಾ ಚೋಂದಮ್ಮ ಪಾದಯಾತ್ರೆ ಮಾಡಿದರು. ಜ.22 ರಂದು ವಿರಾಜಪೇಟೆಯಿಂದ ಪಾದಯಾತ್ರೆ ಪ್ರಾರಂಭಿಸಿದ ಇವರು ಪೆರುಂಬಾಡಿ, ಮಾಕುಟ್ಟ, ಕೂಟುಪೊಳೆ, ಹುಲಿಕಲ್ ಮೂಲಕ ಪಾದಯಾತ್ರೆ ಮಾಡಿ ಸುಮಾರು 40 ಕಿ.ಮಿ. ಕ್ರಮಿಸಿ ದೇವಾಲಯಕ್ಕೆ ತಲುಪಿದರು. ನಂತರ ನಾಲ್ಕು ದಿನ ಅಲ್ಲಿಯೇ ತಂಗಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿ, ವಿರಾಜಪೇಟೆಗೆ ಹಿಂತಿರುಗಿದರು.

Read More

NEWS DESK :: ದೇಶಕ್ಕೆ ರಕ್ಷಾ ಕವಚ ಸಂವಿಧಾನ::  ಒಂದು ದೇಶದ ಶಕ್ತಿ ಅದರ ಸೇನೆ ಅಥವಾ ಸಂಪತ್ತಿನಲ್ಲಿ ಮಾತ್ರ ಅಲ್ಲ, ಆ ದೇಶದ ಸಂವಿಧಾನ ಮತ್ತು ಪ್ರಜ್ಞಾವಂತ ನಾಗರಿಕರಲ್ಲಿ ಅಡಗಿದೆ ಎಂಬುದು ಅಕ್ಷರಶಃ ಸತ್ಯ ಹಾಗಾಗಿ ಆ ಶಕ್ತಿಗೆ ರೂಪ ನೀಡುವ ದಿನವೇ ಗಣರಾಜ್ಯೋತ್ಸವ. 1950ರ ಜನವರಿ 26ರಂದು ಭಾರತವು ತನ್ನದೇ ಆದ ಸಂವಿಧಾನದ ಮೂಲಕ ಗಣರಾಜ್ಯವಾಗಿ ರೂಪುಗೊಂಡು ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆ ಎಂಬ ಮೌಲ್ಯಗಳನ್ನು ತನ್ನ ಅಸ್ತಿತ್ವದ ಅಡಿಪಾಯವನ್ನಾಗಿ ಮಾಡಿಕೊಂಡು ಪ್ರಪಂಚದಲ್ಲೇ ದೊಡ್ಡ ಹಾಗೂ ಉತ್ತಮ ಸಂವಿಧಾನವನ್ನು ಡಾ. ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಿತು..! ಈ ದಿನವು ಕೇವಲ ಧ್ವಜಾರೋಹಣ ಮತ್ತು ಸೈನಿಕ ಪ್ಯಾರೆಡ್‍ಗೆ ಮಾತ್ರ ಸೀಮಿತವಲ್ಲ, ಬದಲಿಗೆ ನಮ್ಮ ಸಂವಿಧಾನವು ಸ್ವಾತಂತ್ರ್ಯ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ನಮ್ಮೆಲ್ಲರ ಜೀವನದಲ್ಲಿ ಎಷ್ಟು ಮಹತ್ವಪೂರ್ಣವಾಗಿದೆ ಎಂಬುದನ್ನು ನಮಗೆ ನೆನಪಿಸುವ ಸಲುವಾಗಿ ಮತ್ತು ದೇಶದ ಪ್ರಜಾಸತ್ತಾತ್ಮಕ ಶಕ್ತಿ ಮತ್ತು ಐಕ್ಯತೆಯ ಪ್ರತೀಕವಾಗಿ ಬಹಳ ಪ್ರಾಮುಖ್ಯತೆ ಪಡೆದಿದೆ..! ಭಾರತವು ಜಗತ್ತಿನ ಅತಿದೊಡ್ಡ ಪ್ರಜಾಸತ್ತಾತ್ಮಕ…

Read More

ಮಡಿಕೇರಿ ಜ.26 NEWS DESK : ರೆಡ್ ಕ್ರಾಸ್ ಸಂಸ್ಥೆಯು ವಿಶ್ವದಲ್ಲಿ ಮಾನವೀಯ ಧಮ೯ವನ್ನು ಪ್ರಚುರಪಡಿಸುವ ಮೂಲಕ ವಿಶ್ವಶಾಂತಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಲಕ್ಷಾಂತರ ಮಂದಿಗೆ ರೆಡ್ ಕ್ರಾಸ್ ನೆರವನ್ನು ವಿಶ್ವವ್ಯಾಪಿ ಒದಗಿಸುತ್ತಾ ಬಂದಿದ್ದು, ಕೊಡಗಿನಲ್ಲಿಯೂ ರೆಡ್ ಕ್ರಾಸ್ ಗೆ ಹೆಚ್ಚಿನ ಸದಸ್ಯರು ಸೇಪ೯ಡೆಯಾಗಬೇಕೆಂದು ರೆಡ್ ಕ್ರಾಸ್ ರಾಜ್ಯ ಉಪಾಧ್ಯಕ್ಷ ಬಿ. ಭಾಸ್ಕರರಾವ್ ಕರೆ ನೀಡಿದರು. ನಗರದ ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಭಾಸ್ಕರರಾವ್ ಈ ಸಂದಭ೯ ರೆಡ್ ಕ್ರಾಸ್ ಸದಸ್ಯರನ್ನುದ್ದೇಶಿಸಿ ಮಾತನಾಡಿ, ಯಾವುದೇ ದೇಶಗಳ ನಡುವೆ ಅಶಾಂತಿಯುತ ವಾತಾವರಣ ಪರಿಸ್ಥಿತಿ ಉಧ್ಬವಿಸಿದಾಗ ರೆಡ್ ಕ್ರಾಸ್ ಪ್ರಮುಖರು ಅಂಥ ದೇಶಗಳ ನಡುವೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಕ್ರಿಯರಾಗುತ್ತಾರೆ. ವಿಶ್ವದಲ್ಲಿ ಶಾಂತಿ ಕಾಪಾಡುವುದೇ ರೆಡ್ ಕ್ರಾಸ್ ನ ಪ್ರಮುಖ ಉದ್ದೇಶವಾಗಿದೆ ಎಂದರು. ಸಾಕಷ್ಟು ಅನುದಾನ ರೆಡ್ ಕ್ರಾಸ್ ನಲ್ಲಿ ಜನೋಪಯೋಗಿ ಕಾಯ೯ಗಳಿಗೆ ಲಭಿಸುತ್ತಿದ್ದು ಇದನ್ನು ಕೊಡಗಿನಲ್ಲಿ ಪ್ರಕೖತ್ತಿ ವಿಕೋಪದಂಥ ಪ್ರತಿಕೂಲ ದಿನಗಳಲ್ಲಿ ಸದುಪಯೋಗ ಮಾಡಬೇಕೆಂದೂ ಭಾಸ್ಕರ್ ರಾವ್ ಸಲಹೆ ನೀಡಿದರು. ಕೊಡಗಿನ ಸ್ಥಳೀಯ…

Read More

ಮಡಿಕೇರಿ ಜ.26 NEWS DESK : 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ಗುರುತಿನ‌ ಚೀಟಿ ಪಡೆಯುವ ಮೂಲಕ‌ ಚುನಾವಣೆ ಸಂದರ್ಭದಲ್ಲಿ ತಪ್ಪದೆ ಮತ ಹಕ್ಕು ಚಲಾಯಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ‌. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ವತಿಯಿಂದ ನಡೆದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಚುನಾವಣೆಯನ್ನು ಹಬ್ಬ ಎಂದು ಕರೆಯುತ್ತೇವೆ. ಆ ದಿಸೆಯಲ್ಲಿ ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಅರ್ಹರೆಲ್ಲರೂ ತಪ್ಪದೆ ಮತ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವ ಮತದಾರರು ಮತದಾನದಲ್ಲಿ ಮತ ಹಕ್ಕು ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಯದೆ, ಪ್ರಜಾಪ್ರಭುತ್ವ ರಾಷ್ಟ್ರವನ್ನು ಬಲಪಡಿಸುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವಲ್ಲಿ ಚುನಾವಣಾ ಆಯೋಗವು ಸಾಕಷ್ಟು ಸುಧಾರಣೆ ತಂದಿದೆ ಎಂದರು.  ಮತದಾನದ…

Read More

ಮಡಿಕೇರಿ ಜ.26 NEWS DESK : ಸವಿತಾ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ತುಂಬಾ ಹಿಂದೆ ಇದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಸಲಹೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ  ನಡೆದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತೀಯ ವ್ಯವಸ್ಥೆಯಲ್ಲಿ ಸಮ ಸಮಾಜ ನಿರ್ಮಾಣ ಆಗುವವರೆಗೆ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆದು ಶಿಕ್ಷಣ ಮತ್ತು‌ ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕು ಎಂದು ಟಿ.ಪಿ.ರಮೇಶ್ ಅವರು ಕರೆ ನೀಡಿದರು. ರಾಷ್ಟ್ರದ ಎಲ್ಲೆಡೆ ಇರುವ ಸವಿತಾ ಸಮಾಜದವರು ವೃತ್ತಿಯ ಜತೆಗೆ ಎಂಜಿನಿಯರಿಂಗ್, ವೈದ್ಯಕೀಯ ಮತ್ತಿತರ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದಬೇಕು ಎಂದರು. ಹಿರಿಯ ಪತ್ರಕತ೯ ಅನಿಲ್ ಎಚ್.ಟಿ. ಮಾತನಾಡಿ, ಸಮಾಜ ಮತ್ತು ಸಮಾಜದ ಜನರು ಸುಂದರವಾಗಿ ಇರುವಲ್ಲಿ ಸವಿತಾ…

Read More