ಕುಶಾಲನಗರ ಸೆ.26 : ವಚನಕಾರರ ವ್ಯಕ್ತಿತ್ವ, ಸಾಧನೆ ಹಾಗೂ ಅವರು ಎತ್ತಿ ಹಿಡಿದ ಜೀವನ ಮೌಲ್ಯಗಳ ಘನತೆ ಇಂದಿನ ಯುವ ಸಮುದಾಯಕ್ಕೆ ಪ್ರೇರಣೆಯಾಗಬೇಕಿದೆ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರರು ಹಾಗೂ ದಂಡಾಧಿಕಾರಿ ಕಿರಣ್ ಗೌರಯ್ಯ ಹೇಳಿದರು. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚಿಂತನಾ ಸಭಾಂಗಣದಲ್ಲಿ ಕಾಲೇಜಿನ ಆಂತರಿಕ ಗುಣ ಮಟ್ಟ ಭರವಸಾ ಕೋಶ, ಕನ್ನಡ ವಿಭಾಗ ಹಾಗೂ ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ” ವಿದ್ಯಾರ್ಥಿಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಚಿಂತನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿ ದಾಸ್ಯ ಸಂಕೋಲೆಯಲ್ಲಿದ್ದ ಜನಸಾಮಾನ್ಯರ ಬದುಕಿಗೆ ಬೆಳಕು ನೀಡಿದ ವಚನಕಾರರ ಆದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ಅರಿಯಬೇಕಿದೆ. ಆ ಮೂಲಕ ಸಮಸಮಾಜವನ್ನು ಕಟ್ಟಲು ಕಂಕಣಬದ್ಧರಾಗಬೇಕೆಂದು ಕರೆಕೊಟ್ಟರು. ವಿಶೇಷ ಉಪನ್ಯಾಸ ನೀಡಿದ ಕೊಡಗು ವಿಶ್ವ ವಿದ್ಯಾಲಯದ ಉಪನ್ಯಾಸಕ ಡಾ.ಜಮೀರ್ ಅಹಮದ್, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇತ್ತೀಚೆಗಷ್ಟೆ ಘೋಷಿಸಿದ ಮಹಿಳೆಯರ ಮೀಸಲಾತಿಯ ಪ್ರಸ್ತಾಪ ಹನ್ನೆರಡನೇ ಶತಮಾನದಲ್ಲಿ ಬಸವಾದಿ…
ಲೇಖಕ: admin
ಮಡಿಕೇರಿ ಸೆ.26 : ಭಾರತೀಯ ಜನತಾ ಪಾರ್ಟಿ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಅವರ 107 ನೇ ಜನ್ಮದಿನವನ್ನು ಮೇಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀನ್ ದಯಾಳ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತನ್ನ ಇಡೀ ಜೀವನವನ್ನೇ ಸಮಾಜಕ್ಕಾಗಿ ಸಮರ್ಪಿಸಿದ ಜನಸಂಘದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದರು. ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಡಿಕೇರಿ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ , ಬಿಜೆಪಿ ಶಕ್ತಿಕೇಂದ್ರದ ಸಂಚಾಲಕ ಚೋಂಡಿರ ಕಿರಣ್ , ಬೂತ್ ಸಮಿತಿ ಅಧ್ಯಕ್ಷ ವಿಜು ಹರೀಶ್ , ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಪ್ರಮುಖರಾದ ಟಿ.ಎನ್.ಉಮೇಶ್, ಜಿತಿನ್, ಗ್ರಾ.ಪಂ ಮಾಜಿ ಸದಸ್ಯರಾದ ಅನುಸೂಯ ಸೇರಿದಂತೆ ಇನ್ನಿತರ ಪ್ರಮುಖರು…
ಕುಶಾಲನಗರ ಸೆ.26 : ಕುಶಾಲನಗರದ ಕೊಡಗು ಹೆಗ್ಗಡೆ ಸಮಾಜ ವಾರ್ಷಿಕ ಮಹಾಸಭೆಯು ಹಾರಂಗಿಯ ಸಮಾಜದ ನಿವೇಶನದಲ್ಲಿ ಸಭೆ ನಡೆಯಿತು. ಸಮಾಜದ ಅಧ್ಯಕ್ಷ ಚಂಗಚಂಡ ನಂಜಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಮಹಾಸಭೆಯೊಳಗೆ ಅರ್ಧ ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಾಗ ಖರೀದಿಸಿ ಮುಂಬರುವ ವರ್ಷಗಳಲ್ಲಿ ಸುಸಜ್ಜಿತ ಕಟ್ಟಡವನ್ನು ಸರ್ಕಾರ ಮತ್ತು ದಾನಿಗಳ ನೆರವಿನಿಂದ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ನಂತರ ಕೈಲ್ ಪೋಳ್ದ್ ಒತ್ತೊರ್ಮೆ ಕೂಟ ನಡೆಯಿತು. ಈ ಸಂದರ್ಭ ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪಡಿಞರಂಡ ಪ್ರಭು ಕುಮಾರ್, ಕೊಡಗಿನಲ್ಲಿ ಹನ್ನೆರಡನೇ ಶತಮಾನಕ್ಕೂ ಮೊದಲು ಕೊಡಗು ಹೆಗ್ಗಡೆ ಜನಾಂಗದವರು ಕೊಡಗಿಗೆ ಬಂದು ನೆಲೆಸಿದವರಾಗಿದ್ದಾರೆಂದು ಹೊಯ್ಸಳರ ಕಾಲದಲ್ಲಿ ಕೊಡಗಿನ ರಾಜರ ಜೊತೆ ಯುದ್ಧಕ್ಕಾಗಿ ಬಂದು ವೀರರು ಯುದ್ದದಲ್ಲಿ ಸೋತು ಮತ್ತೆ ಊರಿಗೆ ಮರಳದೆ ಇಲ್ಲೇ ನೆಲೆ ನಿಂತು ಲಿಂಗಾಯತ ರಾಜರ ಆಳ್ವಿಕೆಯಲ್ಲಿ ಸೈನ್ಯಕ್ಕೆ ಸೇರಿದವರು ಕೆಲವರಾದರೆ, ಕೆಲವರು ಕೃಷಿಕರಾದರೆಂದು ನಂಬಲಾಗಿದೆ. ಹಾಲೇರಿ ಅರಸರ ಕಾಲದಲ್ಲಿ ಜಮ್ಮ ಜಾಹಗೀರು ಕೊಡಲ್ಪಟ್ಟಿತು. ಅಲ್ಲದೆ ಅರಸರ…
ಮಡಿಕೇರಿ ಜೂ.26 : ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ವಿರಾಜಪೇಟೆಯಲ್ಲಿ ಹುತಾತ್ಮರಾದ ಮಾಜಿ ಸೈನಿಕರಿಗೆ ಮತ್ತ ದೇಶ ಸೇವೆ ಸಂದರ್ಭ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿರಾಜಪೇಟೆಯ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ, ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ಮಾಜಿ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಲ್ ಮಂಡೆಟಿರ ಅವಿನ್ ಉತ್ತಯ್ಯ (ಸೇನಾ ಮೆಡಲ್), ಕರ್ನಲ್ ಮಾಚಿಮಂಡ ಡಿ.ಮುತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ತಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಹೆಚ್.ಎನ್.ರಾಮಚಂದ್ರ, ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ಪ.ಪಂ ಮುಖ್ಯಾಧಿಕಾರಿ ಚಂದ್ರಕುಮಾರ್, ಕೊಂಗಂಡ ಬೋಜಣ್ಣ ಹಾಗೂ ಸಂಘದ ಉಪಾಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಕಾರ್ಯದರ್ಶಿ ಪುಗ್ಗೇರ ಎಸ್.ನಂದ, ಖಜಾಂಚಿ ತೋರೆರ ಪೂವಯ್ಯ, ಕಾನೂನು ಸಲಹೆಗಾರ ಚೇಂದ್ರಿಮಾಡ ಕೆ.ನಂಜಪ್ಪ…
ಮಡಿಕೇರಿ ಸೆ.26 : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2023-24 ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳು ಬ್ಯಾಕ್ಯಾರ್ಡ್ ಮಿನಿ ಆರ್ ಎಸ್ ಘಟಕಗಳ ಸ್ಫಾಪನೆ ಮತ್ತು ಹಿತ್ತಲು ಅಲಂಕಾರಿಕಾ ಮೀನು ಸಾಕಾಣಿಕೆ ಘಟಕ(ಒಳನಾಡು). ಈ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಜಿಲ್ಲೆಯ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಸೆ.26 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಭಾಗಣ (ಜೂನಿಯರ್ ಕಾಲೇಜು) ಅ.1 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದ್ದು, ಕೊಡಗು ಜಿಲ್ಲೆಯ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಸೆ.25 : ಇದೇ ಅಕ್ಟೋಬರ್, 17 ರಂದು ಮಧ್ಯರಾತ್ರಿ (1.27 ಗಂಟೆಗೆ) ಕಾವೇರಿ ತುಲಾಸಂಕ್ರಮಣ ತೀರ್ಥೋದ್ಭವ ಸಂಭವಿಸಲಿದ್ದು, ಕಳೆದ ಬಾರಿಯಂತೆ ಕಾವೇರಿ ತುಲಾ ಸಂಕ್ರಮಣಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ನಗರದ ಜಿಲ್ಲಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಶಾಸಕರ ನೇತೃತ್ವದಲ್ಲಿ ಭಾಗಮಂಡಲದಲ್ಲಿ ಮತ್ತೊಂದು ಪೂರ್ವಭಾವಿ ಸಭೆ ನಡೆಯಲಿದೆ. ತಲಕಾವೇರಿ ಜಾತ್ರೆ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೋರಿದರು. ತಲಕಾವೇರಿಗೆ ತೆರಳುವ ಭಕ್ತಾಧಿಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುವುದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ರಸ್ತೆ ಬದಿ ಗಿಡಗಳನ್ನು ಕಡಿಯುವುದು, ಕುಡಿಯುವ ನೀರು ಕಲ್ಪಿಸುವುದು, ಶೌಚಾಲಯ ವ್ಯವಸ್ಥೆ ಮಾಡುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಆರೋಗ್ಯ ಸೇವೆ ಕಲ್ಪಿಸುವುದು ಹೀಗೆ ಹಲವು ಕಾರ್ಯಗಳನ್ನು ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಿರ್ದೇಶನ ನೀಡಿದರು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು. ರಸ್ತೆ ಬದಿ ಅಲ್ಲಲ್ಲಿ ನಾಮಫಲಕಗಳನ್ನು…
ಮಡಿಕೇರಿ ಸೆ.25 : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾಗೆ ಯಾವುದೇ ರೀತಿ ತೊಂದರೆಯಾಗದಂತೆ ದಸರಾ ಆಚರಣೆಗೆ ಹಣ ಬಿಡುಗಡೆ ಮಾಡಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂಬಂಧಿಸಿದಂತೆ ಸೋಮವಾರ ಪ್ರತ್ಯೇಕವಾಗಿ ಸಭೆ ನಡೆಸಿ ಸಚಿವರು ಮಾತನಾಡಿದರು. ಅನೇಕ ದಶಕಗಳಿಂದ ಮಡಿಕೇರಿ ದಸರಾ ಆಚರಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ನಗರ/ಪಟ್ಟಣಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಮತ್ತಿತರ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಚಿವರು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರಸಭೆ ಪೌರಾಯುಕ್ತರಿಗೆ ಹಣ ಬಿಡುಗಡೆ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾವನ್ನು ಸಾಂಪ್ರದಾಯಿಕ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಯಾವುದೇ ರೀತಿಯ…
ಮಡಿಕೇರಿ ಸೆ.25 : ಜನತಾ ದರ್ಶನದ ಮೂಲಕ ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ವಿನೂತನ ಪ್ರಯತ್ನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಚಾಲನೆ ನೀಡಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಇಲಾಖೆಗಳ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಮಳಿಗೆಯನ್ನು ಸಚಿವರು ಮತ್ತು ಶಾಸಕರು ವೀಕ್ಷಿಸಿದರು. ಜನತಾ ದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ ಸುಮಾರು 170 ಕ್ಕೂ ಹೆಚ್ಚು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವರು ಪರಿಹರಿಸಿದರು. ಜನತಾ ದರ್ಶನ ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜನರ ಬಳಿಗೆ ಸರ್ಕಾರದ ಆಡಳಿತ ಖುದ್ದು ಭೇಟಿ ಮಾಡಿ, ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂಬ ಉದ್ದೇಶದಿಂದ ಜನತಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಅವರು ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.…
ಮಡಿಕೇರಿ ಸೆ.25 : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ತಿನ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ಸಂತೋಷ ಕೂಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಅವರು ನಾಪೋಕ್ಲು ಎಂದರೆ ನನಗೆ ರೋಮಾಂಚನವಾಗುತ್ತದೆ, ಈ ಸುಂದರವಾದ ಊರು ನಾನು ಓದಿದ ಊರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆೆ ಎಂದು ತಮ್ಮ ಗುರುಗಳನ್ನ ನೆನೆದು ಭಾವುಕರಾದರು. “ಪೊಮ್ಮಕ್ಕಡ ಬೊಳ್ಚೆಲ್ ಒಡಿಯಂಡ ಮಹತ್ವ” ಎನ್ನುವ ವಿಷಯದಲ್ಲಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ವಿಚಾರ ಮಂಡನೆ ಮಾಡಿದರು. ಪೊಮ್ಮಕ್ಕಡ ಪರಿಷತ್ತಿನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಡ ಸಿ.ನಾಣಯ್ಯಾ, ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಮೆಡಿಕಲ್ ಕಾಲೇಜು ನಿವೃತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಪರಿಷತಿನ ಖಜಾಂಚಿ ಮೂವೆರ ಧರಣಿ ಗಣಪತಿ, ಉಪಾಧ್ಯಕ್ಷರಾದ ಮಳುವಂಡ ಪೂವಿ ಮುತ್ತಪ್ಪ ಸೇರಿದಂತೆ ಪರಿಷತ್ತಿನ ನಿರ್ದೇಶಕರು ಉಪಸ್ಥಿತರಿದ್ದರು. ಆಶುಭಾಷಣ ಮತ್ತು…






