ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೃಷ್ಟ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಂದ ರಾಧಾ ಕೃಷ್ಣರ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧ, ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಸಹಶಿಕ್ಷಕಿಯರು ಇದ್ದರು.
ಲೇಖಕ: admin
ಸೋಮವಾರಪೇಟೆ ಸೆ.10 : ಪೊಲೀಸ್ ಇಲಾಖೆ ವತಿಯಿಂದ ಶ್ರೀ ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನೆಯ ಅಂಗವಾಗಿ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪೂರ್ವಭಾವಿ ಸಭೆಯನ್ನು ಸಂಜೆ ಸೋಮವಾರಪೇಟೆ ಪತ್ರಿಕಾಭವನ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಡಿವೈಎಸ್ಪಿ ಗಂಗಾಧರಪ್ಪ ಮಾತನಾಡಿ, ಗಣಪತಿ ಆಚರಣ ಸಮಿತಿಯವರು ಸಾರ್ವಜನಿಕರಿಂದ ಒತ್ತಾಯಪೂರ್ವಕವಾಗಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಚಂದಾ ವಸೂಲಿ ಮಾಡಬಾರದು. ಅಂತಹ ದೂರುಗಳು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೊದಲು ಸೆಸ್ಕ್, ಅಗ್ನಿ ಶಾಮಕ ಇಲಾಖೆಯವರಿಂದ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಯಲ್ಲಿ ವಾಹನ ಮತ್ತು ಜನರು ಓಡಾಟಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಪ್ರತಿಷ್ಠಾಪನೆ ಮಾಡಬಾರದು ಎಂದು ಹೇಳಿದರು. ಖಾಸಗಿ ಮನೆ, ಅಂಗಡಿ, ದೇವಸ್ಥಾನ ಅಥವಾ ನೇರ ವಿದ್ಯುತ್ ಲೈನ್ ಮತ್ತು ಇನ್ನಾವುದೇ ರೀತಿ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯಬಾರದು, ಪ್ರತಿ ಗಣೇಶ ಮಂಡಳಿಯ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪಟ್ಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂಚಿತವಾಗಿ ಸಲ್ಲಿಸಬೇಕು. ಸಂಘಟಕರು ಗಣಪತಿ…
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಒಕ್ಕಲಿಗ ಸಮುದಾಯಭವನದಲ್ಲಿ ಭಾನುವಾರ ನಡೆದ, ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ ಸಿ.ಕೆ.ಕಾಳಪ್ಪ ಅವರ ಪುತ್ಥಳ್ಳಿ ಅನಾವರಣ ಕಾರ್ಯಕ್ರಮದಲ್ಲಿ, ಸೋಮವಾರಪೇಟೆ ಒಕ್ಕಲಿಗರ ಸಂಘದ ಅಭಿವೃದ್ಧಿ ಕಾಮಗಾರಿಗಳಿಗೆ ಅತೀ ಹೆಚ್ಚು ಅನುದಾನ ಕಲ್ಪಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ಸಿಂಹ ಅವರನ್ನು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗು ಮಡಿಕೇರಿ ಶಾಸಕ ಡಾ.ಮಂತರ್ಗೌಡ ಅವರುಗಳು ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷ ಸಿ.ಕೆ.ರಾಘವ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಇದ್ದರು.
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ, ಜಾಗ ದಾನಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಕೆ.ಕಾಳಪ್ಪ ಅವರ ಪುತ್ಥಳಿಯನ್ನು ಅವರ ಪುತ್ರ ಸಿ.ಕೆ.ರಾಘವ ಹಾಗೂ ಕುಟುಂಬಸ್ಥರು ಭಾನುವಾರ ಅನಾವರಣ ಮಾಡಿದರು. ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಸಮುದಾಯಭವನದ ಪ್ರವೇಶ ದ್ವಾರದಲ್ಲಿ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಳಪ್ಪ ಅವರ ಕುಟುಂಬಸ್ಥರಾದ ಸುದೈವ, ರಾಗಿಣಿ, ಪದ್ಮಿನಿ, ಸವಿತಾ, ಕಿರಣ್ ಕುಶಾಲಪ್ಪ, ಲಲಿತ, ಮೇನಕ, ಅನ್ನಪೂರ್ಣ ಅವರುಗಳನ್ನು ಸನ್ಮಾನಿಸಲಾಯಿತು. ಸಂಘದ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಸಿ.ಕೆ.ಕಾಳಪ್ಪ ಅವರ ಸತತ ಪರಿಶ್ರಮದಿಂದ ತಾಲ್ಲೂಕು ಒಕ್ಕಲಿಗರ ಸಂಘ ಸ್ಥಾಪನೆಯಾಗಿದೆ. 1968ರಿಂದ 1995ರ ವರಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೋಟ್ಯಾಂತರ ಮೌಲ್ಯದ ಸ್ವಂತ ಜಾಗವನ್ನು ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ ದಾನವಾಗಿ ನೀಡಿದ್ದಾರೆ. ಅವರ ಕನಸ್ಸಿನಂತೆ ವಿದ್ಯಾಸಂಸ್ಥೆಯನ್ನು ಕಟ್ಟಿದ್ದೇವೆ. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹತ್ತನೆ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆದ 6ವರ್ಷಗಳಿಂದ ಸತತ ಶೇ.100ರಷ್ಟು ಫಲಿತಾಂಶ…
ಮಡಿಕೇರಿ ಸೆ.10 : ಸ್ಫೂರ್ತಿ ಕಲಾ ಟೆಸ್ಟ್ ವತಿಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾಸಿಸ್ ಡಿಸೋಜ ಅವರಿಗೆ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಫೂರ್ತಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಡಿಕೇರಿ ಸೆ.10 : ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಡಿಕೇರಿ ಕೊಡವ ಸಮಾಜದ ಮೇಲಿನ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯತು. ಸಂಘವು ಅಭಿವೃದ್ಧಿಪಥದತ್ತ ಸಾಗುತ್ತಿದ್ದು, ಪ್ರಸ್ತುತ 2108 ಸದಸ್ಯರಿದ್ದಾರೆ. 89.75 ಲಕ್ಷ ರೂ. ಪಾಲುಹಣ ಹೊಂದಿದ್ದು, ಈ ಬಾರಿ 20 ಲಕ್ಷ ರೂ. ಲಾಭ ಗಳಿಸಿದೆ, ಸದಸ್ಯರಿಗೆ ಶೇ.9ರಷ್ಟು ಡಿವಿಡೆಂಟ್ ನೀಡಲಾಗುವುದು ಎಂದು ಮುತ್ತಪ್ಪ ತಿಳಿಸಿದರು. ಸದಸ್ಯರ ಸಹಕಾರದಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ವಹಿವಾಟು ನಡೆಸುವ ಮೂಲಕ ಅಧಿಕ ಲಾಭದ ನಿರೀಕ್ಷೆಯಲ್ಲಿದ್ದೇವೆ ಎಂದರು. ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಾದ ಶಾಂತೆಯಂಡ ಯೋಗ್ ಕುಟ್ಟಪ್ಪ( 10 ನೇ ತರಗತಿ) ಹಾಗೂ ಕೇಕಡ.ಎಂ. ಬೋಪಣ್ಣ (ಪಿಯುಸಿ) ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಉಪಾಧ್ಯಕ್ಷೆ ಯಂ.ಜಿ.ಉಷಾ ವಂದಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಸಿ.ಸೀಮಾ ನಿರೂಪಿಸಿದರು. ನಿರ್ದೇಶಕರುಗಳಾದ ಚೋವಂಡ. ಡಿ. ಕಾಳಪ್ಪ, ಆಲೆಮಾಡ ಕೆ. ಕಾರ್ಯಪ್ಪ, ಮಣವಟ್ಟಿರ .ಬಿ.ಮಾಚಯ್ಯ, ನಾಟೋಳಂಡ.ಡಿ.ಚರ್ಮಣ, ಕೊಂಗಂಡ ಎ.ತಿಮ್ಮಯ್ಯ, ಪಟ್ಟಡ ಎ.ಕರುಂಬಯ್ಯ,ಕುಡುವಂಡ ಬಿ.ಉತ್ತಪ್ಪ, ನಂದೇಟಿರ…
ಮಡಿಕೇರಿ ಸೆ.10 : ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಜೆಸಿಐ ಸಪ್ತಾಹ 2023ನೇ ಸಾಲಿನ ಎರಡನೇ ದಿನದ ಕಾರ್ಯಕ್ರಮದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಮಾಯಮುಡಿ ಸರ್ಕಾರಿ ಶಾಲೆಗೆ ನೀರು ಶುದ್ಧೀಕರಣ ಯಂತ್ರವನ್ನು ಅಳವಡಿಸಲಾಯಿತು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಇತ್ತೀಚಿನ ದಿನಗಳಲ್ಲಿ ಶುದ್ಧ ನೀರಿನ ಕೊರತೆಯಿಂದ ಅನಾರೋಗ್ಯ ಹೆಚ್ಚಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ನೀರು ದೊರೆಯಬೇಕು ಎನ್ನುವ ಉದ್ದೇಶದಿಂದ ಶಾಶ್ವತ ಪರಿಹಾರವಾಗಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಕುಡಿಯುವ ನೀರಿನ ಯಂತ್ರವನ್ನು ಅಳವಡಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಎ.ಪಿ, ನಿಕಟ ಪೂರ್ವ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ, ಸದಸ್ಯರಾದ ತಿಮ್ಮಯ್ಯ, ಶಾಲೆಯ ಮುಖ್ಯ ಉಪಾಧ್ಯಾಯರಾದ ರಾಗಿಣಿ ಡಿ.ಯು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉಮೇಶ್ , ಸದಸ್ಯರಾದ ಸಲಾಂ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗೋಣಿಕೊಪ್ಪ ಸೆ.10 : ಜೆಸಿಐ ಪೊನ್ನಂಪೇಟೆ ನಿಸರ್ಗ ಆಯೋಜನೆಯಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಗ್ರಾ.ಪಂ. ಅಧ್ಯಕ್ಷೆ ಮನ್ನಕಮನೆ ಸೌಮ್ಯ ಬಾಲು ಚಾಲನೆ ನೀಡಿದರು. ಶ್ರೀ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜೆಸಿಐ ಸಪ್ತಾಹ 2023ರ ಪ್ರಯುಕ್ತ ರಕ್ತದಾನ ಶಿಭಿರ ಜೆಸಿಐ ಪೊನ್ನಂಪೇಟೆ ನಿಸರ್ಗ ಅಧ್ಯಕ್ಷ ನೀತ್ ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಮತ್ತೊಬ್ಬರ ಜೀವವನ್ನು ಉಳಿಸಲು ಕಾರಣವಾಗಬಹುದು. ಯುವ ಸಮುದಾಯ ರಕ್ತದಾನ ಮಾಡುವುದರ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಮತ್ತು ಯುವ ಸಮುದಾಯದಕ್ಕೆ ರಕ್ತದಾನ ಮಾಡುವುದರ ಪ್ರೇರಣಾತ್ಮಕವಾದ ಕಾರ್ಯಕ್ರಮಗಳನ್ನು ಸಂಘಟನೆಗಳು ಆಯೋಜಿಸಬೇಕೆಂದು ಗ್ರಾ.ಪಂ. ಅಧ್ಯಕ್ಷ ಸೌಮ್ಯ ಬಾಲು ಸಲಹೆ ನೀಡಿದರು. ಗ್ರಾ.ಪಂ. ಸದಸ್ಯ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ ರಕ್ತದಾನ ಮಾಡುವುದರ ಶ್ರೇಷ್ಠತೆಯನ್ನು ಯುವ ಸಮುದಾಯ ಅರಿತುಕೊಳ್ಳುವುದರಲ್ಲಿ ಸೋತಿದೆ. ದುಶ್ಚಟಗಳಿಗೆ ಒಳಗಾಗುತ್ತಿರುವ ಯುವಕರು ರಕ್ತದಾನ ಮಾಡಲು ಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಮಕ್ಕಳಲ್ಲಿ ರಕ್ತದಾನದ ಶ್ರೇಷ್ಠತೆಯ ಬಗ್ಗೆ ತಿಳಿಸಿಕೊಡುವ ಅಗತ್ಯವಿದೆ. ಯಾವುದೇ ಹಿಂಜರಿಕೆಯಿಲ್ಲದೇ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ…
ಮಡಿಕೇರಿ ಸೆ.10 : ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಗರದ ಮೈಸೂರು ರಸ್ತೆಯ ಚೈನ್ ಗೇಟ್ ಬಳಿ ನಡೆದಿದೆ. ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಜೊತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಸೆ.10 : ಮೈಸೂರಿನ ಜಗನ್ ಮೋಹನ ಪ್ಯಾಲೇಸ್ನಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಡಿವೈನ್ ಡ್ಯಾನ್ಸ್ ಅಕಾಡೆಮಿ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆಸಿದ ಸ್ಪರ್ಧೆ ಹಾಗೂ ಮಂಜುಶ್ರೀ ಸ್ಟೆಪ್ಸ್ ನಡೆಸಿದ ಎರಡೂ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಕಿಂಗ್ಸ್ ಆಫ್ ಕೂರ್ಗ್ ತಂಡ ಸಬ್ ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ನೃತ್ಯ ಸಂಸ್ಥೆಯ ತರಬೇತುದಾರರಾದ ಮಹೇಶ್ ಹಾಗೂ ಕಿರಣ್ ಅವರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಕನ್ನಿಕೆ, ಮೊಶಿಕಾ, ಯಶಿಕಾ, ಶ್ರೇಯ, ರಿಯಾಂಕ, ಒಸಿನ್, ಪ್ರಜ್ವಲ್, ಮುತ್ತಮ್ಮ, ಸೋನಾಕ್ಷಿ, ಶ್ರೀರಕ್ಷಾ, ಯಾದ್ವಿತಾ, ಕಿಶನ್, ದೀಪಿಕ್ಷಾ, ವಿಸ್ಮಯ, ಪ್ರೇಕ್ಷಿತಾ, ನಿರನ್ ಹಾಗೂ ಇಶಾಂತ್ ನೃತ್ಯ ಪ್ರದರ್ಶನ ಮಾಡಿದರು.






