ಲೇಖಕ: admin

ಸೋಮವಾರಪೇಟೆ ಸೆ.3 : ಕೊಡಗು ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗು ನೇರುಗಳಲೆ ಸರ್ಕಾರಿ ಪ್ರಾಥಮಿಕ ಹಾಗು ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 6ರ ಬುಧವಾರ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ ನಡೆಯಲಿದೆ. ನೇರುಗಳಲೆ ಶಾಲಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಬೆಳಿಗ್ಗೆ 10-30ಕ್ಕೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಕೆ. ವಿನೋದ್ ಕುಮಾರ್ ವಹಿಸಲಿದ್ದಾರೆ. ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಎ.ಡಿ. ಪದ್ಮಾವತಿ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಚ್.ಪಿ. ದಿಲೀಪ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. 7ರ ಗುರುವಾರ ಕ್ರೀಡಾಕೂಟದ ಸಮಾರೋಪ ಸಮಾರಂಭ ಸಂಜೆ 4-30ಕ್ಕೆ ನಡೆಯಲಿದ್ದು, ಅಧ್ಯಕ್ಷತೆಯನ್ನು ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಜಾಕ್ಷಿ ದಿನೇಶ್ ವಹಿಸಲಿದ್ದಾರೆ. ಇದೇ ಸಂದರ್ಭ ಭಾರತ ಹಾಕಿ ಆಟಗಾರ ಎಸ್.ವಿ. ಸುನಿಲ್, ಪ್ರೊ ಕಬಡ್ಡಿ ಆಟಗಾರ ರತನ್ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಕ್ರೀಡಾಕೂಟದ ಸಂಘಟಕ ಕೆ.ಆರ್. ರತ್ನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಸೆ.3 : ಸೋಮವಾರಪೇಟೆ ಚೌಡ್ಲು ಗ್ರಾಮದ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಅರ್ಚಕ ಬಸವರಾಜು ನೆರವೇರಿಸಿದರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಭರತ್, ಖಜಾಂಚಿ ಶೇಖರ್ ಸೇರಿದಂತೆ ಹಲವರು ಇದ್ದರು.

Read More

ಮಡಿಕೇರಿ ಸೆ.3 : ಸೋಮವಾರಪೇಟೆ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಒಂದು ವರ್ಷದ ಶೈಕ್ಷಣಿಕ ಶುಲ್ಕವನ್ನು ಹಿರಿಯ ವಕೀಲ ಎಚ್.ಸಿ. ನಾಗೇಶ್ ಅವರ ಪತ್ನಿ ಲತಾ ಭರಿಸಿದ್ದಾರೆ. ಚೆಕ್ ನ್ನು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿ ಅವರಿಗೆ ಹಸ್ತಾಂತರಿಸಿದರು. ಹಿಂದಿನ ಸಾಲಿನಲ್ಲೂ ವಿದ್ಯಾರ್ಥಿನಿಯ ಶಾಲಾ ಶುಲ್ಕ, ಸಮವಸ್ತ್ರ ಹಾಗೂ ಪುಸ್ತಕಗಳಿಗೆ ಹಣ ನೀಡಿದ್ದರು.

Read More

ಮಡಿಕೇರಿ ಸೆ.2 : ಹಳ್ಳಿ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ನಕ್ಷತ್ರಗಳನ್ನಾಗಿಸಿದ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉತ್ಸಾಹಿ ದೈಹಿಕ ಶಿಕ್ಷಕ ಬಿ.ಟಿ.ಪೂರ್ಣೇಶ್ ಅವರಿಗೆ ಈ ಬಾರಿಯ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಸುಮಾರು 29 ವರ್ಷಗಳ ಸುದೀರ್ಘ ಸೇವಾ ಅವಧಿಯಲ್ಲಿ ಹಲವು ಹಾಕಿ ಕ್ರೀಡಾಪಟುಗಳನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಾಕಿ ಶಿಬಿರಗಳಲ್ಲಿ ತೊಡಗಿಕೊಳ್ಳುವಂತೆ ಮಾಡಿದ ಹೆಗ್ಗಳಿಕೆ ಇವರದ್ದು. ಹಾಕಿ ಕ್ರೀಡೆಯನ್ನು ತಮ್ಮ ಜೀವನಾಡಿಯನ್ನಾಗಿಸಿಕೊಂಡು ಉಚಿತ ತರಬೇತಿ ಶಿಬಿರಗಳನ್ನು ನಡೆಸಿ ಗ್ರಾಮೀಣ ವಿದ್ಯಾರ್ಥಿಗಳನ್ನು ಹುರಿದುಂಬಿಸಿದ್ದಾರೆ. ಪ್ರಸ್ತುತ 36ನೇ ರಾಷ್ಟ್ರೀಯ ಕ್ರೀಡೆಯಲ್ಲಿ ಪೂರ್ಣೇಶ್ ಅವರ ಇಬ್ಬರು ವಿದ್ಯಾರ್ಥಿಗಳಾದ ಅಪ್ಸರ ಹಾಗೂ ಅರ್ಪಿತ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಈಗಾಗಲೇ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿರುವ ಪೂರ್ಣೇಶ್…

Read More

ಮಡಿಕೇರಿ ಸೆ.2 : ಕೊಡಗು ಜಿಲ್ಲಾ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್‍ಗಳು, ಸಾಗಣಿದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್‍ಸ್ಟೋರ್, ಕ್ಲಬ್‍ಗಳು, ಬಾರ್ ಅಂಡ್ ರೆಸ್ಟೋರೆಂಟ್‍ಗಳು, ಹೋಮ್‍ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ತರಬೇತಿ ಕಾರ್ಯಾಗಾರವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಚೇಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ನಡೆದ ಕಾರ್ಯಾಗಾರದಲ್ಲಿ ಆಹಾರ ಸುರಕ್ಷತೆ…

Read More

ಮಡಿಕೇರಿ ಸೆ.2 :  ದಕ್ಷಿಣ ಕೊರಿಯದಲ್ಲಿ ನಡೆದ 8ನೇ ಡೆಜಿಯೋನ್ MBC ಕಪ್ ಅಂತಾರಾಷ್ಟ್ರೀಯ ಮುಕ್ತ ಟೆಕ್ವಾಂಡೊ  ಚಾಂಪಿಯನ್ ಶಿಪ್ ನಲ್ಲಿ ಮೂಲತಃ ಮಡಿಕೇರಿಯವರಾದ ಬೆಂಗಳೂರಿನಲ್ಲಿ ನೆಲೆಸಿರುವ ಎ.ಪಿ. ರಿಮೋನ್ ಪೊನ್ನಣ್ಣ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾನೆ. ಇತ್ತೀಚೆಗೆ ನಡೆದ ಚಾಂಪಿಯನ್‌ಶಿಪ್ ನ 14 ವರ್ಷದೊಳಗಿನ ವಿಭಾಗದಲ್ಲಿ ರಿಮೋನ್ ಪೊನ್ನಣ್ಣ ಒಂದು ಬೆಳ್ಳಿ, ಒಂದು ಕಂಚಿನ ಪದಕ ಪ್ರಶಸ್ತಿ ಪತ್ರ ಹಾಗೂ ಪ್ರಶಂಸನ ಉಡುಗೊರೆ ಪಡೆದು ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಂಗಳೂರಿನ WRM ಟೆಕ್ವಾಂಡೊ  ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ರಿಮೋನ್ ಚಿಕ್ಕಂದಿನಿಂದಲೇ ಟೇಕ್ವಾಂಡೋ ದಲ್ಲಿ ತನ್ನನ್ನು ತೊಡಗಿಸಿಕೊಂಡು ರಾಷ್ಟ್ರ ಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾನೆ. ರಿಮೋನ್ ಬೆಂಗಳೂರಿನ ಬಾಲ್ಡ್ ವಿನ್ ಬಾಲಕರ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಂತಾರಾಷ್ಟ್ರೀಯ ತೀರ್ಪು ಗಾರರಾದ ವಹೇಗಮ್ ರಾಜೇಸ್ವರ್ ಮೆಹತಿ ಅವರ ಬಳಿ ತರಬೇತಿ  ಪಡೆಯುತ್ತಿದ್ದಾರೆ. ಇವನು ಮೂಲತಃ ಮಡಿಕೇರಿಯ ನಿವಾಸಿ ಪುಷ್ಪಲಕ್ಷ್ಮಿ ಹಾಗು ಪ್ರಕಾಶ ಎಂಬವರ ಪುತ್ರ. ಇವನ ಸಾಧನೆಗೆ ಮಡಿಕೇರಿಯ ಸುದರ್ಶನ್…

Read More

ಮಡಿಕೇರಿ ಸೆ.2 : ಪ್ರಸಕ್ತ (2023-24) ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಸ.ಕ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಬಿ.ಸಿ.ವನಜ, ನಾಪೋಕ್ಲು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ಪಿ.ಚಂದ್ರಕಲಾ, ಚೆಂಬು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಪಿ.ಎಸ್.ಕಾಮಾಕ್ಷಿ, ಸೋಮವಾರಪೇಟೆ ತಾಲ್ಲೂಕಿನ ಹಟ್ಟಿಹೊಳೆ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಶಾಂತಶೀಲ, ರಂಗಸಮುದ್ರ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಕೆ.ಕೆ.ಸುನಿತ, ಕೂಡುಮಂಗಳೂರು ಸ.ಪ್ರೌಢ ಶಾಲೆಯ ಹಿಂದಿ ಭಾಷಾ ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ವಿರಾಜಪೇಟೆ ತಾಲ್ಲೂಕಿನ ಎಲಿಯಂಗಾಡು ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪಿ.ಎಂ.ಸುಬ್ರಮಣ್ಯ, ಗೋಣಿಕೊಪ್ಪ ಸ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಕೆ.ಕುಮಾರ್, ಜೆಪಿಎಸ್ ಪ್ರೌಢಶಾಲೆಯ(ಅನುದಾನಿತ) ಮುಖ್ಯ ಶಿಕ್ಷಕರಾದ ಲಾಲ್‍ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಆಯ್ಕೆಗೊಂಡ ಶಿಕ್ಷಕರು ಸೆಪ್ಟೆಂಬರ್, 5 ರಂದು ಬೆಳಗ್ಗೆ 9 ಗಂಟೆಗೆ ನಗರದ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

Read More

ಮಡಿಕೇರಿ ಸೆ.2 : ಪ್ರಸಕ್ತ (2023-24) ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯು ಇಲಾಖಾ ವತಿಯಿಂದ ನಡೆಯಲಿದೆ. ಈ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಬಹುದು. ಸೆ. 11 ರಂದು ಮಡಿಕೇರಿ ತಾಲೂಕು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೆ.12 ಕುಶಾಲನಗರ ತಾಲೂಕು ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆ.13 ಸೋಮವಾರಪೇಟೆ ತಾಲೂಕಿಗೆ ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆ.14 ರಂದು ತಾಲ್ಲೂಕಿಗೆ ಮತ್ತು ಸೆ.15 ವಿರಾಜಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜ್ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.ಮಡಿಕೇರಿ ತಾಲೂಕು ಮಹಾಬಲ 9980887499, ಹಾಗೂ ಮನು 9480032712, ಸೋಮವಾರಪೇಟೆ ತಾಲೂಕು ವೆಂಕಟೇಶ್ 9844326007 ಕುಶಾಲನಗರ ತಾಲೂಕು, ಮಂಜುನಾಥ್ 9342563014,…

Read More

ಮಡಿಕೇರಿ ಸೆ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ…

Read More

ಮಡಿಕೇರಿ ಸೆ.2 : ಕೊಡಗು ಜಿಲ್ಲಾ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್‍ಗಳು, ಸಾಗಣಿದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್‍ಸ್ಟೋರ್, ಕ್ಲಬ್‍ಗಳು, ಬಾರ್ ಅಂಡ್ ರೆಸ್ಟೋರೆಂಟ್‍ಗಳು, ಹೋಮ್‍ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ತರಬೇತಿ ಕಾರ್ಯಾಗಾರವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಚೇಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ನಡೆದ ಕಾರ್ಯಾಗಾರದಲ್ಲಿ ಆಹಾರ ಸುರಕ್ಷತೆ…

Read More