ಮಡಿಕೇರಿ NEWS DESK ಮಾ.17 : ಮಡಿಕೇರಿಯ ಶ್ರೀ ರಾಮೋತ್ಸವ ಸಮಿತಿ ವತಿಯಿಂದ 132ನೇ ವರ್ಷದ ಪರಾಭವ ನಾಮ ಸಂವತ್ಸರದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ 28 ರವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 8.30 ರವರೆಗೆ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಮಾ.19 ರಂದು ಪುಂಜಾಲಕಟ್ಟೆ ಕೃಷ್ಣ ಗೋಪಾಲ್ ಹಾಗೂ ಬಳಗದಿಂದ ಕರ್ನಾಟಕ ಶಾಸ್ತ್ರೀಯ ವೇಣುವಾದನ, ಮಾ.20 ರಂದು ಶ್ರೀ ಮಹಾಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿ, ಮೈಸೂರು ಇವರಿಂದ ಪೌರಾಣಿಕ ನಾಟಕಗಳ ರಂಗಗೀತೆ ಗಾಯನ, ಮಾ.21 ರಂದು ಮಡಿಕೇರಿಯ ವಿದುಷಿ ಮೇಘಾ ಭಟ್ ಅವರಿಂದ ಶಾಸ್ತ್ರೀಯ ಸಂಗೀತ, ಮಾ.22 ರಂದು ಮಡಿಕೇರಿಯ ನಾಟ್ಯನಿಕೇತನ ಸಂಗೀತ ನೃತ್ಯ ಶಾಲೆಯ ಪೂರ್ಣಿಮಾ ವಿನಯ್ ಶಿಷ್ಯಯರಿಂದ ನೃತ್ಯ ಸಂಗೀತ, ಮಾ.23 ರಂದು ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನೆ, ಮಾ.24 ರಂದು ಮಡಿಕೇರಿಯ ಶ್ರುತಿ ಲಯ ತಂಡ, ವೀಣಾ ಹೊಳ್ಳರಿಂದ ಭಕ್ತಿ ಸಂಗೀತ, ಮಾ.25 ರಂದು ಬಾಳೆಲೆಯ ಕಾವೇರಿ ಕಲಾಸಮಿತಿ,…
ಲೇಖಕ: admin
ಮಡಿಕೇರಿ NEWS DESK ಮಾ.17 : ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಜಾನಪದ ಸಂಭ್ರಮ-2026 ‘ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ *ಸಮೀರ್ ಎಂ* ಮಡಿಕೇರಿ ಆಯ್ಕೆಯಾಗಿದ್ದಾರೆ. ರಕ್ತದ ವ್ಯವಸ್ಥೆ ಮಾಡುವುದು ಹಾಗೂ ಹಲವಾರು ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಸಮೀರ್ ಅವರಿಗೆ 22-3- 2026 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕುಶಾಲನಗರ NEWS DESK ಮಾ.17 : ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕಾರ್ಯವೈಖರಿಯನ್ನು ಮೆಚ್ಚಿ ಕುಶಾಲನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯು ಗೋಡೆ ಗಡಿಯಾರವನ್ನು ಕೊಡುಗೆಯಾಗಿ ನೀಡಿದೆ. ವ್ಯವಸ್ಥಾಪಕ ರಾಮರಾವ್ ಅವರು ಚೇಂಬರ್ ಕಚೇರಿಯಲ್ಲಿ ಚೇಂಬರ್ ಅಧ್ಯಕ್ಷ ಕೆ.ಎಸ್.ನಾಗೇಶ್ ಹಾಗೂ ಪದಾಧಿಕಾರಿಗಳಿಗೆ ಗಡಿಯಾರವನ್ನು ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಸದಾ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವರ್ತಕರ ಪರವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೇವೆಯನ್ನು ಮಾಡಲು ಒಳ್ಳೆಯ ಸಮಯ ಬರಲಿ ಎಂದು ಗಡಿಯಾರ ನೀಡಿದ್ದೇವೆ ಎಂದರು. ಗಡಿಯಾರ ಸ್ವೀಕರಿಸಿ ಮಾತನಾಡಿದ ಕೆ.ಎಸ್.ನಾಗೇಶ್, ಇಂತಹ ವಿಶಾಲ ಹೃದಯದ ದಾನಿಗಳಿಂದ ಸೇವೆ ಮಾಡುವ ಸ್ಫೂರ್ತಿ ಹೆಚ್ಚಾಗುತ್ತದೆ ಎಂದು ಕೃತಜ್ಞತೆ ಸಲ್ಲಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ ಚಿತ್ರ ರಮೇಶ್, ಪದಾಧಿಕಾರಿಗಳಾದ ಎಸ್.ಕೆ.ಸತೀಶ್, ಪಿ.ಎಂ.ಮೋಹನ್, ವಿಮಲ್ ಜೈನ್, ಪೈಯಾಜ್ ಅಹಮದ್ ಮತ್ತಿತ್ತರು ಹಾಜರಿದ್ದರು.
ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ತಾಳತ್ತಮನೆಯ ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ಮಾ.21 ಮತ್ತು 22 ರಂದು 9ನೇ ವರ್ಷದ ಕ್ರೀಡಾಕೂಟ ಹಾಗೂ ಎಂಪಿಎಲ್ ಸೀಸನ್ 2 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.21 ರಂದು ಬೆಳಿಗ್ಗೆ 8 ಗಂಟೆಗೆ ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡಾಕೂಟವನ್ನು ಕಟ್ಟಡ ಸಮಿತಿ ಕಾರ್ಯದರ್ಶಿ ಯೋಗೇಂದ್ರ ಎಂ.ಎಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ, ಅತಿಥಿಗಳಾಗಿ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್ ನಾಯ್ಕ, ಮಹಿಳಾ ವೇದಿಕೆಯ ಅಧ್ಯಕ್ಷೆ ರತ್ನಮಂಜರಿ ನರಸಿಂಹ ಮತ್ತಿತರರು ಉಪಸ್ಥಿತರಿರುವರು. ಮಾ.22 ರಂದು ಮಧ್ಯಾಹ್ನ 3.30 ಗಂಟೆಗೆ ನಡೆಯುವ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಚೆಸ್ಕಾಂ…
ಮಡಿಕೇರಿ NEWS DESK ಮಾ.17 : ಪಂಜಾಬ್ ನ ಬಟಿಂಡದ ಗುರುಕಾಶಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಇದೇ ಮಾರ್ಚ್ 14 ರಿಂದ 16ವರೆಗೆ ನಡೆದ 45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡಿದ್ದಾರೆ.ಬಿಟ್ಟಂಗಾಲ ನಾಂಗಾಲ ಮೂಲದ ಚೇಮಿರ ಸೀತಮ್ಮ (ಪ್ರೇಮ) ಇವರು ಬಾರದ ಗುಂಡು ಎಸೆತದಲ್ಲಿ ಪ್ರಥಮ. ತಟ್ಟೆ ಎಸತದಲ್ಲಿ ದ್ವಿತೀಯ. ಸರಪಳಿ ಗುಂಡು ಎಸೆತದಲ್ಲಿ ತೃತೀಯ ಬಹುಮಾನ ಪಡೆದುಕೊಂಡರೆ. ಮೋರಿರ ಶಾಂತಿ ಇವರು ಬಾರದ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಅರಮಣಮಾಡ ಮಮತಾ ಬಾರದ ಗುಂಡು ಎಸೆತ ಪ್ರಥಮ. ಭರ್ಜೀ ಎಸೆತ ಪ್ರಥಮ. ಸರಪಳಿ ಗುಂಡು ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಮುಡಿಯಂಡ ಶೈಲಾ ಇವರು 200ಮೀ ಅಡೆ ತಡೆ ಓಟದಲ್ಲಿ ಪ್ರಥಮ ಸ್ಥಾನವನ್ನು, 100ಮೀ ಅಡೆ ತಡೆ ಓಟದ ಓಟದಲ್ಲಿ ಪ್ರಥಮ ಹಾಗೂ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀಮತಿ ಆಶಾ ಅನಂತ್ ಕುಮಾರ್ ಇವರು ಬಾರದ…
ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ ಗ್ರಾಮೀಣ ಭಾಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ನೆರವಿಗೆ ಕರ್ನಾಟಕ ಸರ್ಕಾರ ಧಾವಿಸಿದೆ. ಸರ್ಕಾರಿ ಕಾಲೇಜುಗಳಲ್ಲಿಯೇ ಗುಣಮಟ್ಟದ ನೀಟ್ ತರಬೇತಿ ನೀಡಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೋಮವಾರ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಚರ್ಚೆ: ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರು, “ನೀಟ್ ಪದ್ಧತಿಯು ಗ್ರಾಮೀಣ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ದೂರವಿಡುತ್ತಿದೆ. ಕೇವಲ 3 ಲಕ್ಷ ರೂ. ಸಹಾಯಧನದಿಂದ ಬಡವರು ಗುಣಮಟ್ಟದ ಕೋಚಿಂಗ್ ಪಡೆಯಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಸರ್ಕಾರದ ಹೊಸ ಯೋಜನೆಯ ರೂಪುರೇಷೆಗಳನ್ನು ತೆರೆದಿಟ್ಟರು. ಸರ್ಕಾರದ ಮುಂದಿರುವ ಯೋಜನೆಗಳು: ಹಂತ ಹಂತವಾಗಿ ಕೋಚಿಂಗ್ ಜಾರಿ: ನೀಟ್ ಪದ್ಧತಿಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸಿದರೂ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರೀಕ್ಷೆ…
ಮಡಿಕೇರಿ NEWS DESK ಮಾ.17 : ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.ಈ ಸಂದರ್ಭ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಸಭೆಯ ಮುಖ್ಯ ಸಚೇತಕರು ಅಶೋಕ್ ಪಟ್ಟಣ, ಶಾಸಕ ದೇಶಪಾಂಡೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು/ಬೀದರ್, ಮಾರ್ಚ್ 17, 2026: ರಾಜ್ಯದಾದ್ಯಂತ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿ ಜನಜೀವನ ಅಸ್ತವ್ಯಸ್ತವಾಗಿದ್ದ ಸಮಯದಲ್ಲಿ ಸೋಮವಾರ ಸಂಜೆ ವರುಣ ದೇವ ಅನಿರೀಕ್ಷಿತ ದರ್ಶನ ನೀಡಿದ್ದಾನೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ದಾವಣಗೆರೆ ಮತ್ತು ಚಿಂಚೋಳಿಯಲ್ಲಿ ಆಲಿಕಲ್ಲು ಮಳೆಯಾಗಿದ್ದರೆ, ಕೊಡಗಿನಲ್ಲಿ ಈ ಋತುವಿನ ಮೊದಲ ಮಳೆ ದಾಖಲಾಗಿದೆ. ಸಿಡಿಲಿನ ಅಬ್ಬರಕ್ಕೆ ರೈತ ಸಾವು: ಮಳೆಯ ಸಂಭ್ರಮದ ನಡುವೆಯೇ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನಲ್ಲಿ ಶೋಕದ ಛಾಯೆ ಆವರಿಸಿದೆ. ಮುತ್ತಂಗಿ ಗ್ರಾಮದ ನಿವಾಸಿ ವೈಜನಾಥ್ ಶೇರೆಗಾರ್ (60) ಎಂಬ ರೈತ ಜಮೀನಿನಲ್ಲಿ ದನಗಳನ್ನು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಅವರ ಮಗ ಶ್ರೀನಿವಾಸ್ ಅವರಿಗೆ ಗಂಭೀರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ನಾಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾವಾರು ಮಳೆ ವಿವರ: ಕಲ್ಯಾಣ ಕರ್ನಾಟಕ: ಬೀದರ್ನ ಹುಮ್ನಾಬಾದ್, ಚಿಟಗುಪ್ಪದಲ್ಲಿ ಮಧ್ಯಮ ಮಳೆಯಾಗಿದೆ. ಕಲಬುರಗಿಯಲ್ಲಿ ಲಘು ಮಳೆಯಾದರೆ,…
ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲೆಯಲ್ಲಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಿಕೊಡಬೇಕು, ಮೂಲಭೂತ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಆದಿವಾಸಿ ಕುಟುಂಬಗಳು ಅನುಭವಿಸುತ್ತಿರುವ ಸಂಕಷ್ಟದ ಬದುಕನ್ನು ವಿವರಿಸಿದ ಪ್ರಮುಖರು, ಸರಕಾರ ದುರ್ಬಲ ವರ್ಗವನ್ನು ನಿರ್ಲಕ್ಷಿಸುತ್ತಿದೆಯೆಂದು ಆರೋಪಿಸಿದರು. ಜಿಲ್ಲೆಯ ವಿವಿಧ ತೋಟಗಳ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳನ್ನು ಮುಕ್ತಗೊಳಿಸಿ, ಸ್ವಂತ ನಿವೇಶನ ಮತ್ತು ಮನೆಯನ್ನು ನೀಡಬೇಕು, ಒತ್ತುವರಿ ಭೂಮಿಯನ್ನು ಅತ್ಯಂತ ಕಡಿಮೆ ದರದಲ್ಲಿ ಆಸ್ತಿ ಹೊಂದಿರುವವರಿಗೆ ಗುತ್ತಿಗೆ ಆಧಾರದಲ್ಲಿ ನೀಡುವ ಆದೇಶವನ್ನು ಸರಕಾರ ವಾಪಾಸ್ಸು ಪಡೆಯಬೇಕು, ಒತ್ತುವರಿ ಭೂಮಿಯನ್ನು ಆದಿವಾಸಿ ಕುಟುಂಬಗಳಿಗೆ ಹಂಚಿಕೆ ಮಾಡಬೇಕು. ಜಿಲ್ಲೆಯಲ್ಲಿರುವ ಆದಿವಾಸಿ ಕುಟುಂಬಗಳಲ್ಲಿ ಸಮರ್ಪಕವಾಗಿ ಆಧಾರ್ ಕಾರ್ಡ್, ಪರಿತರ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಮತ್ತಿತರ ದಾಖಲೆಗಳು ಇಲ್ಲದೆ ಇರುವುದರಿಂದ, ಸರಕಾರ ನೀಡುವ ಯಾವುದೇ…
ಕುಶಾಲನಗರ NEWS DESK ಮಾ.17 : ಹೊಸ ವರ್ಷದ ಆರಂಭ ಮತ್ತು ಸಮೃದ್ಧಿಯ ಸಂಕೇತವಾದ ಯುಗಾದಿ ಹಬ್ಬದ ಪ್ರಯುಕ್ತ ಕುಶಾಲನಗರದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ ಶೇ.50 ರವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದು. ಕುಶಾಲನಗರ, ಪುತ್ತೂರು, ಸುಳ್ಯ, ಹಾಸನ ಹಾಗೂ ಮೂಡಬಿದ್ರೆಯ ಎಲ್ಲಾ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಹಬ್ಬದ ಸಂಭ್ರಮವನ್ನು ಹೊಸ ಆಭರಣಗಳೊಂದಿಗೆ ಆಚರಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಈ ಕೊಡುಗೆ ಮಾರ್ಚ್ 18ರಿಂದ 23ರವರೆಗೆ ಮಾತ್ರ ಲಭ್ಯವಿರುತ್ತದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಚಿನ್ನ, ವಜ್ರ ಮತ್ತು ಬೆಳ್ಳಿಯ ಆಭರಣಗಳ ಮೇಲೆ ಆಕರ್ಷಕ ರಿಯಾಯಿತಿ ನೀಡಲಾಗುತ್ತಿದೆ. ಯುಗಾದಿ ಹಬ್ಬಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ “ಪ್ರಾಚಿ ಇಲೈಟ್”, ‘ಟೆಂಪಲ್ ಜ್ಯುವೆಲ್ಲರಿ’, ಆ್ಯಂಟಿಕ್ ಮತ್ತು ಪರಂಪರೆಯ ವಿನ್ಯಾಸಗಳ ಜೊತೆಗೆ ಆಧುನಿಕ ವಿನ್ಯಾಸಗಳ ಆಭರಣಗಳು ಲಭ್ಯವಿದ್ದು ಮದುವೆ ಹಾಗೂ ಹಬ್ಬಗಳಿಗಾಗಿ…






