ಲೇಖಕ: admin

ನಾಪೋಕ್ಲು ಸೆ.30 : ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಅ.1 ರಂದು ಸಾರ್ವಜನಿಕ ಪುರುಷರು ಹಾಗೂ ಮಹಿಳೆಯರಿಗಾಗಿ ಜಿಲ್ಲಾಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಅಂಬಲ ಮಹಿಳಾ ಸಮಾಜದ ಅಧ್ಯಕ್ಷ ಅಪ್ಪುಮಣಿಯ0ಡ ಡೇಸಿ ಸೋಮಣ್ಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಸ್ಪರ್ಧೆ ನಡೆಯಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಉದ್ಘಾಟಿಸಲಿದ್ದು, ಕಾಫಿ ಬೆಳೆಗಾರರಾದ ಮಂಡಿರ ಜಯ ದೇವಯ್ಯ ಕೋವಿ ಪೂಜೆ ನೆರವೇರಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮುಳಿಯ ಜ್ಯುವೆಲ್ಲರಿ ಚೇರ್ ಮ್ಯಾನ್ ಮುಳಿಯ ಕೇಶವ ಪ್ರಸಾದ್, ಕಾಫಿ ಬೆಳೆಗಾರರಾದ ಎಳ್ತಂಡ ಬೋಪಣ್ಣ, ದಿ ತಾಮರ ರೆಸಾರ್ಟಿನ ಮ್ಯಾನೇಜರ್ ಕಲಿಯಾಟಂಡ ಗಿರೀಶ್ ಸುಬ್ಬಯ್ಯ, ಕಾಫಿ ಬೆಳೆಗಾರ ಕೋಟೆರ ಸುರೇಶ್ , ತಾಜ್ ಪ್ರಾಜೆಕ್ಟ್ ನಿವೃತ್ತ ಇಂಜಿನಿಯರ್ ಕೈಬುಲಿರ ಬೆಲ್ಲು ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು. ಸಂಜೆ 4.30…

Read More

ಮಡಿಕೇರಿ ಸೆ.30 : ಕರ್ನಾಟಕ ರಾಜ್ಯ ಎಸ್‌ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ಜಯಂತೋತ್ಸವ ನಡೆಯಿತು. ಕುಶಾಲನಗರದ ಎಪಿಸಿಎಂ ಸಭಾಂಗಣದ ಜೈ ಭೀಮ್ ಸ್ಮರಣ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು. ಚಾಮರಾಜನಗರದ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಶ್ರೀಬಂತೇಜಿ ಬೋಧಿದತ್ತತೇರಾ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್ ಅವರು ಪ್ರಧಾನ ಭಾಷಣ ಮಾಡಿದರು. ಸಮಿತಿಯ ಅಧ್ಯಕ್ಷ ಎಂ.ಎಸ್.ಮಹೇoದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಎಂ.ಎಲ್.ಶoಭು, ಕುಶಾಲನಗರ ತಾಲೂಕು ಅಧ್ಯಕ್ಷ ಅಧ್ಯಕ್ಷ ಆರ್.ವಿಜಯಾನಂದ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Read More

ಬೆಂಗಳೂರು ಸೆ.30 : ಟೆನ್ನಿಸ್ ಏಷ್ಯನ್ ಗೇಮ್ಸ್ ಮಿಶ್ರ ಡಬಲ್ಸ್‌ನಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಹಾಗೂ ರುತುಜಾ ಭೋಸಲೆ ಚಿನ್ನದ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್‌ ನಲ್ಲಿ ಭಾರತೀಯ ಜೋಡಿ ಚೈನೀಸ್ ತೈಪೆ ಜೋಡಿ ವಿರುದ್ಧ 2-6 6-3 (10)-(4) ಅಂತರದಲ್ಲಿ ರೋಚಕವಾಗಿ ಗೆಲುವು ಸಾಧಿಸಿತು.

Read More

ಮಡಿಕೇರಿ ಸೆ.30 : ಕೊಡಗು ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ವತಿಯಿಂದ ಕುಶಾಲನಗರದಲ್ಲಿ ಜಿಲ್ಲಾ ಸಮಾವೇಶ ನಡೆಯಿತು. ರೈತ ಸಹಕಾರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ಕೊಡುಗೆ ಮತ್ತು ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಲಾಯಿತು. ಒಕ್ಕೂಟದ ಅಧ್ಯಕ್ಷ ಕೋಳೇರ ಝರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಸಂಸದ ಪ್ರತಾಪ್‌ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಬೋಜೆಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕರಾದ ಎ.ಸೌಮ್ಯ ಪೊನ್ನಪ್ಪ, ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೊಟ್ರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಎಂ.ಟಿ.ದಾಮೋದರ್, ಕಾನೂನು ಸಲಹೆಗಾರ ಎಂ.ಎಸ್.ಪೂವಯ್ಯ, ಸದಸ್ಯರಾದ ಮಣಿ ಮಹಮ್ಮದ್, ಪಿ.ಎಂ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

Read More

ಮಡಿಕೇರಿ ಸೆ.30 :  ಸ್ಯಾಂಡಲ್​ವುಡ್​ ನಟ ಅಭಿಷೇಕ್​ ಅಂಬರೀಷ್​ ತಮ್ಮ ಪತ್ನಿ ಅವಿವಾ ಜೊತೆ ಕಾವೇರಿ ಉಗಮಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಮಾತೆಗೆ ವಿಶೇಷ ಪೂಜೆ  ಸಲ್ಲಿಸಿದರು. ಪೂಜೆ ವೇಳೆ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥಿಸಿದ್ದಾರೆ. ಮಳೆ ಬರಲಿ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

Read More

ಬೆಂಗಳೂರು ಸೆ.30 : ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸುದ್ದಿ ಸಂಸ್ಥೆಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎನ್ ಶಾಂತಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅಭಿನಂದನೆ ಸಲ್ಲಿಸಿದ್ದಾರೆ. ಪ್ರಜಾವಾಣಿ ಸಂಸ್ಥೆಯ ನಿರ್ದೇಶಕರು ಮತ್ತು ಸಂಪಾದಕರೂ ಆಗಿರುವ ಶಾಂತಕುಮಾರ್ ಅವರು ತಮ್ಮ ಸುದೀರ್ಘ ಅನುಭವ ಮತ್ತು ಕಾರ್ಯದಕ್ಷತೆಯಿಂದ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ ಎಂದು ಶುಭ ಹಾರೈಸಿದ್ದಾರೆ.

Read More

ಕೊಯನಾಡು ಸೆ.30 : ಕೊಯನಾಡು ಸುನ್ನಿ ಮುಸ್ಲಿಂ ಜುಮಾ ಮಸೀದಿ, ನುಸ್ರತುಲ್ ಇಸ್ಲಾಂ ಅಸೋಸಿಯೇಶನ್, ಗಲ್ಫ್ ಸಮಿತಿ ಸಂಯುಕ್ತ ಆಶ್ರಯದಲ್ಲಿ ಈದ್ ಮಿಲಾದ್ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ  ಸುಬುಲು ಸ್ಸಲಾಂ ಮದ್ರಸ ಸಭಾಂಗಣದಲ್ಲಿ ಜಮಾಅತ್ ಅಧ್ಯಕ್ಷ  ಎಸ್.ಎ.ಅಬ್ದುಲ್ ರಜಾಕ್  ದ್ವಜರೋಹಣ ಮೂಲಕ ಮಿಲಾದ್ ಸಮಾವೇಶಕ್ಕೆ ಚಾಲನೆ ನೀಡಿದರು,. ನಂತರ ಸ್ವಲಾತ್ ಜಾಥಾ ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಜಿಲ್ಲಾ ವಕ್ಫ್ ಸದಸ್ಯರಾದ ಹಾಜಿ ಎಸ್ ಮೊಯ್ದೀನ್ ಕುಂಞ  ಉದ್ಘಾಟಿಸಿದರು. ಕೊಯನಾಡಿನಿಂದ ಚೆಡಾವು ವರೆಗೆ ಸಾಗಿ ಬಂದ ಜಾಥಾದಲ್ಲಿ ಮದ್ರಸ ವಿದ್ಯಾರ್ಥಿಗಳ ಆಕರ್ಷಣಿಯ ಧಫ್ ಪ್ರದರ್ಶನ, ಊರಿನ ಯುವಕರ ವಿವಿಧ ಶೈಲಿಯ ಘೋಷವಾಕ್ಯ, ಪ್ರವಾದಿ ಸಂದೇಶವನ್ನು ಜಾಥದ ಮೂಲಕ ಸಾರಿದರು. ನಂತರ  ಮಸೀದಿಯಲ್ಲಿ ಬೃಹತ್ ಮೌಲೀದ್ ಪಾರಾಯಣ ನಡೆಯಿತು. ಮಗ್ರಿಬ್ ನಮಾಜಿನ ಬಳಿಕ ಮದ್ರಸ ವಿದ್ಯಾರ್ಥಿಗಳ ಪ್ರತಿಭೋತ್ಸವ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷ ಎಸ್.ಎ.ಅಬ್ದುಲ್ ರಜಾಕ್  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಸೀದಿ ಖತೀಬರಾದ ಅಬ್ದುಲ್ ಹಮೀದ್ ಅಮ್ಜದಿ…

Read More

ಸಿದ್ದಾಪುರ  ಸೆ.30 :   ದಿಟ್ಟಳ್ಳಿ ಗಿರಿಜನ ಆಶ್ರಮ ಶಾಲೆಗೆ  ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯ ಅಧಿಕಾರಿ ಎಸ್. ಹೊನ್ನೇಗೌಡ ಹಾಗೂ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಶ್ರಮ ಶಾಲೆಯ ಮಕ್ಕಳಿಗೆ ಈ ಮಾಹೆಯಲ್ಲಿ ಪೂರೈಕೆ ಮಾಡಲಾದ ಗೋಧಿ, ಅಕ್ಕಿ, ಮೈದ, ಅವಲಕ್ಕಿಯಲ್ಲಿ ಹುಳಗಳು ಪತ್ತೆಯಾಗಿದ್ದು.  ಶಾಲೆಗೆ ಭೇಟಿ ನೀಡಿದ ಅಧಿಕಾರಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ನಂತರ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅಧಿಕಾರಿ, ತಾವು ಅಧಿಕಾರ ಸ್ವೀಕಾರ ಮಾಡಿ 15 ದಿನಗಳಾಗಿದ್ದು, ಇಲ್ಲಿಗೆ ಪೂರೈಕೆ ಮಾಡಲಾದ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದು ಇದನ್ನು. ಮಕಳಿಗೆ ಪೂರೈಕೆ ಮಾಡದಂತೆ ಸೂಚಿಸಲಾಗಿದೆ ಎಂದರು. ಪೂರೈಕೆ ಮಾಡಲಾದ ಆಹಾರ ಪದಾರ್ಥಗಳನ್ನು ವಾಪಾಸು ಕಳುಹಿಸಿ ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು ಎಂದ ಅವರು ತಮ್ಮ ವ್ಯಾಪ್ತಿಯ ಎಲ್ಲಾ ಆಶ್ರಮ ಶಾಲೆಗಳು ಹಾಗೂ ಹಾಸ್ಟೇಲ್‌ಗಳಿಗೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದರು. ಈ…

Read More

ಮಡಿಕೇರಿ ಸೆ.29 : ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕಾವೇರಿಯ ಉಗಮ ಸ್ಥಾನ ಕೊಡಗಿನಲ್ಲಿ ಯಾವುದೇ ಸ್ಪಂದನೆ ದೊರೆಯಲಿಲ್ಲ. ಕೆಲವು ಕಡೆ ಪ್ರತಿಭಟನೆ ನಡೆದದ್ದು ಬಿಟ್ಟರೆ ಜನಜೀವನ ಎಂದಿನಂತೆ ಇತ್ತು. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಕೊಡಗಿನಲ್ಲಿ ಪರಿಣಾಮ ಬೀರಲಿಲ್ಲ. ಜಿಲ್ಲೆಯ ಕುಶಾಲನಗರ ಮತ್ತು ಗೋಣಿಕೊಪ್ಪದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು. ಜಿಲ್ಲಾ ಕೇಂದ್ರ ಮಡಿಕೇರಿ ನಗರದಲ್ಲಿ ವಾರದ ಶುಕ್ರವಾರದ ಸಂತೆ ಬಂದ್ ಬಿಸಿ ಇಲ್ಲದೆ ಸುಗಮವಾಗಿ ನಡೆಯಿತು. ಪಿರಿಯಾಪಟ್ಟಣ, ಹುಣಸೂರು ಮುಂತಾದ ಕಡೆಯಿಂದ ಬರುವ ವ್ಯಾಪಾರಿಗಳು ಗುರುವಾರ ಸಂಜೆಯೇ ಬಂದಿದ್ದರಿಂದ ಸಂತೆ ವ್ಯಾಪಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಅಂಗಡಿಗಳಲ್ಲೂ ವಾರದ ವ್ಯಾಪಾರ ಭರ್ಜರಿಯಾಗಿಯೇ ನಡೆಯಿತು. ಶಾಲಾ ಕಾಲೇಜುಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಸಹಿತ ವಾಹನ ಸಂಚಾರವೂ ಎಂದಿನಂತೆ ಇತ್ತು. ಮೈಸೂರು ಮತ್ತು…

Read More

ಮಡಿಕೇರಿ ಸೆ.29 : ಕೊಡಗು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಯೋಜನೆ ನೆನೆಗುದಿಗೆ ಬಿದ್ದಿದ್ದು, ಈ ಕುರಿತು ವಸ್ತುಸ್ಥಿತಿಯನ್ನು ಬಹಿರಂಗ ಪಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರೈಲು ಮಾರ್ಗದ ಯೋಜನೆಯ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂದು ಕೇಂದ್ರ ಸರ್ಕಾರದ ಬಳಿ ಪತ್ರದ ಮೂಲಕ ಹಲವು ಬಾರಿ ಮಾಹಿತಿ ಬಯಸಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಉತ್ತರ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೊಡಗು ರೈಲು ಮಾರ್ಗದ ಕುರಿತು ರೈಲ್ವೆ ಸಚಿವರಿಂದ ವಿವರ ಪಡೆಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ ಹಾಗೂ ಸಂಜಯ್ ಸಿಂಗ್ ಅವರ ಬಳಿ ಮನವಿ ಮಾಡಿ ಪತ್ರ ಬರೆದಿರುವುದಾಗಿ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.

Read More