ನಾಪೋಕ್ಲು ಸೆ.6 : ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ಮೂಡೇರ ಕಾಳಯ್ಯ ಹಾಗೂ ದೈಹಿಕ ಶಿಕ್ಷಕಿ ಸರಿತಾ ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ಸೆ.6 : ಚೇರಂಬಾಣೆ ವೃತ್ತ, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘ ಕೊಡಗು, ಬೆಟ್ಟಗೇರಿ ಗ್ರಾ.ಪಂ ಸಹಯೋಗ ದೊಂದಿಗೆ ಅಪ್ಪಂಗಳ ಸಮುದಾಯ ಭವನದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ, ಮಾತೃ ವಂದನ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾನಸಿಕ, ಭೌತಿಕ ಹಾಗೂ ದೈಹಿಕವಾಗಿ ಆರೋಗ್ಯದ ಬೆಳವಣಿಗೆ ಆಗಬೇಕೆಂದು ಯೂನಿಸೆಫ್ ಚಿಂತನೆಯಾಗಿದೆ. ಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕೈಕಟಕುವಂತೆ ಪೌಷ್ಟಿಕಾಂಶ ದೊರಕಬೇಕೆಂಬುದು ತಿಳಿಸಲಾಗಿದೆ. ಪೌಷ್ಟಿಕತೆ ಎನ್ನುವುದು ಕೇವಲ ಪ್ರಾಪ್ತ ವಯಸ್ಸಿನವರಿಗೆ ಮಾತ್ರವಲ್ಲದೆ ಪ್ರಸವಪೂರ್ವ ಮಗುವಿನಿಂದಲೂ ಉತ್ತಮ ಪೌಷ್ಟಿಕತೆ ಪ್ರಾರಂಭವಾಗುತ್ತದೆ. ಅದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸಮಾಜಕ್ಕೆ ಹತ್ತಿರವಾಗಿರುವ ಅಂಗನವಾಡಿ ಕೇಂದ್ರಗಳ ಮೂಲಕ ವಿತರಣೆಯಾಗುತ್ತದೆ ಎಂದು ತಿಳಿಸಿದರು. ಬಡತನ ನಿರ್ಮೂಲನೆ ಬಗ್ಗೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಯೋಜನೆಯಾದ ಉಚ್ಚ…
ಸೋಮವಾರಪೇಟೆ, ಸೆ.6: ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಬೋಧಕೇತರ ನೌಕರರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಳಿಯಪ್ಪ ಮಾತನಾಡಿ, ಭಾರತದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆ.5 ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಶಿಕ್ಷಕರಿಗೆ ವಿಶೇಷ ಸ್ಥಾನವಿದೆ. ಮನುಷ್ಯನನ್ನು ಮನುಷ್ಯನನ್ನಾಗಿ ಮಾಡುವವನು ಗುರು. ಮಾನವ ಜೀವನದಲ್ಲಿ ಶಿಕ್ಷಕನ ಸ್ಥಾನವು ದೇವರು ಮತ್ತು ಪೋಷಕರಿಗಿಂತ ಮೇಲಿದೆ ಎಂದು ಬಣ್ಣಿಸಿದರು. ಶಿಕ್ಷಣ ಸಂಯೋಜಕ ಕೆ.ಬಿ.ರಾಧಾಕೃಷ್ಣ, ಕಛೇರಿಯ ಪತ್ರಾಂಕಿತ ಅಧಿಕಾರಿ ಎಂ.ಆರ್.ಕಿರಣ್, ಅಧೀಕ್ಷಕ ಸಿ.ಪಿ.ದಾಮೋದರ್, ಸರ್ಕಾರಿ ನೌಕರರ ಸಂಘದ ಖಜಾಂಚಿ ವಿ.ಜಿ.ದಿನೇಶ್, ತಾಲ್ಲೂಕು ಬೋಧಕೇತರರ ನೌಕರರ ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್, ಉಪಾಧ್ಯಕ್ಷ ಹೆಚ್.ಟಿ.ರಾಜೇಶ್ , ನಿರ್ದೇಶಕ ಮೋಹನ್ ದಾಸ್, ಕಛೇರಿ ಸಿಬ್ಬಂದಿಗಳಾದ ಟಿ.ಬಿ.ಚಿದಾನಂದ, ಶೇಷಾದ್ರಿ ಎಲ್. ಸ್ವಾಮಿ, ಪಿ.ಎಸ್. ಭುವನೇಶ್ ಇತರರು ಹಾಜರಿದ್ದರು.
ಮಡಿಕೇರಿ ಸೆ.6 : ಮುಂದಿನ ಶೈಕ್ಷಣಿಕ ವರ್ಷದಿಂದ ಕೊಡಗು ವಿಶ್ವವಿದ್ಯಾಲಯವು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಯೋಜನೆಯನ್ನು ರೂಪಿಸಿಕೊಂಡಿದೆ. ಮಾತ್ರವಲ್ಲ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಲಾ ಒಂದೊಂದು ಲಾಂಗ್ವೇಜ್ ಲ್ಯಾಬ್ ಗಳನ್ನು ರೂಪಿಸಲಾಗುವುದು. ಜೊತೆಯಲ್ಲಿ ಕರ್ನಾಟಕ ಸರ್ಕಾರದ ಕಲಿಕೆಯೊಂದಿಗೆ ಕೌಶಲ್ಯ ಎಂಬ ಯೋಜನೆಯನ್ನು ಕೊಡಗು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗಾಗಿ ಪರಿಚಯಿಸಲಾಗುವುದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ನುಡಿದರು. ಕರ್ನಾಟಕ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಫೋರ್ಕ್ ಟೆಕ್ನೊಲಜಿ ಹಾಗೂ ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ವಾರಗಳ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಅವರು, ಅಧ್ಯಾಪಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗಬಾರದು. ಬದಲಾಗಿ…
ಮಡಿಕೇರಿ ಸೆ.5 : ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್, 8 ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ನೇತೃತ್ವದಲ್ಲಿ ಸಾಕ್ಷರ ಧ್ವಜಾರೋಹಣ ಮತ್ತು ಸಾಕ್ಷರತಾ ಪ್ರಮಾಣ ವಚನದ ಮೂಲಕ ನೆರವೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪಂಚಾಯತ್ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಸೆ.5 : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ನಗರದ ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು. ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ. ಮಕ್ಕಳನ್ನು ಸರಿದಾರಿಗೆ ತರಲು…
ಮಡಿಕೇರಿ ಸೆ.5 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮುಂದಿಟ್ಟಿರುವ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಕೇಂದ್ರ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಸಮಯಾವಕಾಶ ಕೋರಿದ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಿತು. ಆ.3 ರಂದು ನಡೆದ ವಿಚಾರಣೆ ಸಂದರ್ಭ ಮೂವರು ಪ್ರತಿವಾದಿಗಳು 4 ವಾರಗಳಲ್ಲಿ ಉತ್ತರ ನೀಡುವಂತೆ ಕೋರ್ಟ್ ನಿರ್ದೇಶನ ನೀಡಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಅರ್ಜಿಯನ್ನು ಆಲಿಸಿದರು. ಅರ್ಜಿದಾರರಾದ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ಪರ ವಕೀಲ ಕೀರನ್ ನಾರಾಯಣ್ ವಾದ ಮಂಡಿಸಿದರು. ಸಹಾಯಕ ಸಾಲಿಸಿಟರ್ ಜನರಲ್ ಶಾಂತಿ ಭೂಷಣ್ ಅವರು ಪ್ರತಿವಾದಿಗಳ ಒಕ್ಕೂಟದ ಸರ್ಕಾರದ ಪರವಾಗಿ ವಾದಿಸಿದರು. ಎನ್.ಯು.ನಾಚಪ್ಪ ಅವರು…
ಮಡಿಕೇರಿ ಸೆ.5 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢ ರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ, ಉಡೋತ್ತುಮೊಟ್ಟೆ, ಚೇರಂಬಾಣೆ, ಅಪ್ಪಂಗಳ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಸೆ.5 : 33/11ಕೆವಿ ಎಂಯುಎಸ್ಎಸ್ ಮೂರ್ನಾಡು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಸೆ.6 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊಡವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.05 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ಅಧೀನ ಸಂಸ್ಥೆಯಾದ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮಡಿಕೇರಿ ಡಿಸಿಎಂ ಡಿಪ್ಲೊಮಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 1 ನೇ ರ್ಯಾಂಕ್ , 3 ನೇ ರ್ಯಾಂಕ್ ಹಾಗೂ 6 ನೇ ರ್ಯಾಂಕ್ ಗಳನ್ನು ಮತ್ತು 5 ಡಿಸ್ಟಿಂಕ್ಷನ್ಗಳನ್ನು ಗಳಿಸಿದ್ದು, ಶೇ.100 ರಷ್ಟು ದಾಖಲೆ ಫಲಿತಾಂಶ ಬಂದಿದೆ. ವಿ.ಭೂಮಿಕ 1ನೇ ರ್ಯಾಂಕ್ , ಬಿ.ಎ.ದಮಯಂತಿ 3ನೇ ರ್ಯಾಂಕ್ , ಬಿ.ಪಿ.ನಿತಿನ್ ನಂಜಪ್ಪ 6ನೇ ರ್ಯಾಂಕ್ ಪಡೆದಿದ್ದಾರೆ ಎಂದು ಕೆಐಸಿಎಂ ಪ್ರಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ತಿಳಿಸಿದ್ದಾರೆ.






