ಮಡಿಕೇರಿ ಸೆ.29 : ಮಡಿಕೇರಿ ಕೊಡವ ಸಮಾಜದ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಸಮಾಜದ ನಿಯೋಗ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರನ್ನು ಭೇಟಿಯಾಗಿ ಸಹಕಾರ ಕೋರಿತು. ಸಂಸದರ ಮೈಸೂರಿನ ಕಚೇರಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರ ನೇತೃತ್ವದಲ್ಲಿ ನಿರ್ದೇಶಕರಾದ ಕೇಕಡ ವಿಜು ದೇವಯ್ಯ, ನಂದಿನೆರವಂಡ ರವಿ ಬಸಪ್ಪ, ಮಂಡಿರ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ ಹಾಗೂ ಚೊಟ್ಟೆಯಂಡ ಸಂಜು ಕಾವೇರಪ್ಪ ಅವರುಗಳು ಭೇಟಿಯಾಗಿ ಚರ್ಚಿಸಿದರು. ಕೊಡವ ಸಮಾಜ ಕಟ್ಟಡದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕೊಡುವಂತೆ ಮನವಿ ಮಾಡಿದರು.
ಲೇಖಕ: admin
ಮಡಿಕೇರಿ ಸೆ.29 : ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ಸಣ್ಣ ಪುಲಿಕೋಟು ಗ್ರಾಮದ ಯೋಧ ಉದಿಯನ ಜಿತನ್ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಯೋಧನ ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಕುಟುಂಬದ ಸದಸ್ಯರೊಂದಿಗೆ ಶಾಸಕರು ಚರ್ಚಿಸಿದರು. ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್, ಗ್ರಾ.ಪಂ ಸದಸ್ಯ ಕೆದಂಬಾಡಿ ವಿಶು ಪ್ರವೀಣ್ ಕುಮಾರ್, ಡಿಸಿಸಿ ಸದಸ್ಯರು ಹಾಗೂ ವಕೀಲರಾದ ಸುನಿಲ್ ಪತ್ರವೋ, ಕಾಂಗ್ರೆಸ್ ಪ್ರಮುಖ ಕೋಳಿಬೈಲು ವೆಂಕಟೇಶ್, ಅಯ್ಯಂಗೇರಿ ಪಂಚಾಯಿತಿ ಸದಸ್ಯೆ ಕಾವೇರಮ್ಮ, ಸ್ಥಳೀಯರಾದ ಪಟ್ಟಮಾಡ ಸಂಜು, ಬಾರಿಕೆ ಶರತ್, ಗಿರೀಶ್, ನಂಗಾರು ಅಶೋಕ್, ಬಾರಿಕೆ ನಿತಿನ್, ಮಿಥುನ್, ಬಾರಿಕೆ ಲೋಕೇಶ್, ದೇವಂಗೋಡಿ ಸುಬ್ರಾಯ ಮತ್ತಿತರ ಮುಖಂಡರು ಹಾಜರಿದ್ದರು.
ಮಡಿಕೇರಿ ಸೆ.29 : ಸ್ವಾಮಿ ವಿವೇಕಾನಂದರ ದಿವ್ಯ ಲೀಲಾ ಕ್ಷೇತ್ರ ಡಿವೈನ್ ಪಾರ್ಕ್ನ ಅಂಗ ಸಂಸ್ಥೆಯಾದ ಮಡಿಕೇರಿ ವಿವೇಕ ಜಾಗೃತ ಬಳಗದ ವತಿಯಿಂದ ಆತ್ಮೋನ್ನತಿ ಶಿಬಿರ ಕಾರ್ಯಕ್ರಮ ನಡೆಯಿತು. ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಿವೈನ್ ಪಾರ್ಕ್ನ ಅಧಿಕಾರಿ ಪದ್ಮಲತಾ ರಾವ್, ಮಡಿಕೇರಿ ವಿವೇಕ ಜಾಗೃತ ಬಳಗದ ಅಧ್ಯಕ್ಷೆ ಟಿ.ಎ.ಪದ್ಮವೇಣಿ ಹಾಗೂ ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷೆ ದಿವ್ಯ ತೇಜ್ ಕುಮಾರ್ ಪಾಲ್ಗೊಂಡು ಮಾತನಾಡಿದರು. ಬಂಧನ, ಮನನ, ಸ್ಮರಣ, ಗಮನದ ಆಧ್ಯಾತ್ಮಿಕ ಚಿಂತನೆಯನ್ನು ನೀಡಿದರು. ಮಾನವ ಜನ್ಮವನ್ನು ಆತ್ಮಶಕ್ತಿ ಜಾಗೃತಿಗಾಗಿ ತ್ಯಾಗ, ಸೇವೆ, ಸಾಧನೆಗಳೊಂದಿಗೆ, ಪಶುತ್ವದಿಂದ ಮಾನವತ್ವ, ಮಾನವತ್ವದಿಂದ ದೈವತ್ವಕ್ಕೆ ಏರಲು ಆತ್ಮ ಸಾಕ್ಷಾತ್ಕಾರ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದರು. ಅಭಿಪ್ರಾಯ ಹಂಚಿಕೊಂಡ ಶಿಬಿರಾರ್ಥಿಗಳಾದ ಸೋಮಯ್ಯ ಮುಕ್ಕಾಟಿ, ಸೀತಮ್ಮ ಹಾಗೂ ವಿಶಾಲಾಕ್ಷಿ ಡಿವೈನ್ ಪಾರ್ಕ್ ನ ಮಹತ್ವ ಹಾಗೂ ತಾವು ಪಡೆದ ಕೃಪೆಯ ಬಗ್ಗೆ ತಿಳಿಸಿದರು. ಜಾಗೃತ ಬಳಗದ ಖಜಾಂಚಿ ಲೀಲಾ ಶೆಡ್ತಿ ಸ್ವಾಗತಿಸಿ, ಯಶಿಕಾ…
ಕುಶಾಲನಗರ, ಸೆ. 29: ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ಮೈಸೂರಿನಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ನಾಟಕ ಸ್ಪರ್ಧೆಗೆ ವಿಭಾಗಮಟ್ಟದ ನಾಟಕ ಸ್ಪರ್ಧೆಯಲ್ಲಿ ” ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅಂತರ್ಜಾಲ ಮತ್ತು ಕೃತಕ ಬುದ್ದಿಮತ್ತೆ” ಕುರಿತು ಉತ್ತಮ ನಾಟಕ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದ ಮೈಸೂರಿನ ನಂಜುಮಳಿಗೆಯ ಗೋಪಾಲಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ತಂಡವು ರಾಜ್ಯಮಟ್ಟದ ನಾಟಕ ಸ್ಪರ್ಧೆಗೆ ಆಯ್ಕೆಗೊಂಡಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಡಾ.ಬಿ ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ತಂಡವು ದ್ವಿತೀಯ ಬಹುಮಾನ ಹಾಗೂ ಮಡಿಕೇರಿ ನಗರದ ಸಂತ ಮೈಕಲರ ಪ್ರೌಢಶಾಲೆಯ ತಂಡವು ತೃತೀಯ ಬಹುಮಾನ ಗಳಿಸಿತು.…
ನಾಪೋಕ್ಲು ಸೆ.29 : ನಾಪೋಕ್ಲು ಲಯನ್ಸ್ ಮತ್ತು ಲಿಯೋ ಸಂಸ್ಥೆಗೆ ಪ್ರಾಂತೀಯ ಅಧ್ಯಕ್ಷ ಭೇಟಿ ಸಮಾರಂಭ ನಡೆಯಿತು. ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತ ಉಪ ಪ್ರಾಂಶುಪಾಲೆ ಪಿ.ಕೆ ನಳಿನಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ, ಮಾತನಾಡಿದ ಪಿ.ಕೆ.ನಳಿನಿ ಶಾಲೆಯಲ್ಲಿ ಶಿಕ್ಷಣವೇ ಮುಖ್ಯ ಅಲ್ಲ ಮಕ್ಕಳಿಗೆ ಸಂಬಂಧಗಳು, ಹಣದ ಮೌಲ್ಯ, ಸಮಯಪ್ರಜ್ಞೆ ಇದರ ಬಗ್ಗೆ ಶಿಕ್ಷಕರು ತಿಳಿಯಪಡಿಸಬೇಕು ಎಂದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್ ಅಂಬೆಕಲ್ ಎಂ ಜೆ ಎಫ್ ಸಂಘದ ಉದ್ದೇಶಗಳ ಬಗ್ಗೆ ಮಾತನಾಡಿದರು. ನಾಪೋಕ್ಲು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಕನ್ನಂಬಿರ ಸುದಿ ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಲಿಯೋ ಸಂಸ್ಥೆಯ ಉಪಾಧ್ಯಕ್ಷ ರೋಹನ್ ಮಾಚಯ್ಯ, ಪ್ರಾಂತೀಯ ಪ್ರಥಮ ಮಹಿಳಾ ಸದಸ್ಯೆ ಪ್ರಿಯಾ ನವೀನ್, ಕಾರ್ಯದರ್ಶಿ ಮಾದೆಯಂಡ ಕುಟ್ಟಪ್ಪ, ಖಜಾಂಚಿ ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ಪ್ರಾಂತೀಯ ಸಂಪರ್ಕಾಧಿಕಾರಿ ಡಾ.ಕೋಟೆರ ಪಂಚಮ್ ತಿಮ್ಮಯ್ಯ ವಲಯಾಧ್ಯಕ್ಷ ಸತೀಶ್ ಉಪಸ್ಥಿತರಿದ್ದರು. ಕಾಂಡಂಡ ರೇಖಾ ಪೊನ್ನಣ್ಣ ಧ್ವಜ ವಂದನೆ ಸಲ್ಲಿಸಿ ಅಪ್ಪುಮಣಿಯಂಡ ಶೈಲಾ ಭೀಮಯ್ಯ…
ನಾಪೋಕ್ಲು ಸೆ.29 : ಪಾರಾಣೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ 2023- 24ರ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಅಪ್ಪನೆರವಂಡ ಎಂ.ಪೂವಯ್ಯ, ಉಪಾಧ್ಯಕ್ಷರಾಗಿ ನಾಯಕಂಡ ಸಿ.ಚಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ 13 ಸ್ಥಾನಗಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿ ಪೆಬ್ಬಾಟಂಡ ಎ.ಪೆಮ್ಮಯ್ಯ, ಬೊಳ್ಳಚೆಟ್ಟೀರ ಎಂ.ಸುರೇಶ್, ದೇವಜನ ಕೆ.ಪಳಂಗಪ್ಪ, ಬಿದ್ದಂಡ ಎ.ಪೆಮ್ಮಯ್ಯ,ನಾಯಕಂಡ ಟಿ. ಮುತ್ತಪ್ಪ, ಅಂಗೀರ ಎಂ.ಮಾದಪ್ಪ,ಬಲ್ಯಾಟಂಡ ಜಿ.ಕುಟ್ಟಯ್ಯ, ಅಪ್ಪನೆರವಂಡ ಎಂ.ನಯನ, ಮೇಡತನ ಎಸ್ ರಶ್ಮಿ ,ಎಚ್.ಎಸ್ ರಾಜು ಹಾಗೂ ವೈ. ಬಿ ಬಸಪ್ಪ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.29 : ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನದ ಪ್ರಯುಕ್ತ ಈದ್ ನಾಪೋಕ್ಲುವಿನ ವಿವಿಧೆಡೆ ಸಂಭ್ರಮದ ಈದ್ ಮಿಲಾದ್ ಆಚರಿಸಲಾಯಿತು. ನಾಪೋಕ್ಲು, ಕೊಟ್ಟಮುಡಿ, ಹಳೆತಾಲೂಕು, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ಕೂರುಳಿ, ಪಡಿಯಾನಿ, ಬೆಟ್ಟಗೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಸೀದಿ ಹಾಗೂ ಮದರಸಗಳ ವತಿಯಿಂದ ಆಚರಿಸಲಾಯಿತು. ಮಿಲಾದ್ ಸಂದೇಶ (ಜಾತ) ಮೆರವಣಿಗೆ ಹಾಗೂ ವಿಶೇಷ ಸಂಸ್ಕೃತಿಕ ಕಾರ್ಯಕ್ರಮಗಳ ಆಯೋಜಿಸುವುದರ ಮೂಲಕ ಪ್ರವಾದಿ ಜನ್ಮದಿನವನ್ನು ಮುಸ್ಲಿಂ ಭಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ನಾಪೋಕ್ಲು ಪಟ್ಟಣದಲ್ಲಿರುವ ಮೊಹಿಯದ್ದೀನ್ ಜುಮ್ಮ ಮಸೀದಿ ಹಾಗೂ ಹಿದಾಯತಿಲ್ ಇಸ್ಲಾಂ ಮಾದರಸ ಆಡಳಿತ ಮಂಡಳಿ ವತಿಯಿಂದ ನಾಪೋಕ್ಲು ಮುಖ್ಯ ರಸ್ತೆ ಹಾಗೂ ಬೀದಿಗಳಲ್ಲಿ ಮಳೆಯನ್ನು ಲೆಕ್ಕಿಸದೆ ಸಂದೇಶ ಜಾಥ ನಡೆಯಿತು. ನಾಪೋಕ್ಲು ಮೊಹಿಯದ್ದೀನ್ ಜುಮ್ಮ ಮಸೀದಿ ಯಿಂದ ಪ್ರಾರಂಭಗೊಂಡ ಜಾಥಾ ಮುಖ್ಯ ರಸ್ತೆ ಮೂಲಕ ಪುಟಾಣಿ ಮಕ್ಕಳನ್ನು ಒಳಗೊಂಡಂತೆ ಯುವಕರಿಂದ ದಫ್ ಪ್ರದರ್ಶನ ನೀಡಲಾಯಿತು. ಜನಾಂಗ ಬಾಂಧವರು ಆಕರ್ಷಕ ಸಮವಸ್ತ್ರಗಳನ್ನು ಧರಿಸಿ ಗಮನ ಸೆಳೆದರು. ಮೆರವಣಿಗೆಯಲ್ಲಿ ಪ್ರವಾದಿಯವರ ಶಾಂತಿ,…
ಮಡಿಕೇರಿ ಸೆ.29 : ಬದ್ರಿಯ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು. ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ, ಬುರ್ಧಾ ಮಜಲೀಸ್ ಕಾರ್ಯಕ್ರಮವು ಮರ್ ಹೂಮ್ ಡಾ| ಕೆ. ಎಂ. ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ ನಡೆಯಿತು. ಸಮಾರಂಭವನ್ನು ಜುಮಾ ಮಸೀದಿಯ ಖತೀಬರಾದ ಅಲ್ ಹಾಜ್ ಇಸಾಕ್ ಬಾಖಾವಿ ಉದ್ಘಾಟಿಸಿ, ಈದ್ ಹಬ್ಬದ ಸಂದೇಶವನ್ನು ನೀಡಿದರು. ಅದ್ಯಕ್ಷತೆಯನ್ನು ಜಮಾತ್ ನ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ಮತ್ತು ಟ್ರೋಫಿಯನ್ನು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ನ ಗೌರವಾಧ್ಯಕ್ಷ ಹಾಗೂ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ವಿತರಿಸಿ, ಅರಂತೋಡಿನ ಯುವಕರ ಶಿಸ್ತಬದ್ದವಾದ ಸಂಘಟನೆ ಮತ್ತು ಕಾರ್ಯಕ್ರಮ…
ಮಡಿಕೇರಿ ಸೆ.29 : ಭಾಗಮಂಡಲ ಹೋಬಳಿ ಬಂಟರ ಘಟಕದ ಅಧ್ಯಕ್ಷರಾಗಿ ಬಿ.ಎಸ್.ರಾಜೇಶ್ ರೈ ಆಯ್ಕೆಯಾಗಿದ್ದಾರೆ. ಭಾಗಮಂಡಲದ ಹೋಟೆಲ್ ದುರ್ಗಾ ಭವನದಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಯಿತು. ಈ ಸಂದರ್ಭ ಹೋಬಳಿ ಘಟಕದ ಉಪಾಧ್ಯಕ್ಷ ಸದಾಶಿವ ರೈ, ಗೌರವ ಸಲಹೆಗಾರ ಬಿ.ಸಿ.ಹರೀಶ್ ರೈ, ಕಾರ್ಯದರ್ಶಿಗಳಾದ ವಿಠಲ ರೈ, ಬಿ.ಡಿ.ಭಾನು ಪ್ರಕಾಶ್ ರೈ, ಬಿ.ಎನ್.ಸಚಿನ್ ರೈ, ಬಿ.ಆರ್.ಸುಶೀಲ ರೈ, ಬಿ.ಕೆ.ರಾಜ ರೈ, ಬಿ.ಎಸ್.ಸೋನೇಶ್ ರೈ, ಬಿ.ಜಿ.ಬಿಂದಿಯ ರೈ, ಬಿ.ವಿ.ಅಶ್ವಥ್ ರೈ, ಭಾರತಿ ರೈ, ಬಿ.ಎಸ್. ಗೌರೀಶ್ ರೈ ಹಾಜರಿದ್ದರು.
ಮಡಿಕೇರಿ ಸೆ.28 : ಸೋಮವಾರಪೇಟೆ ಪಟ್ಟಣದಲ್ಲಿ ಸುಮಾರು 1.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿ 10 ವರ್ಷ ಕಳೆದರೂ ಪೂರ್ಣಗೊಂಡಿಲ್ಲವೆಂದು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟ ಬೇಸರ ವ್ಯಕ್ತಪಡಿಸಿದೆ. ಒಕ್ಕೂಟದ ಪ್ರಮುಖರು ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸುವಂತೆ ಒತ್ತಾಯಿಸಿದರು. ದಲಿತ ಹಿತರಕ್ಷಣಾ ಒಕ್ಕೂಟದ ಪರಿಶ್ರಮ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಕಾರದಿಂದ ಭವನದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ 10 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿ ಆಗಿಲ್ಲ. ಕಟ್ಟಡಕ್ಕೆ ಸುಣ್ಣಬಣ್ಣ ಬಳಿದಿಲ್ಲ, ಅಧಿಕೃತವಾಗಿ ಉದ್ಘಾಟನೆಗೊಂಡಿಲ್ಲ. ಇಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಅವಧಿ ಮುಗಿದಿದ್ದರೂ ಸ್ಥಳಾಂತರಿಸಿಲ್ಲ ಎಂದು ಪದಾಧಿಕಾರಿಗಳು ಆರೋಪಿಸಿದರು. ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಭವನವನ್ನು ಅಧಿಕೃತವಾಗಿ ನಮಗೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ, ಗೌರವಾಧ್ಯಕ್ಷ ಜಯಪ್ಪ ಹಾನಗಲ್ಲು, ಉಪಾಧ್ಯಕ್ಷರಾದ ಹೆಚ್.ಎಂ.ಸೋಮಪ್ಪ, ಎಂ.ಪಿ.ಹೊನ್ನಪ್ಪ…






