ಮಡಿಕೇರಿ ಆ.25 : ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಜನ ಔಷಧ ಕೇಂದ್ರಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜನ ಔಷಧ ಅಂಗಡಿಯಲ್ಲಿ ಇತರೆ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿ, ಅಲ್ಲಿರುವ ಅವ್ಯವಸ್ಥೆ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೇಖಕ: admin
ಮಡಿಕೇರಿ ಆ.25 : ಧರ್ಮಸ್ಥಳ ವ್ಯಾಪ್ತಿಯಲ್ಲಿ ಹನ್ನೊಂದು ವರ್ಷಗಳ ಹಿಂದೆ ನಡೆದ ‘ಸೌಜನ್ಯ’ ಹತ್ಯಾ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ನಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಕೊಡಗು ಜಿಲ್ಲಾ ಯುವ ಕಾಂಗ್ರೆಸ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಮತ್ತು ಮಡಿಕೇರಿ ನಗರ ಯುವ ಕಾಂಗ್ರೆಸ್ ಸಂಯುಕ್ತಾಶ್ರಯದಲ್ಲಿ ಪಕ್ಷದ ಪ್ರಮುಖರು ಮತ್ತು ಸದಸ್ಯರು, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಮಾವೇಶಗೊಂಡು, ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿ, ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆ ನಡೆಸಿ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಮಡಿಕೇರಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನ್ ಪೂಣಚ್ಚ ಮಾತನಾಡಿ, ಕಳೆದ ಹನ್ನೊಂದು ವರ್ಷಗಳ ಹಿಂದೆ ಸೌಜನ್ಯಳನ್ನು ಅತ್ಯಾಚಾರಗೈದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಸಂತೋಷ್ ಎಂಬಾತನನ್ನು ಬಂಧಿಸಲಾಗಿತ್ತಾದರು, ಸಿಬಿಐ ನ್ಯಾಯಾಲಯ ಆತನನ್ನು ನಿರ್ದೋಷಿಯೆಂದು ಬಿಡುಗಡೆ ಮಾಡಿದೆ. ಈ ಹಿನ್ನೆಲೆ ಪ್ರಕರಣದ ನೈಜ ಆರೋಪಿಗಳನ್ನು ಕಂಡು ಹಿಡಿಯಲು ಮರು ತನಿಖೆ ನಡೆಸಬೇಕೆಂದು…
ಮಡಿಕೇರಿ ಆ.25 : ಅಕ್ರಮ ಜೂಜಾಟ ನಡೆಸುತ್ತಿದ್ದ ಕೊಡಗು ಜಿಲ್ಲಾ ಪೊಲೀಸರು ಬಂಧಿಸಿರುವ ಘಟನೆ ಕಾಂತೂರು ಮೂರ್ನಾಡು ಗ್ರಾಮದಲ್ಲಿ ನಡೆದಿದೆ. ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಕೆ.ವಿ.ಚೇತನ್ (38), ಪಾಲೂರಿನ ಪಿ.ಎಸ್.ಶೇಖರ್ (50), ಅವಂದೂರು ಗ್ರಾಮದ ಶರತ್ ಕುಮಾರ್ (42), ಹೊಸ್ಕೇರಿಯ ಉಳುವಾರನ ಗಣೇಶ್ (48), ಕಟ್ಟೆಮಾಡು ಗ್ರಾಮದ ಪಿ.ಟಿ.ಸತೀಶ್ (38), ಅಪ್ಪಂಗಳದ ಕೆ.ಎಂ.ಕಾರ್ಯಪ್ಪ (44), ಹೆರವನಾಡು ಗ್ರಾಮದ ಸಕೇಶ್ ಕುಮಾರ್ (43), ದೇಚೂರಿನ ಬಿ.ಎಸ್.ರವಿ ಎಂಬವರೆ ಬಂಧಿತ ಆರೋಪಿಗಳು. ಕಾಂತೂರು-ಮೂರ್ನಾಡು ಗ್ರಾಮದ ತೋಟದಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆ, ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಜಗದೀಶ್, ವೃತ್ತ ನಿರೀಕ್ಷಕ ಉಮೇಶ್ ಯು. ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ಶ್ರೀನಿವಾಸಲು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಮಾಹಿತಿ ನೀಡಲು ಮನವಿ : ಅಕ್ರಮ ಚಟುವಟಿಕೆಗಳು ನಡೆಸುತ್ತಿರುವುದು ಕಂಡ ಬಂದಲ್ಲಿ ಸ್ಥಳೀಯ…
ಸಿದ್ದಾಪುರ ಆ.25 : 169ನೇ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯನ್ನು, ಆ.31 ರಂದು ಸಿದ್ದಾಪುರದ ಸ್ವರ್ಣ ಮಾಲ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಎಸ್ಎನ್ಡಿಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ ಲೋಕೇಶ್ ತಿಳಿಸಿದ್ದಾರೆ . ಸಿದ್ದಾಪುರ ಎಸ್ ಎನ್ ಡಿ ಪಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.ಎನ್.ಡಿ.ಪಿ ಕೊಡಗು ಯೂನಿಯನ್, ಜಯಂತಿ ಆಚರಣಾ ಸಮಿತಿ, ಹಾಗೂ ಎಸ್ಎನ್ಡಿಪಿ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 50ಕ್ಕೂ ಹೆಚ್ಚು ಶಾಖೆಗಳ 18 ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯತ್ವ ಹೊಂದಿರುವ ಬೃಹತ್ ಸಂಘಟನೆಯಾಗಿದ್ದು, ಎಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಅದ್ದೂರಿಯಾಗಿ ನಡೆಸಲಾಗುವುದೆಂದು ತಿಳಿಸಿದರು. ಎಸ್ ಎನ್ ಡಿ ಪಿ ಕಟ್ಟಡದ ನೂತನ ಸಭಾಂಗಣದಲ್ಲಿ ಬೆಳಿಗ್ಗೆ ಗಣಪತಿ ಹೋಮ ನಂತರ ಗುರು ಪೂಜೆ ನಡೆಯಲಿದೆ. ಎಸ್ ಎನ್ ಡಿ ಪಿ ಯೋಗಂ ನ ಮಾಜಿ ಉಪಾಧ್ಯಕ್ಷ ಕಂಬಿಬಾಣೆ ಟಿ.ಕೆ.ಸೋಮನ್…
ಸೋಮವಾರಪೇಟೆ, ಆ.25 : ಮೈಸೂರು ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕ( ಶಿಕ್ಷಣಾಧಿಕಾರಿ ತತ್ಸಮಾನ ಹುದ್ದೆ) ರಾಗಿ ವರ್ಗಾವಣೆಗೊಂಡ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ( ಬಿಇಓ ) ಕೆ.ವಿ.ಸುರೇಶ್ ಅವರಿಗೆ ತಾಲ್ಲೂಕು ವಿವಿಧ ಶಿಕ್ಷಕರ ಸಂಘಟನೆಗಳು ಹಾಗೂ ಬಿಇಓ ಕಛೇರಿಯ ಸಿಬ್ಬಂದಿ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಪ್ರೌಢಶಾಲಾ ಸಹ ಶಿಕ್ಷಕರ ಜಿಲ್ಲಾ ಹಾಗೂ ತಾಲ್ಲೂಕು ಘಟಕ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ವತಿಯಿಂದ ಬಿಇಓ ಕಛೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಬಿಇಓ ಸುರೇಶ್ ಅವರನ್ನು ಶಾಲು ಹೊದಿಸಿ ಫಲತಾಂಬುಲ ನೀಡಿ ಸನ್ಮಾನಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಶಕಗಳ ಕಾಲ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದ ಅಧಿಕಾರ ಹುದ್ದೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದ ಪ್ರಗತಿಯೊಂದಿಗೆ ಸರಳ…
ನಾಪೋಕ್ಲು ಆ.25 : ನಾಪೋಕ್ಲು ಲಯನ್ಸ್ ಸಂಸ್ಥೆ, ಪೊನ್ನಾಡ್ ಉತ್ಪಾದಕರ ಸಂಘ, ಕೊಡವ ಸಮಾಜ, ಈಶ ಫೌಂಡೇಶನ್ ಸoಯುಕ್ತಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಕನ್ನಂಬಿರ ಸುಧಿ ತಿಮ್ಮಯ್ಯ ಹಾಗೂ ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲೆಟಿರ ಅಜಿತ್ ನಾಣಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಈಶ ಫೌಂಡೇಶನ್ ನ ಸೇವಾ ಸಂಯೋಜಕ ಮಂಜುನಾಥ್ ಆರಾಧ್ಯ, ಮಾತನಾಡಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮೀಣ ಜನರ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಂಸ್ಥೆ ಶ್ರಮಿಸುತ್ತಿದೆ ಎಂದ ಅವರು ಈಶ ಫೌಂಡೇಶನ್ ನ ಮೂಲಕ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದರ ಸದ್ಬಳಕೆಯನ್ನು ಎಲ್ಲರೂ ಪಡೆದುಕೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಇ.ಸಿ.ಜಿ, ಮದುಮೇಹ, ಪಾದ ಸ್ಪರ್ಶ, ಬಿ.ಪಿ ಪರೀಕ್ಷೆ ಮಾಡಲಾಯಿತು. 90 ಮಂದಿ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಮೂಳೆ ತಜ್ಙ ಡಾ.ಕಾರ್ತಿಕ್ ಅಯ್ಯಣ್ಣ, ಲಯನ್ಸ್ ಸೇವಾ…
ಮಡಿಕೇರಿ ಆ.25 : ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ ನಡೆದಿದೆ. ಈರಪ್ಪ(60) ಮೃತ ದುರ್ದೈವಿ. ಮುಂಜಾನೆ ಹಸುವನ್ನು ಹುಡುಕಿಕೊಂಡು ಹೋಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸೋಮವಾರಪೇಟೆ ಆ.25 : ದೇಶದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಲಯನ್ಸ್ ಸಂಸ್ಥೆಯ ವತಿಯಿಂದ ಜೇಸಿ ವೇದಿಕೆಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ತಶೀಲ್ದಾರ್ ಎಸ್.ಎನ್.ನರಗುಂದ ಪಾಲ್ಗೊಂಡು ಮಾತನಾಡಿ, ಎಲ್ಎಂವಿ-3 ರಾಕೇಟ್ನಲ್ಲಿ ಉಡಾವಣೆಯಾದ ಚಂದ್ರಯಾನ-3 ಗಗನನೌಕೆ 40ದಿನಗಳ ಯಾನದ ಬಳಿಕ ಚಂದ್ರನಂಗಳಕ್ಕೆ ಇಳಿದಿದ್ದು, ಇದರ ಶ್ರೇಯಸ್ಸು ಇಸ್ರೋದ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು ಶ್ಲಾಘೀಸಿದರು. ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್.ಮಹೇಶ್ ಮಾತನಾಡಿ, ಚಂದ್ರಯಾನದ ಯಶಸ್ಸಿನಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಾಗಿದೆ. ಇಸ್ರೋದ ಮುಂದಿನ ಯೋಜನೆಗಳು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಂದರ್ಭ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳಾದ ರೋಹಿತ್, ಲೀಲಾರಾಂ, ಸಿ.ಕೆ. ಮಲ್ಲಪ್ಪ, ಸಿ.ಕೆ.ಶಿವಕುಮಾರ್, ನಿರ್ವಾಣಿ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷೆ ಪ್ರತೀಕ್ಷಾ, ವಿಶ್ವಮಾನವ ಕುವೆಂಪು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ವೈ.ಎಸ್. ಧನ್ಯ ಸೇರಿದಂತೆ ಮತ್ತಿತರರು ಇದ್ದರು.
ಸೋಮವಾರಪೇಟೆ ಆ.25 : ಹರಗ ಗ್ರಾಮದಲ್ಲಿ ಜೇನು ಕೃಷಿಯ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು. ಗ್ರಾಮದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಪ್ರವೀಣ್, ಸರ್ಕಾರದ ಯೋಜನೆಗಳು ಮತ್ತು ಕೃಷಿ ಕೈಗೊಳ್ಳುವ ಕುರಿತು ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಔಷಧಯುಕ್ತ ಹಾಗೂ ಉತ್ತಮ ಗುಣಮಟ್ಟದ ಜೇನು ಉತ್ಪಾದನೆಯಾಗುತ್ತಿದ್ದು, 1990ರಿಂದ ಜೇನು ಹುಳುಗಳಿಗೆ ಥಾಯ್ ಸ್ಯಾಕ್ ಬ್ರೂಡ್ ವೈರಸ್ ನಿಂದಾಗಿ ಉತ್ಪಾದನೆ ಕುಂಠಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ರೈತರ ಉಪ ಕಸುಬು ಜೇನು ಕೃಷಿಯನ್ನು ಪುನಶ್ಚೇತನಗೊಳಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರಿಗೆ ಸಹಾಯಧನದಲ್ಲಿ ಒಂದೊಂದು ಜೇನುಪೆಟ್ಟಿಗೆಯನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು. ರೈತರಿಗೆ ಉಪ ಕಸುಬಾದ ಜೇನು ಸಾಕಾಣೆ ಯಾವುದೇ ಕಾರ್ಮಿಕರ ನೆರವನ್ನು ಬಯಸದೇ ಲಾಭ ತಂದುಕೊಡುತ್ತದೆ. ಇದರಲ್ಲಿ ಮನೆಯವರು ಮಾತ್ರ ಕೆಲಸ ಮಾಡಿದರೆ, ನಾವು ಎಷ್ಟು ಪ್ರಮಾಣದಲ್ಲಿ ಜೇನು ಪೆಟ್ಟಿಗೆಯನ್ನಿಟ್ಟು ಸಾಕುತ್ತೇವೆಯೋ ಅಷ್ಟು ಲಾಭಗಳಿಸಲು ಸಾಧ್ಯವಾಗುತ್ತದೆ. ಇದರಲ್ಲಿ ಕೃಷಿ ಚಟುವಟಿಕೆಯೊಂದಿಗೆ ಮಹಿಳೆಯರು ಕೃಷಿ ಮಾಡಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತೋಟಗಾರಿಕಾ…
ಸೋಮವಾರಪೇಟೆ ಆ.25 : ಕುವೆಂಪು ಶಾಲೆಯಲ್ಲಿ ನಡೆದ ವಲಯ ಎ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಬಾಲಕಿಯರ ಮತ್ತು ಬಾಲಕರ ವಿಭಾಗದಲ್ಲಿ ಕುವೆಂಪು ಶಾಲೆ ಪ್ರಥಮ ಸ್ಥಾನಗಳನ್ನು ಪಡೆದಿದೆ. ಚೆಸ್ ಸ್ಪರ್ಧೆಯಲ್ಲಿ 5 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಮಿಲ್ಡ್ರೆಡ್ ಗೋನ್ಸಾಲ್ವೆಸ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕರುಂಬಯ್ಯ, ಇಂದಿರಾ, ನಾಗೇಶ್ ಮತ್ತು ಶಿಕ್ಷಕರು ಇದ್ದರು.






