ಗೋಣಿಕೊಪ್ಪ ಆ.26 : ಒಂದೇ ಧರ್ಮ, ಒಂದೇ ದೇವರು, ಒಂದೇಜಾತಿ ಎಂಬ ತತ್ವವನ್ನು ಸಾರಿದ ನಾರಾಯಣ ಗುರುಗಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದರೆ ಈ ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾನತೆ ಮತ್ತು ಪ್ರೀತಿಯಿಂದ ಬದುಕಲು ಸಾಧ್ಯವಾಗಬಲ್ಲದು ಎಂದು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಪರಶುರಾಮ್ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪಲುವಿನ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ ಸಂತ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಅಂದಿನ ಕಾಲದಲ್ಲಿ ಸಮಾಜದಲ್ಲಿ ಬೇರೂರಿದ್ದ ಜಾತಿಭೇದ, ಮಹಿಳಾ ಶೋಷಣೆಯ ಬಗ್ಗೆ ಧ್ವನಿ ಎತ್ತಿ ಸಮಾಧಾನಕರ ಪರಿಹಾರವನ್ನು ಕಂಡುಕೊಂಡ ಮಹಾನ್ ಸಂತ ನಾರಾಯಣಗುರು. ಅವರ ಆದರ್ಶ, ತತ್ವ ಮತ್ತು ಸಮಾಜ ಪ್ರೇಮವನ್ನು ಉಳಿಸಿಕೊಂಡರೆ ಮನುಷ್ಯ ದ್ವೇಷಗಳಿಂದ ದೂರ ಉಳಿಯಬಹುದು ಎಂದು ಹೇಳಿದರು. ದ.ಸಂ.ಸ ರಾಜ್ಯ ಸಮಿತಿ ಸದಸ್ಯ ಟಿ.ಎನ್.ಗೋವಿಂದಪ್ಪ ಮಾತನಾಡಿ, ಸಮಾಜ ಸುಧಾರಣೆಗೆ ಕ್ರಾಂತಿ ಮಾಡಿದ ಮಹಾ ಮಾನವತವಾದಿ ನಾರಾಯಣ ಗುರುಗಳ ಆದರ್ಶ ಬದುಕು ಪ್ರತಿಯೊಬ್ಬರ ಜೀವನದ ಹಾದಿಯಾಗಬೇಕು ಎಂದು ಹೇಳಿದರು.…
ಲೇಖಕ: admin
ಮಡಿಕೇರಿ ಆ.26 : ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಸಿವಿಲ್ ನ್ಯಾಯಾಧೀಶರಾದ ಗೋಕುಲ್ ಎನ್ಎಸ್ಎಸ್ ಘಟಕವನ್ನು ಉದ್ಘಾಟಿಸಿ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯದ ಅರಿವು ಹಾಗೂ ಪೋಕ್ಸೋ ಕಾಯಿದೆ ಮತ್ತು ಮೋಟಾರ್ ವಾಹನ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ಎನ್ ಎಸ್ ಎಸ್ ಘಟಕದ ಮುಖ್ಯ ಉದ್ದೇಶವಾದ ಸೇವಾ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಬಗ್ಗೆ ಅರಿವನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ಎಂದು ಸಲಹೆ ನೀಡಿದರು. ಹಿರಿಯ ಉಪನ್ಯಾಸಕ ರಾಜಸುಂದರಂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಪ್ರಮೀಳ ನಿರೂಪಿಸಿ, ಉಪನ್ಯಾಸಕಿ ಸೀಮಾ ಮಂದಪ್ಪ ವಂದಿಸಿದರು. ಮುಖ್ಯ ಶಿಕ್ಷಕಿ ರೇವತಿ, ಸಂಸ್ಥೆಯ ಸಿಬ್ಬಂದಿ ವರ್ಗ , ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಆ.26 : ಕಾಡಾನೆ ದಾಳಿಯಿಂದ ಮೃತಪಟ್ಟ ಸಿದ್ಧಾಪುರ ಬಳಿಯ ಬಾಡಗ-ಬಾನಂಗಾಲ ಗ್ರಾಮದ ನಿವಾಸಿ ಆಯಿಷ (63) ಅವರ ಮನೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು. ನಂತರ ಆಯಿಷ ಅವರ ಪುತ್ರ ಲತೀಫ್ ಅವರಿಗೆ ಸಾಂತ್ವನ ಹೇಳಿ, 5 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ , ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಆ.26 : ಭಾರತ ಸೇವಾದಳ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಸಂತ ಮೈಕಲರ ಶಾಲೆಯಲ್ಲಿ ಡಾ. ನಾ.ಸು ಹರ್ಡಿಕರ್ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘಟಕ ಜಿ.ಇ.ರೇವಣ್ಣ ಮಾತನಾಡಿ, ಭಾರತ ಸೇವಾದಳ ಸೇರಿದಂತೆ ಹಲವು ಸಮಾಜ ಮುಖಿ ಚಿಂತನೆಯ ಸಂಸ್ಥೆಗಳನ್ನು ಹುಟ್ಟು ಹಾಕುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದ ಭಾರತ ಸೇವಾದಳ ಸಂಸ್ಥಾಪಕರಾದ ನಾ.ಸು. ಹರ್ಡೀಕರ್ ಅವರ ತತ್ವಾದರ್ಶಗಳನ್ನು ನಾವು ರೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಭಾರತ ಸೇವಾದಳ ಎಂದೊಡನೆ ನೆನಪಿಗೆ ಬರುವ ಹೆಸರೇ ಡಾ.ನಾರಾಯಣ್ ಸುಬ್ಬರಾವ್ ಹರ್ಡಿಕರ್, ಇವರು ಹಾವೇರಿ ಜಿಲ್ಲೆಯ ಹಾನಗಲ್ಲು ತಾಲ್ಲೂಕಿನ ತಿಳವಳ್ಳಿ ಗ್ರಾಮದಲ್ಲಿ 1889ನೇ ಮೇ 7 ರಂದು ಸುಬ್ಬರಾವ್ ಹಾಗೂ ಯಮುನಬಾಯಿ ಅವರ 7ನೇ ಪುತ್ರರಾಗಿ ಜನಿಸಿದರು ಎಂದರು. ಜಿಲ್ಲಾ ಕಾರ್ಯದರ್ಶಿ ಮೋಂತಿ ಗಣೇಶ್ ಮಾತನಾಡಿ, ಭಾ.ಸೇ.ದ ಸಂಘಟನ ಕೌಶಲ್ಯತೆಯನ್ನು, ದೇಶಾಭಿಮಾನ, ರಾಷ್ಟ್ರೀಯತೆ ಹಾಗೂ 1924ರ ಬೆಳಗಾವಿ ಅಧಿವೇಶನದಲ್ಲಿ ಇವರ ಮುಂದಾಳತ್ವವನ್ನು ವಿದಿವತ್ತಾದ, ದ್ವಜವಂದನೆ ಹಾಗೂ ಸ್ವಯಂ…
ಮಡಿಕೇರಿ ಆ.26 : ತಿತಿಮತಿಯ ಚೈನಿಹಡ್ಲು, ಬಂಬುಕಾಡು ಹಾಡಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು. ಹಾಡಿ ನಿವಾಸಿಗಳೊಂದಿಗೆ ಚರ್ಚಿಸಿ, ಅಹವಾಲು ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 200 ಕಾಡಾನೆಗಳನ್ನು ಕೂಡಲೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದ್ದು, ಮಾನವ ಜೀವಹಾನಿ ಹಾಗೂ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿರುವ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ, ಕಾಡಾನೆ ಸಮಸ್ಯೆಗಳಿರುವ ಪ್ರದೇಶಗಳಲ್ಲಿ 5 ಕಿ.ಮೀ.ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ ಎಂದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.
ಸಿದ್ದಾಪುರ ಆ.26 : ಸರ್ವಧರ್ಮ ಸಂಕೇತದ ಇತಿಹಾಸ ಪ್ರಸಿದ್ಧ ಆರ್ಕಾಡ್ ಪಟ್ಟಾಣ್ ಬಾಬಾ ಶಾವಲಿ ಉರೂಸ್ ನೇರ್ಚೆ 2024 ಫೆ. 9 ರಿಂದ 12ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಹಾಜಿ ತಿಳಿಸಿದ್ದಾರೆ.
ಮಡಿಕೇರಿ ಆ.26 : ಸಾಂಸಾರಿಕ ಭಿನ್ನಭಿಪ್ರಾಯಗಳು, ಯುವ ಜನತೆಯಲ್ಲಿ ನಡೆಯುವ ಸಂದಿಗ್ಧ ಪರಿಸ್ಥಿತಿಗಳು ಸೇರಿದಂತೆ ಸರ್ವ ಸಮಸ್ಯೆಗಳನ್ನು ಆಧ್ಯಾತ್ಮದ ಜಾಗೃತಿ ಮತ್ತು ಯೋಗದಿಂದ ಮಾತ್ರ ಉಪಶಮನ ಮಾಡಲು ಸಾಧ್ಯ ಎಂದು ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಮತ್ತು ಪ್ರಕೃತಿ ಚಿಕಿತ್ಸೆ ಆಯುರ್ವೇದ ಆಸ್ಪತ್ರೆಯ ಮುಖ್ಯಸ್ಥ ಡಾ.ವಿವೇಕ ಉಡುಪ ಹೇಳಿದರು. ಡಿವೈನ್ ಪಾರ್ಕ್ ಟ್ರಸ್ಟ್ನ ಅಂಗಸಂಸ್ಥೆಯಾದ ವಿವೇಕ ಜಾಗೃತ ಬಳಗದ ವತಿಯಿಂದ ಮೂರ್ನಾಡುವಿನ ಗೌಡ ಸಮಾಜದಲ್ಲಿ ನಡೆದ 19ನೇ ಯೋಗ ಪರ್ಯಟನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಹೃದಯ ವೈಶಾಲ್ಯತೆ ನಿಜವಾದ ಆರೋಗ್ಯದ ಗುಟ್ಟಾಗಿದೆ. ಆಧ್ಯಾತ್ಮಿಕ ತಳಹದಿಯ ಮೇಲೆ ಜೀವನ ನಡೆಯಬೇಕಿದೆ. ಪ್ರಸ್ತುತ ದಿನಗಳಲ್ಲಿ ವಿದೇಶಿ ಸಂಸ್ಕೃತಿ ನಮ್ಮನ್ನು ಆವರಿಸಿಕೊಂಡಿದ್ದು, ಯುವ ಸಮೂಹ ವಿದೇಶಿ ಸಂಸ್ಕೃತಿಯತ್ತ ವಾಲುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಡಾ.ವಿವೇಕ ಉಡುಪ, ಯುವ ಸಮೂಹ ಹೆಚ್ಚಿನ ಸಮಯ ಮೊಬೈಲ್ನಲ್ಲಿ ಕಳೆಯುತ್ತಿದ್ದಾರೆ. ಸೆಲ್ಫಿ ಹುಚ್ಚಿಗೆ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರಕೃತಿಯ ನೆಲೆಬಿಡಾಗಿರುವ ಕೊಡಗು ಸೇರಿದಂತೆ ಅನೇಕ ಪ್ರದೇಶಗಳು…
ಬೆಂಗಳೂರು ಆ.26 : ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅವರು, ಬರೀ ಅಂಬಾನಿ – ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡೀ ದೇಶ ಪರಿತಪಿಸುವಂತಾಗಿದೆ ಎಂದರು. ಈ ಕಾರಣಕ್ಕೆ ನಾವು ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ಹೇಳಿದರು. ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ…
ನಾಪೋಕ್ಲು ಆ.26 : ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವನಜಾಕ್ಷಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಕುಲ್ಲೇಟಿರ ಹೇಮಾವತಿ ಅವರು ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ನೂತನ ಅಧ್ಯಕ್ಷೆ ವನಜಾಕ್ಷಿ, ಹಿಂದೆ ಗ್ರಾಮದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ನನಗೆ ಅಧ್ಯಕ್ಷ ಸ್ಥಾನ ಲಭಿಸಿದೆ. ಬೇತು ಗ್ರಾಮ ಮತ್ತು ನಾಪೋಕ್ಲು ಪಟ್ಟಣದ ಮತದಾರರಿಗೆ ಕೃತಜ್ಞಳಾಗಿದ್ದೇನೆ ಎಂದರು. ಸದಸ್ಯರಾದ ಮಾಚೆಟ್ಟಿರ ಕುಶಾಲಪ್ಪ, ಮಹಮ್ಮದ್ ಕುರೇಶಿ,ಕುಲ್ಲೇಟಿರ ಅರುಣ್ ಬೇಬ, ಗಂಗಮ್ಮ ಶಶಿ ಮಂದಣ್ಣ,ಕೋಟೆರ ನೀಲಮ್ಮ ಪಿಡಿಒ ಚೊಂದಕ್ಕಿ,ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಆ.26 : ಸೋಮವಾರಪೇಟೆಯ ಆಡಿನಾಡೂರು ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಈರಪ್ಪ ಅವರ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.






