ಮಡಿಕೇರಿ ಏ.8 NEWS DESK : ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಪೊಲೀಸ್ ಉಪ ಅಧೀಕ್ಷಕರಾದ ದಿನಕರ ಶೆಟ್ಟಿ ಅವರು ದೂರು ಅರ್ಜಿ ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರಿಂದ ಸಲ್ಲಿಕೆಯಾದ 6 ಅರ್ಜಿಗಳಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು. ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸರ್ಕಾರಿ ನೌಕರರು ಸ್ಪಂದಿಸುವಂತಾಗಬೇಕು. ಆಗದಿರುವ ಕೆಲಸಕ್ಕೆ ಹಿಂಬರಹ ನೀಡುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಕೆಲಸ ಸಾರ್ವಜನಿಕರ ಕೆಲಸವಾಗಿದ್ದು, ಅದನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ದಿನಕರ ಶೆಟ್ಟಿ ಅವರು ಎಚ್ಚರಿಸಿದರು. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಮನವಿಗಳಿಗೆ ಒಂದು ಅಥವಾ ಎರಡು ವರ್ಷವಾದರೂ ಬಗೆಹರಿಸಿಲ್ಲ. ಹೀಗೆ ಆದರೆ…
ಲೇಖಕ: admin
ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್ಪೋರ್ಟ್ ಮೇಳಕ್ಕೆ ಬುಧವಾರ ಚಾಲನೆ ದೊರೆಯಿತು. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಸ್ಪೋರ್ಟ್ ಮೇಳಕ್ಕೆ ಚಾಲನೆ ನೀಡಿದರು. ಕೊಡಗು ಜಿಲ್ಲೆಯ ಜನರು ಪಾಸ್ಪೋರ್ಟ್ಗಾಗಿ ದೂರದ ಊರಿಗೆ ಹೋಗುತ್ತಿದ್ದರು. ಆ ನಿಟ್ಟಿನಲ್ಲಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆ ಬೆಂಗಳೂರಿನ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ಅವರು ಮೂರು ದಿನಗಳ ಕಾಲ ಪಾಸ್ಪೋರ್ಟ್ ಮೇಳ ಹಮ್ಮಿಕೊಂಡಿದ್ದು, ಈಗಾಗಲೇ ನೋಂದಣಿ ಮಾಡಿರುವವರು ಇದರ ಪ್ರಯೋಜನವನ್ನು ಪಡೆಯುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಸಭೆ ಸದಸ್ಯರು, ಪಾರ್ಸ್ ಪೋರ್ಟ್ ಮೇಳದ ಅಧಿಕಾರಿಗಳು ಇತರರು ಇದ್ದರು. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ ಕೊಡಗು ಜಿಲ್ಲೆಯಲ್ಲಿ…
ವಿರಾಜಪೇಟೆ ಏ.8 NEWS DESK : ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರೈಮರಿ ಮತ್ತು ಹೈ ಸ್ಕೂಲ್ ಹಾಗೂ ಪ್ರಗತಿ ಕ್ರಿಕೆಟ್ ಅಕಾಡೆಮಿಯ ವಿದ್ಯಾರ್ಥಿನಿಯರು ಕೊಡಗು ಜಿಲ್ಲಾ ಲೆದರ್ಬಾಲ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ಅಂಡರ್-15 ವಿಭಾಗದಲ್ಲಿ ವಿನ್ಯಾ ಎನ್. ಎಸ್. ಪ್ರತೀಕ್ಷಾ ಕೆ ಎನ್ , ವರ್ಷಿಣಿ ಕೆ ಎಚ್ ಹಾಗೂ ಅಂಡರ್-19 ವಿಭಾಗದಲ್ಲಿ ಸಾನ್ವಿ ಎಸ್ ಭಟ್, ಧನ್ವಿ ಬಿ. ಆರ್.ಇವರು ಕೊಡಗು ಜಿಲ್ಲಾ ಲೆದರ್ಬಾಲ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಪಂದ್ಯಗಳಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಂಗಳೂರು ತಂಡಗಳ ವಿರುದ್ಧ ಸ್ಪರ್ಧಿಸಲಿದ್ದು, ಈ ಸ್ಪರ್ಧೆಗಳು ಮಂಗಳೂರು ವಲಯ (Zonal) ತಂಡದ ಆಯ್ಕೆ ಟ್ರಯಲ್ಸ್ ಆಗಿಯೂ ನಡೆಯಲಿವೆ. ಅಂತಾರಾಷ್ಟ್ರೀಯ ರಗ್ಬಿ ಆಟಗಾರರು, ಪ್ರಗತಿ ಶಾಲೆಯ ಆಡಳಿತಾಧಿಕಾರಿ ಮಾದoಡ ತಿಮ್ಮಯ್ಯ ಅವರು ತಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯ ಚಟುವಟಿಕೆಗಳೊಂದಿಗೆ, ಕ್ರೀಡಾ ಚಟುವಟಿಕೆಗಳಿಗೆ…
ಮಡಿಕೇರಿ NEWS DESK ಏ.8 : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸಾಲು ಸಾಲು ಸಾವುಗಳಾಗುತ್ತಿದ್ದರೂ ರಾಜ್ಯ ಸರಕಾರ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಕ್ಷಿಣ ಕೊಡಗಿನ ಕಾಯಿಮಾನಿಯಲ್ಲಿ ಮೂಕಳಮಾಡ ರತ್ತು ಅವರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದು, ಇದು ಅರಣ್ಯ ಇಲಾಖೆಯ ನಿರ್ಲಕ್ಷö್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಅರಣ್ಯ ಸಚಿವರು ಸಂತಾಪ ಸೂಚಿಸಿ ಸುಮ್ಮನಾದರೆ ಸಾಲದು, ಕೊಡಗು ಜಿಲ್ಲೆಗೆ ಬಂದು ಇಲ್ಲಿ ನಡೆಯುತ್ತಿರುವ ವನ್ಯಜೀವಿ ಮತ್ತು ಮಾನವ ಸಂಘರ್ಷದ ಕುರಿತು ಅಧ್ಯಯನ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಮೂರೂವರೆ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಕಾಡಾನೆಯಿಂದ 6ಕ್ಕೂ ಹೆಚ್ಚು ಸಾವುಗಳಾಗಿದ್ದರೂ ಅರಣ್ಯ ಸಚಿವರು ಇತ್ತ ಮುಖ ಮಾಡಿಲ್ಲ, ನೊಂದವರ ಅಹವಾಲು ಸ್ವೀಕರಿಸಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಶಾಸಕರುಗಳು ಕಾಡಾನೆ ದಾಳಿಯ ಗಂಭೀರತೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮತ್ತು ಸಚಿವರನ್ನು ಕರೆ ತರುವಲ್ಲಿ ಸಂಪೂರ್ಣವಾಗಿ…
ಮಡಿಕೇರಿ ಏ.8 NEWS DESK : ನಗರದ ಅಂಬೇಡ್ಕರ್ ಭವನ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ರೂ. 5 ಸಾವಿರ ನಗದು ಜೊತೆಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಭಾವಚಿತ್ರ, ಜಾತಿದೃಢೀಕರಣ ಪತ್ರದೊಂದಿಗೆ ಸ್ವವಿವರವನ್ನು ಏಪ್ರಿಲ್ 12 ರೊಳಗಾಗಿ 9480870210 ಸಂಖ್ಯೆಗೆ ವಾಟ್ಸಾ್ಯಪ್ ಮೂಲಕ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ 9449634753 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಏ.14 ರಂದು ಅಂಬೇಡ್ಕರ್ ಭವನ ಸಮಿತಿ ಹಾಗೂ ಅಶೋಕಪುರ ಅನ್ನಪೂಣೇಶ್ವರಿ ಸಮುದಾಯ ಭವನ ಸಮಿತಿ ವತಿಯಿಂದ ನಡೆಯುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.
ನಾಪೋಕ್ಲು ಏ.8 NEWS DESK : ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನರಿಯಂದಡ ಗ್ರಾಮ ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮದ ವಾತ್ಸಲ್ಯ ಫಲಾನುಭವಿಗಳಾದ ಕೊಕೇರಿ ಗ್ರಾಮದ ಜಾಜಿ ಮತ್ತು ರಮ್ಯ,, ಮರಂದೋಡ ಗ್ರಾಮದ ಶೀಲಾ , ಅರಪಟ್ಟು ಗ್ರಾಮದ ವಿಷ್ಣು ಇವರುಗಳ ಮನೆಗೆ ತೆರಳಿ ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರ ವತಿಯಿಂದ ಹಣ್ಣು ಹಂಪಲು ವಿತರಣೆ ಮಾಡಿ ಯೋಗ ಕ್ಷೇಮ ವಿಚಾರಿಸಿದರು. ಈ ಸಂದಭ೯ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರದ ಸುನಿಲ್ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಮಾಚಮ್ಮ, ಸೇವಾ ಪ್ರತಿನಿಧಿ ಪ್ರಭ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಏ.8 NEWS DESK : ಏ.1 ರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗು ಜಿಲ್ಲೆಯ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಶಾಸಕ ಡಾ.ಮಂತರ್ ಗೌಡ ಅವರು ಕೋರಿದ್ದಾರೆ. ಕುಶಾಲನಗರ ಪುರಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಕಾರ್ಯ ಅತ್ಯಗತ್ಯ. ಈ ಹಿಂದೆ ರಾಜ್ಯ ಸರಕಾರ ನಡೆಸಿದ ಜಾತಿ ಗಣತಿ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಹಿನ್ನಡೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ, ಎಸ್ಟಿಪಿ, ಟಿಎಸ್ಪಿ, ಇತರೆ ಅನುದಾನ ಮಂಜೂರಾತಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಜನಗಣತಿಯಲ್ಲಿ ಭಾಗಿಯಾಗಬೇಕು. ಅದರಲ್ಲೂ ಜಿಲ್ಲೆಯಿಂದ ಹೊರಗಡೆ ನೆಲೆಸಿರುವವರು ಕೊಡಗಿನ ಮೂಲ ವಿಳಾಸ ನೀಡಿ ಘೋಷಣೆ ಮಾಡಿಕೊಳ್ಳಬೇಕಿದೆ ಎಂದು ಮನವಿ ಮಾಡಿದರು. ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಇದೇ ಸಂದರ್ಭ ಜನಗಣತಿ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಗೋಷ್ಠಿಯಲ್ಲಿ ಕುಶಾಲನಗರ…
ಕುಶಾಲನಗರ ಏ.8 NEWS DESK : ಕುಶಾಲನಗರ ಟೈಕೂನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಏ.12 ರಿಂದ ನಾಲ್ಕನೇ ವರ್ಷದ ಹಾಕಿ ಮತ್ತು ಅಥ್ಲೆಟಿಕ್ಸ್ ಶಿಬಿರ ಏರ್ಪಡಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷರಾದ ಹೆಚ್ ಇ ರಮೇಶ್ ತಿಳಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಏಪ್ರಿಲ್ 12 ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರ ಬೈಚನಹಳ್ಳಿ ಬಳಿಯ ಗುಂಡೂರಾವ್ ಬಡಾವಣೆಯ ಕ್ರೀಡಾಂಗಣದಲ್ಲಿ ಶಿಬಿರಕ್ಕೆ ಚಾಲನೆ ದೊರೆಯಲಿದೆ. ಮೇ 1 ರಂದು ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಬೆಳಗ್ಗೆ 6 ಗಂಟೆಯಿಂದ 8 ಗಂಟೆ ತನಕ ಎಲ್ಲಾ ವಯಸ್ಸಿನ ಜನರಿಗೆ ಹಾಕಿ ಮತ್ತು ಅಥ್ಲೆಟಿಕ್ಸ್ ತರಬೇತು ನೀಡಲಾಗುತ್ತದೆ. ರಾಷ್ಟ್ರೀಯ ಅಂತರಾಷ್ಟ್ರೀಯ ಕ್ರೀಡಾಪಟುಗಳ ಮೂಲಕ ಶಿಬಿರಾರ್ಥಿಗಳಿಗೆ ತರಬೇತು ನೀಡಲಾಗುತ್ತದೆ. ಶಿಬಿರದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳು ಮಹಿಳೆಯರು, ಪುರುಷರು, 12 ವರ್ಷ ಮೇಲ್ಪಟ್ಟ ಮತ್ತು 18 ವರ್ಷ ಮೇಲ್ಪಟ್ಟ ಮೂರು ವಿಭಾಗಗಳನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ರೀಡಾಪಟುಗಳಾದ…
ಮಡಿಕೇರಿ ಏ.8 NEWS DESK : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದ ನೂತನ ಸದಸ್ಯತ್ವಕ್ಕೆ 800 ಹಾಗೂ ಕ್ಷೇಮನಿಧಿ ಸಮಿತಿಗೆ 200 ಸೇರಿದಂತೆ 1000 ರೂ ಹಾಗೂ ಸದಸ್ಯತ್ವ ನವೀಕರಣಕ್ಕೆ ರೂ 500 ಹಾಗೂ ಕ್ಷೇಮನಿಧಿ ಸಮಿತಿಗೆ 100 ಸೇರಿದಂತೆ 600 ರೂ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30, 2026 ಕೊನೆಯ ದಿನಾಂಕವಾಗಿದೆ. ಸ್ಥಳೀಯ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ ಮಟ್ಟದ ಪತ್ರಿಕೆ ಮತ್ತು ಮಾಧ್ಯಮಗಳು, ವಾರಪತ್ರಿಕೆ, ಪಾಕ್ಷಿಕಗಳು, ವೆಬ್ ನ್ಯೂಸ್ ಸೇರಿದಂತೆ ಅಧಿಕೃತ ಸುದ್ದಿಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಸಂಪಾದಕರು, ಸಂಪಾದಕರು, ಉಪ ಸಂಪಾದಕರು, ವರದಿಗಾರರು, ಬಿಡಿ ವರದಿಗಾರರು, ಛಾಯಾಚಿತ್ರಗಾರರು, ಕ್ಯಾಮೆರಾ ಮ್ಯಾನ್ ಗಳು ಹಾಗೂ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ಸಹಿಯೊಂದಿಗೆ ಎರಡು ಭಾವ ಚಿತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು ಅರ್ಜಿಗಳಿಗಾಗಿ 9449290718, 9844060174, 9901657211 ದೂರವಾಣಿಯನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಳ್ಳಬಹುದು ಎಂದು ಕೊಡಗು ಪತ್ರಕರ್ತರ…
ಮಡಿಕೇರಿ ಏ.8 NEWS DESK : ವಿರಾಜಪೇಟೆ ಸಮೀಪದ ಆರ್ಜಿ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ಹರ್ಷದ್ ಖಾನ್(25), ಮುಜಾಮಿಲ್ ಅಹಮ್ಮದ್(46), ಅಫ್ಸಲ್ ಪಾಷ(28) ಮತ್ತು ಸಾಕ್ಯೂಬ್(32) ಅವರೆ ಬಂಧಿತ ವ್ಯಕ್ತಿಗಳು,. ಇವರ ಬಳಿಯಿಂದ 576 ಗ್ರಾಂ ಗಾಂಜಾ ಮತ್ತು ಟೊಯೋಟಾ ಇಟಿಯೋಸ್ ಕಾರ್ನ್ನು ವಶಪಡಿಸಿಕೊಳ್ಳಲಾಗಿದೆ. ಆರ್ಜಿ ಗ್ರಾಮದ ಹೆಗ್ಗಳ ಜಂಕ್ಷನ್ನಲ್ಲಿ ಗಾಂಜಾ ಮಾರಾಟ, ಸರಬರಾಜಿನ ಬಗ್ಗೆ ದೊರೆತ ಸುಳಿವಿನ ಮೇರೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಮಾಲು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.






