ಮಡಿಕೇರಿ ಡಿ.24 NEWS DESK : ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿ ಕೊಡಗಿನ ಬಿ.ದಿಯಾ ಭೀಮಯ್ಯಗೆ ಕರ್ನಾಟಕ ಸರ್ಕಾರದ ಬಾಲ ವಿಕಾಸ ಅಕಾಡೆಮಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ ಲಭಿಸಿದೆ. ಅಕಾಡೆಮಿಯು ಘೋಷಿಸಿದ ಆಯ್ಕೆ ಪಟ್ಟಿಯಂತೆ 202223 ನೇ ಸಾಲಿನ ಜೂನಿಯರ್ ವಿಭಾಗದ ಕ್ರೀಡಾ ಕ್ಷೇತ್ರಕ್ಕೆ ಈ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯನ್ನು ಕುಂದಾನಗರಿ ಬೆಳಗಾವಿಯ ಸುವರ್ಣ ಸೌಧದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಜಕ್ಸ್ತಾನ್ ನಲ್ಲಿ ನಡೆಯುತ್ತಿರುವ ಅಸ್ತಾನ ಇಂಟರ್ನ್ಯಾಷನಲ್ ಚಾಲೆಂಜ್ 2025 ಟೂರ್ನಿಯಲ್ಲಿ ಭಾಗವಹಿಸಲು ತೆರಳಿರುವ ದಿಯಾ ಭೀಮಯ್ಯ ಪರವಾಗಿ ಪ್ರಶಸ್ತಿಯನ್ನು ಅವರ ತಾಯಿ ಕುಸುಮ ಅವರು ಸ್ವೀಕರಿಸಿದರು. ಕರ್ನಾಟಕ ಅಗ್ರ ಶ್ರೇಯಾಂಕದ ಆಟಗಾರ್ತಿಯಾದ ಬಿ.ದಿಯಾ ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಬ್ಯಾಡ್ಮಿಂಟನ್ ತರಬೇತಿಯನ್ನು ಮೇದುರ ಅರುಣ್ ಪೆಮ್ಮಯ್ಯ ಅವರಿಂದ ಪಡೆದಿದ್ದು,…
ಲೇಖಕ: admin
ಮಡಿಕೇರಿ ಡಿ.24 NEWS DESK : ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವದ ವಿಕಸನ ಕುರಿತಾಗಿ ಸರಳ ಶಾರೀರಿಕ ವ್ಯಾಯಾಮದ ಶಿಬಿರ ನಡೆಯಿತು. ಗೋಣಿಕೊಪ್ಪಲಿನ ಹೊಳೆಕರೆ ಚಂಗಪ್ಪ ಅವರು ವಿದ್ಯಾರ್ಥಿಗಳಿಗೆ ವ್ಯಾಯಾಮದ ಆಯಾಮಗಳನ್ನು ಹೇಳಿಕೊಟ್ಟರು. ಅಲ್ಲದೇ ವಿದ್ಯಾರ್ಥಿಗಳಿಗೆ ಚಂಗಪ್ಪ ಅವರು ಬರೆದ “ಬದಕ್ ನ ಸಿನ್ಮಲಿ ಒಂದು ಒಳ್ಳ ಪಾರ್ಟ್” ಎಂಬ ಪುಸ್ತಕವನ್ನು ಉಚಿತವಾಗಿ ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ್ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ್ ನಾಯಕ್ ಉಪಸ್ಥಿತರಿದ್ದರು.
ನಾಪೋಕ್ಲು ಡಿ.24 NEWS DESK : ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಶಾಸಕ ಕೊಂಬಾರನ ಜಿ.ಬೋಪಯ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಗೇರಿ ವಲಯದ ವತಿಯಿಂದ ಮೇಕೇರಿ ಗೌರಿ ಶಂಕರ ದೇವಾಲಯದಲ್ಲಿ ಆಯೋಜಿಸಿದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಮತ್ತು 1500 ಹೊಸ ಸದಸ್ಯರ ಸೇರ್ಪಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರ ಸಹಕಾರ ಅವಶ್ಯಕ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗುತ್ತಿರುವ ಜನಪರ ಕಾರ್ಯಕ್ರಮಗಳಿಂದಾಗಿ ಗ್ರಾಮೀಣ ಜನರು ಸದೃಢರಾಗಲು ಸಹಕಾರಿಯಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕೆಂದು ಯೋಜನೆಯ ಬಗ್ಗೆ ಬೆಳಕು ಚೆಲ್ಲಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಅವರು ಮಾತನಾಡಿ, ನಮ್ಮ ಕೊಡಗು…
ನಾಪೋಕ್ಲು ಡಿ.29 NEWS DESK : ಬಲ್ಲಮಾವಟಿ ಗ್ರಾಮದ ಕೃಷಿಕ ಚೀಯಕಪೂವಂಡ ಮಿಥುನ್ ಚಂಗಪ್ಪ ಅವರ ಕೃಷಿ ಚಟುವಟಿಕೆಯನ್ನುಗುರುತಿಸಿ ಕೃಷಿ ಜಾಗರಣ್ ವತಿಯಿಂದ ಮಿಲಿಯನೇರ್ ಫಾರ್ಮರ್ ಆಫ್ ಇಂಡಿಯಾ ಪ್ರಶಸ್ತಿ-2025ಅನ್ನು ನೀಡಿ ಗೌರವಿಸಲಾಯಿತು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಮಿಥುನ್ ಚಂಗಪ್ಪ ಅವರು ಈಪ್ರಶಸ್ತಿಯನ್ನು ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ನಾಪೋಕ್ಲುವಿನ ಫಾರ್ಮರ್ ಪ್ರೊಡ್ಯೂಸರ್ ಆರ್ಗನೈಸೇಷನ್ ಮಿಥುನ್ ಅವರ ಹೆಸರನ್ನು ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಡಿ.24 NEWS DESK : ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿಗೆ ಅವಿರೋಧವಾಗಿ ಬಿಜೆಪಿಯ 4 ಮಂದಿ ಸದಸ್ಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ. ತೆರಿಗೆ ನಿರ್ಧಾರ ಮತ್ತು ಹಣಕಾಸು ಸಮಿತಿಗೆ ಅರುಣ್ ಶೆಟ್ಟಿ, ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಸಮಿತಿಗೆ ಎಸ್.ಸಿ.ಸತೀಶ್, ಪಟ್ಟಣ ಯೋಜನೆ ನಗರ ಅಭಿವೃದ್ಧಿ ಸಮಿತಿಗೆ ಅಪ್ಪಣ್ಣ, ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ ಶಾರದ ನಾಗರಾಜ್ ಅವರುಗಳು ಆಯ್ಕೆಯಾಗಿದ್ದಾರೆ. ಮಡಿಕೇರಿ ನಗರ ಸಭೆ ಅಧ್ಯಕ್ಷೆ ಕಲಾವತಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆದಿದೆ.
ಮಡಿಕೇರಿ ಡಿ.24 NEWS DESK : ಕೊಡಗು ಜಿಲ್ಲಾಡಳಿತ ಭವನದ ಮುಂಭಾಗದ ತಡೆಗೋಡೆಯ 2ನೇ ಹಂತದ ಕಾಮಗಾರಿ 3.45 ಕೋಟಿ ರೂ ವೆಚ್ಚದಲ್ಲಿ ಪೂರ್ಣಗೊಂಡಿದ್ದು, ಲೋಕಾಯುಕ್ತ ಮುಖ್ಯ ಇಂಜಿನಿಯರ್ ಮತ್ತು ಅಧಿಕಾರಿಗಳ ತಂಡ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿಯನ್ನು ವೀಕ್ಷಿಸಿದ ಲೋಕಾಯುಕ್ತ ಮುಖ್ಯ ಇಂಜಿನಿಯರ್ ರಮೇಶ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳಿಂದ ಮಾಹಿತಿ ಪಡೆದರು. ದ್ವಿತೀಯ ಹಂತದ ಕಾಮಗಾರಿಯ ವಿನ್ಯಾಸ, ಬಳಸಲಾದ ತಂತ್ರಜ್ಞಾನ, ಕಾಮಗಾರಿ ಮುಕ್ತಾಯಗೊಂಡ ಅವಧಿ, ಕಾಮಗಾರಿಯಲ್ಲಿ ಬಳಸಲಾದ ವಸ್ತುಗಳ ಗುಣಮಟ್ಟ ಸೇರಿದಂತೆ ವಿವಿಧ ಮಾಹಿತಿಗಳನ್ನು ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳಿಂದ ಪಡೆದುಕೊಂಡರು. ಈ ಸಂದರ್ಭ ಲೋಕಾಯುಕ್ತ ಕಾರ್ಯಪಾಲಕ ಇಂಜಿನಿಯರ್ ಅರವಿಂದ್, ಕೊಡಗು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸತೀಶ್, ಗಿರೀಶ್ ಮತ್ತಿತ್ತರರು ಹಾಜರಿದ್ದರು.
ಮಡಿಕೇರಿ ಡಿ.24 NEWS DESK : ಹಿರಿಯ ನಾಗರಿಕರ ವೇದಿಕೆ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ಕಿವಿ ತಪಾಸಣೆ ಉಚಿತ ಶಿಬಿರವು ಡಿಸೆಂಬರ್, 26 ರಂದು ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ಡಿ.24 NEWS DESK : ಹಿರಿಯ ನಾಗರಿಕರ ವೇದಿಕೆಯ 2024-25ನೇ ಸಾಲಿನ ಮಹಾಸಭೆಯು ಡಿಸೆಂಬರ್, 31 ರಂದು ಬೆಳಗ್ಗೆ 10.45 ಗಂಟೆಗೆ ನಗರದ ಬಾಲಭವನದಲ್ಲಿ ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ಡಿ.24 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡು ಸಂಸ್ಥೆಗಳು ಒಟ್ಟಾಗಿ ನವೆಂಬರ್, 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗೆ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ, ಕೆಎಸ್ಆರ್ಟಿಸಿ, ವಿಶ್ವವಿದ್ಯಾಲಯ, ಶಾಲಾ-ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಿಲ್ಲ. ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿಯಿದೆ. ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ…
ಗೋಣಿಕೊಪ್ಪ ಡಿ.24 NEWS DESK : ಗೋಣಿಕೊಪ್ಪದ ಕೊಡಗು ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಅಮೃತ್ರಾಜ್ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯ ಶಿವಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ನಡೆದ ಶಿಕ್ಷಣ ಮತ್ತು ಜ್ಞಾನ ಮಾಸಪತ್ರಿಕೆಯ 23ನೇ ವಾರ್ಷಿಕೋತ್ಸವ ಮತ್ತು ರಾಜ್ಯಮಟ್ಟದ ಶಿಕ್ಷಣ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಹಾಸನ ಜಿಲ್ಲೆಯ ಪ್ರಮುಖರಾದ ನಾಗರಾಜ್, ರಾಮಚಂದ್ರ, ರವೀಂದ್ರನಾಥ್, ಶ್ರೀಧರ್, ಪ್ರಸನ್ನಕುಮಾರ್, ಲಿಂಗರಾಜು, ಲೋಲಾಕ್ಷಿ, ರುದ್ರಪ್ಪ ಸೇರಿದಂತೆ ಹಲವಾರು ಭಾಗಿಯಾಗಿದ್ದರು. ಈ ಸಂದರ್ಭ ಸುಮಾರು 20ಕ್ಕೂ ಹೆಚ್ಚು ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.






