ಲೇಖಕ: admin

ಮಡಿಕೇರಿ ಆ.26 :  ಶ್ರಾವಣ ಮಾಸದ ಮೊದಲ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬವನ್ನು ಜಿಲ್ಲೆಯಾದ್ಯಂತ ಮಹಿಳೆಯರು ಮನೆಯಲ್ಲಿಯೇ ಸಂಭ್ರಮದಿಂದ ಆಚರಿಸಿದರು. ಮುಂಜಾನೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿತು. ಮಹಿಳೆಯರು ತಮ್ಮ ಮನೆ ಮುಂದೆ ರಂಗೋಲಿ ಹಾಕಿ, ತಳಿರು ತೋರಣ ಕಟ್ಟಿ ಅಲಂಕರಿಸಿದ್ದರು. ವಿವಿಧ ಬಗೆಯ ಹೂವುಗಳಿಂದ ಮಂಟಪ ಮಾಡಿ, ಹೂವಿನ ಹಾರ, ಬೆಳ್ಳಿ-ಬಂಗಾರದ ಆಭರಣಗಳಿಂದ ವರಮಹಾಲಕ್ಷ್ಮಿಯನ್ನು ಸಿಂಗಾರ ಮಾಡಿ ಪ್ರತಿಷ್ಟಾಪಿಸಿದರು. ನಂತರ ದೇವಿಯ ಮೂರ್ತಿಗೆ ಸೀರೆ ಉಡಿಸಿ ಬೆಳ್ಳಿ, ಬಂಗಾರದ ಆಭರಣ ಹಾಕಿ ವೈಭವದಿಂದ ಪೂಜೆ ನೆರೆವೇರಿಸಿದರು.

Read More

ನಾಪೋಕ್ಲು ಆ.26 : ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಗೆ ಸಹಕಾರಿ ಎಂದು ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ನಿರ್ದೇಶಕ ಬಿದ್ದಾಟಂಡ ಮುತ್ತಣ್ಣ ಹೇಳಿದರು. ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಚೆರಿಯಪರಂಬು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರೌಢಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸಿ,  ಮಾತನಾಡಿದರು. ವಿದ್ಯಾರ್ಥಿಗಳು ತಮ್ಮನ್ನು ಒಂದಲ್ಲ ಒಂದು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು.ಶಿಕ್ಷಣದ ಮುಕ್ತಾಯದ ನಂತರ ವಿದ್ಯಾರ್ಥಿಗಳು ಉದ್ಯೋಗ ಪಡೆಯುವಲ್ಲಿ ಕ್ರೀಡೆ ಸಹಕಾರಿಯಾಗುತ್ತದೆ ಎಂದರು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಮಾತನಾಡಿ, ಪಠ್ಯ ದೊಂದಿಗೆ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳು ಅತ್ಯಗತ್ಯ. ಕ್ರೀಡೆಯಲ್ಲಿ ಸೋಲು,ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ ಆರೋಗ್ಯವಂತ ವಿದ್ಯಾರ್ಥಿಗಳು ದೇಶದ ಸಂಪತ್ತು. ಬದುಕಿನಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದಕ್ಕಿಂತ ಎದುರಾಗುವ ಸವಾಲುಗಳನ್ನು ಎದುರಿಸಿದರೆ ಮುಂದಿನ ಹಾದಿ ಸುಗಮವಾಗುತ್ತದೆ ಎಂದರು. ಈ ಸಂದರ್ಭ ವಲಯ ಮಟ್ಟದ…

Read More

ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು. ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ…

Read More

ಮಡಿಕೇರಿ ಆ.25 : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಆ.26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 11.30 ಗಂಟೆಗೆ ತಿತಿಮತಿ ಬಂಬು ಕಾಡಿನಲ್ಲಿ ಆನೆ ದಾಳಿಯಿಂದ ಒಳಗಾದ ಸಂತ್ರಸ್ತರ ಮನೆಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ಮಾಲ್ದಾರೆ ಗ್ರಾಮ ಪಂಚಾಯಿತಿಯಲ್ಲಿ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 1.30 ಗಂಟೆಗೆ ಅರೆಕಾಡು ಪೈಸಾರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.30 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಅಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.

Read More

ಮಡಿಕೇರಿ ಆ.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹಾಗೂ ಆಜಾದಿಕ ಅಮೃತ ಮಹೋತ್ಸವದ ಪ್ರಯುಕ್ತ “ಮೇರ ಮಾಟಿ ಮೇರಾ ದೇಶ್” ಎಂಬ ಕಾರ್ಯಕ್ರಮ ನಡೆಯಿತು. ನಗರದ ಜಿಲ್ಲಾ ಸಂಸ್ಥೆಯ ಕಚೇರಿಯಲ್ಲಿ ಕೊಡಗು ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್‍ನ ಆರು ಸ್ಥಳೀಯ ಸಂಸ್ಥೆಗಳಾದ ಮಡಿಕೇರಿ, ಸಂಪಾಜೆ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ, ಆಯಾಯ ಸ್ಥಳೀಯ ಸಂಸ್ಥೆಯಿಂದ ಸಂಗ್ರಹಿಸಿ ತಂದ ಮಣ್ಣನ್ನು ಜಿಲ್ಲಾ ಸಂಸ್ಥೆಯಲ್ಲಿ ಎಲ್ಲಾ ಮರು ಕಳಸದ ಮಣ್ಣನ್ನು ಒಟ್ಟು ಸೇರಿಸಿ ಒಂದು ಕಳಸಕ್ಕೆ ತುಂಬಿಸಿ ರಾಜ್ಯ ಸಂಸ್ಥೆಗೆ ಜಿಲ್ಲಾ ಪ್ರತಿನಿಧಿಯೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಮುಖ್ಯ ಕಚೇರಿ ಬೆಂಗಳೂರಿಗೆ ಕಳುಹಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ಆಜಾದಿಕ ಅಮೃತ ಮಹೋತ್ಸವದ ಪ್ರಯುಕ್ತ “ನಮ್ಮ ಮಣ್ಣು ನಮ್ಮ ದೇಶ” ಎಂಬ ಧ್ಯೇಯ ವಾಕ್ಯದಂತೆ ಆರು ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹಿಸಿದ…

Read More

ಮಡಿಕೇರಿ ಆ.25 :  ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ತುತ್ತಾಗಿದ್ದು, ನೋವು ತಂದಿದೆ ಎಂದು ಶಾಸಕ  ಎ.ಎಸ್.ಪೊನ್ನಣ್ಣ  ಹೇಳಿದರು. ಕಾಡು ಪ್ರಾಣಿಗಳ ಹಾವಳಿ ತಡೆಯಬೇಕಿದ್ದು, ಆ ನಿಟ್ಟಿನಲ್ಲಿ ಆ.26 ರಂದು ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಎ.ಎಸ್.ಪೊನ್ನಣ್ಣ  ತಿಳಿಸಿದರು. ಕಾಡಾನೆ ಹಾವಳಿಗೆ ತುತ್ತಾದ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಸಭೆ ನಡೆಸಲಿದ್ದಾರೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಆಗಮಿಸಲಿದ್ದಾರೆ ಎಂದು ಎ.ಎಸ್.ಪೊನ್ನಣ್ಣ  ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಸಚಿವರ ಗಮನಕ್ಕೆ ತಂದಾಗ ಆ.26 ರಂದು ಅರಣ್ಯ ಸಚಿವರು ಭೇಟಿ ನೀಡುತ್ತಿದ್ದು, ಮಾನವ ಮತ್ತು ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದರು.

Read More

ಮಡಿಕೇರಿ ಆ.25 : ರಾಷ್ಟ್ರಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಮುಖ್ಯಮಂತ್ರಿಗಳ   ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ  ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಮಾಜಿ ಸಚಿವ  ಎಂ.ಸಿ.ನಾಣಯ್ಯ ಹಾಗೂ ಸ್ಥಳೀಯ ಶಾಸಕ  ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದಂತೆ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ನಿರ್ಮಾಣ ಮಾಡಬೇಕು ಎಂದು ಎ.ಎಸ್.ಪೊನ್ನಣ್ಣ  ಹೇಳಿದರು. ಪ್ರತಿಮೆ ಪುನರ್ ನಿರ್ಮಾಣ ಸಂಬಂಧ ಈಗಾಗಲೇ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಕೆಎಸ್‌ಆರ್‌ಟಿಸಿ ವಿಭಾಗದಿಂದ 10 ಲಕ್ಷ ರೂ. ಭರಿಸಲಿದ್ದಾರೆ ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ  ವಿವರಿಸಿದರು. ಕೊಡಗಿನ ಜನರ ಭಾವನೆಗೆ ಧಕ್ಕೆ ಆಗದಂತೆ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಸ್ಥಾಪಿಸಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ…

Read More

ಮಡಿಕೇರಿ ಆ.25 :  ಜಿಲ್ಲಾ ಕೇಂದ್ರ ಮಡಿಕೇರಿಯ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಸ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಸರ್ಕಾರಿ ಬಸ್ಸೊಂದು ಡಿಕ್ಕಿಯಾಗಿ  ಹಾನಿಗೊಳಗಾಗಿರುವ ಘಟನೆ  ನಡೆದಿದೆ. ಮಡಿಕೇರಿ ಕೆಎಸ್‌ಆರ್‌ಟಿಸಿ  ಬಸ್ ನಿಲ್ದಾಣದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್, ಸ್ಕ್ವಾ.ಲೀ.ಅಜ್ಜಮಾಡ ದೇವಯ್ಯ ವೃತ್ತದ ಎಡಭಾಗಕ್ಕಾಗಿ ಸಾಗುವ ಹಂತದಲ್ಲಿ ಬಸ್‍ನ ಪಾಶ್ರ್ವ ವೃತ್ತಕ್ಕೆ ಡಿಕ್ಕಿಯಾಗಿದೆ. ಅವಘಡಕ್ಕೆ ಕಾರಣವಾದ ಬಸ್ ಮೈಸೂರು ಡಿಪೋಕ್ಕೆ ಸೇರಿದ್ದು, ಇದು ಪ್ರತಿನಿತ್ಯ ಧರ್ಮಸ್ಥಳ, ಸುಬ್ರಹ್ಮಣ್ಯ, ಮಡಿಕೇರಿ ಮತ್ತು ಮೈಸೂರು ನಡುವೆ ಸಂಚರಿಸುತ್ತಿತ್ತು. ಇಂದು ಬಸ್‍ನ್ನು ಚಾಲಕ ಮಧು ಎಂಬವರು ಚಲಾಯಿಸುತ್ತಿದ್ದರು. ಬಸ್ ಡಿಕ್ಕಿಯಿಂದ ವೃತ್ತದ ಎಡಭಾಗಕ್ಕೆ ಹಾನಿಯಾಗಿದ್ದು, ಅಲ್ಲಿನ ಕಲ್ಲು ಇಟ್ಟಿಗೆಗಳು ನೆಲಕ್ಕೆ ಉರುಳಿದೆ. ಅದೃಷ್ಟವಶಾತ್ ಸ್ಕ್ವಾ.ಲೀ. ದೇವಯ್ಯ ಅವರ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ. ಕೆಲ ದಿನಗಳ ಹಿಂದಷ್ಟೆ ನಗರದ ಜ.ಕೆ.ಎಸ್. ತಿಮ್ಮಯ್ಯ ವೃತ್ತಕ್ಕೆ ಬಸ್ ಡಿಕ್ಕಿಯಾಗಿ, ಪ್ರತಿಮೆ ಮೊಗುಚಿ, ವೃತ್ತ ಧ್ವಂಸಗೊಂಡಿತ್ತು. ಇದೀಗ ಹಳೆಯ ಖಾಸಗಿ ಬಸ್ ನಿಲ್ದಾಣದ ಸ್ಕ್ವಾ.ಲೀ. ದೇವಯ್ಯ ಅವರ ವೃತ್ತಕ್ಕೆ ಬಸ್ ಡಿಕ್ಕಿಯಾಗಿರುವುದು…

Read More

ಮಡಿಕೇರಿ ಆ.25  : ಬಸ್ ಡಿಕ್ಕಿಯಾಗಿ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ  ಪರಿಶೀಲಿಸಿದರು. ಬಳಿಕ ಅಪಘಾತ ನಡೆದ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ ಆ.25 : ಮಡಿಕೇರಿಯ ಮೆಡಿಕಲ್ ಕಾಲೇಜ್ ನಲ್ಲಿ ನಡೆದ ಪ್ರಕರಣದಲ್ಲಿ ನಮ್ಮ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ವಿದ್ಯಾರ್ಥಿಗಳೊಂದಿಗೆ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದ್ದಾಗಿದೆ. ಆದರೆ ಅಸಭ್ಯ ವರ್ತನೆಯ ಆರೋಪಿಯೊಂದಿಗೆ ನಮ್ಮ ಹೆಸರನ್ನು ತಳುಕು ಹಾಕಿ ಭಾವಚಿತ್ರ ಸಹಿತ ನಮ್ಮನ್ನು ಆರೋಪಿಗಳಂತೆ ಪ್ರತಿಬಿಂಬಿಸಲಾಗಿದೆ ಎಂದು ಯುವರು ನೋವು ತೋಡಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವಕ ಕೆ.ವಿ.ಕಿರಣ್ ಕುಮಾರ್, ಕಾಲೇಜು ಬಳಿ ಅಸಭ್ಯವಾಗಿ ವರ್ತಿಸಿದ ಆರೋಪಿ ಸಿಜೀಲ್ ಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ. ಆತ ಯಾರೆಂದೇ ನಮಗೆ ತಿಳಿದಿಲ್ಲ, ಆದರೆ ಸಿಜೀಲ್ ಮಾಡಿರಬಹುದಾದ ಪ್ರಕರಣದ ಜೊತೆಯಲ್ಲಿ ನಮ್ಮ ಹೆಸರುಗಳನ್ನು ತಳುಕು ಹಾಕಿರುವುದು ಮಾತ್ರವಲ್ಲದೆ, ನಮ್ಮ ಭಾವಚಿತ್ರಗಳನ್ನು ಕೂಡ ಬಿಡುಗಡೆ ಮಾಡಿರುವುದರಿಂದ ಯಾವುದೇ ತಪ್ಪುಗಳನ್ನು ಮಾಡದ ನಮಗೆ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜನವಲಯದಲ್ಲಿ ತಪ್ಪು ಅಭಿಪ್ರಾಯ ಮೂಡಿದೆ. ಇದರಿಂದ ನಮ್ಮ ಮುಂದಿನ ಜೀವನಕ್ಕೆ ಆತಂಕ ಎದುರಾಗಿದ್ದು, ಯಾವುದೇ ತಪ್ಪು ಮಾಡದ ನಮ್ಮನ್ನು ಸಮಾಜ ತಪ್ಪು ದೃಷ್ಟಿಯಿಂದ ನೋಡುತ್ತಿದೆ ಎಂದರು. 2023 ಆಗಸ್ಟ್…

Read More