ಮಡಿಕೇರಿ ಅ.1 : ಮೊಗೇರ ಗ್ರಾಮ ವಿಕಾಸ ಯೋಜನೆಯ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ಲಾಟರಿ ಲಕ್ಕಿಡಿಪ್ ನಲ್ಲಿ ವಿಜೇತರಾದವರಿಗೆ ನಗದು ಬಹುಮಾನ ವಿತರಿಸಲಾಯಿತು. ಸುಳ್ಯದ ಕರುಣಾಕರ ಪ್ರಥಮ ಬಹುಮಾನ (ಸಂಖ್ಯೆ 2378) ರೂ.10 ಸಾವಿರ, ಪತ್ರಕರ್ತ ಸೋಮವಾರಪೇಟೆಯ ಭಾಸ್ಕರ ದ್ವಿತೀಯ ಬಹುಮಾನ (ಸಂಖ್ಯೆ 2712) ರೂ.7 ಸಾವಿರ ಹಾಗೂ ಬೆಟ್ಟಗೇರಿಯ ತೀರ್ಥಪ್ರಸಾದ್ ತೃತೀಯ ಬಹುಮಾನ (ಸಂಖ್ಯೆ 1904) ರೂ.3 ಸಾವಿರ ಪಡೆದುಕೊಂಡರು. ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷ ಗೌತಮ್ ಶಿವಪ್ಪ, ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ ಮತ್ತಿತರ ಪ್ರಮುಖರು ಬಹುಮಾನ ವಿತರಿಸಿದರು.
ಲೇಖಕ: admin
ಮಡಿಕೇರಿ ಅ.1 : ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ಕುರಿಯ ಮೇಲೆ ಮಧ್ಯರಾತ್ರಿಯ ವೇಳೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿರುವ ಘಟನೆ ಗರಗಂದೂರು ಗ್ರಾಮದಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ಪಿಯು ವಸತಿ ಕಾಲೇಜಿನ ಬಳಿ ಇರುವ ಉಮ್ಮರ್ ಖಾನ್ ಎಂಬುವವರಿಗೆ ಸೇರಿದ ಕುರಿಯನ್ನು ಚಿರತೆ ಕೊಂದು ಹಾಕಿದೆ. ಚಿರತೆಯ ದಾಳಿಗೆ ಬೆದರಿದ ದನ ಕರುಗಳು ಚೀರಿಕೊಳ್ಳಲು ಆರಂಭಿಸಿದಾಗ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿ ಜಗದೀಶ್, ಪಶು ವೈದ್ಯಾಧಿಕಾರಿ ಬಾದಾಮಿ, ಹರದೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ಉಪಾಧ್ಯಕ್ಷ ಸಲೀಂ, ಸದಸ್ಯ ರಮೇಶ, ಕಾಂಗ್ರೆಸ್ ಓಬಿಸಿ ಅಧ್ಯಕ್ಷ ಸುಂದರ ಭೇಟಿ ನೀಡಿ ಪರಿಶೀಲಿಸಿದರು. ಈ ಭಾಗದ ವಿದ್ಯಾರ್ಥಿಗಳು ಹಾಗೂ ನಿವಾಸಿಗಳಲ್ಲಿ ಅತಂಕ ಸೃಷ್ಟಿಯಾಗಿದ್ದು, ಚಿರತೆಯನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದಾರೆ.
ಮಡಿಕೇರಿ ಅ.1 : ಮನುಕುಲಕ್ಕೆ ನೈತಿಕತೆಯ ಪಾಠಮಾಡಿ ಸತ್ಯ-ಶುದ್ಧ ಸನ್ನಡತೆಯ ಸಾತ್ವಿಕ ಬದುಕಿನ ಸಂಸ್ಕಾರ ಅರುಹಿದ ಚೈತನ್ಯ ಶಕ್ತಿಯೇ ಶ್ರೀವೀರಭದ್ರ ದೇವರು. ಬದುಕಿನ ಶ್ರೇಷ್ಠ ನಡೆ-ನುಡಿಗೆ ಅಗತ್ಯವಾದ ಧರ್ಮ ಮಾರ್ಗದಲ್ಲಿ ಕೈಹಿಡಿದು ಮುನ್ನಡೆಸಲು ಬೆಳಕನಿತ್ತ ಮಹಾನುಭಾವ ವೀರಭದ್ರ ಎಂದು ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮತ್ತು ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಸಂಯುಕ್ತಾಶ್ರಯದಲ್ಲಿ ನೀರುಗುಂದ ಶ್ರೀ ವೀರಭದ್ರೇಶ್ವರ ದೇವಾಲಯ ಸಮಿತಿ, ಕೊಡ್ಲಿಪೇಟೆ, ಕಿರಿಕೊಡ್ಲಿ, ಕೋಟೆಯೂರು, ಗೌಡಳ್ಳಿ, ನೇಗಳ್ಳೆ ಶ್ರೀ ವೀರಭದ್ರ ದೇವಾಲಯ ಸಮಿತಿ ಇವರುಗಳ ಸಹಯೋಗದೊಂದಿಗೆ ನಡೆದ ಶ್ರೀವೀರಭದ್ರೇಶ್ವರ ಸ್ವಾಮಿ ಜನ್ಮ ವರ್ದಂತಿಯ 5ನೇ ವರ್ಷದ ಮಹೋತ್ಸವ, ಬಿಲ್ವಪತ್ರೆ ಮತ್ತು ರುದ್ರಾಕ್ಷಿ ಗಿಡ ನೆಡುವ ಕಾರ್ಯಕ್ರಮಕ್ಕೆ ನೀರಗುಂದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಚಾಲನೆ ನೀಡಿ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾನವನ ಇಹದ ಬದುಕಿನ ಸ್ತರಗಳಲ್ಲಿ ಇರಬಹುದಾದ ಜನವಿರೋಧಿ ಕೃತ್ಯಗಳ ನಿವಾರಣೆಗೆ ಶ್ರೀವೀರಭದ್ರ ದೇವರ ಮಹಾಶಕ್ತಿ ಸಂಚಯವು ನಿರಂತರ ಪ್ರಭಾವ ಬೀರುತ್ತದೆ…
ಮಡಿಕೇರಿ, ಅ.1 : ವೀರಲೋಕ ಪ್ರಕಾಶನದ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಜಾನಪದ ಪರಿಷತ್, ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮಡಿಕೇರಿಯಲ್ಲಿ ಅಕ್ಟೋಬರ್ 7 ಮತ್ತು 8 ರಂದು ಕಥಾ ಕಮ್ಮಟ ನಡೆಯಲಿದೆ ಎಂದು ಜಿಲ್ಲಾ ಸಂಚಾಲಕ ಬಿ.ಜಿ. ಅನಂತ ಶಯನ ಹೇಳಿದ್ದಾರೆ. ಕಥಾ ಕಮ್ಮಟವು ಅ. 7 ರಂದು ಜೂನಿಯರ್ ಕಾಲೇಜು ಸಭಾಂಗಣದಲ್ಲಿ, ವೀರಲೋಕ ಪ್ರಕಾಶನದ ಮಾಲೀಕ ವೀರಕಪುತ್ರ ಎಂ. ಶ್ರೀನಿವಾಸ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ, ಉಪನ್ಯಾಸಕ ಮೋಹನ್ ಬಾಳೇಗಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಶಿಬಿರ ನಿರ್ದೇಶಕ, ಉಪನ್ಯಾಸಕ, ಬರಹಗಾರ ಪ್ರಭಾಕರ ಶಿಶಿಲ, ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಚಿನ್ನಸ್ವಾಮಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ ಭಾಗವಹಿಸುತ್ತಾರೆ.ವೀರಲೋಕ ಪ್ರಕಾಶನವು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಕಥಾ ಕಮ್ಮಟ ನಡೆಸುತ್ತಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಕಮ್ಮಟದಲ್ಲಿ ಶಿಬಿರಾರ್ಥಿಗಳಾಗಿ ಉದಯೋನ್ಮುಖ ಬರಹಗಾರರೊಂದಿಗೆ, ಯುವ ಪೀಳಿಗೆಯಲ್ಲೂ ಬರಹ ಜಾಗೃತಿ ಮೂಡಿಸುವುದು ವೀರಲೋಕದ ಉದ್ದೇಶವಾಗಿದೆ. ಶಿಬಿರದ ತರಬೇತುದಾರರಾಗಿ ಡಾ.…
ಮಡಿಕೇರಿ ಅ.1 : ವಿದ್ಯುತ್ ಮಾರ್ಗದ ತಂತಿ ತುಂಡಾಗಿ ಬಿದ್ದ ಪರಿಣಾಮ ಒಂದು ಕರು ಸಹಿತ ಐದು ಹಸುಗಳು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಲೆಮಾಡ ನಾಣಯ್ಯ ಅವರಿಗೆ ಸೇರಿದ ಹಸುಗಳನ್ನು ಭಾನುವಾರ ಮಧ್ಯಾಹ್ನ ಮೇಯಲು ಬಿಡಲಾಗಿತ್ತು. ಗದ್ದೆಯಲ್ಲಿ ವಿದ್ಯುತ್ ಮಾರ್ಗದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಮತ್ತು ತೇವಾಂಶ ಇದ್ದ ಪರಿಣಾಮ ವಿದ್ಯುತ್ ಹರಿದು ಸ್ಥಳದಲ್ಲಿಯೇ ಐದು ಜಾನುವಾರುಗಳು ಮೃತಪಟ್ಟಿವೆ. ಚೆಸ್ಕಾಂ ನಿರ್ಲಕ್ಷö್ಯವೇ ಈ ಘಟನೆಗೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಸುಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಅ.1 : ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಎನ್ ಸಿ ಸಿ ಘಟಕ ಮತ್ತು 19 ಕರ್ನಾಟಕ ಬಟಾಲಿಯನ್ ಎನ್ ಸಿ ಸಿ ಮಡಿಕೇರಿ ಇವರ ಸಹಯೋಗದಲ್ಲಿ ” ಏಕ್ ತರೇಕ್ ಏಕ್ ಝಂಡಾ” ಅಭಿಯಾನದ ಅನ್ವಯ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಚತಾ ಕಾರ್ಯವನ್ನು ಮಡಿಕೇರಿ ನಗರದ ವಿವಿಧ ಸ್ಥಳಗಳಲ್ಲಿ ಕೈಗೊಳ್ಳಲಾಯಿತು. ಕಸ ಮುಕ್ತ ಭಾರತವನ್ನಾಗಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಕೈಗೊಳ್ಳಲಾಗುತ್ತಿರುವ ” ಸ್ವಚ್ಚತಾಯೇ ಸೇವಾ ಅಭಿಯಾನದ ಭಾಗವಾಗಿಯೂ ಈ ಚಟುವಟಿಕೆಯನ್ನು ರೂಪಿಸಲಾಯಿತು. ಅಭಿಯಾನದಲ್ಲಿ ನಗರದ ಕೆಎಸ್ ಆರ್ ಟಿ ಸಿ ಬಸ್ಸು ನಿಲ್ಧಾಣದ ಆವರಣ ಹಾಗೂ ಅಸುಪಾಸಿನ ಪ್ರದೇಶವನ್ನು ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ಸ್ವಚ್ಚಗೊಳಿಸಿದರು. ಅಭಿಯಾನದಲ್ಲಿ 19 ಕರ್ನಾಟಕ ಬಟಾಲಿಯನ್ ಕಮಾಂಡಿಗ್ ಅಧಿಕಾರಿ ಕರ್ನಲ್ ಜೆಪ್ರೀನ್ ಗಿಲ್ಬರ್ಟ್ ಆರ್ನಾ ಅವರು ಅಧ್ಯಕ್ಷತೆ ವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಎಸ್ ಜಿ ಟಿ ಕೆಡೆಟ್ ಕೊಡಗು ವಿದ್ಯಾಲಯದ ವಿದ್ಯಾರ್ಥಿ ರಘುವಂಶಿ ಅವರು ನೈರ್ಮಲ್ಯದ ಕುರಿತು ಮಾತನಾಡಿದರು. ಸುಬೇದರ್…
ಮಡಿಕೇರಿ ಸೆ.30 : ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ವತಿಯಿಂದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರನ್ನು ಸನ್ಮಾನಿಸಲಾಯಿತು. ಪುಸ್ತಕಗಳ ವಿತರಣೆ : ಇದೇ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕಿನ ಪದಾಧಿಕಾರಿಗಳು ಹಾಗೂ ಮಹಿಳಾ ಬರಹಗಾರರ ಒಕ್ಕೂಟದ ಅಧ್ಯಕರು ಮತ್ತು ಪ್ರತಿನಿಧಿಗಳಿಗೆ ಇತ್ತೀಚಿಗೆ ಬಿಡುಗಡೆಗೊಂಡ ನನ್ನ ಅರಿವಿನ ಪ್ರವಾದಿ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷ ಟಿ.ಪಿ ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಹಾಗೂ ಕ.ಸಾ.ಪ ತಾಲ್ಲೂಕಿನ ನಿಕಟ ಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್, ಸ್ಥಾನೀಯ ಸಂಚಾಲಕಿ ವಹೀದ ಶೌಕತ್, ಮಫೀದ ಮರ್ಯಮ್ ತಾಹೀರ ಹಾಗೂ ಆಲೀಯಾ ಶೌಕತ್ ಹಾಜರಿದ್ದರು.
ಮಡಿಕೇರಿ ಸೆ.30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಲಾಗಿತ್ತು. ಆ ದಿಸೆಯಲ್ಲಿ ಆಯಾಯ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಮೌಲ್ಯಮಾಪಕರಿಂದ ಜಿಲ್ಲಾ ಮಟ್ಟದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಆ ನಿಟ್ಟಿನಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಈ ಮೂರು ವಿಭಾಗದಲ್ಲಿ ಆಯ್ಕೆಯಾದವರ ಪಟ್ಟಿ ಇಂತಿದೆ. ಪ್ರೌಢಶಾಲಾ ವಿಭಾಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ 9ನೇ ತರಗತಿಯ ಅನಿರುದ್ಧ್ ಮನೋಜ್(ಪ್ರಥಮ), ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ 10ನೇ ತರಗತಿಯ ವಿನುತಾ ಎಸ್.ಪಿ.(ದ್ವಿತೀಯ), ಸೋಮವಾರಪೇಟೆಯ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ 9ನೇ ತರಗತಿಯ ವಿನುತಾ ಡಿ.ಎಂ(ತೃತೀಯ) ಸ್ಥಾನ ಪಡೆದಿದ್ದಾರೆ. ಪದವಿ ಪೂರ್ವ ವಿಭಾಗದಲ್ಲಿ ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ ಪಿಯುಸಿ(ಪಿಸಿಎಂಬಿ ವಿಭಾಗದ) ಹೃತ್ಪೂರ್ವಕ್ ಕೆ.ಎಸ್.(ಪ್ರಥಮ), ಮಡಿಕೇರಿಯ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ(ಪಿಸಿಎಂಬಿ ವಿಭಾಗದ) ಮೇನಿತ ನಾಗೇಶ್(ದ್ವಿತೀಯ),…
ಮಡಿಕೇರಿ ಸೆ.30 : ಮಕ್ಕಳ ಆರೈಕೆ ಮತ್ತು ರಕ್ಷಣೆಗೆ ಪ್ರತಿಯೊಬ್ಬರೂ ಹೆಚ್ಚಿನ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಬಾಲನ್ಯಾಯ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲನ್ಯಾಯ ಮತ್ತು ಪೋಕ್ಸೋ ಕಾಯ್ದೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಮಕ್ಕಳ ಪಾಲನೆ ಮತ್ತು ಪೋಷಣೆಗೆ ಪೋಷಕರು ವಿಶೇಷ ಗಮನಹರಿಸಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಶಿಕ್ಷಣಕ್ಕೆ ಒತ್ತು ನೀಡಬೇಕು. ಬಾಲನ್ಯಾಯ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯಡಿ ಕಾಲ ಕಾಲಕ್ಕೆ ಸಭೆಗಳನ್ನು ನಡೆಸುವಂತಾಗಬೇಕು. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬರದಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಬಾಲಕರ ಹಾಗೂ ಬಾಲಕಿಯರ ಮಂದಿರದಲ್ಲಿ ಇರುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಪ್ರವಾಸ ಕಾರ್ಯಕ್ರಮ ಏರ್ಪಡಿಸಿ ಅವರ ಕ್ರೀಯಾಶೀಲ ಚಟುವಟಿಕೆಗೆ ಪ್ರೋತ್ಸಾಹಿಸಬೇಕು ಎಂದು ಎಂ.ಜಿ.ಉಮಾ ಸಲಹೆ ನೀಡಿದರು. ಎಲ್ಲಾ ಇಲಾಖೆಗಳ ಜೊತೆ ಸಮನ್ವಯತೆ ಸಾಧಿಸಿ ಬಾಲ್ಯ ವಿವಾಹ ತಡೆಯುವುದು ಹಾಗೂ ಮಕ್ಕಳ ಪಾಲನೆ ಮತ್ತು…
ಮಡಿಕೇರಿ ಸೆ.30 : ಆಹಾರ ಪದಾರ್ಥಗಳನ್ನು ಎಂದಿಗೂ ವ್ಯರ್ಥ ಮಾಡದೇ ಅಗತ್ಯಕ್ಕೆ ತಕ್ಕಷ್ಟು ಸೇವಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕಿವಿಮಾತು ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾ.)ವತಿಯಿಂದ ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಆಹಾರ ನಷ್ಟ ಮತ್ತು ತ್ಯಾಜ್ಯ ಜಾಗೃತಿ ದಿನಾಚರಣೆ ಕಾರ್ಯಕ್ರಮದ ಸಿಗ್ನೇಚರ್ ಕ್ಯಾಂಪೇನ್ನಲ್ಲಿ ಸಹಿ ಮಾಡಿ ಮಾತನಾಡಿದರು. ಪ್ರತಿ ನಿತ್ಯ ಹೋಟೆಲ್ ಮತ್ತು ರೆಸಾರ್ಟ್ಗಳಲ್ಲಿ ಸಾಕಷ್ಟು ಆಹಾರ ಪದಾರ್ಥ ನಷ್ಟವಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಮಾತ್ರವಲ್ಲದೇ ಹೋಟೆಲ್ ಮತ್ತು ರೆಸಾರ್ಟ್ ಮಾಲೀಕರು ಸಹ ಗಮನಹರಿಸಬೇಕು. ದೇಶದಲ್ಲಿ ಅಪೌಷ್ಟಿಕತೆ ನಿರ್ಮೂಲನೆಗೆ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಹಾರವನ್ನು ನಷ್ಟಗೊಳಿಸಬಾರದು ಎಂದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿಯೂ ಸಹ ಅಂತರರಾಷ್ಟ್ರೀಯ ಆಹಾರ ನಷ್ಟ ಮತ್ತು ತ್ಯಾಜ್ಯ ಜಾಗೃತಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಎಂದಿಗೂ ಆಹಾರ ವ್ಯರ್ಥ…






