ಮಡಿಕೇರಿ ಏ.8 NEWS DESK : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಘದ ನೂತನ ಸದಸ್ಯತ್ವಕ್ಕೆ 800 ಹಾಗೂ ಕ್ಷೇಮನಿಧಿ ಸಮಿತಿಗೆ 200 ಸೇರಿದಂತೆ 1000 ರೂ ಹಾಗೂ ಸದಸ್ಯತ್ವ ನವೀಕರಣಕ್ಕೆ ರೂ 500 ಹಾಗೂ ಕ್ಷೇಮನಿಧಿ ಸಮಿತಿಗೆ 100 ಸೇರಿದಂತೆ 600 ರೂ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30, 2026 ಕೊನೆಯ ದಿನಾಂಕವಾಗಿದೆ. ಸ್ಥಳೀಯ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ ಮಟ್ಟದ ಪತ್ರಿಕೆ ಮತ್ತು ಮಾಧ್ಯಮಗಳು, ವಾರಪತ್ರಿಕೆ, ಪಾಕ್ಷಿಕಗಳು, ವೆಬ್ ನ್ಯೂಸ್ ಸೇರಿದಂತೆ ಅಧಿಕೃತ ಸುದ್ದಿಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಸಂಪಾದಕರು, ಸಂಪಾದಕರು, ಉಪ ಸಂಪಾದಕರು, ವರದಿಗಾರರು, ಬಿಡಿ ವರದಿಗಾರರು, ಛಾಯಾಚಿತ್ರಗಾರರು, ಕ್ಯಾಮೆರಾ ಮ್ಯಾನ್ ಗಳು ಹಾಗೂ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ಸಹಿಯೊಂದಿಗೆ ಎರಡು ಭಾವ ಚಿತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು ಅರ್ಜಿಗಳಿಗಾಗಿ 9449290718, 9844060174, 9901657211 ದೂರವಾಣಿಯನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಳ್ಳಬಹುದು ಎಂದು ಕೊಡಗು ಪತ್ರಕರ್ತರ…
ಲೇಖಕ: admin
ಮಡಿಕೇರಿ ಏ.8 NEWS DESK : ವಿರಾಜಪೇಟೆ ಸಮೀಪದ ಆರ್ಜಿ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ಹರ್ಷದ್ ಖಾನ್(25), ಮುಜಾಮಿಲ್ ಅಹಮ್ಮದ್(46), ಅಫ್ಸಲ್ ಪಾಷ(28) ಮತ್ತು ಸಾಕ್ಯೂಬ್(32) ಅವರೆ ಬಂಧಿತ ವ್ಯಕ್ತಿಗಳು,. ಇವರ ಬಳಿಯಿಂದ 576 ಗ್ರಾಂ ಗಾಂಜಾ ಮತ್ತು ಟೊಯೋಟಾ ಇಟಿಯೋಸ್ ಕಾರ್ನ್ನು ವಶಪಡಿಸಿಕೊಳ್ಳಲಾಗಿದೆ. ಆರ್ಜಿ ಗ್ರಾಮದ ಹೆಗ್ಗಳ ಜಂಕ್ಷನ್ನಲ್ಲಿ ಗಾಂಜಾ ಮಾರಾಟ, ಸರಬರಾಜಿನ ಬಗ್ಗೆ ದೊರೆತ ಸುಳಿವಿನ ಮೇರೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಮಾಲು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಏ.8 NEWS DESK : ಕೊಡಗಿನಲ್ಲಿ ಕಾಡಾನೆ ಉಪಟಳ ಮಿತಿ ಮೀರಿದ್ದು, ಇಂದು ಕಾಡಾನೆ ದಾಳಿಗೆ ಬೆಳೆಗಾರೊಬ್ಬರು ಬಲಿಯಾಗಿದ್ದಾರೆ. ಕಳೆದ ಮೂರೂವರೆ ತಿಂಗಳಿನಲ್ಲಿ ಕಾಡಾನೆಯಿಂದ 6 ಸಾವುಗಳು ಸಂಭವಿಸಿದ್ದು, ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕಾಯಿಮಾನಿ ಗ್ರಾಮದಲ್ಲಿ ಇಂದು ಮುಂಜಾನೆ ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು (54) ಎಂಬುವವರೇ ಸಾವನ್ನಪ್ಪಿರುವ ದುರ್ದೈವಿ. ರತ್ತು ಅವರು ಕಾಯಿಮಾನಿ-ಕುರ್ಚಿ ಗ್ರಾಮಗಳ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ತೆರಳುತ್ತಿದ್ದರು. ಈ ಸಂದರ್ಭ ಏಕಾಏಕಿ ಕಾಡಾನೆಯೊಂದು ಇವರ ಮೇಲೆ ದಾಳಿ ಮಾಡಿ ತುಳಿದಿದ್ದು, ಗಂಭೀರ ಸ್ವರೂಪದಲ್ಲಿ ಗಾಯಗೊಂಡ ರತ್ತು ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ವಿಭಾಗದಲ್ಲಿ 8 ರಿಂದ 10 ಕಾಡಾನೆಗಳು ಬೀಡುಬಿಟ್ಟಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ತೋಟಕ್ಕೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದಷ್ಟು…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.9ರಂದು ನಡೆಯುವ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕಡಗದಾಳು) ಮತ್ತು ಕನ್ನಂಡ, 10ಕ್ಕೆ ಮಂಡೀರ (ನೆಲಜಿ) ಮತ್ತು ಕೇಚೆಟ್ಟಿರ (ಬೇಗೂರು), 11ಕ್ಕೆ ಮೀದೇರಿರ ಮತ್ತು ಕಂಜಿತಂಡ, ಮಧ್ಯಾಹ್ನ 12ಕ್ಕೆ ಕೇತಿರ ಮತ್ತು ಕೋಳುಮಾಡಂಡ (ಅರ್ವತ್ತೊಕ್ಲು), 1ಕ್ಕೆ ನಡಿಕೇರಿಯಂಡ ಮತ್ತು ಚೊಟ್ಟಂಗಡ ಹಾಗೂ 2 ಗಂಟೆಗೆ ಕಾಂಡೇರ ಮತ್ತು ಮಂದನೆರವಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೇಂದಂಡ ಮತ್ತು ಮಾತಂಡ, 10ಕ್ಕೆ ಅಜ್ಜಿನಿಕಂಡ ಮತ್ತು ತೀತಮಾಡ (ಕುಂದ), 11ಕ್ಕೆ ತಡಿಯಂಗಡ ಮತ್ತು ಚೆರುವಾಳಂಡ (ಪಾಲೂರು), ಮಧ್ಯಾಹ್ನ 12ಕ್ಕೆ ಚಾಮೇರ ಮತ್ತು ಚೋನೀರ, 1ಕ್ಕೆ ನಾಳಿಯಂಡ ಮತ್ತು ಆಲೇಮಾಡ, 2ಕ್ಕೆ ಬಳ್ಳಿಮಾಡ ಮತ್ತು ಮಚ್ಚಮಾಡ ಹಾಗೂ 3 ಗಂಟೆಗೆ ಬಡುವಂಡ ಮತ್ತು ಅರಮಣಮಾಡ (ಬೆಸಗೂರು)
ಮಡಿಕೇರಿ ಏ.8 NEWS DESK : ಲೇಖಕ ಅಮ್ಮತ್ತಿಯ ಮೂಕೋಂಡ ನಿತಿನ್ ಕುಶಾಲಪ್ಪ ಅವರು ರಚಿಸಿರುವ ದಕ್ಷಿಣ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಜಾನಪದ ಕಥೆಗಳನ್ನು ಆಧರಿಸಿದ ನೂತನ ಇಂಗ್ಲೀಷ್ ಕೃತಿ “Folktales, Myths and Legends from the Deccan” ಇಂದು ಬಿಡುಗಡೆಗೊಂಡಿತು. ಮಡಿಕೇರಿಯಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದರ ಕಚೇರಿಯಲ್ಲಿ ಸಂಸದ ಯದುವೀರ್ ಒಡೆಯರ್ ಅವರು ಪುಸ್ತಕ ಬಿಡುಗಡೆಗೊಳಿಸಿ ಮತ್ತಷ್ಟು ಪುಸ್ತಕಗಳು ಸಾಹಿತ್ಯ ಲೋಕಕ್ಕೆ ದೊರೆಯಲಿ ಎಂದು ನಿತಿನ್ ಕುಶಾಲಪ್ಪ ಅವರಿಗೆ ಶುಭ ಹಾರೈಸಿದರು. “Folktales, Myths and Legends from the Deccan” ನಿತಿನ್ ಕುಶಾಲಪ್ಪ ಅವರು ರಚಿಸಿರುವ 10 ನೇ ಇಂಗ್ಲೀಷ್ ಕೃತಿಯಾಗಿದೆ. ಈ ಕೃತಿ ದಕ್ಷಿಣ ಭಾರತದ ಸಾಂಸ್ಕøತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಪರಿಚಯಿಸುವ ಅಪರೂಪದ ಪ್ರಯಾಣವಾಗಿದ್ದು, ದಕ್ಷಿಣ ಭಾರತದ ಐದು ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡು ಪ್ರದೇಶಗಳ 11 ಜನಪದ ಕಥೆಗಳ ಸಂಗ್ರಹವಿದೆ. ವಿವಿಧ ಪ್ರದೇಶಗಳಲ್ಲಿ…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.8ರಂದು ನಡೆದ ಪಂದ್ಯಾವಳಿಯಲ್ಲಿ ಮೈದಾನ 2 ಗೆಲುವು ಸಾಧಿಸಿದ ತಂಡಗಳು. *ಮೈದಾನ 2* ಬೋಳಕಾರಂಡ (ಕೊಣಂಜಗೇರಿ) ಮತ್ತು ಬಾಳೆಕುಟ್ಟೀರ ನಡುವಿನ ಪಂದ್ಯದಲ್ಲಿ ಬೋಳಕಾರಂಡ 39 ರನ್ಗಳ ಜಯ ಸಾಧಿಸಿತು. ಬೋಳಕಾರಂಡ 6 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 97 ರನ್ ಗಳನ್ನು ಮತ್ತು ಬಾಳೆಕುಟ್ಟೀರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿತು ಚೀಯಂಡಿರ ಮತ್ತು ಅಳಮೇಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಅಳಮೇಂಗಡ 50 ರನ್ ಗಳಿಂದ ಗೆಲುವು ಸಾಧಿಸಿತು. ಅಳಮೇಂಗಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಮತ್ತು ಚೀಯಂಡಿರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 30 ರನ್ ಗಳನ್ನು ಸೇರಿಸಿತು. ಆದೇಂಗಡ ಮತ್ತು ಬೊಳ್ಳನಮಂಡ ನಡುವಿನ ಹಣಾಹಣಿಯಲ್ಲಿ ಆದೇಂಗಡ 7 ವಿಕೆಟ್…
ಮಡಿಕೇರಿ ಏ.8 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.8ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಕುಂಜಿರ ಮತ್ತು ಅಪ್ಪಾರಂಡ ತಂಡಗಳ ನಡುವಿನ ಪಂದ್ಯದಲ್ಲಿ ಕುಂಜಿರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಪ್ಪಾರಂಡ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕುಂಜಿರ ತಂಡ 3.4 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 66 ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಕುಟ್ಟಂಡ (ಕಾರ್ಮಾಡು) ಮತ್ತು ಬಾಚಿನಾಡಂಡ ನಡುವಿನ ಪಂದ್ಯದಲ್ಲಿ ಬಾಚಿನಾಡಂಡ 9 ವಿಕೆಟ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಟ್ಟಂಡ 6 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 99 ರನ್ ಗಳನ್ನು ಗಳಿಸಿತು. ಬಾಚಿನಾಡಂಡ ತಂಡ 5.4 ಓವರ್ಗಳಲ್ಲಿ 1…
ಮಡಿಕೇರಿ, NEWS DESK ಏ.8 : ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ 2.0 ಯೋಜನೆಯನ್ನು 2028 ನೇ ಸಾಲಿನ ವರೆಗೂ ವಿಸ್ತರಿಸುವ ಹಿನ್ನೆಲೆ ಯೋಜನೆಯ ಪ್ರಗತಿ ಮತ್ತು ಪರಿಣಾಮಕಾರಿ ಅನುಷ್ಠಾನ ಕುರಿತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಜೊತೆಗೆ ಜಲ ಮಹೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಆ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದರು ಸೂಚಿಸಿದರು. ಕೇಂದ್ರ ಪುರಸ್ಕೃತ ಜಲ ಜೀವನ್ ಮಿಷನ್ 2.0 ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಲೋಪ ಉಂಟಾಗದAತೆ ಎಚ್ಚರ ವಹಿಸುವಂತೆ ಸಂಸದರು ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರ, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂಬ ಉದ್ದೇಶದದಿಂದ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು…
ಮಡಿಕೇರಿ NEWS DESK ಏ.8 : ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯ ತಂಡಿಯoಡಮೋಳ್ ಬೆಟ್ಟದಲ್ಲಿ ಚಾರಣಕ್ಕೆಂದು ತೆರಳಿ ಮೂರು ದಿನಗಳ ನಂತರ ಪತ್ತೆಯಾದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಟ್ಟ ಅರಣ್ಯದಿಂದ ಕೂಡಿರುವ ಬೆಟ್ಟದಲ್ಲಿ ಚಾರಣಕ್ಕೆಂದು ಏಕಾಂಗಿಯಾಗಿ ಬಂದ ಜಿ.ಎಸ್.ಶರಣ್ಯ ಅವರ ನಡೆಯ ಬಗ್ಗೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳು ವ್ಯಕ್ತವಾಗಿದೆ. ಚಾರಣಕ್ಕೆಂದು ತೆರಳಿ ದಾರಿ ತಪ್ಪಿದ ನೆಪವೊಡ್ಡಿ ನಾಪತ್ತೆಯಾಗಿದ್ದ ಆಕೆ ಯಾವುದೇ ಆತಂಕವಿಲ್ಲದೆ ಮೂರು ದಿನಗಳ ನಂತರ ಪತ್ತೆಯಾಗಿದ್ದು, ಪ್ರಕರಣದ ಹಿಂದೆ ದುರುದ್ದೇಶವಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೂರು ದಿನಗಳ ಕಾಲ ಕೇವಲ ನೀರಿನಿಂದ ಜೀವಿಸಿದ್ದೆ ಎಂದು ಹೇಳಿಕೆ ನೀಡಿರುವ ಶರಣ್ಯ, ಯಾವುದೇ ಆಯಾಸವಿಲ್ಲದೆ ಮರಳಿರುವುದು ವೈದ್ಯಕೀಯ ಕ್ಷೇತ್ರದಲ್ಲೂ ಸಂಶಯವನ್ನು ಹುಟ್ಟು ಹಾಕಿದೆ. ಎಲ್ಲಾ ಸಂಶಯಗಳಿಗೂ ಉನ್ನತ ಮಟ್ಟದ ತನಿಖೆ ಉತ್ತರ…
ಬೆಂಗಳೂರು, NEWS DESK ಏ.08: ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ. ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ. ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ…






