ಲೇಖಕ: admin

ಮಡಿಕೇರಿ ನ.25 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ,  ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು. ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ  ಇವರ  ಸಂಯುಕ್ತ ಆಶ್ರಯದಲ್ಲಿ ಕೋವಿಡ್ ನಂತರ ನಷ್ಟಕ್ಕೆ ಒಳಗಾದ ಉದ್ಯಮಗಳ ಮರು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ರ್ಯಾಂಪ್ ಯೋಜನೆಯಡಿಯಲ್ಲಿ ಟ್ರೇಡ್ ರಿಸೀವೇಬಲ್ ಡಿಸ್ಕೌಂಟ್ ಸಿಸ್ಟಮ್(ಟ್ರೇಡ್ಸ್) ಯೋಜನೆ ಕುರಿತು ನಗರದ ಹೊಟೇಲ್ ರೆಡ್ ಬ್ರಿಕ್ಸ್‌ಇನ್‌ನಲ್ಲಿ ಎಂಎಸ್‍ಎಂಇ ಉದ್ದಿಮೆದಾರರಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಬೆಂಗಳೂರು ಟೆಕ್ಸಾಕ್‍ನ ಸಿಇಒ ಸಿದ್ದರಾಜು ಉದ್ಘಾಟಿಸಿ ರ್ಯಾಂಪ್ ಯೋಜನೆಯಡಿಯಲ್ಲಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್‍ನ ನಾಗೇಂದ್ರ ಪ್ರಸಾದ್ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಉದ್ದಿಮೆದಾರರಿಗೆ ಸಲಹೆ ನೀಡಿದರು. ನಿವೃತ್ತ ಐಆಒ ಆರ್.ಕೆ. ಬಾಲಚಂದ್ರ ಅವರು ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಉದ್ದಿಮೆದಾರರಿಗೆ  TReDS Online Flatform  ಬಗ್ಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು. ಜಿಲ್ಲಾ ಕೈಗಾರಿಕಾ…

Read More

ಮಡಿಕೇರಿ ನ.25 NEWS DESK : ಮಂಗಳೂರು ಶಾಖೆಯ ಮೈಕ್ರೋ, ಸಣ್ಣ ಮತ್ತು ಮಧ್ಯಮ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ (ಒSಒಇ ಆಈಔ), ಸಾಧಗುರು ಐಟಿಐ ಸಹಯೋಗದೊಂದಿಗೆ, ಉದ್ಯಮಶೀಲತೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಉದ್ಯಮ ಆರಂಭಿಸಲು ಹಾಗೂ ವಿಸ್ತರಿಸಲು ಆಸಕ್ತಿ ಹೊಂದಿರುವ ಹೊಸ ಹಾಗೂ ಇರುವ ಉದ್ಯಮಿಗಳಿಗೆ ಮಾರ್ಗದರ್ಶನ ಮತ್ತು ಸಬಲಿಕೆ ನೀಡುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ 75 ಮಂದಿ ಭಾಗವಹಿಸಿದ್ದರು. ಮಂಗಳೂರು ಶಾಖೆಯ ಎಂಎಸ್‍ಎಂಇ ಮತ್ತು ಕಾರ್ಯಕ್ರಮ ಸಂಯೋಜಕರಾದ ಸುಮನ್ ಎಸ್.ರಾಜು, ಐಇಡಿಎಸ್ ಅವರು ಚಾಲನೆ ನೀಡಿದರು. ಸುಮನ್ ಎಸ್.ರಾಜು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಣ್ಣ ಮತ್ತು ಮಧ್ಯಮ ಅಭಿವೃದ್ಧಿ ಮತ್ತು ಸೌಲಭ್ಯ ವತಿಯಿಂದ ವಿವಿಧ ಖಾತೆಗಳ ಅಡಿಯಲ್ಲಿ ಜಾರಿಗೆ ಬರುವ ಎಂಎಸ್‍ಎಂಇ ಯೋಜನೆಗಳ ಅನುಷ್ಠಾನ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಜೊತೆಯಾಗಿಸಿ ಜಾಗೃತಿ ಕಾರ್ಯಕ್ರಮದ ಮೂಲಕ ಉದ್ಯಮಿಗಳಿಗೆ ನೆರವು ಒದಗಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅತಿಥಿಗಳು ತಾಂತ್ರಿಕ ಕ್ಷೇತ್ರಗಳಲ್ಲಿ ಭಾಗವಹಿಸಿದವರಿಗೆ ಅಮೂಲ್ಯ ಮಾಹಿತಿಯನ್ನು ನೀಡಿದರು. ಮಹಿಳಾ ಮತ್ತು…

Read More

ಕುಶಾಲನಗರ ನ.26 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಗ್ರಾಮ‌ಸಭೆಯು ನ.28 ರಂದು ಪಂಚಾಯಿತಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಲಿದೆ.‌ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಡಿ.ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಗ್ರಾಮ ಸಭೆಗೆ ಹಾಜರಾಗುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

Read More

ಮಡಿಕೇರಿ ನ.25 NEWS DESK : ಪತ್ರಕರ್ತರು ಸಮಾಜಕ್ಕೆ ಹೊರೆಯಾಗಬಾರದು ದೊರೆಯಾಗಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ. ಮದನ್ ಗೌಡ ಕರೆ ನೀಡಿದರು.  ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶತಮಾನೋತ್ಸವ ಹೊಸ್ತಿಲಿನಲ್ಲಿದೆ. 94 ವರ್ಷದ ಸುದೀರ್ಘ ಇತಿಹಾಸವಿರುವ, ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಸಂಘದ ಬೆಳವಣಿಗೆಯಲ್ಲಿ ಮಹನೀಯರು ಶ್ರಮ ಅಪಾರವಾಗಿದೆ. ರಾಜ್ಯದ 31 ಜಿಲ್ಲೆ, ಎಲ್ಲಾ ತಾಲೂಕು, ಹೋಬಳಿ ಮಟ್ಟದಲ್ಲೂ ಪತ್ರಕರ್ತರನ್ನು ಒಳಗೊಂಡ ಬಲಿಷ್ಠ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇದರೊಂದಿಗೆ ಕರುನಾಡಿನ ಪತ್ರಕರ್ತರ ಸಮಸ್ಯೆಗಳಿಗೆ ಮಿಡಿಯುವ ಕೆಲಸವನ್ನೂ ಸಂಘ ಮಾಡುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಂಘ ಸ್ಥಾಪನೆಯಾಗಿದ್ದು, ಇಂದಿರಾ ಗಾಂಧಿ ಅವರು ಕೇಂದ್ರ ಕಚೇರಿಗೆ ಬಂದಿದ್ದರು ಎಂದು ಸ್ಮರಿಸಿದರು. ಧಾವಂತ ಪತ್ರಿಕೋದ್ಯಮ, ಸೋಶಿಯಲ್ ಮೀಡಿಯಾದ ಭರಾಟೆಯಿಂದ ಸತ್ಯಾಸತ್ಯತೆ…

Read More

ಕುಶಾಲನಗರ ನ.25 NEWS DESK : ಕನ್ನಡ ನಾಡಿನ ನೆಲ – ಜಲ, ಆಚಾರ – ವಿಚಾರಗಳು,  ಇಲ್ಲಿನ ಸಂಸ್ಕಾರಗಳು ಹಾಗೂ ಮುಖ್ಯವಾಗಿ ಕನ್ನಡ  ಭಾಷೆಯನ್ನು ಈ ನೆಲದ ಪ್ರತಿಯೊಬ್ಬರು ಪೂಜ್ಯ ಬಾವದಿಂದ ಕಾಣಬೇಕು ಎಂದು  ಮಡಿಕೇರಿ ಸಾಹಿತಿ ಕೃಪಾ ದೇವರಾಜು ಕರೆ ನೀಡಿದರು. ಕುಶಾಲನಗರ ಸಮೀಪದ ಆವರ್ತಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ನಾಡಿನ  ನೆಲ ಹಾಗೂ ಜಲವೇ ಶ್ರೇಷ್ಠ ಸಂಪತ್ತು. ಇಲ್ಲಿನ ಸಂಸ್ಕೃತಿ ಹಾಗೂ ಪರಂಪರೆ ಅಪೂರ್ವವಾದುದು.  ಅನ್ಯ ಭಾಷೆಗಳ ಹಾವಳಿಯ ನಡುವೆಯೂ ಗಡಿ ಜಿಲ್ಲೆಗಳಲ್ಲಿ ಕನ್ನಡ ಇಲ್ಲಿನ ಪ್ರತಿ ವಾಸಿಗಳ ಜೀವನದ ಹಾಸು ಹೊಕ್ಕಾಗಬೇಕಿದೆ. ಎಲ್ಲರೂ ಈ ನಾಡು ನುಡಿಯನ್ನು ಗೌರವಿಸಬೇಕಿದೆ ಎಂದು ಕೃಪಾ ದೇವರಾಜು ಕರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ  ಆವರ್ತಿ ಮಹಾದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಕೂರ್ಗಲ್ಲು ಶಿವಕುಮಾರ ಸ್ವಾಮಿ, ಬೆಟ್ಟದಪುರದ  ಪತ್ರಕರ್ತ ಶಿವದೇವ್, ಆವರ್ತಿ ಸರ್ಕಾರಿ ಶಾಲೆಯ…

Read More

ಮಡಿಕೇರಿ ನ.25 NEWS DESK : ಬೆಂಗಳೂರಿನ ಶಿರಂಗಳ್ಳಿ ಗ್ರಾಮಕಾರಡ ಒಕ್ಕೂಟದ ಸಂತೋಷ ಕೂಟ ಸಂಭ್ರಮದಿಂದ ನಡೆಯಿತು. ಬೆಂಗಳೂರಿನ ವಸಂತನಗರದ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ನಿಕಟ ಪೂರ್ವ ಎನ್.ಎಸ್.ಎಸ್ ನೊಡಲ್ ಅಧಿಕಾರಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕ ಮಂದೆಯಂಡ ಡಾ.ವನಿತ್ ಕುಮಾರ್ ನಾಣಯ್ಯ ಕೊಡವ ಸಂಸ್ಕೃತಿ, ಪದ್ಧತಿ, ಆಚಾರ-ವಿಚಾರ ವಿಶಿಷ್ಟವಾಗಿದ್ದು ಅದರ ಉಳಿವು ಮತ್ತು ಬೆಳವಣಿಗೆಗೆ ಯುವ ಜನರು ಪ್ರಯತ್ನ ಪಡಬೇಕು ಎಂದು  ಅಭಿಪ್ರಾಯಪಟ್ಟರು. ಯುವ ಸಮೂಹ  ಉದ್ಯೋಗ ಆರಿಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ ವಾರಾಂತ್ಯದ ಮೋಜು ಮಸ್ತಿಯ ನೆಪದಲ್ಲಿ ಮಾದಕವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬದಲು ಕೊಡವ ಸಂಸ್ಕೃತಿಯ ಆಚರಣೆಗಳನ್ನು ಕಲಿಯುವಂತೆ ಆಗಬೇಕು. ಕೊಡಗಿನ ಮಣ್ಣಿನ ಗುಣ ವಿಶಿಷ್ಟವಾಗಿದ್ದು, ಅದನ್ನು ಉಳಿಸಲು  ತಮ್ಮ ಭೂಮಿಯಲ್ಲಿ ತಾವು ದುಡಿಯುವುದಲ್ಲದೆ ಜಮ್ಮ ಭೂಮಿಯ ಸಂರಕ್ಷಣೆಗೆ ಮುಂದಾಗಬೇಕಾಗಿದೆ ಎಂದು ತಿಳಿಸಿದರು. ರಾಜರ ಕಾಲದಲ್ಲಿ ಬಂದಿರುವ ಭೂಮಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನರ ಮೇಲಿದೆ.  ಹಬ್ಬಹರಿ…

Read More

ಚೆಟ್ಟಳ್ಳಿ ನ.25 NEWS DESK :  ಚೆಟ್ಟಳ್ಳಿಯಲ್ಲಿ ವಾರ್ಷಿಕ ನಾಗರ ಪಂಚಮಿಯನ್ನು ಶ್ರದ್ದಾಭಕ್ತಿಯಿಂದ ಅಚರಿಸಲಾಯಿತು. ಅರ್ಚಕರಾದ ರಾಧಕೃಷ್ಣ ಭಟ್ ಅವರು ಪುತ್ತರಿರ ಐನ್ ಮನೆಯ ಸಮೀಪದ ಪುರಾತನ ನಾಗ ನೆಲೆಯನ್ನು ಶುದ್ದಗೊಳಿಸಿ ಹೂವು, ಹಣ್ಣು ಪಾಯಸದ ಅರ್ಪಣೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಿದರು. ವರ್ಷಂಪ್ರತಿ ಪಂಚಮಿಯಂದು ನಾಗನೆಲೆಯಲ್ಲಿ ಪೂಜೆ ಸಲ್ಲಿಸಲ್ಲಿಸಲಾಗುತ್ತಿದ್ದು, ಎಲ್ಲರಿಗೂ ಒಳಿತನ್ನು ಮಾಡಲೆಂದು ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಬೇಡಿಕೊಂಡರು. ನಂತರ ಪ್ರಸಾದ ವಿತರಣೆ ನೆರವೇರಿತು.

Read More

ವಿರಾಜಪೇಟೆ ನ.25 NEWS DESK : ಭೌವ್ಯ ಪರಂಪರೆಯ, ವಿವಿಧತೆಯಲ್ಲಿ ಏಕತೆ ಕಂಡ ಜಾನಪದ ಸೊಗಡು ಕಂಡ ಭಾಷೆ ಕನ್ನಡ. ಇತರ ಭಾಷೆಗಳನ್ನು ಗೌರವಿಸಿ ತಾಯಿ ಕನ್ನಡ ಭಾಷೆಯನ್ನು ಧೀಮಂತಗೊಳಿಸುವ ಪ್ರಯತ್ನ ನಿರಂತರವಾಗಿ ಸಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸೈಂಟ್ ಆನ್ಸ್ ಪದವಿ ಕಾಲೇಜು ಕನ್ನಡ ಭಾಷಾ ವಿಭಾಗ, ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು, ಮತ್ತು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ  ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ನುಡಿ ನಡೆ ಯುವಜನರ ಕಡೆ ಶೀರ್ಷಿಕೆ ಅಡಿಯಲ್ಲಿ ನುಡಿ ಉತ್ಸವ ಅಂತರ್ ತರಗತಿ ಕನ್ನಡ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಕುಲಪತಿಗಳು ಧೀಮಂತ ಸಂಸ್ಕೃತಿ ಹೊಂದಿರುವ ಕನ್ನಡ ಭಾಷೆಯನ್ನು ಪೋಷಕರು ಮನೆಯಿಂದ, ಶಿಕ್ಷಕರು ವಿದ್ಯಾಲಯದಿಂದ ತಿಳಿಯಪಡಿಸುವಂತಾಗಬೇಕು. ನಾವೇ ಭಾಷೆಗೆ ಗೌರವವಿತ್ತು ಇತರರಿಗೆ ಧಾರೆಯೆರೆಯುವಂತಾಗಬೇಕು. ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಪಡೆದ ಹಲವು ವಿದ್ವಾಂಸರು ಧೀಮಂತ ಸಾಹಿತ್ಯ…

Read More

ವಿರಾಜಪೇಟೆ ನ.25 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ಡಾ. ಅಗರ್ವಾಲ್ಸ್ ಕ್ಲಿನಿಕ್ ನ ಸಹಯೋಗದಲ್ಲಿ ನ.29 ರಂದು ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಬೇಟೋಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ 10 ಗಂಟೆಗೆ ಆರಂಭವಾಗಿ ಸಂಜೆ 4 ಗಂಟೆಗೆಯ ವರೆಗೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬೇಟೋಳಿ ಪಂಚಾಯತ್ ಪ್ರಕಟಣೆಯಲ್ಲಿ ಕೋರಿದೆ.

Read More

ಸುಂಟಿಕೊಪ್ಪ ನ.25 NEWS DESK : ಸರಕಾರಿ ಪದವಿಪೂರ್ವ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ವಿಜೇತ ಮಕ್ಕಳಿಗೆ ಸಮಾಜ ಸೇವಕ ಇಬ್ರಾಹಿಂ (ಬಾಪ್ಪು) ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆ ಉಪಪ್ರಾಂಶುಪಾಲ ಬಾಲಕೃಷ್ಣ ಮಾತನಾಡಿ, ಸರಕಾರಿ ಶಾಲೆಗೆ ದಾನಿಗಳು ದೊರೆಯುವುದೇ ಅಪರೂಪ ಇಂತಹ ಸಂದರ್ಭದಲ್ಲಿ ಸ್ಥಳೀಯರಾದ ಇಬ್ರಾಹಿಂ ಬಾಪು ಅವರು ಸರಕಾರಿ ಶಾಲೆ ಮತ್ತು ಮಕ್ಕಳ ಮೇಲೆ ಅಭಿಮಾನವಿಟ್ಟು ಕ್ರೀಡಾಕೂಟದಲ್ಲಿ ಜಯಗಳಿಸಿದ ಮಕ್ಕಳಿಗೆ ಬಹುಮಾನಗಳನ್ನು ಪ್ರಯೋಜಿಸಿರುವುದು ಶ್ಲಾಘನೀಯ ಎಂದರು. ಶಾಲೆಯ ಅಭಿವೃದ್ಧಿಯ ದಿಸೆಯಲ್ಲಿ ಹಳೆಯ ವಿದ್ಯಾರ್ಥಿಗಳು ಶಾಲೆಯ ಕಟ್ಟಡಗಳನ್ನು ದುರಸ್ತಿಗೊಳಿಸುವ ಮೂಲಕ ರೂಪುಗೊಳಿಸಿರುವುದು ಮತ್ತು ಕೆನಾರಬ್ಯಾಂಕ್ ವತಿಯಿಂದ ಶಾಲೆಗೆ ಅಭಿವೃದ್ಧಿಗೆ 2 ಲಕ್ಷ ರೂ ದೇಣಿಗೆ ದೊರೆತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಹಿರಿಯ ಪತ್ರಕರ್ತರಾದ ಬಿ.ಡಿ.ರಾಜು ರೈ ಮಾತನಾಡಿ, ಸಮಾಜ ಸೇವೆಯಲ್ಲಿ ನಿರಂತವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಇಬ್ರಾಹಿಂ ಅವರ ಕೊಡುಗೆ ಒಂದು ಶಾಲೆಗೆ ಮಾತ್ರ ಸಿಮೀತವಾಗಿ ದೇಣಿಗೆ ನೀಡದೆ ಸರಕಾರಿ ಶಾಲೆಗಳನ್ನು ಗುರುತಿಸಿ ದೇಣಿಗೆ…

Read More