ಮಡಿಕೇರಿ ಮಾ.17 NEWS DESK : ಬಿಳಿಗೇರಿ ಮತ್ತು ಕಗ್ಗೋಡ್ಲು ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ 10 ಪ್ರಕರಣಗಳಿಗೆ ರೂ.1800 ಗಳ ದಂಡವನ್ನು ವಿಧಿಸಿ ನಿಯಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಲಾಯಿತು. ಸಂಗ್ರಹಣೆಯಾದ ದಂಡವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜಂಟಿ ಖಾತೆಗೆ ಜಮೆ ಮಾಡಲಾಯಿತು. ಅನಿರೀಕ್ಷಿತ ಭೇಟಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಹಾಗೂ ಜಿಲ್ಲಾ ತಂಬಾಕು ಕೋಶದ ಮಂಜುನಾಥ್ ಹಾಗೂ ಪೊಲೀಸ್ ಇಲಾಖೆಯವರು ಭಾಗವಹಿಸಿದ್ದರು.
ಲೇಖಕ: admin
ಮಡಿಕೇರಿ ಮಾ.17 NEWS DESK : ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅವಕಾಶ. ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು. ಬ್ಯೂಟಿ ಪಾರ್ಲರ್ ತರಬೇತಿ: 35 ದಿನಗಳು. ಪ್ರಾರಂಭ 01.04.2026 ರಿಂದ 05.05.2026 ರ ವರೆಗೆ., ಮಹಿಳೆಯರ ಹೊಲಿಗೆ ತರಬೇತಿ: 31 ದಿನಗಳು. ಪ್ರಾರಂಭ 06.05.2026 ರಿಂದ 05.06.2026 ರ ವರೆಗೆ., ಕಂಪ್ಯೂಟರ್ ಲೆಕ್ಕಪತ್ರ ನಿರ್ವಹಣೆ ತರಬೇತಿ 38 ದಿನಗಳು. ಪ್ರಾರಂಭ 13.05.2026 ರಿಂದ 19.06.2026ರ ವರೆಗೆ, ಅಣಬೆ ಬೇಸಾಯ ತರಬೇತಿ : 10 ದಿನಗಳು. ಪ್ರಾರಂಭ 27.05.2026 ರಿಂದ 05.06.2026 ರ ವರೆಗೆ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9686406181, 9449402081, 8618471801, 9900142602 ನ್ನು ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್…
ಮಡಿಕೇರಿ ಮಾ.17 NEWS DESK : ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟ್ರದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ ತರುವ ಮೂಲಕ ರಾಷ್ಟ್ರದ ಪರಿಸ್ಥಿತಿಯನ್ನು ಅಯೋಮಯಗೊಳಿಸಿದ ಕೇಂದ್ರ ಸರ್ಕಾರದ ಅಸಮರ್ಥತೆ ಬಗ್ಗೆ ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಸೌದೆ ಬಳಸಿ ಒಲೆ ಉರಿಸಿ ಚಹಾ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು. ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಭಾರತವನ್ನು ನಗೆಪಾಟಲಿಗೆ ಈಡು ಮಾಡುತ್ತಿದ್ದಾರೆ. ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪುತ್ತಿದ್ದು ಪ್ರಧಾನಿ ಮೋದಿ ಕೇವಲ ಪಂಚ ರಾಜ್ಯಗಳ ಚುನಾವಣೆಗೆ ಸಮಯ ಮೀಸಲಿರುವುದು ಖಂಡನೀಯ ಎಂದರು. ಅಡುಗೆ ಅನಿಲ ಬೆಲೆ ದಿಡೀರನೆ ಏರಿಕೆ ಮಾಡಿ…
ಮಡಿಕೇರಿ ಮಾ.17 NEWS DESK : ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಡಿ.ಕೆ.ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದಿ.ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯು ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವಂತಹ ಕೆಲಸವನ್ನು ಮಾಡುತ್ತಿದೆ . ಕನ್ನಡ ಭಾಷೆ ಮತ್ತು…
ಸೋಮವಾರಪೇಟೆ ಮಾ.17 NEWS DESK : ಅಡಿಗೆ ಅನಿಲ ವ್ಯತ್ಯಯದ ಹಿನ್ನಲೆಯಲ್ಲಿ ಪಟ್ಟಣದ ಹೋಟೆಲ್ ಹಾಗೂ ಬೇಕರಿಗಳ ಮೇಲೆ ಆಹಾರ ನಿರೀಕ್ಷಕರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಆಹಾರ ನಿರೀಕ್ಷಕರಾದ ಯಶಸ್ವಿನಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ಹೋಟೆಲ್ಗಳು ಮತ್ತು ಬೇಕರಿಗಳಲ್ಲಿ ಬಳಸುತ್ತಿರುವ ಅನಿಲ ಸಿಲಿಂಡರ್ ಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಮಾತನಾಡಿದ ಯಶಸ್ವಿನಿ ಅವರು, ವಾಣಿಜ್ಯ ಉದ್ದೇಶಗಳಿಗೆ ಕಾರ್ಯನಿರ್ವಹಿಸುವ ಹೋಟೆಲ್ ಹಾಗೂ ಬೇಕರಿಗಳು ಕಡ್ಡಾಯವಾಗಿ ವಾಣಿಜ್ಯ ಬಳಕೆಯ ಅಡಿಗೆ ಅನಿಲವನ್ನು ಮಾತ್ರ ಬಳಸಬೇಕು ಎಂದು ಸೂಚಿಸಿದರು. ಗೃಹ ಬಳಕೆಗೆ ಮೀಸಲಾದ ಅನಿಲವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸುವುದು ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪರಿಶೀಲನೆಯ ಸಂದರ್ಭದಲ್ಲಿ ಕೆಲವು ಸ್ಥಳಗಳಲ್ಲಿ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ನಿಯಮ ಪಾಲನೆಗೆ ವಿಶೇಷ ಗಮನ ಹರಿಸುವಂತೆ ತಿಳಿಸಲಾಯಿತು. ಕಾರ್ಯಾಚರಣೆಯಲ್ಲಿ ಇಲಾಖೆಯ ಸಿಬ್ಬಂದಿಗಳಾದ ವಿನೋದ್, ಮುರುಳಿ ಸೇರಿದಂತೆ ಇತರರು ಇದ್ದರು.
ವಿರಾಜಪೇಟೆ, NEWS DESK ಮಾ.17: ಪಟ್ಟಣದ ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ರುಪಾಯಿ ಮೌಲ್ಯದ ಬೃಹತ್ ಅನ್ನ ಶೇಖರಿಸುವ ಸ್ಟೀಲ್ ಪಾತ್ರೆಯನ್ನು ಉದಾರವಾಗಿ ನೀಡಲಾಯಿತು. ವರ್ಷಂಪ್ರತಿ ಜರುಗುವ ಶ್ರೀ ಮುತ್ತಪ್ಪ ತೆರೆ ಮಹೋತ್ಸವದಲ್ಳಿ ದಾಸೋಹದ ಸೇವೆಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಕೊಡುಗೆಯನ್ನು ದೇವಸ್ಥಾನಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷರಾದ ಪಿ. ಜಿ. ಸುಮೇಶ್ ರವರು ಪಾತ್ರೆಯನ್ನು ಶ್ರೀ ಮುತ್ತಪ್ಪ ದೇವಸ್ಥಾನದ ಅಧ್ಯಕ್ಷರಾದ ಟಿ.ಕೆ.ರಾಜನ್ ರವರಿಗೆ ಹಸ್ತಾಂತರಿಸಿ ಮಾತನಾಡಿ 82 ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವನ್ನು ಈ ಭಾರಿ ಆಚರಿಸುತ್ತಿದ್ದು ಪೂಜಾ ಕಾರ್ಯಕ್ರಮದ ಬಳಿಕ ಎಂಟರಿಂದ ಹತ್ತು ಕ್ವಿಂಟಾಲ್ ಅಕ್ಕಿ ಯಲ್ಲಿ ತಯಾರಿಸಿದ ಅನ್ನ ಸಂತರ್ಪಣ ಸೇವೆಯು ನಡೆಯಲಿದ್ದು ಅದಕ್ಕೆ ಸಹಕಾರಿಯಾಗಲೆಂದು ನಮ್ಮ ಸಂಘದ ಸರ್ವ ಸದಸ್ಯರ ಸಹಕಾರದಿಂದ ಹಾಗೂ ನನ್ನ ಆತ್ಮೀಯರಾದ ಚಿರಿಯಪಂಡ ಸುರೇಶ್ ನಂಜಪ್ಪ, ಮಾಲೆಟಿರ…
ಮಡಿಕೇರಿ ಮಾ.17 NEWS DESK : ಇದೇ ಮಾರ್ಚ್, 18 ರಿಂದ ಏ.2 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಸಂಬಂಧ ಕಳೆದ ಬಾರಿಯಂತೆ ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 6,183 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಇವರಲ್ಲಿ ಬಾಲಕರು 3,049, ಹಾಗೆಯೇ ಬಾಲಕಿಯರು 3,134 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ 399 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಮಾಹಿತಿ ನೀಡಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜಿಲ್ಲೆಯ 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ 8, ವಿರಾಜಪೇಟೆ 8 ಹಾಗೂ ಸೋಮವಾರಪೇಟೆ 12 ಕೇಂದ್ರಗಳಲ್ಲಿ ಪರೀಕ್ಷೆ…
ಸೋಮವಾರಪೇಟೆ ಮಾ.17 NEWS DESK : ಶ್ರೀ ಆಂಜನೇಯಸ್ವಾಮಿ ದೇವಾಲಯ ಸಮಿತಿ ವತಿಯಿಂದ ಮಾ.27 ರಂದು ಅರ್ಥಪೂರ್ಣವಾಗಿ ಶ್ರೀ ರಾಮನವಮಿ ಉತ್ಸವ ಆಚರಿಸಲಾಗುವುದು ಎಂದು ಶ್ರೀ ಆಂಜನೇಯ ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.19 ರಿಂದ 27 ರ ತನಕ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ 6 ಗಂಟೆಯಿಂದ 8 ಗಂಟೆ ತನಕ ವಿಶೇಷ ಪೂಜೆ ನಡೆಯಲಿದೆ. 19 ರಿಂದ ದಿನಕ್ಕೊಂದರಂತೆ ಶ್ರೀಗಂಧ, ವಿಳೈದೆಲೆ, ಬೆಣ್ಣೆ, ಕೇಸರಿ, ತುಳಸಿ, ಕುಂಕುಮ, ಹೂವಿನ ಮತ್ತು ಮುತ್ತಿನ ಆಲಂಕಾರರನ್ನು ಶ್ರೀರಾಮನ ಉತ್ಸವ ಮೂರ್ತಿಗೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. 27 ರ ಸಂಜೆ 6 ಗಂಟೆಯಿಂದ ಶ್ರೀ ರಾಮಾಂಜನೇಯೋತ್ಸವ ಮೆರವಣಿಗೆ ಪಟ್ಟಣದ ನಿಗದಿತ ರಸ್ತೆಯಲ್ಲಿ ನಡೆಯಲಿದೆ. ಕಳೆದ 60 ವರ್ಷಗಳಿಂದಲೂ ಆಂಜನೇಯ ದೇವಾಲಯದಲ್ಲಿ ರಾಮನವಮಿ ಆಚರಿಸಿ, ಮೆರವಣಿಗೆ ಮಾಡಲಾಗುತ್ತಿದೆ. 27ರಂದು ಪಾನಕ ವಿತರಣೆ, ಅನ್ನದಾನ ನಡೆಯಲಿದೆ ಎಂದು ಹೇಳಿದರು. ಅಂದಾಜು 4.50 ಕೋಟಿ ರೂ.ಗಳ ವೆಚ್ಚದಲ್ಲಿ…
ಮಡಿಕೇರಿ ಮಾ.17 NEWS DESK : ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಶ್ರೀ ಭಗವತಿ ದೇವಾಲಯದ ವಾರ್ಷಿಕ ಉತ್ಸವವು ಮಾ.22 ರಿಂದ 26 ರವರೆಗೆ ನಡೆಯಲಿದೆಯೆಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ಮಾ.22 ರಂದು ಬೆಳಿಗ್ಗೆ 9.30ಗಂಟೆಗೆ ಶ್ರೀ ಗಣಪತಿ ಹೋಮ, ಮಹಾಪೂಜೆ, ಸಂಜೆ 6.30ಕ್ಕೆ ಪ್ರಾರ್ಥನೆ, ಭಂಡಾರ ತರುವುದು, ಅಂದಿಬೆಳಕು, ಮಹಾಪೂಜೆ, ಪ್ರಸಾದ ವಿತರಣೆ, ಮಾ.23ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ಭಗವತಿ ದೇವರು ಬಲಿ ಬರುವುದು, ಮಹಾಪೂಜೆ, ಸಂಜೆ 6.30 ಗಂಟೆಗೆ ಬೆಳಕು, ದೇವರು ಬಲಿ ಬರುವುದು, ಅಂದಿಬೆಳಕು, ಮಹಾಪೂಜೆ, ಅನ್ನಸಂತರ್ಪಣೆ, ಶ್ರೀ ಪರದೇವರ ಕೊಟ್ಟದಲ್ಲಿ ಕೊಟ್ಟಿಪಾಡುವ ಕಾರ್ಯಕ್ರಮಗಳು ನಡೆಯಲಿವೆ. ಮಾ.24 ರಂದು ಬೆಳಿಗ್ಗೆ 6 ಗಂಟೆಗೆ ಶ್ರೀ ದೇವರು ಬಲಿ ಬರುವುದು, ಅಯ್ಯಪ್ಪ ದೇವರ ಪೂಜೆ, ಮಹಾಪೂಜೆ, ಸಂಜೆ ಬೆಳಕು, ಶ್ರೀ ದೇವರ ಬಲಿ, ಅಂದಿಬೆಳಕು ಮಹಾಪೂಜೆ ಪ್ರಸಾದ ವಿತರಣೆ, ಮಾ.25ರಂದು ಬೆಳಗ್ಗೆ 6 ಗಂಟೆಯಿಂದ ಶ್ರೀ ದೇವರ ನೃತ್ಯ ಬಲಿ, ಶ್ರೀ ಪರದೇವರ ಕೊಟ್ಟದಿಂದ…
ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಆರು ಬ್ಲಾಕ್ ಗಳ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಕೆ.ಜಿ.ನೈನಾ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾಗಿ ಆಶಾ ಪೂಣಚ್ಚ ಮೂಕಳೆರ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಇಂದುಮತಿ ಕೆ.ಎಸ್ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಜಾನಕಿ ವೆಂಕಟೇಶ್, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸವಿತ ಕೆ.ಆರ್, ಹಾಗೂ ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಕೊಂಪುಳಿರ ಇಂದಿರಾ ರಾಮಚಂದ್ರ ನೇಮಕಗೊಂಡಿದ್ದಾರೆ ಎಂದು ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ಪುಷ್ಪಲತಾ ಜಿ.ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






