ಸೋಮವಾರಪೇಟೆ ಆ.24: ಹುಣಸೂರು ತಾಲ್ಲೂಕು ರತ್ನಾಪುರಿ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ಸೋಮವಾರಪೇಟೆ ತಾಲ್ಲೂಕಿನ ಕಿರಗಂದೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಾಗೂ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ಗಮಿತ ಅಧ್ಯಕ್ಷ ಡಿ.ಪಿ.ಧರ್ಮಪ್ಪ ಅವರಿಗೆ ಸಂಘದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಸೋಮವಾರಪೇಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಡಿ.ಪಿ.ಧರ್ಮಪ್ಪ ಅವರಿಗೆ ಬಿಇಓ ಕೆ.ವಿ.ಸುರೇಶ್ ಸಂಘದ ಪರವಾಗಿ ಶಾಲು ಹೊದಿಸಿ ಸನ್ಮಾನಿಸಿದರು. ಬಿಇಓ ಕೆ.ವಿ.ಸುರೇಶ್ ಮಾತನಾಡಿ, ವಿಜ್ಞಾನ ಶಿಕ್ಷಕರಾದ ಡಿ.ಪಿ.ಧರ್ಮಪ್ಪ ಅವರು ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಸೇವೆಯೊಂದಿಗೆ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಶಿಕ್ಷಕರ ಸಂಘವು ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಸನ್ಮಾನಿತರಾದ ಡಿ.ಪಿ.ಧರ್ಮಪ್ಪ ಮಾತನಾಡಿ, ತಾವು ಶಾಲೆಯ ಕಾರ್ಯಭಾರದೊಂದಿಗೆ ಸಂಘದ ಮೂಲಕ ಶಿಕ್ಷಕರ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದು ತಮಗೆ ತೃಪ್ತಿ ತಂದಿದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್…
ಲೇಖಕ: admin
ಮಡಿಕೇರಿ ಆ.24 : ಮಡಿಕೇರಿಯ ಮೆಡಿಕಲ್ ಕಾಲೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರೋಪಿ ಆಟೋ ಚಾಲಕನಲ್ಲ ಮತ್ತು ಆಟೋ ಚಾಲಕರ ಸಂಘದ ಸದಸ್ಯನೂ ಅಲ್ಲ. ಸ್ನೇಹಿತನಿಂದ ಆಟೋ ರಿಕ್ಷಾ ಪಡೆದು ದುರುಪಯೋಗ ಪಡಿಸಿಕೊಂಡಿದ್ದಾನೆ ಎಂದು ಆಟೋ ಮಾಲೀಕ, ಚಾಲಕರ ಸಂಘ ಸ್ಪಷ್ಟಪಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ, ಇತ್ತೀಚಿನ ದಿನಗಳಲ್ಲಿ ಶೋಕಿಗಾಗಿ ಆಟೋ ಓಡಿಸುತ್ತಿರುವ ಕೆಲವರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಇದರಿಂದ ಆಟೋ ಚಾಲನೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ಚಾಲಕರು ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮೆಡಿಕಲ್ ಕಾಲೇಜ್ ಪ್ರಕರಣದಲ್ಲಿ ಆಟೋ ಚಾಲಕನೇ ಆರೋಪಿ ಎಂದು ಬಿಂಬಿತವಾದ ಹಿನ್ನೆಲೆ ಸಾರ್ವಜನಿಕ ವಲಯದಲ್ಲಿ ಆಟೋ ಚಾಲಕರ ಬಗ್ಗೆ ತಪ್ಪು ಅಭಿಪ್ರಾಯ ಮತ್ತು ಸಂಶಯ ಮೂಡುತ್ತಿದೆ. ಆದ್ದರಿಂದ ಸಂಘವು ಮುಂಜಾಗೃತಾ ಕ್ರಮವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದರು. ನಗರದಲ್ಲಿ ಕಳೆದ ಅನೇಕ ವರ್ಷಗಳಿಂದ ಆಟೋ ಮಾಲೀಕ, ಚಾಲಕರ ಸಂಘ ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ…
ಬೆಂಗಳೂರು ಆ.24 : ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಿಗ್ಗೆ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು :: ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ. ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು. ಸರ್ಕಾರದ ವತಿಯಿಂದ ಸನ್ಮಾನ :: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ ಎಂದರು. ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು ಎಂದರು. 3 ಲಕ್ಷ 84 ಕಿಮೀ ಪ್ರಯಾಣ ಮಾಡಿರುವ ವಿಕ್ರಂ…
ಮಡಿಕೇರಿ ಆ.24 : ಚಂದ್ರಯಾನ-3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸುಂಟಿಕೊಪ್ಪನಾಗರಿಕರು ಸಂಭ್ರಮಾಚರಣೆ ನಡೆಸಿದರು. ಕನ್ನಡ ವೃತ್ತದಲ್ಲಿ ಜಮಾಯಿಸಿದ ನಾಗರೀಕರು, ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುತ್ತಿದ್ದಂತೆ ಜಯಘೋಷಗಳನ್ನು ಕೂಗಿದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿ, ಜೈಕಾರ ಹಾಕಿದರು. ನಂತರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಡಿ.ನರಸಿಂಹ, ಕೆ.ಎಸ್.ಅನಿಲ್, ರಂಜಿತ್, ಬಿ.ಎಸ್.ಆಶೋಕ, ವಿಶ್ವನಾಥ ರೈ, ಧನುಕಾವೇರಪ್ಪ ಮತ್ತಿತರರು ಹಾಜರಿದ್ದರು.
ಬೆಂಗಳೂರು ಆ.24 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. ಈ ಸಂದರ್ಭ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಇದ್ದರು.
ಮಡಿಕೇರಿ ಆ.24 : ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ದೇವಾಲಯದ ಚಂದಾ ಪುಸ್ತಕದ ಪೂಜಾ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಐತಿಹಾಸಿಕ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಅ.26 ರಂದು ದಶಮಂಟಪ ಶೋಬಾಯಾತ್ರೆ ನಡೆಯಲಿದೆ. ಇದಕ್ಕಾಗಿ ದಶಮಂಟಪ ಸಮಿತಿಗಳು ಸಿದ್ದತೆಯನ್ನು ಮಾಡುತ್ತಿವೆ. ದಶಮಂಟಪಗಳಲ್ಲಿ ಒಂದಾದ ಶ್ರೀ ಕೋಟೆ ಮಹಾಗಣಪತಿ ದೇವಾಲಯಕ್ಕೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಚಂದಾ ಪುಸ್ತಕ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಮಿತಿ ವತಿಯಿಂದ 101 ತೆಂಗಿನಕಾಯಿಯ ಹರಕೆಯನ್ನು ಶಾಸಕರ ಉಪಸ್ಥಿತಿಯಲ್ಲಿ ಸಮರ್ಪಿಸಲಾಯಿತು. ಶಾಸಕರು ಕೋಟೆ ಮಹಾಗಣಪತಿ ಸಮಿತಿ ಸದಸ್ಯರಾಗಿ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ ಮಂಟಪದ ಅಧ್ಯಕ್ಷ ಹೆಚ್.ಪಿ.ಲೊಕೇಶ್, ಉಪಾದ್ಯಕ್ಷರಾದ ನಜೀರ್ , ಸುದೀಶ್ , ಮೇಲ್ವಿನ್ ಖಜಾಂಜಿ ಬಿ.ಎಂ.ಸಂತೋಷ್ ಕಾರ್ಯದರ್ಶಿ ವಿಗ್ನೇಶ್, ಹಿರಿಯ ಸದಸ್ಯರು ಹಾಗು ಟೀಮ್ 99 ಸದಸ್ಯರು ಹಾಜರಿದ್ದರು.
ಮಡಿಕೇರಿ ಆ.24 : ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ದೇವಾಲಯದ ಚಂದಾ ಪುಸ್ತಕದ ಪೂಜಾ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಐತಿಹಾಸಿಕ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಅ.26 ರಂದು ದಶಮಂಟಪ ಶೋಬಾಯಾತ್ರೆ ನಡೆಯಲಿದೆ. ಇದಕ್ಕಾಗಿ ದಶಮಂಟಪ ಸಮಿತಿಗಳು ಸಿದ್ದತೆಯನ್ನು ಮಾಡುತ್ತಿವೆ. ದಶಮಂಟಪಗಳಲ್ಲಿ ಒಂದಾದ ಶ್ರೀ ಕೋಟೆ ಮಹಾಗಣಪತಿ ದೇವಾಲಯಕ್ಕೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಚಂದಾ ಪುಸ್ತಕ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಮಿತಿ ವತಿಯಿಂದ 101 ತೆಂಗಿನಕಾಯಿಯ ಹರಕೆಯನ್ನು ಶಾಸಕರ ಉಪಸ್ಥಿತಿಯಲ್ಲಿ ಸಮರ್ಪಿಸಲಾಯಿತು. ಶಾಸಕರು ಕೋಟೆ ಮಹಾಗಣಪತಿ ಸಮಿತಿ ಸದಸ್ಯರಾಗಿ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ ಮಂಟಪದ ಅಧ್ಯಕ್ಷ ಹೆಚ್.ಪಿ.ಲೊಕೇಶ್, ಉಪಾದ್ಯಕ್ಷರಾದ ನಜೀರ್ , ಸುದೀಶ್ , ಮೇಲ್ವಿನ್ ಖಜಾಂಜಿ ಬಿ.ಎಂ.ಸಂತೋಷ್ ಕಾರ್ಯದರ್ಶಿ ವಿಗ್ನೇಶ್, ಹಿರಿಯ ಸದಸ್ಯರು ಹಾಗು ಟೀಮ್ 99 ಸದಸ್ಯರು ಹಾಜರಿದ್ದರು.
ಮಡಿಕೇರಿ ಆ.24 : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿ ಗ್ರಾಮದಲ್ಲಿ 50 ಕೆ.ಜಿ.ತೂಕದ ನಾಲ್ಕು ಕಾಫಿ ಚೀಲಗಳನ್ನು ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಲ್ದಾರೆ ಗ್ರಾಮದ ಪ್ರಜ್ವಲ್(22), ಪಿರಿಯಾಪಟ್ಟಣ ರಾಣಿಗೇಟ್ ನಿವಾಸಿಗಳಾದ ರವಿ (34), ಗಣೇಶ (32), ಸ್ವಾಮಿ (23) ಎಂಬವರನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ನೆಲ್ಲಿಹುದಿಕೇರಿ ಗ್ರಾಮದ ನಿವಾಸಿ ಲೆಸ್ಲಿ ಪಿಂಟೋ ಎಂಬವರ ತೋಟದ ಸಂಗ್ರಹಣ ಕೊಠಡಿಯಲ್ಲಿ ಇಟ್ಟಿದ್ದ ಕಾಫಿ(ಚೆರಿ) ಚೀಲಗಳನ್ನು ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಉಪವಿಭಾಗಧಿಕಾರಿ ಡಿವೈಎಸ್ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತ ಸಿಪಿಐ ಅನೂಪ್ ಮಾದಪ್ಪ ಹಾಗೂ ರಾಘವೇಂದ್ರ, ಸಿದ್ದಾಪುರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯಾನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾಹಿತಿ ನೀಡಲು ಸೂಚನೆ : ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು…
ಮಡಿಕೇರಿ ಆ.24 : ಮನೆಯೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನು ಉರಗ ಪ್ರೇಮಿ ಬೊಪ್ಪoಡ ರೋಶನ್ ರಕ್ಷಿಸಿದ್ದಾರೆ. ಅಮ್ಮತ್ತಿ ಕಾರ್ಮಡು ಗ್ರಾಮದ ನೆಲ್ಲ ಮಕ್ಕಡ ಟಿ.ಅಪ್ಪಯ್ಯ ಅವರ ಮನೆಯ ಅಡುಗೆ ಕೋಣೆಯ ಬಾಕ್ಸ್ ಒಳಗೆ ನಾಗರಹಾವು ಸೇರಿಕೊಂಡಿದ್ದು, ಉರಗ ಪ್ರೇಮಿ ಬೊಪ್ಪoಡ ರೋಶನ್ ಅವರಿಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ರೋಶನ್ ನಾಗರಹಾವನ್ನು ಹಿಡಿದು ರಕ್ಷಿಸಿ ಅದನ್ನು ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ 7022373921 ಕರೆ ಮಾಡುವಂತೆ ರೋಶನ್ ಮನವಿ ಮಾಡಿದ್ದಾರೆ.
ಮಡಿಕೇರಿ ಆ.24 : ದುಬಾರೆ ಮತ್ತು ಹಾರಂಗಿಯ ಸಾಕಾನೆ ಶಿಬಿರಕ್ಕೆ ಆನೆ ಯೋಜನೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ರ ಭೇಟಿ ನೀಡಿದರು. ಆನೆ ಮಾವುತರು ಕಾವಡಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಾಕಾನೆ ಶಿಬಿರಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ರೂಪಿಸುವುದರೊಂದಿಗೆ ಕಾಡಾನೆಗಳ ದಾಳಿ ತಪ್ಪಿಸಲು ಶಾಶ್ವತ ಕ್ರಿಯಾಯೋಜನೆ ರೂಪಿಸುವುದಾಗಿ ಅವರು ಹೇಳಿದರು. ಇಲಾಖೆ ಮೂಲಕ ಹೆಚ್ಚಿನ ಅನುದಾನ ಕಲ್ಪಿಸುವುದಾಗಿ ಅವರು ಭರವಸೆ ನೀಡಿದರು. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಎ.ಟಿ.ಪೂವಯ್ಯ, ಸೋಮವಾರಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ, ಕುಶಾಲನಗರ ವಲಯದಲ್ಲಿ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್, ಉಪ ವಲಯ ಅರಣ್ಯ ಅಧಿಕಾರಿ ಅನಿಲ್ ಡಿಸೋಜ, ಕನ್ನಂಡ ರಂಜನ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.






