ಲೇಖಕ: admin

ಗೋಣಿಕೊಪ್ಪಲು ಸೆ.30 :  ಗೋಣಿಕೊಪ್ಪಲು ದಸರಾ ಸಮಿತಿಯಿಂದ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು  ಸಾಂಪ್ರದಾಯಿಕ ವಾಗಿ ಆಹ್ವಾನಿಸಲಾಯಿತು. ದಸರಾ ಸಮಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ ನೇತೃತ್ವದಲ್ಲಿ ಖಜಾಂಚಿ ಧ್ಯಾನ್ ಸುಬ್ಬಯ್ಯ, ಉಪಾಧ್ಯಕ್ಷ  ಶಿವಾಜಿ, ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ, ಸನತ್ ದೇವಯ್ಯ ಸೇರಿದಂತೆ ಪದಾಧಿಕಾರಿಗಳು    ವಿರಾಜಪೇಟೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಫಲತಾಂಬೂಲದೊಂದಿಗೆ ಸಾಂಪ್ರದಾಯಿಕವಾಗಿ ಆಹ್ವಾನಿಸಿದರು. 

Read More

ವಿರಾಜಪೇಟೆ ಸೆ.30 : ಆಟೋ ಚಾಲಕರು ಶ್ರಮಿಕ ವರ್ಗದವರು, ಬಡ, ಶ್ರೀಮಂತ ಎಂಬ ಭೇದವಿಲ್ಲದೆ ಸಾರ್ವಜನಿಕರೊಂದಿಗೆ ಸ್ನೇಹ ಜೀವಿಯಾಗಿ ಸ್ಪಂದಿಸುವ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆಯ ಜೈ ಭಾರತ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ನಗರದ ಕಾರು ನಿಲ್ದಾನದ ದಿ.ಮಾಳೇಟಿರ ಬಿದ್ದಪ್ಪ (ಬಿದ್ದು) ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಆಟೋ ಚಾಲಕರು ಗ್ರಾಹಕರಿಂದ ಬರುವ ಬಾಡಿಗೆ ಹಣವನ್ನು ಕ್ರೋಡಿಕರಿಸಿ ಮಾಲೀಕ ಮತ್ತು ತನ್ನ ಸಂಸಾರವನ್ನು ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ. ಆರ್ಥಿಕವಾಗಿ ಸಭಲರಾಗಲು ಕಷ್ಟ ಸಾದ್ಯವಾದರು, ಜೀವನದಲ್ಲಿ ಮುಂದು ಬರಲು ಶ್ರಮಿಸುತ್ತಿದ್ದಾರೆ. ಹೀಗಿದ್ದರೂ ಸಂಘ ಸ್ಥಾಪಿಸಿ ಹಲವು ಜನಪರ ಕಾರ್ಯಕ್ರಮ, ಸದಸ್ಯರ ಮಕ್ಕಳಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಸಂಘದ ಬೇಡಿಕೆಯಂತೆ ಜಿಲ್ಲೆಯಾದ್ಯಂತ ಆಟೋ ಚಾಲನೆ ಮಾಡಲು ಪರವಾನಿಗೆ ನೀಡುವ ಬೇಡಿಕೆಯನ್ನು ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ…

Read More

ಮಡಿಕೇರಿ ಸೆ.30 : ಕೊಡಗು ಜಿಲ್ಲೆಯಲ್ಲಿ ಮಳೆಯ ಕಣ್ಣಾಮುಚ್ಚಾಲೆ ಮುಂದುವರೆದಿದೆ. ಒಂದು ತಿಂಗಳಿನಿಂದ ಮಳೆಯ ಕೊರತೆಯನ್ನು ಎದುರಿಸಿದ್ದ ಕಾವೇರಿನಾಡು ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ನದಿಮೂಲದಲ್ಲಿ ನೀರಿನ ಹರಿವು ಕಡಿಮೆಯಾಗಿ ಕಾವೇರಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಕಾವೇರಿ ತವರು ಕೊಡಗಿನಲ್ಲಿ ಮಳೆಯಾಗುತ್ತಿದ್ದು, ಆಡಳಿತ ವ್ಯವಸ್ಥೆ ಮತ್ತು ರೈತಾಪಿ ವರ್ಗ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತ್ತಾಗಿದೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಇಂಚು ಮಳೆ ದಾಖಲಾಗಿದೆ. ಮಡಿಕೇರಿ ಭಾಗದಲ್ಲೂ ನಿರಂತರವಾಗಿ ಮಳೆಯಾಗುತ್ತಿದ್ದು, ಚಳಿ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಅಕಾಲಿಕ ಮಳೆ ಕಾಫಿ ಬೆಳೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1964.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3159.45 ಮಿ.ಮೀ ಮಳೆಯಾಗಿತ್ತು.…

Read More

ಕುಶಾಲನಗರ ಸೆ.30 : ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಹೊಂದುವ ಮೂಲಕ ಭವಿಷ್ಯದಲ್ಲಿ ಉತ್ತಮ ನಾಗರೀಕರಾಗಬೇಕೆಂದು ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಕರೆ ನೀಡಿದರು. ಕುಶಾಲನಗರ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಗಾಲೋಟದಲ್ಲಿ ಓಡುತ್ತಿರುವ ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೂಡ ನಿರಂತರವಾಗಿ ಓಡಬೇಕು ಹಾಗೂ ಓದಬೇಕು ಎಂದು ಸಲಹೆ ನೀಡಿದರು. ಕಾಲೇಜು ಎಂಬ ಸುಂದರ ದಿನಗಳನ್ನು ಅನ್ಯಥಾ ವ್ಯರ್ಥ ಮಾಡದೇ ಆ ಜೀವನವನ್ನು ವಿಭಿನ್ನ ಸಾಧನೆಗಳಿಗೆ ತೊಡಗಿಸಿಕೊಳ್ಳಬೇಕು. ಹೆತ್ತವರ ಶ್ರಮವನ್ನು ಅರ್ಥೈಸಿ ಅದಕ್ಕನುಗುಣವಾಗಿ ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಿ ಎಂದು ಹೇಳಿದ ರಾಜೇಶ್ ಕೋಟ್ಯಾನ್, ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು, ಹದಿಹರೆಯದ ವಯಸ್ಸನ್ನು ನಿಯಂತ್ರಿಸುವ ಮೂಲಕ ಓಳಿತಿಗಾಗಿ ತೊಡಗಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಮಾತನಾಡಿ, ಕೊಡಗು ಜಿಲ್ಲೆಗೆ ಮಾದರಿಯಾದ…

Read More

ಮಡಿಕೇರಿ ಸೆ.30 : ಕೊಡಗಿನ ಕೊಡವರಿಗೆ ಈ ಹಿಂದಿನಿಂದಲು ಲಭ್ಯವಿದ್ದ ‘ಕೋವಿ ಹಕ್ಕಿನ ವಿನಾಯಿತಿ’ಗೆ 2019ರಲ್ಲಿ ಅಕ್ಟೋಬರ್ 29 ರಂದು ಕೇಂದ್ರದ ಗೃಹ ಸಚಿವಾಲಯ ಷರತ್ತುಗಳನ್ನು ಅಳವಡಿಸುವ ಹಂತದಲ್ಲಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರು ಎಲ್ಲಿದ್ದರು ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಕೊಡವರಿಗೆ ಬ್ರಿಟಿಷರ ಅವಧಿಯಿಂದಲೆ ಲಭ್ಯವಿದ್ದ ಕೋವಿ ವಿನಾಯಿಸಿ ಹಕ್ಕನ್ನು 1965 ರಿಂದ ಸ್ಥಿರೀಕರಿಸಿ ಮುಂದುವರೆಸಲಾಗಿದೆ. ಈ ಹಕ್ಕಿನ ಬಗ್ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವ್ಯಕ್ತಿಯೊಬ್ಬರು ಪ್ರಶ್ನಿಸಿದ ಹಿನ್ನೆಲೆ, ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಸ್ಪಷ್ಟನೆ ನೀಡಲು ಸೂಚನೆಗಳನ್ನು ನೀಡಿತ್ತು. ಈ ಹಿನ್ನೆಲೆ ಕೇಂದ್ರದ ಗೃಹ ಸಚಿವಾಲಯ ಕೊಡಗಿನಲ್ಲಿ ವಿಶೇಷ ಕೋವಿ ವಿನಾಯಿತಿ ಹಕ್ಕನ್ನು ಮುಂದುವರಿಸುವ ಹಂತದಲ್ಲಿ, ಈ ಹಕ್ಕನ್ನು ‘2029 ರ ಅಕ್ಟೋಬರ್ 29’ರವರೆಗೆ ಎಂದು ಷರತ್ತನ್ನು ಹಾಕಿ ಮುಂದುವರಿಸಿದೆ. ಈ ಹಂತದಲ್ಲಿ ಕೊಡಗಿನ ಜನರು ಮತ್ತು ಕೋವಿ ನಡುವಿನ ಸಾಂಸ್ಕೃತಿಕ ಸಂಬಂಧ, ಮಹತ್ವಗಳನ್ನು ಸಂಸತ್‍ನಲ್ಲಿ…

Read More

ಮಡಿಕೇರಿ ಸೆ.30 : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ್ದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೋಳಿಸಬೇಕೆಂದು ಒತ್ತಾಯಿಸಿ ಅ.7 ರಂದು ರಾಜ್ಯವ್ಯಾಪಿ ಜನಾಗ್ರಹ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದುರಾಡಳಿತದಿಂದ ಬೇಸತ್ತಿದ್ದ ರಾಜ್ಯ ಜನರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದು, ತಮ್ಮ ಐದು ಗ್ಯಾರಂಟಿಗಳನ್ನು ನೀಡುವಲ್ಲಿ ಸಫಲರಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಸಂಘಟಿತ ಕಾರ್ಮಿಕರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15,000 ರೂ.ಗಳು, ಸಹಾಯಕಿಯರಿಗೆ 10,000 ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 8 ಸಾವಿರ ರೂ.ಗಳು, ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ 6,000ರೂ.ಗಳ ಗೌರವ ಧನ ಹೆಚ್ಚಿಸುವ ಕುರಿತು ಚುನಾವಣಾ ಸಂದರ್ಭದಲ್ಲಿ ಭರವಸೆ…

Read More

ಮಡಿಕೇರಿ ಸೆ.30 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 2ನೇ ಹಂತದ ಪಾದಯಾತ್ರೆ ವಿರಾಜಪೇಟೆ ತಾಲ್ಲೂಕಿನ “ಚೆಂಬೆಬೆಳಿಯೂರಿನ” ಎಡೆನಾಲ್‍ನಾಡ್ ಮಂದ್‍ನಲ್ಲಿ ಮುಕ್ತಾಯಗೊಂಡಿತು. ಮೂರನೇ ಹಂತದ ಪಾದಯಾತ್ರೆ ಅ.7 ರಂದು ಬೆಳಗ್ಗೆ 10 ಗಂಟೆಗೆ ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ)ನಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. “ಚೆಂಬೆಬೆಳಿಯೂರಿನ” ಎಡೆನಾಲ್‍ನಾಡ್ ಮಂದ್ ನಲ್ಲಿ ಕೊಡವ ಜಾಗೃತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸಿಎನ್‍ಸಿ ಸಂಘಟನೆ ಅತ್ಯಂತ ತಾಳ್ಮೆಯಿಂದ ಸುದೀರ್ಘ ಹೋರಾಟ ನಡೆಸುವ ಮೂಲಕ ಕೊಡವರಿಗೆ ಸಾಂವಿಧಾನಿಕವಾಗಿ ದೊರಕಬೇಕಾದ ಹಕ್ಕುಗಳ ಪರ ಪ್ರತಿಪಾದಿಸುತ್ತಾ ಬಂದಿದೆ ಎಂದರು. ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗ ಕೊಡವರಿಗೆ ನ್ಯಾಯಯುತವಾಗಿ ಸಾಂವಿಧಾನಿಕ ಭದ್ರತೆ ಸಿಗುವ ಅಗತ್ಯವಿದೆ. ನಮ್ಮನ್ನು ಆಳುತ್ತಿರುವವರು ಈ ಸಣ್ಣ ಜನಾಂಗಕ್ಕೆ ರಕ್ಷಣೆ ನೀಡದಿದ್ದಲ್ಲಿ ಒಂದು ವಿಶಿಷ್ಟ ಸಂತತಿಯೇ ಅಳಿದು ಹೋಗುವ ಆತಂಕವಿದೆ. ಸಿಎನ್‍ಸಿ…

Read More

ನಾಪೋಕ್ಲು ಸೆ.30 : ವಿದ್ಯಾರ್ಥಿಗಳು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ದೇಶದ ಆಸ್ತಿಯಾಗಲು ಸಾಧ್ಯ ಎಂದು ಅರವೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅರಮೇರಿಯ ಎಸ್ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಅಂತರ ಕಾಲೇಜು ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಎಸ್ಎಂಎಸ್ ಕಾಲೇಜಿನ ಪ್ರಾಂಶುಪಾಲ ಬಲ್ಲಚಂಡ ಕುಸುಮ್ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ನಿರ್ದೇಶಕ ಸಚಿನ್, ಪ್ರಾಂಶುಪಾಲ ವಾಟೀರಿರ ಸಪ್ನ ಸುಬ್ಬಯ್ಯ, ಉಪನ್ಯಾಸಕ , ಸಿಬ್ಬಂದಿ ವೃಂದದವರು ಪಾಲ್ಗೊಂಡಿದ್ದರು. ಸರ್ವೋದೈವತಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಪ್ರಥಮ ಬಹುಮಾನವನ್ನು ಪಡೆದುಕೊಂಡಿತು. ಬಾಲಕರ ದ್ವಿತೀಯ ಸ್ಥಾನವನ್ನು ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಹಾಗೂ ಬಾಲಕಿಯರ ದ್ವಿತೀಯ ಸ್ಥಾನವನ್ನು ಪೊನ್ನಂಪೇಟೆಯ ಅಂತೋನಿ ಕಾಲೇಜು ತಂಡ ಪಡೆದುಕೊಂಡರು. ಅಂತರ ಕಾಲೇಜು ಥ್ರೋಬಾಲ್ ಪಂದ್ಯಾವಳಿಯಲ್ಲಿ 500ಕ್ಕೂ ಹೆಚ್ಚು ಆಟಗಾರರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ 

Read More

ಚೆಟ್ಟಳ್ಳಿ ಸೆ.30 : ಥೈಲ್ಯಾಂಡ್ ರ‍್ಯಾಲಿ ಚಾಂಪಿಯನ್ ಶಿಪ್‌ನಲ್ಲಿ ಮಂಗಳೂರಿನ ಜೇಸನ್ ಸಲ್ಡಾನ(ಚಾಲಕ), ಅಮ್ಮತ್ತಿಯ ಉದ್ದಪಂಡ ತಿಮ್ಮಣ್ಣ(ಸಹಚಾಲಕ) ನಿಗಧಿತ ಗುರಿಮುಟ್ಟುವ ಮೂಲಕ ಮೊದಲ ಬಾರಿಗೆ ಭಾರತೀಯರು ಥೈಲ್ಯಾಂಡ್ ರ‍್ಯಾಲಿ ಓವರಾಲ್ ಚಾಂಪಿಯನ್ ಶಿಪ್-2023 ಆಗಿ ಹೊರಹೊಮ್ಮಿದ್ದಾರೆ. ನಾಲ್ಕನೇ ಸುತ್ತಿನ ರ‍್ಯಾಲಿಯಲ್ಲಿ ಥೈಲಾಂಡ್, ಜಪಾನ್, ಮಲೇಶಿಯಾ ಹಾಗೂ ಭಾರತ ಸೇರಿದಂತೆ ಒಟ್ಟು 56 ಅಂತರಾಷ್ಟ್ರೀಯ ರ‍್ಯಾಲಿಪಟುಗಳು ಭಾಗವಹಿಸಿದ್ದು, ಜೇಸನ್ ಸಲ್ಡಾನ ಹಾಗೂ ಉದ್ದಪಂಡ ತಿಮ್ಮಣ್ಣ 2.1 ವಿಭಾಗದ  ನಾಲ್ಕನೇ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದರು. ಮೊದಲನೇಯ ಹಂತದಿಂದಲೂ ಉತ್ತಮ ಅಂಕ ಪಡೆಯವ ಮೂಲಕ ಕೊನೆಯ ಹಂತಕ್ಕೆ ತಲುಪಿ ದಾಖಲೆಯ ಹಂತದಲ್ಲಿ 2.1 ವಿಭಾಗ  ಹಾಗೂ ಓವರಾಲ್ ಚಾಂಪಿಯನ್‌ಶಿಪ್ ಪಡೆಯಲು ಸಫಲರಾದರು. ಮುಂದೆ ಹೈದರಬಾದ್‌ನಲ್ಲಿ ನಡೆಯುವ ಐಎನ್‌ಆರ್‌ಸಿ ರ‍್ಯಾಲಿಯ 4ನೇ ಸುತ್ತಿಗೆ ಜೇಸನ್ ಸಲ್ಡಾನ ಹಾಗೂ ಉದ್ದಪಂಡ ತಿಮ್ಮಣ್ಣ ಜೋಡಿ ಸ್ಪರ್ಧಿಸಲಿದ್ದಾರೆ. ವರದಿ : ಕಾಳಯ್ಯ  

Read More

ನಾಪೋಕ್ಲು ಸೆ.30 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಹುಣಸೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಬಾಲಕಿಯರು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚದುರಂಗ ಸ್ಪರ್ಧೆಯಲ್ಲಿ ವಿಜೇತರಾದ ಮೊಹಮ್ಮದ್ ಅಜ್ಮಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರೌಢಶಾಲಾ ವಿಭಾಗದಲ್ಲಿ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಪ್ರಥಮ ಸ್ಥಾನ, ಬಾಲಕರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತಾಲೂಕು ಹಂತದಲ್ಲಿ ವಿಜೇತರಾದ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬಾಲಕರು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.…

Read More