ಲೇಖಕ: admin

ವಿರಾಜಪೇಟೆ ಆ.31 : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ “ರಕ್ಷಾ ಬಂಧನ ನಡೆಸಲಾಯಿತು. ಮಂಗಳೂರಿನ ರಾಷ್ಟ್ರೀಯ ಸ್ವಯಂ ಸಂಘದ ವಿಭಾಗ ಪ್ರಚಾರ ಪ್ರಮುಖರಾದ ಸೂರಜ್ ಕುಮಾರ್ ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ರಾಷ್ಟ್ರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಪ್ರತಿಯೊಬ್ಬ ಯುವಜನತೆ ತನ್ನನ್ನು ರಾಷ್ಟ್ರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳ ಪಾತ್ರವನ್ನು ಸವಿವರವಾಗಿ ತಿಳಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲಾ ಅವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನ ಆಚರಣೆ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಪರಸ್ಪರ ರಕ್ಷೆಯನ್ನು ವಿತರಿಸಿ ಕಟ್ಟಿಸಲಾಯಿತು.

Read More

ಮಡಿಕೇರಿ ಆ.31  : ನ್ಯಾಯಾಧೀಶರಾಗಿ ನೇಮಕಗೊಂಡ ಮಡಿಕೇರಿ ವಕೀಲರ ಸಂಘದ ಸದಸ್ಯ ಅಬು ತಾಹೀರ್ ಅವರನ್ನು ಮಡಿಕೇರಿ ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದಭ೯ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ಯಾಂ ಪ್ರಸಾದ್, ನ್ಯಾಯಾಧೀಶರ ಸ್ಥಾನ ಅತ್ಯಂತ ಗೌರವ ಮತ್ತು ಪ್ರತಿಷ್ಟೆಯದ್ದಾಗಿದೆ. ನ್ಯಾಯದಾನ ನೀಡುವಲ್ಲಿ ಸಮಪ೯ಕವಾಗಿ ಕಾಯ೯ನಿವ೯ಹಿಸಿ ಎಂದು ಹಾರೈಸಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಅಬು ತಾಹೀರ್ ಅವರ ಸಾಧನೆ ಯುವ ವಕೀಲರಿಗೂ ಪ್ರೇರಣೆಯಾಗಲಿ. ಮತ್ತಷ್ಟು ಯುವ ವಕೀಲರು ಸ್ಪಧಾ೯ತ್ಮಕ ಪರೀಕ್ಷೆ ಬರೆಯುವ ಮೂಲಕ ನ್ಯಾಯಾಧೀಶರಾಗಿ ಆಯ್ಕೆಯಾಗುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ವಕೀಲ ಟಿ.ಎಚ್. ಅಬೂಬಕರ್ ಈ ಸಂದಭ೯ ನೂತನವಾಗಿ ನ್ಯಾಯಾಧೀಶರಾಗಿ ಆಯ್ಕೆಯಾದ ತನ್ನ ಕಛೇರಿ ಸಹೋದ್ಯೋಗಿ ಅಬು ತಾಹಿರ್ ಅವರ ಕುರಿತಂತೆ ಮಾತನಾಡಿದರು. ಕಾಯ೯ಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪ್ರಶಾಂತಿ, ಸಿವಿಲ್ ನ್ಯಾಯಾಧೀಶರಾದ ಮುನಿರತ್ನ, ಸಿವಿಲ್ ನ್ಯಾಯಾಧೀಶರಾದ ನಾಗೇಶ್, ವಕೀಲರ ಸಂಘಧ ಕಾಯ೯ದಶಿ೯ ಡಿ.ಎಂ.ಕೇಶವ, ಉಪಾಧ್ಯಕ್ಷ ಎಂ.ಪಿ.ನಾಗರಾಜು, ಸಕಾ೯ರಿ ಅಭಿಯೋಜಕರು,…

Read More

ಮಡಿಕೇರಿ ಆ.31 :  ಗೃಹ ಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ ಜಿಲ್ಲೆಯ 79,659 ಮಂದಿಗೆ 15,23,18,000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆಯೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಕಟಣೆ ತಿಳಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ (ಡಿ.ಟಿ.ಟಿ.) ಮಾಡುವ ಗೃಹಲಕ್ಷ್ಮಿ ಯೋಜನೆಯನ್ನು ಆ.30 ರಾಜ್ಯಮಟ್ಟದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿದ್ದು, ಇಂದು ಮೊದಲ ಹಂತದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ 1,31,863 ಫಲಾನುಭವಿಗಳಿದ್ದು, ಈ ಪೈಕಿ 106198 ಫಲಾನುಭವಿಗಳು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ್ದು, ಮೊದಲ ಹಂತದ ಹಣ ವರ್ಗಾವಣೆಯಾಗಿದ್ದು, ಮುಂದಿನ ಹಂತದಲ್ಲಿ ಉಳಿದವರಿಗೆ ಹಣ ವರ್ಗಾವಣೆಯಾಗಲಿದೆ.

Read More

ಮಡಿಕೇರಿ ಆ.31 : ಮರ್ಕರ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಸೆ.3 ರಂದು  “ಕೈಲ್‌ಪೊಳ್ದ್ ಕಳಿಕೂಟ” ನಡೆಯಲಿದೆ. ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಸ್ಪರ್ಧೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟ್‍ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆಗೆ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಭಾಗವಹಿಸಲಿದ್ದಾರೆ. ಚೆಕ್ಕೇರ ಪಂಚಮ್ ಬೋಪಣ್ಣ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. :::ಸ್ಪರ್ಧೆಗಳು ::: ಮಹಿಳೆಯರು ಮತ್ತು ಪುರುಷರಿಗೆ ಕೇರ್ ಬಲಿ (ಹಗ್ಗ ಜಗ್ಗಾಟ) ಸ್ಪರ್ಧೆ, .22 ಮತ್ತು 12 ಬೋರ್ ತೆಂಗಿನ ಕಾಯಿಗೆ ಗುಂಡುಹೊಡೆಯುವ ಸ್ಪರ್ಧೆ, 60 ವರ್ಷದೊಳಗಿನ ಮಹಿಳೆಯರು ಮತ್ತು ಪುರುಷರಿಗೆ 100 ಮೀ. ಹಾಗೂ 50 ಮೀ. ಓಟದ ಸ್ಪರ್ಧೆ, 15 ವರ್ಷ ಮೇಲ್ಪಟ್ಟ ಯುವಕ, ಯುವತಿಯರಿಗೆ…

Read More

ಮಡಿಕೇರಿ ಆ.31 : ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನ ಬಿನ್ನಿಪೇಟೆಯ ಡೆಕತ್‍ಲಾನ್ ಇಟಿಎ ಮಹಲ್ ನಲ್ಲಿ ನಡೆದ ಅಂತರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಬಾರನ ಬಿಂಬಿತ್ ಗೌಡ 2 ಚಿನ್ನ, ಬೊಮ್ಮುಡಿ ದೇವಿಶ್ರೀ ಪ್ರಭಾಕರ್ 2 ಚಿನ್ನ, ಬಾರನ ಪ್ರೇಕ್ಷಿತ್ ಗೌಡ 1 ಚಿನ್ನ, 1 ಕಂಚು, ಆರ್.ಲೋಹಿತ್ 1 ಚಿನ್ನ, 1 ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮುಡ್ಯನ ಗೌರವ್ ಯೋಗೀಶ್ 2 ಬೆಳ್ಳಿ, ತೇಜಸ್ ರಾಜು 2 ಬೆಳ್ಳಿ, ಜಿ.ಎಂ.ಮನೀಶ್ ನಾಥ್ 2 ಬೆಳ್ಳಿ, ಪಿ.ದೃಪದ್ ಮಣಿಕೋತ್ 1 ಬೆಳ್ಳಿ, 1 ಕಂಚು, ಎಂ.ವಿ.ಕಿಶನ್ 1 ಬೆಳ್ಳಿ, 1 ಕಂಚು, ಕಿರಣ್ ಕಾಂತ್ 2 ಕಂಚು, ಜಿ.ಎಂ.ಮಿನ್ ಶಾ 2 ಕಂಚಿನ ಪದವನ್ನು ಗೆದ್ದುಕೊಂಡಿದ್ದಾರೆ. ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ…

Read More

ಮಡಿಕೇರಿ ಆ.31 : ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ 2023-2024 ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕರ ಮತ್ತು ಶಿಕ್ಷಕರ ಸಭೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲಾ ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೋಷಕರ ಬೆಂಬಲ ಅಗತ್ಯ, ಅಂಕ ಗಳಿಕೆಯೇ ಮುಖ್ಯವಲ್ಲ. ಹಾಗೂ ರಾಷ್ಟ್ರದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಆದರ್ಶಗಳನ್ನು ಮೈ ಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿ ಸಲಹಾ ಸಮಿತಿಯ ಸಂಚಾಲಾಕಿ ಅಂಬಿಕಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಕಾಲೇಜು ಹಂತದಿಂದಲೇ ಪ್ರಾರಂಭವಾಗಬೇಕು. ನಾಯಕರಲ್ಲಿ ಉತ್ತಮ ಶಿಸ್ತು ನಡತೆಯನ್ನು ಕಲಿಸುತ್ತದೆ ಎಂಬುವುದನ್ನು ತಿಳಿಸಿಕೊಟ್ಟರು. ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಚಾಲಕಿ ಡಾ. ಕೆ.ಜಿ.ವೀಣಾ ಕಾಲೇಜಿನಲ್ಲಿರುವ ಕಾರ್ಯಕ್ರಮಗಳನ್ನು ಬಗ್ಗೆ ವಿವರಿಸಿದರು. ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ (ಪದಾಧಿಕಾರಿಗಳು) ಸಂಚಾಲಕರು ಕಾಲೇಜಿನಲ್ಲಿರುವ ಸಾಂಸ್ಕೃತಿಕ ಚಟುವಟಿಕೆಯ ಮಹತ್ವವನ್ನು ತಿಳಿಕೊಟ್ಟರು. ಇತಿಹಾಸ ಉಪನ್ಯಾಸಕಿ ಸಿ.ಪಿ.ಅನುಪಮ ಪ್ರಾರ್ಥಿಸಿದರು. ಪೋಷಕರ ಮತ್ತು ಶಿಕ್ಷಕರ ಸಂಘದ ಸಂಚಾಲಕ ನಾಗರಾಜು ಸ್ವಾಗತಿಸಿದರು. ಪೋಷಕರ ಮತ್ತು ಶಿಕ್ಷಕರ ಸಂಘದ ಸದಸ್ಯೆ ಅಕ್ಷತಾ ನಾಯ್ಕ್…

Read More

ಮಡಿಕೇರಿ ಆ.31 : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಕಾನೂನು ಪದವೀಧರರಿಗೆ 2023-24 ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರ.ವರ್ಗ-1 ಮತ್ತು ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಒಳಪಟ್ಟಿರಬೇಕು. ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರ.ವರ್ಗ-1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದ 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರ.ವರ್ಗ-1ರ ಅಭ್ಯರ್ಥಿಗಳಿಗೆ 31 ಮತ್ತು ಪ್ರ.ವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷದ ಒಳಗಿರಬೇಕು.…

Read More

ಮಡಿಕೇರಿ ಆ.31 :  ನಾಪೋಕ್ಲುವಿನ ಬೇತು ಗ್ರಾಮದ ನಿವಾಸಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಚೀಣಕುಟ್ಟಡ ಎ.ಗಣಪತಿ  ನಿಧನರಾದರು. ಕೆಲವು ದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆ.23 ರಂದು  ಕೊನೆಯುಸಿರೆಳೆದರು. ಕೆಂಬಟ್ಟಿ ಜನಾಂಗಕ್ಕೆ ಸೇರಿದ ಇವರು ಜಾನಪದ ಕ್ಷೇತ್ರದಲ್ಲಿ ಕಾಪಾಳ ನೃತ್ಯದಲ್ಲಿ ಹೆಚ್ಚು ಪರಿಣಿತರಾಗಿದ್ದರು. ಚೀಣಕುಟ್ಟಡ .ಎ ಗಣಪತಿ ಇವರ ನಿಧನಕ್ಕೆ “ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ” ಸಂತಾಪ ವ್ಯಕ್ತಪಡಿಸಿದೆ.

Read More

ಮಡಿಕೇರಿ ಆ.31 : ಮಾನವ ಕುಲದ ಏಕತೆಗಾಗಿ ಮತ್ತು ಸಮ ಸಮಾಜ ನಿರ್ಮಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರು ಶ್ರಮಿಸಿದ್ದಾರೆ ಎಂದು ಚಿಂತಕ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣಗುರು ಮತ್ತು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾರಾಯಣಗುರು ಅವರು ಶೋಷಿತ ಸಮಾಜಕ್ಕೆ ಅರಿವಿನ ಬೆಳಕನ್ನು ನೀಡಿದ್ದಾರೆ. ಒಂದೇ ಧರ್ಮ, ಒಂದೇ ದೇವರು ಎಂದು ಸಾರಿದ್ದಾರೆ. ಎಲ್ಲರೂ ಸಮಾಜ ಮುಖಿಯಾಗಿ ಬದುಕಬೇಕು ಎಂಬುದು ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರ ಆಶಯವಾಗಿತ್ತು ಎಂದು ಟಿ.ಪಿ.ರಮೇಶ್ ನುಡಿದರು. ಮೂಢನಂಬಿಕೆ, ಅಜ್ಞಾನ ವಿರುದ್ಧ ಹೆಚ್ಚಿನ ಜಾಗೃತಿ ಮೂಡಿಸಿದರು. ತತ್ವ ನಿಷ್ಠೆ, ಸತ್ಯನಿಷ್ಠೆ ಮೂಲಕ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂಬುದನ್ನು ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಅವರು ಸಾರಿದ್ದಾರೆ ಎಂದು ಹೇಳಿದರು. ಬ್ರಹ್ಮಶ್ರೀ ನಾರಾಯಣಗುರು ಅವರು 1854 ರಲ್ಲಿ…

Read More

ಕುಶಾಲನಗರ ಆ.31:  ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ, ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ದ ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿಜ್ಞಾನ ಸಂಘದ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಮವಾರಪೇಟೆ ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ನಾಟಕ ಸ್ಪರ್ಧೆ ನಡೆಯಿತು. ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್., ಕಾಲೇಜು) ದ ಉಪನ್ಯಾಸಕ ಎಚ್.ಬಿ.ಶಿವಾನಂದ, ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದರು. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವದೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿ ಸಿರಿಧಾನ್ಯಗಳ ಮಹತ್ವ ಕುರಿತು ಮಾತನಾಡಿದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್, ವಿಶ್ವ ಸಿರಿಧಾನ್ಯಗಳ ವರ್ಷಾಚರಣೆ ಅಂಗವಾಗಿ ದಿನನಿತ್ಯ ಜೀವನದಲ್ಲಿ ಮರೆಯಾಗುತ್ತಿದ್ದ ಸಿರಿಧಾನ್ಯಗಳ ಬಳಕೆ ಬಗ್ಗೆ ಜನಜಾಗೃತಿ ಮೂಡಿಸಲು…

Read More