ಮಡಿಕೇರಿ ಆ.27: ಅರಣ್ಯ, ಪ್ರಕೃತಿ, ಪರಿಸರ ಉಳಿಯಬೇಕು. ಜೊತೆಗೆ ಜೀವನ, ಜೀವನೋಪಾಯವೂ ಇರಬೇಕು. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಜನಸ್ನೇಹಿಯಾಗಿ ಮತ್ತು ಜನ ಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಕಳೆದ 15 ದಿನಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಆನೆಗಳ ದಾಳಿಯಿಂದ ಮೂರು ಅಮೂಲ್ಯ ಜೀವಗಳು ಹೋಗಿವೆ. ಇದು ಅತ್ಯಂತ ನೋವಿನ ಸಂಗತಿ. ಈ ಹಿನ್ನೆಲೆಯಲ್ಲಿ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ಖುದ್ದು ತಿಳಿಯಲು ಜಿಲ್ಲೆಗೆ ಬಂದಿರುವುದಾಗಿ ತಿಳಿಸಿದರು. ಇಂದು ತಾವು ಹಿರಿಯ ಅಧಿಕಾರಿಗಳೊಂದಿಗೆ ಆನೆ ದಾಳಿಯಿಂದ ಸಾವುಗಳು ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿ, ಆನೆ ದಾಳಿಯಿಂದ ಮೃತಪಟ್ಟ ಇಬ್ಬರ ಮನೆಗೆ ತೆರಳಿ ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿರುವುದಾಗಿ ತಿಳಿಸಿದ ಅವರು, ನಾವು ಮೃತರ ಕುಟುಂಬಕ್ಕೆ ಪರಿಹಾರದ ಹಣ ಕೊಡಬಹುದು, ಆದರೆ ಅಮೂಲ್ಯ ಜೀವ ಮರಳಿ ತಂದುಕೊಡಲು…
ಲೇಖಕ: admin
ಮಡಿಕೇರಿ ಆ.27 : ಹುಲಿ ದಾಳಿಗೆ ಸಿಲುಕಿ ಕರುವೊಂದು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕೋತೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಗಣೇಶ್ ಎಂಬುವವರಿಗೆ ಸೇರಿದ ಕರು ಇದಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದೆ. ಸ್ಥಳಕ್ಕೆ ನಾಗರಹೊಳೆ ವಲಯ ಅರಣ್ಯ ಅಧಿಕಾರಿಗಳು ಹಾಗೂ ಪೊನ್ನಂಪೇಟೆ ವಲಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ಚಲನವಲನದ ಮೇಲೆ ನಿಗಾ ವಹಿಸಲು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಮಡಿಕೇರಿ ಆ.27 : ದೈವಾರಾಧನೆಯಲ್ಲಿ ಲೋಪವಾಗದಂತೆ ಎಲ್ಲರೂ ಎಚ್ಚರ ವಹಿಸಬೇಕು ಮತ್ತು ದೈವಗಳ ಭಾವಚಿತ್ರಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಅಭಿಪ್ರಾಯಗಳನ್ನು ಹರಿಯ ಬಿಡಬಾರದು ಎಂದು ಪ್ರಸಿದ್ಧ ದೈವ ನರ್ತಕ ಸುಳ್ಯದ ಬೊಳಿಮಜಲಿನ ಜಯರಾಮ್ ತಿಳಿಸಿದ್ದಾರೆ. ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮೊಬೈಲ್ ನಲ್ಲಿ ದೈವದ ಫೋಟೋ ತೆಗೆದು ಕಮೆಂಟ್ ಮಾಡುವುದರಿಂದ ದೈವಕ್ಕೆ ಅಪಚಾರ ಮಾಡಿದಂತಾಗುತ್ತದೆ. ಇದರಿಂದ ತಲೆಮಾರಿನವರೆಗೂ ದೋಷ ಕಾಡಬಹುದು ಎಂದು ಎಚ್ಚರಿಕೆ ನೀಡಿದರು. ದೈವಾರಾಧನೆಯು ಆಯಾ ಪ್ರದೇಶಕ್ಕೆ ತಕ್ಕಂತೆ ವಿಭಿನ್ನ ರೀತಿಯಲ್ಲಿ ನಡೆಯುತ್ತದೆ. ತುಳುನಾಡಿನಲ್ಲಿ ದೈವ ನರ್ತನ ಎರಡೂವರೆ ಗಂಟೆ ನಡೆದರೆ ಕೊಡಗಿನಲ್ಲಿ ಪ್ರಶ್ನೆ ಚಿಂತನೆಯ ಕ್ರಮ ಸೇರಿ ರಾತ್ರಿ ಪೂರ್ತಿ ನಡೆಯುತ್ತದೆ. ಸಂಪ್ರದಾಯಕ್ಕೆ ಲೋಪವಾಗದಂತೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ದೈವದ ಆರಾಧನೆ ನಿರ್ಧರಿಸುವ ಬಡ ವರ್ಗದವರಿಗೆ ಆರ್ಥಿಕ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಸಂಘಟನೆ ಮೂಲಕ ದರ ನಿಗದಿ ಮಾಡುವ…
ಕೂಡಿಗೆ/ಕುಶಾಲನಗರ ಆ. 27 : ಕುಶಾಲನಗರ ತಾಲ್ಲೂಕಿನ ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೂಡಿಗೆ ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ವತಿಯಿಂದ ಶನಿವಾರ ( ಆ.26 ರಂದು ) ಏರ್ಪಡಿಸಿದ್ದ ಶಿಕ್ಷಕರ ಸಮ್ಮಿಲನ ಕಾರ್ಯಕ್ರಮದಲ್ಲಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಲ್ಲಿ ನಿವೃತ್ತಗೊಂಡ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು. ಇದೇ ವೇಳೆ ವರ್ಗಾವಣೆಯಿಂದ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಂದ ಬೇರೆ ಶಾಲೆಗಳಿಗೆ ತೆರಳಿದ ಶಿಕ್ಷಕರಿಗೆ ಬೀಳ್ಕೊಟ್ಟು, ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳಿಗೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಇಂತಹ ಕಾರ್ಯಕ್ರಮವು ಶಿಕ್ಷಕರಲ್ಲಿ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವುದರೊಂದಿಗೆ ಶೈಕ್ಷಣಿಕ ಚಿಂತನೆಗೆ ಕ್ರಿಯಾಶೀಲ ಮತ್ತು ಪ್ರೇರೇಪಣೆ ನೀಡುತ್ತದೆ. ಮುಂದಿನ ದಿನಗಳಲ್ಲಿ ಕೂಡ ಇನ್ನಷ್ಟು ಶೈಕ್ಷಣಿಕ ಚಟುವಟಿಕೆಗಳನ್ನು ಸಂಘಟಿಸುವ ಮೂಲಕ ಮಕ್ಕಳ ಕಲಿಕೆಗೆ ಪ್ರೇರೇಪಣೆ ನೀಡಲು ಶ್ರಮಿಸೋಣ ಎಂದರು. ಶಿಕ್ಷಕರಾದ ನಾವು ಮಕ್ಕಳಲ್ಲಿ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಅವರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಪ್ರಶ್ನಿಸುವ ಮನೋಭಾವ ಬೆಳೆಸಬೇಕು…
ಮಡಿಕೇರಿ ಆ.27 : ಸಂಘದ ಸದಸ್ಯರಲ್ಲದ ವ್ಯಕ್ತಿಗಳಿಗೆ ಆಟೋ ಚಲಾಯಿಸಲು ಅವಕಾಶ ನೀಡುವುದಿಲ್ಲ ಎಂದು ಆಟೋ ಮಾಲೀಕ, ಚಾಲಕರ ಸಂಘ ಮತ್ತು ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ನೀಡಿರುವ ಹೇಳಿಕೆ ಚಾಲಕರ ಜೀವನದ ಹಕ್ಕಿಗೆ ವಿರುದ್ಧವಾಗಿದೆ ಎಂದು ಮಡಿಕೇರಿ ನಗರದ ಜಾಗೃತ ಆಟೋ ಚಾಲಕರ ಬಳಗದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಗದ ಸದಸ್ಯರಾದ ಎಂ.ಬಿ.ದುರ್ಗೆಶ್, ವೇಣು, ಹರ್ಷಿತ್, ಪ್ರಸಾದ್ ಸೇರಿದಂತೆ 30ಕ್ಕೂ ಹೆಚ್ಚು ಆಟೋ ಚಾಲಕರು ಆಟೋ ಮಾಲೀಕ, ಚಾಲಕರ ಸಂಘ ಹಾಗೂ ಸಂಚಾರಿ ಠಾಣಾಧಿಕಾರಿ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿ ಈ ಕುರಿತು ಚರ್ಚಿಸಿದರು. ಸಂಘದ ಸದಸ್ಯತ್ವ ಖಡ್ಡಾಯವಾಗಿ ಪಡೆದಿರಬೇಕು ಎಂದು ಪೊಲೀಸ್ ಇಲಾಖೆ ಅಥವಾ ಸಾರಿಗೆ ಇಲಾಖೆ ನಿರ್ಣಯ ಮಾಡಿದರೆ ನಾವು ಒಪ್ಪುತ್ತೇವೆ. ಆದರೆ ಸಂಘದ ಪದಾಧಿಕಾರಿಗಳು ಕಾನೂನಿಗೆ ವಿರುದ್ಧವಾಗಿ ನಿಯಮ ರೂಪಿಸಿದರೆ ಕಾನೂನು ಸಮರ ನಡೆಸುತ್ತೇವೆ ಎಂದು ಸದಸ್ಯರು ಹೇಳಿದರು. ಈಗಾಗಲೇ ಚಾಲಕರು ಅಧಿಕೃತ ಚಾಲನಾ ಪರವಾನಗಿ, ವಾಹನಗಳ ದಾಖಲಾತಿ ಹೊಂದಿಕೊಂಡು ಪೊಲೀಸ್…
ಮಡಿಕೇರಿ ಆ.26 : ಬ್ರಹ್ಮಕುಮಾರೀಸ್ ಸಂಸ್ಥೆಯ ಪೂರ್ವ ಆಡಳಿತ ಅಧಿಕಾರಿ ದಾದಿ ಪ್ರಕಾಶಮಣಿ ಅವರ 16ನೇ ಪುಣ್ಯ ಸ್ಮೃತಿಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಚೆ ಚೀಟಿ ಬಿಡುಗಡೆ ಮಾಡಿದರು. ದಾದಿಜೀ ಅವರು, 47 ವರ್ಷಗಳ ಕಾಲ ಬ್ರಹ್ಮಕುಮಾರಿ ಸಂಸ್ಥೆಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. 15ನೇ ವಯಸ್ಸಿಗೆ ತಮ್ಮನ್ನು ಸಮರ್ಪಿಸಿಕೊಂಡ ದಾದಿಜೀ ವಿಶ್ವದಾದ್ಯಂತ ಸಂಚರಿಸಿ ಕೋಟ್ಯಾಂತರ ಜನರಿಗೆ ಆಧ್ಯಾತ್ಮ ಮಾರ್ಗದ ಪ್ರೇರಣೆ ನೀಡಿದರು. ಸಂಸ್ಥೆಯನ್ನು ವಿಶ್ವಮಟ್ಟದಲ್ಲಿ ಬೆಳೆಸಿ ವಿಶ್ವ ಮಾತೆಯಾದರು. 1980 ರಲ್ಲಿ ಕೊಡಗಿಗೆ ಭೇಟಿ ನೀಡಿ ಇಲ್ಲಿಯ ಜನತೆಗೂ ಆಧ್ಯಾತ್ಮ ಪ್ರೇರಣೆ ನೀಡಿದರು. ಅಂದಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅರವರೊಂದಿಗೆ ಕೊನೆಯವರೆಗೂ ಉತ್ತಮ ಒಡನಾಟವಿದ್ದು, ಅವರಿಗೆ ರಾಜಯೋಗದ ಅನುಭೂತಿ ಮಾಡಿಸಿ ಅಂದು ನಡೆದ ವಿಶ್ವಶಾಂತಿಯ ಸಮ್ಮೇಳನದ ಉದ್ಘಾಟಕರಾಗಿ ಕಾರ್ಯಪ್ಪ ಅವರು ಭಾಗವಹಿಸಿದ್ದರು. ಇಂದು ಅವರ ಪುಣ್ಯ ಸ್ಮರಣೆಯನ್ನು ಲೈಟ್ ಹೌಸ್ ಸಭಾಂಗಣದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು ಜಿಲ್ಲೆಯ ಎಲ್ಲಾ ಸೇವಾಕೇಂದ್ರಗಳಲ್ಲಿ ವಿಶೇಷ ಧ್ಯಾನದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಡಿಕೇರಿ ಆ.29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆಯಲ್ಲಿ ಆಜಾದಿಕ ಅಮೃತ ಮಹೋತ್ಸವದ ಅಂಗವಾಗಿ “ಮೇರಾ ಮಾಟಿ ಮೇರ ದೇಶ್” ಎಂಬ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಆದೇಶದಂತೆ ಎಲ್ಲಾ ಜಿಲ್ಲೆಗಳಿಂದ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಮಣ್ಣನ್ನು ಪೂಜಿಸಿ ಕಳಸಕ್ಕೆ ತುಂಬಿಸಿ ಜಿಲ್ಲಾ ಸಂಸ್ಥೆಗೆ ಕಳುಹಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ನಂದಿನೆರವಂಡ ಸುಮಿತ್ರ, ಶಾಲಾ ಆಡಳಿತ ಮುಖ್ಯಸ್ಥ ರವಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ, ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಅಜ್ಜಮಕ್ಕಡ ವಿನುಕುಮಾರ್, ಸ್ಕೌಟ್ ಮಾಸ್ಟರ್ ಕುಟ್ಟಪ್ಪ, ಗೈಡ್ ಕ್ಯಾಪ್ಟನ್ ಬಿಂದು, ಗೈಡ್ ಕ್ಯಾಪ್ಟನ್ ಗಾಯನ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿರಾಜಪೇಟೆ ಆ.26 : ಬೆಂಗಳೂರಿನ ವಿಶ್ವ ಕಲಾ ಸಂಸ್ಥೆ ವತಿಯಿಂದ ಹೆಬ್ಬಾಳದ ಅಲುಮ್ನಿ ಅಸೋಷಿಯೇಷನ್ ಸಭಾಂಗಣದಲ್ಲಿ ನಡೆದ ಪ್ರಥಮ ವಿಶ್ವ ಕನ್ನಡ ಕಲಾ ಸಮ್ಮೇಳನ, ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ, ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರಿಗೆ ವಿಶ್ವ ಕಲಾ ಶ್ರೀ ಲೋಕೇಶ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದೇ ಸಂದರ್ಭ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಾದ ಟಿಯಾನ, ಭುವನ, ಚಿನ್ಮಯ್, ತಾನ್ಸಿ ತಂಗಮ್ಮ, ನೌಶಿದ, ವರ್ಷಿತ, ಶ್ರಿದೇವಿ, ಲಕ್ಷ, ಲಾವಣ್ಯ, ತೇಜಸ್ವಿನಿ, ಶಿವಾನಿ, ಶ್ರೇಯಾ ಸೋಮಣ್ಣ ಅವರುಗಳನ್ನು ನೃತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ವಿರಾಜಪೇಟೆ ಆ.26 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿ.ಸಿ ಟ್ರಸ್ಟ್ ಹಾಗೂ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ದೇವಣಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಹಿಳಾ ಸ್ವ ಉದ್ಯೋಗ ಪ್ರೇರಣಾ ಶಿಬಿರ ನಡೆಯುತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಿ.ಸಿ ಟ್ರಸ್ಟ್ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸ್ವಾವಲಂಬನೆ ಇಂದಿನ ಅನಿವಾರ್ಯತೆಯಾಗಿದೆ. ಮಹಿಳೆಯರು ತನ್ನ ಗಂಡ ಹಾಗೂ ಮಕ್ಕಳ ದುಡಿಮೆಯನ್ನು ನೆಚ್ಚಿಕೊಂಡು ಬದುಕು ಸಾಗಿಸುವ ಕಾಲ ಕಳೆದು ಹೋಗುತ್ತಿದೆ. ವಿವಿಧ ಕೌಶಲ್ಯಗಳನ್ನು ತನ್ನಲ್ಲಿ ಮೈಗೂಡಿಸಿಕೊಂಡು ಸ್ವಾಸ್ತ್ಯ ಸಮಾಜದಲ್ಲಿ ತನ್ನದೇ ಛಾಪು ಮೂಡಿಸುವಲ್ಲಿ ಪ್ರತಿಯೊರ್ವ ಮಹಿಳೆಯರು ಯಶಸ್ವಿಯಾಗುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಸ್ವ ಉದ್ಯೋಗಗಳ ಬಗೆಗಿನ ಮಾಹಿತಿಯನ್ನು ಜಿಲ್ಲಾ ತರಬೇತಿ ಕೇಂದ್ರ ಕೂಡಿಗೆಯ ನಿರ್ದೇಶಕರಾದ ಪ್ರಕಾಶ್ ಸಾಬೂನು ತಯಾರಿಕೆ, ಕ್ಯಾಂಡಲ್ ತಯಾರಿಕೆ, ಹೊಲಿಗೆ ತರಬೇತಿ ಬಗ್ಗೆ ಪ್ರಾತ್ಯಕ್ಷಿಕಾ ತರಬೇತಿಗಳ ಬಗ್ಗೆ ಸವಿವರವಾಗಿ ತಿಳಿಸಿ ಸದಸ್ಯರು ಈ…
ಮಡಿಕೇರಿ ಆ.26 : ಕೊಡಗು ಜಿಲ್ಲೆಯಲ್ಲಿ ಮಿತಿ ಮೀರಿರುವ ಆನೆ-ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಗಳನ್ನಿರಿಸಿದ್ದು, ಗ್ರಾಮೀಣ ಭಾಗಗಳಲ್ಲಿ ಉಪಟಳ ನೀಡುತ್ತಿರುವ ಇನ್ನೂರು ಕಾಡಾನೆಗಳನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಗುತ್ತದೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿನ ಕಾಡಾನೆ ಹಾವಳಿ ಬಗೆಹರಿಕೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸಿದ ಸಚಿವ ಖಂಡ್ರೆ ಅವರು, ದಕ್ಷಿಣ ಕೊಡಗಿನ ತಿತಿಮತಿ ಬಳಿಯ ಬಂಬುಕಾಡು ಪೈಸಾರಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಮಾತನಾಡಿ, ಅರಣ್ಯದಿಂದ ಹೊರ ಬಂದು ಜನವಸತಿಯ ಪ್ರದೇಶಗಳಲ್ಲಿ ಉಪಟಳ ನೀಡುತ್ತಿರುವ ಪುಂಡಾಣೆನೆಗಳಿಗೆ `ರೇಡಿಯೋ ಕಾಲರ್’ ಅಳವಡಿಸಲು ಸ್ಪಷ್ಟ ನಿರ್ದೇಶನವನ್ನು ನೀಡಿದರು. ರೈಲ್ವೆ ಹಳಿಗಳ ಬೇಲಿಗೆ ಸೂಚನೆ : ಕಾಡಾನೆಗಳ ಉಪಟಳ ಹೆಚ್ಚಾಗಿರುವ ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಬೇಲಿಯನ್ನು ನಿರ್ಮಿಸಿ, ಅರಣ್ಯ ಪ್ರದೇಶದಿಂದ ಕಾಡಾನೆಗಳು ಗ್ರಾಮೀಣ ಭಾಗಗಳಿಗೆ ನುಸುಳದಂತೆ ಕ್ರಮ ಕೈಗೊಳ್ಳಲು ಇದೇ ಸಂದರ್ಭ ಅಧಿಕಾರಿಗಳಿಗೆ ಸೂಚನೆಗಳನ್ನು…






